Homeಮುಖಪುಟನವಜಾತ ಶಿಶುಗಳ ಸಾವು : ಸರ್ಕಾರಗಳ ಹೊಣೆಗೇಡಿತನಕ್ಕೆ ಸಾಕ್ಷಿ

ನವಜಾತ ಶಿಶುಗಳ ಸಾವು : ಸರ್ಕಾರಗಳ ಹೊಣೆಗೇಡಿತನಕ್ಕೆ ಸಾಕ್ಷಿ

ನಮ್ಮ ಪ್ರಧಾನಿಗಳು ಮಕ್ಕಳ ಮುಂದೆ ಪಾಕಿಸ್ತಾನ ದ್ವೇಷದ ಮಾತುಗಳನ್ನಾಡುತ್ತಾರೆ. ಆದರೆ ಹಸಿವಿನ ಸೂಚ್ಯಂಕದಲ್ಲಿ ನಮ್ಮ ಪ್ರಗತಿ ಪಾಕಿಸ್ತಾನ ಮತ್ತು ಬಾಂಗ್ಲಾಗಳಿಗಿಂತ ಕಳಪೆ. ನವಜಾತ ಶಿಶುಗಳ ರಕ್ಷಣೆಯಲ್ಲಿ ಪಾಕಿಸ್ತಾನ ನಮಗಿಂತ ಕೊಂಚ ಮುಂದಿದೆ ಎಂಬ ಅಂಶಗಳನ್ನು ಮರೆಯದಿರೋಣ.

- Advertisement -
- Advertisement -

ಹೊಸ ವರ್ಷದ ದಿನದಂದು ಭಾರತದಲ್ಲಿ 67,385 ಶಿಶುಗಳು ಜನಿಸಿದ್ದು, ವಿಶ್ವದಲ್ಲೇ ಇದು ಅಧಿಕ. ಆದರೆ, ಇದೇ ಹೊತ್ತಿನಲ್ಲಿ ರಾಜಸ್ತಾನದ ಕೋಟಾದ ಜೆಕೆ ಲೊನ್ ಸರ್ಕಾರಿ ಆಸ್ಪತ್ರೆಯಲ್ಲಿ ಡಿಸೆಂಬರ್ ತಿಂಗಳೊಂದರಲ್ಲೇ 100ಕ್ಕೂ ಹೆಚ್ಚು ಶಿಶುಗಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಅದಕ್ಕಿಂತ ಆಘಾತಕಾರಿಯಾದದ್ದು, ಈ ವಿಷಯ ಎತ್ತಿಕೊಂಡು ರಾಜಕೀಯ ಮಾಡುತ್ತಿರುವುದು.

ರಾಜಸ್ತಾನದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನವಜಾತ ಶಿಶುಗಳ ಸಾವಿನ ಪ್ರಮಾಣ ಇನ್ನೂ ಹೆಚ್ಚಿತ್ತು ಎಂದು ಹೇಳಿದ್ದಾರೆ. ಇಲ್ಲಿ ಆಸ್ಪತ್ರೆಗಳ ಸುಧಾರಣೆಗೆ ತುರ್ತು ಯೋಜನೆ ರೂಪಿಸುವ ಬದಲು ರಾಜಕೀಯ ಮೇಲುಗೈ ಪಡೆಯುವ ಕೀಳು ಪೈಪೋಟಿ ಶುರುವಾದಂತಿದೆ.

ಬಿಜೆಪಿ ಆಡಳಿತದ ಅವಧಿಯಲ್ಲೂ ಅಲ್ಲಿ ನವಜಾತ ಶಿಶುಗಳ ಪ್ರಮಾಣ ಜಾಸ್ತಿಯೇ ಇತ್ತು ಎಂಬುದೂ ಸತ್ಯ. ಆದರೆ ಈಗ ಪರಸ್ಪರ ದೋಷಾರೂಪಣೆ ಮಾಡುತ್ತ ಕೂಡುವ ಬದಲು ಕೇಂದ್ರದ ನೆರವಿನೊಂದಿಗೆ ನವಜಾತ ಶಿಶುಗಳ ರಕ್ಷಣೆಗೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಅಲ್ಲಿ ಇನ್‌ಕ್ಯುಬೇಟರ್ ಮತ್ತು ಐಸಿಯು ಘಟಕಗಳ ಕೊರತೆಯಿದೆ, ಇರುವ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ವರದಿಯಾಗಿದೆ.

ಕಳೆದ ವರ್ಷ ಉತ್ತರಪ್ರದೇಶದಲ್ಲಿ ಒಂದೇ ಆಸ್ಪತ್ರೆಯಲ್ಲಿ ವಾರದೊಪ್ಪತ್ತಿನಲ್ಲಿ ಹಲವಾರು ನವಜಾತ ಶಿಶುಗಳು ಸಾವನ್ನಪ್ಪಿದ್ದವು ಎಂಬುದನ್ನು ಇಲ್ಲಿ ನೆನೆಯಬಹುದು. ದಕ್ಷಿಣದ ರಾಜ್ಯಗಳಿಗೆ ಹೋಲಿಸಿದರೆ ಉತ್ತರದ ರಾಜ್ಯಗಳಲ್ಲಿ ಅದರಲ್ಲೂ ಭಿಮಾರು ರಾಜ್ಯಗಳಲ್ಲಿ ಈ ಸಮಸ್ಯೆ ತೀವ್ರವಾಗಿದೆ ಎಂಬುದೂ ಇಲ್ಲಿ ಉಲ್ಲೇಖಾರ್ಹ.

ನವಜಾತ ಶಿಶುಗಳ ರಕ್ಷಣೆಗಾಗಿ ವಿಶ್ವಸಂಸ್ಥೆ ಹಲವು ಕಾರ್ಯಕ್ರಮ ರೂಪಿಸಿದೆ, ಧನ ಸಹಾಯವನ್ನೂ ನೀಡುತ್ತಿದೆ. ಆದರೆ, ವಿಶ್ವದಾದ್ಯಂತ ನಿರೀಕ್ಷಿತ ಗುರಿ ಮುಟ್ಟುವುದಕ್ಕೆ ಸ್ಥಳೀಯ ಆಡಳಿತಗಳಿಂದ ಸಾಧ್ಯವಾಗಿಲ್ಲ.
ಕಡಿಮೆ ತೂಕ, ಅವಧಿಪೂರ್ವ ಜನನ, ಸುಸೂತ್ರವಾಗದ ಹೆರಿಗೆಗಳು ಮತ್ತು ಸಿಫ್ರಸ್‌ನಂತಹ ಕಾಯಿಲೆಗಳು ನವಜಾತ ಶಿಶುಗಳನ್ನು ಬಲಿ ತೆಗೆದುಕೊಳ್ಳುತ್ತಿವೆ. ಶುದ್ಧ ನೀರು, ಸ್ವಚ್ಛತೆ ಮತ್ತು ಪೌಷ್ಟಿಕಾಂಶಗಳ ಕೊರತೆ ಮತ್ತು ಪ್ರಾಥಮಿಕ ಆರೋಗ್ಯ ಸೇವೆಗಳ ಅಲಭ್ಯತೆ ಅಥವಾ ಕೊರತೆಯೇ ಇದಕ್ಕೆಲ್ಲ ಮೂಲ ಕಾರಣ. ಈ ಸೌಲಭ್ಯಗಳನ್ನು ಒದಗಿಸುವತ್ತ ನಮ್ಮ ಸರ್ಕಾರಗಳು ತುರ್ತ ಗಮನ ನೀಡಬೇಕಾಗಿದೆ.

ಇಡೀ ವಿಶ್ವದಲ್ಲೇ ನವಜಾತ ಶಿಶುಗಳ ಸಾವಿನ ಪ್ರಮಾಣದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ ಎಂಬುದು ನಾಚಿಕೆಯ ಮತ್ತು ಕಳವಳದ ಸಂಗತಿ.

ನಮ್ಮ ಪ್ರಧಾನಿಗಳು ಮಕ್ಕಳ ಮುಂದೆ ಪಾಕಿಸ್ತಾನ ದ್ವೇಷದ ಮಾತುಗಳನ್ನಾಡುತ್ತಾರೆ. ಆದರೆ ಹಸಿವಿನ ಸೂಚ್ಯಂಕದಲ್ಲಿ ನಮ್ಮ ಪ್ರಗತಿ ಪಾಕಿಸ್ತಾನ ಮತ್ತು ಬಾಂಗ್ಲಾಗಳಿಗಿಂತ ಕಳಪೆ. ನವಜಾತ ಶಿಶುಗಳ ರಕ್ಷಣೆಯಲ್ಲಿ ಪಾಕಿಸ್ತಾನ ನಮಗಿಂತ ಕೊಂಚ ಮುಂದಿದೆ ಎಂಬ ಅಂಶಗಳನ್ನು ಮರೆಯದಿರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...