Homeಮುಖಪುಟನವಜಾತ ಶಿಶುಗಳ ಸಾವು : ಸರ್ಕಾರಗಳ ಹೊಣೆಗೇಡಿತನಕ್ಕೆ ಸಾಕ್ಷಿ

ನವಜಾತ ಶಿಶುಗಳ ಸಾವು : ಸರ್ಕಾರಗಳ ಹೊಣೆಗೇಡಿತನಕ್ಕೆ ಸಾಕ್ಷಿ

ನಮ್ಮ ಪ್ರಧಾನಿಗಳು ಮಕ್ಕಳ ಮುಂದೆ ಪಾಕಿಸ್ತಾನ ದ್ವೇಷದ ಮಾತುಗಳನ್ನಾಡುತ್ತಾರೆ. ಆದರೆ ಹಸಿವಿನ ಸೂಚ್ಯಂಕದಲ್ಲಿ ನಮ್ಮ ಪ್ರಗತಿ ಪಾಕಿಸ್ತಾನ ಮತ್ತು ಬಾಂಗ್ಲಾಗಳಿಗಿಂತ ಕಳಪೆ. ನವಜಾತ ಶಿಶುಗಳ ರಕ್ಷಣೆಯಲ್ಲಿ ಪಾಕಿಸ್ತಾನ ನಮಗಿಂತ ಕೊಂಚ ಮುಂದಿದೆ ಎಂಬ ಅಂಶಗಳನ್ನು ಮರೆಯದಿರೋಣ.

- Advertisement -
- Advertisement -

ಹೊಸ ವರ್ಷದ ದಿನದಂದು ಭಾರತದಲ್ಲಿ 67,385 ಶಿಶುಗಳು ಜನಿಸಿದ್ದು, ವಿಶ್ವದಲ್ಲೇ ಇದು ಅಧಿಕ. ಆದರೆ, ಇದೇ ಹೊತ್ತಿನಲ್ಲಿ ರಾಜಸ್ತಾನದ ಕೋಟಾದ ಜೆಕೆ ಲೊನ್ ಸರ್ಕಾರಿ ಆಸ್ಪತ್ರೆಯಲ್ಲಿ ಡಿಸೆಂಬರ್ ತಿಂಗಳೊಂದರಲ್ಲೇ 100ಕ್ಕೂ ಹೆಚ್ಚು ಶಿಶುಗಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಅದಕ್ಕಿಂತ ಆಘಾತಕಾರಿಯಾದದ್ದು, ಈ ವಿಷಯ ಎತ್ತಿಕೊಂಡು ರಾಜಕೀಯ ಮಾಡುತ್ತಿರುವುದು.

ರಾಜಸ್ತಾನದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನವಜಾತ ಶಿಶುಗಳ ಸಾವಿನ ಪ್ರಮಾಣ ಇನ್ನೂ ಹೆಚ್ಚಿತ್ತು ಎಂದು ಹೇಳಿದ್ದಾರೆ. ಇಲ್ಲಿ ಆಸ್ಪತ್ರೆಗಳ ಸುಧಾರಣೆಗೆ ತುರ್ತು ಯೋಜನೆ ರೂಪಿಸುವ ಬದಲು ರಾಜಕೀಯ ಮೇಲುಗೈ ಪಡೆಯುವ ಕೀಳು ಪೈಪೋಟಿ ಶುರುವಾದಂತಿದೆ.

ಬಿಜೆಪಿ ಆಡಳಿತದ ಅವಧಿಯಲ್ಲೂ ಅಲ್ಲಿ ನವಜಾತ ಶಿಶುಗಳ ಪ್ರಮಾಣ ಜಾಸ್ತಿಯೇ ಇತ್ತು ಎಂಬುದೂ ಸತ್ಯ. ಆದರೆ ಈಗ ಪರಸ್ಪರ ದೋಷಾರೂಪಣೆ ಮಾಡುತ್ತ ಕೂಡುವ ಬದಲು ಕೇಂದ್ರದ ನೆರವಿನೊಂದಿಗೆ ನವಜಾತ ಶಿಶುಗಳ ರಕ್ಷಣೆಗೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಅಲ್ಲಿ ಇನ್‌ಕ್ಯುಬೇಟರ್ ಮತ್ತು ಐಸಿಯು ಘಟಕಗಳ ಕೊರತೆಯಿದೆ, ಇರುವ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ವರದಿಯಾಗಿದೆ.

ಕಳೆದ ವರ್ಷ ಉತ್ತರಪ್ರದೇಶದಲ್ಲಿ ಒಂದೇ ಆಸ್ಪತ್ರೆಯಲ್ಲಿ ವಾರದೊಪ್ಪತ್ತಿನಲ್ಲಿ ಹಲವಾರು ನವಜಾತ ಶಿಶುಗಳು ಸಾವನ್ನಪ್ಪಿದ್ದವು ಎಂಬುದನ್ನು ಇಲ್ಲಿ ನೆನೆಯಬಹುದು. ದಕ್ಷಿಣದ ರಾಜ್ಯಗಳಿಗೆ ಹೋಲಿಸಿದರೆ ಉತ್ತರದ ರಾಜ್ಯಗಳಲ್ಲಿ ಅದರಲ್ಲೂ ಭಿಮಾರು ರಾಜ್ಯಗಳಲ್ಲಿ ಈ ಸಮಸ್ಯೆ ತೀವ್ರವಾಗಿದೆ ಎಂಬುದೂ ಇಲ್ಲಿ ಉಲ್ಲೇಖಾರ್ಹ.

ನವಜಾತ ಶಿಶುಗಳ ರಕ್ಷಣೆಗಾಗಿ ವಿಶ್ವಸಂಸ್ಥೆ ಹಲವು ಕಾರ್ಯಕ್ರಮ ರೂಪಿಸಿದೆ, ಧನ ಸಹಾಯವನ್ನೂ ನೀಡುತ್ತಿದೆ. ಆದರೆ, ವಿಶ್ವದಾದ್ಯಂತ ನಿರೀಕ್ಷಿತ ಗುರಿ ಮುಟ್ಟುವುದಕ್ಕೆ ಸ್ಥಳೀಯ ಆಡಳಿತಗಳಿಂದ ಸಾಧ್ಯವಾಗಿಲ್ಲ.
ಕಡಿಮೆ ತೂಕ, ಅವಧಿಪೂರ್ವ ಜನನ, ಸುಸೂತ್ರವಾಗದ ಹೆರಿಗೆಗಳು ಮತ್ತು ಸಿಫ್ರಸ್‌ನಂತಹ ಕಾಯಿಲೆಗಳು ನವಜಾತ ಶಿಶುಗಳನ್ನು ಬಲಿ ತೆಗೆದುಕೊಳ್ಳುತ್ತಿವೆ. ಶುದ್ಧ ನೀರು, ಸ್ವಚ್ಛತೆ ಮತ್ತು ಪೌಷ್ಟಿಕಾಂಶಗಳ ಕೊರತೆ ಮತ್ತು ಪ್ರಾಥಮಿಕ ಆರೋಗ್ಯ ಸೇವೆಗಳ ಅಲಭ್ಯತೆ ಅಥವಾ ಕೊರತೆಯೇ ಇದಕ್ಕೆಲ್ಲ ಮೂಲ ಕಾರಣ. ಈ ಸೌಲಭ್ಯಗಳನ್ನು ಒದಗಿಸುವತ್ತ ನಮ್ಮ ಸರ್ಕಾರಗಳು ತುರ್ತ ಗಮನ ನೀಡಬೇಕಾಗಿದೆ.

ಇಡೀ ವಿಶ್ವದಲ್ಲೇ ನವಜಾತ ಶಿಶುಗಳ ಸಾವಿನ ಪ್ರಮಾಣದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ ಎಂಬುದು ನಾಚಿಕೆಯ ಮತ್ತು ಕಳವಳದ ಸಂಗತಿ.

ನಮ್ಮ ಪ್ರಧಾನಿಗಳು ಮಕ್ಕಳ ಮುಂದೆ ಪಾಕಿಸ್ತಾನ ದ್ವೇಷದ ಮಾತುಗಳನ್ನಾಡುತ್ತಾರೆ. ಆದರೆ ಹಸಿವಿನ ಸೂಚ್ಯಂಕದಲ್ಲಿ ನಮ್ಮ ಪ್ರಗತಿ ಪಾಕಿಸ್ತಾನ ಮತ್ತು ಬಾಂಗ್ಲಾಗಳಿಗಿಂತ ಕಳಪೆ. ನವಜಾತ ಶಿಶುಗಳ ರಕ್ಷಣೆಯಲ್ಲಿ ಪಾಕಿಸ್ತಾನ ನಮಗಿಂತ ಕೊಂಚ ಮುಂದಿದೆ ಎಂಬ ಅಂಶಗಳನ್ನು ಮರೆಯದಿರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...