Homeಮುಖಪುಟನವಜಾತ ಶಿಶುಗಳ ಸಾವು : ಸರ್ಕಾರಗಳ ಹೊಣೆಗೇಡಿತನಕ್ಕೆ ಸಾಕ್ಷಿ

ನವಜಾತ ಶಿಶುಗಳ ಸಾವು : ಸರ್ಕಾರಗಳ ಹೊಣೆಗೇಡಿತನಕ್ಕೆ ಸಾಕ್ಷಿ

ನಮ್ಮ ಪ್ರಧಾನಿಗಳು ಮಕ್ಕಳ ಮುಂದೆ ಪಾಕಿಸ್ತಾನ ದ್ವೇಷದ ಮಾತುಗಳನ್ನಾಡುತ್ತಾರೆ. ಆದರೆ ಹಸಿವಿನ ಸೂಚ್ಯಂಕದಲ್ಲಿ ನಮ್ಮ ಪ್ರಗತಿ ಪಾಕಿಸ್ತಾನ ಮತ್ತು ಬಾಂಗ್ಲಾಗಳಿಗಿಂತ ಕಳಪೆ. ನವಜಾತ ಶಿಶುಗಳ ರಕ್ಷಣೆಯಲ್ಲಿ ಪಾಕಿಸ್ತಾನ ನಮಗಿಂತ ಕೊಂಚ ಮುಂದಿದೆ ಎಂಬ ಅಂಶಗಳನ್ನು ಮರೆಯದಿರೋಣ.

- Advertisement -
- Advertisement -

ಹೊಸ ವರ್ಷದ ದಿನದಂದು ಭಾರತದಲ್ಲಿ 67,385 ಶಿಶುಗಳು ಜನಿಸಿದ್ದು, ವಿಶ್ವದಲ್ಲೇ ಇದು ಅಧಿಕ. ಆದರೆ, ಇದೇ ಹೊತ್ತಿನಲ್ಲಿ ರಾಜಸ್ತಾನದ ಕೋಟಾದ ಜೆಕೆ ಲೊನ್ ಸರ್ಕಾರಿ ಆಸ್ಪತ್ರೆಯಲ್ಲಿ ಡಿಸೆಂಬರ್ ತಿಂಗಳೊಂದರಲ್ಲೇ 100ಕ್ಕೂ ಹೆಚ್ಚು ಶಿಶುಗಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಅದಕ್ಕಿಂತ ಆಘಾತಕಾರಿಯಾದದ್ದು, ಈ ವಿಷಯ ಎತ್ತಿಕೊಂಡು ರಾಜಕೀಯ ಮಾಡುತ್ತಿರುವುದು.

ರಾಜಸ್ತಾನದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನವಜಾತ ಶಿಶುಗಳ ಸಾವಿನ ಪ್ರಮಾಣ ಇನ್ನೂ ಹೆಚ್ಚಿತ್ತು ಎಂದು ಹೇಳಿದ್ದಾರೆ. ಇಲ್ಲಿ ಆಸ್ಪತ್ರೆಗಳ ಸುಧಾರಣೆಗೆ ತುರ್ತು ಯೋಜನೆ ರೂಪಿಸುವ ಬದಲು ರಾಜಕೀಯ ಮೇಲುಗೈ ಪಡೆಯುವ ಕೀಳು ಪೈಪೋಟಿ ಶುರುವಾದಂತಿದೆ.

ಬಿಜೆಪಿ ಆಡಳಿತದ ಅವಧಿಯಲ್ಲೂ ಅಲ್ಲಿ ನವಜಾತ ಶಿಶುಗಳ ಪ್ರಮಾಣ ಜಾಸ್ತಿಯೇ ಇತ್ತು ಎಂಬುದೂ ಸತ್ಯ. ಆದರೆ ಈಗ ಪರಸ್ಪರ ದೋಷಾರೂಪಣೆ ಮಾಡುತ್ತ ಕೂಡುವ ಬದಲು ಕೇಂದ್ರದ ನೆರವಿನೊಂದಿಗೆ ನವಜಾತ ಶಿಶುಗಳ ರಕ್ಷಣೆಗೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಅಲ್ಲಿ ಇನ್‌ಕ್ಯುಬೇಟರ್ ಮತ್ತು ಐಸಿಯು ಘಟಕಗಳ ಕೊರತೆಯಿದೆ, ಇರುವ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ವರದಿಯಾಗಿದೆ.

ಕಳೆದ ವರ್ಷ ಉತ್ತರಪ್ರದೇಶದಲ್ಲಿ ಒಂದೇ ಆಸ್ಪತ್ರೆಯಲ್ಲಿ ವಾರದೊಪ್ಪತ್ತಿನಲ್ಲಿ ಹಲವಾರು ನವಜಾತ ಶಿಶುಗಳು ಸಾವನ್ನಪ್ಪಿದ್ದವು ಎಂಬುದನ್ನು ಇಲ್ಲಿ ನೆನೆಯಬಹುದು. ದಕ್ಷಿಣದ ರಾಜ್ಯಗಳಿಗೆ ಹೋಲಿಸಿದರೆ ಉತ್ತರದ ರಾಜ್ಯಗಳಲ್ಲಿ ಅದರಲ್ಲೂ ಭಿಮಾರು ರಾಜ್ಯಗಳಲ್ಲಿ ಈ ಸಮಸ್ಯೆ ತೀವ್ರವಾಗಿದೆ ಎಂಬುದೂ ಇಲ್ಲಿ ಉಲ್ಲೇಖಾರ್ಹ.

ನವಜಾತ ಶಿಶುಗಳ ರಕ್ಷಣೆಗಾಗಿ ವಿಶ್ವಸಂಸ್ಥೆ ಹಲವು ಕಾರ್ಯಕ್ರಮ ರೂಪಿಸಿದೆ, ಧನ ಸಹಾಯವನ್ನೂ ನೀಡುತ್ತಿದೆ. ಆದರೆ, ವಿಶ್ವದಾದ್ಯಂತ ನಿರೀಕ್ಷಿತ ಗುರಿ ಮುಟ್ಟುವುದಕ್ಕೆ ಸ್ಥಳೀಯ ಆಡಳಿತಗಳಿಂದ ಸಾಧ್ಯವಾಗಿಲ್ಲ.
ಕಡಿಮೆ ತೂಕ, ಅವಧಿಪೂರ್ವ ಜನನ, ಸುಸೂತ್ರವಾಗದ ಹೆರಿಗೆಗಳು ಮತ್ತು ಸಿಫ್ರಸ್‌ನಂತಹ ಕಾಯಿಲೆಗಳು ನವಜಾತ ಶಿಶುಗಳನ್ನು ಬಲಿ ತೆಗೆದುಕೊಳ್ಳುತ್ತಿವೆ. ಶುದ್ಧ ನೀರು, ಸ್ವಚ್ಛತೆ ಮತ್ತು ಪೌಷ್ಟಿಕಾಂಶಗಳ ಕೊರತೆ ಮತ್ತು ಪ್ರಾಥಮಿಕ ಆರೋಗ್ಯ ಸೇವೆಗಳ ಅಲಭ್ಯತೆ ಅಥವಾ ಕೊರತೆಯೇ ಇದಕ್ಕೆಲ್ಲ ಮೂಲ ಕಾರಣ. ಈ ಸೌಲಭ್ಯಗಳನ್ನು ಒದಗಿಸುವತ್ತ ನಮ್ಮ ಸರ್ಕಾರಗಳು ತುರ್ತ ಗಮನ ನೀಡಬೇಕಾಗಿದೆ.

ಇಡೀ ವಿಶ್ವದಲ್ಲೇ ನವಜಾತ ಶಿಶುಗಳ ಸಾವಿನ ಪ್ರಮಾಣದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ ಎಂಬುದು ನಾಚಿಕೆಯ ಮತ್ತು ಕಳವಳದ ಸಂಗತಿ.

ನಮ್ಮ ಪ್ರಧಾನಿಗಳು ಮಕ್ಕಳ ಮುಂದೆ ಪಾಕಿಸ್ತಾನ ದ್ವೇಷದ ಮಾತುಗಳನ್ನಾಡುತ್ತಾರೆ. ಆದರೆ ಹಸಿವಿನ ಸೂಚ್ಯಂಕದಲ್ಲಿ ನಮ್ಮ ಪ್ರಗತಿ ಪಾಕಿಸ್ತಾನ ಮತ್ತು ಬಾಂಗ್ಲಾಗಳಿಗಿಂತ ಕಳಪೆ. ನವಜಾತ ಶಿಶುಗಳ ರಕ್ಷಣೆಯಲ್ಲಿ ಪಾಕಿಸ್ತಾನ ನಮಗಿಂತ ಕೊಂಚ ಮುಂದಿದೆ ಎಂಬ ಅಂಶಗಳನ್ನು ಮರೆಯದಿರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...