Homeಮುಖಪುಟನವಜಾತ ಶಿಶುಗಳ ಸಾವು : ಸರ್ಕಾರಗಳ ಹೊಣೆಗೇಡಿತನಕ್ಕೆ ಸಾಕ್ಷಿ

ನವಜಾತ ಶಿಶುಗಳ ಸಾವು : ಸರ್ಕಾರಗಳ ಹೊಣೆಗೇಡಿತನಕ್ಕೆ ಸಾಕ್ಷಿ

ನಮ್ಮ ಪ್ರಧಾನಿಗಳು ಮಕ್ಕಳ ಮುಂದೆ ಪಾಕಿಸ್ತಾನ ದ್ವೇಷದ ಮಾತುಗಳನ್ನಾಡುತ್ತಾರೆ. ಆದರೆ ಹಸಿವಿನ ಸೂಚ್ಯಂಕದಲ್ಲಿ ನಮ್ಮ ಪ್ರಗತಿ ಪಾಕಿಸ್ತಾನ ಮತ್ತು ಬಾಂಗ್ಲಾಗಳಿಗಿಂತ ಕಳಪೆ. ನವಜಾತ ಶಿಶುಗಳ ರಕ್ಷಣೆಯಲ್ಲಿ ಪಾಕಿಸ್ತಾನ ನಮಗಿಂತ ಕೊಂಚ ಮುಂದಿದೆ ಎಂಬ ಅಂಶಗಳನ್ನು ಮರೆಯದಿರೋಣ.

- Advertisement -
- Advertisement -

ಹೊಸ ವರ್ಷದ ದಿನದಂದು ಭಾರತದಲ್ಲಿ 67,385 ಶಿಶುಗಳು ಜನಿಸಿದ್ದು, ವಿಶ್ವದಲ್ಲೇ ಇದು ಅಧಿಕ. ಆದರೆ, ಇದೇ ಹೊತ್ತಿನಲ್ಲಿ ರಾಜಸ್ತಾನದ ಕೋಟಾದ ಜೆಕೆ ಲೊನ್ ಸರ್ಕಾರಿ ಆಸ್ಪತ್ರೆಯಲ್ಲಿ ಡಿಸೆಂಬರ್ ತಿಂಗಳೊಂದರಲ್ಲೇ 100ಕ್ಕೂ ಹೆಚ್ಚು ಶಿಶುಗಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಅದಕ್ಕಿಂತ ಆಘಾತಕಾರಿಯಾದದ್ದು, ಈ ವಿಷಯ ಎತ್ತಿಕೊಂಡು ರಾಜಕೀಯ ಮಾಡುತ್ತಿರುವುದು.

ರಾಜಸ್ತಾನದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನವಜಾತ ಶಿಶುಗಳ ಸಾವಿನ ಪ್ರಮಾಣ ಇನ್ನೂ ಹೆಚ್ಚಿತ್ತು ಎಂದು ಹೇಳಿದ್ದಾರೆ. ಇಲ್ಲಿ ಆಸ್ಪತ್ರೆಗಳ ಸುಧಾರಣೆಗೆ ತುರ್ತು ಯೋಜನೆ ರೂಪಿಸುವ ಬದಲು ರಾಜಕೀಯ ಮೇಲುಗೈ ಪಡೆಯುವ ಕೀಳು ಪೈಪೋಟಿ ಶುರುವಾದಂತಿದೆ.

ಬಿಜೆಪಿ ಆಡಳಿತದ ಅವಧಿಯಲ್ಲೂ ಅಲ್ಲಿ ನವಜಾತ ಶಿಶುಗಳ ಪ್ರಮಾಣ ಜಾಸ್ತಿಯೇ ಇತ್ತು ಎಂಬುದೂ ಸತ್ಯ. ಆದರೆ ಈಗ ಪರಸ್ಪರ ದೋಷಾರೂಪಣೆ ಮಾಡುತ್ತ ಕೂಡುವ ಬದಲು ಕೇಂದ್ರದ ನೆರವಿನೊಂದಿಗೆ ನವಜಾತ ಶಿಶುಗಳ ರಕ್ಷಣೆಗೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಅಲ್ಲಿ ಇನ್‌ಕ್ಯುಬೇಟರ್ ಮತ್ತು ಐಸಿಯು ಘಟಕಗಳ ಕೊರತೆಯಿದೆ, ಇರುವ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ವರದಿಯಾಗಿದೆ.

ಕಳೆದ ವರ್ಷ ಉತ್ತರಪ್ರದೇಶದಲ್ಲಿ ಒಂದೇ ಆಸ್ಪತ್ರೆಯಲ್ಲಿ ವಾರದೊಪ್ಪತ್ತಿನಲ್ಲಿ ಹಲವಾರು ನವಜಾತ ಶಿಶುಗಳು ಸಾವನ್ನಪ್ಪಿದ್ದವು ಎಂಬುದನ್ನು ಇಲ್ಲಿ ನೆನೆಯಬಹುದು. ದಕ್ಷಿಣದ ರಾಜ್ಯಗಳಿಗೆ ಹೋಲಿಸಿದರೆ ಉತ್ತರದ ರಾಜ್ಯಗಳಲ್ಲಿ ಅದರಲ್ಲೂ ಭಿಮಾರು ರಾಜ್ಯಗಳಲ್ಲಿ ಈ ಸಮಸ್ಯೆ ತೀವ್ರವಾಗಿದೆ ಎಂಬುದೂ ಇಲ್ಲಿ ಉಲ್ಲೇಖಾರ್ಹ.

ನವಜಾತ ಶಿಶುಗಳ ರಕ್ಷಣೆಗಾಗಿ ವಿಶ್ವಸಂಸ್ಥೆ ಹಲವು ಕಾರ್ಯಕ್ರಮ ರೂಪಿಸಿದೆ, ಧನ ಸಹಾಯವನ್ನೂ ನೀಡುತ್ತಿದೆ. ಆದರೆ, ವಿಶ್ವದಾದ್ಯಂತ ನಿರೀಕ್ಷಿತ ಗುರಿ ಮುಟ್ಟುವುದಕ್ಕೆ ಸ್ಥಳೀಯ ಆಡಳಿತಗಳಿಂದ ಸಾಧ್ಯವಾಗಿಲ್ಲ.
ಕಡಿಮೆ ತೂಕ, ಅವಧಿಪೂರ್ವ ಜನನ, ಸುಸೂತ್ರವಾಗದ ಹೆರಿಗೆಗಳು ಮತ್ತು ಸಿಫ್ರಸ್‌ನಂತಹ ಕಾಯಿಲೆಗಳು ನವಜಾತ ಶಿಶುಗಳನ್ನು ಬಲಿ ತೆಗೆದುಕೊಳ್ಳುತ್ತಿವೆ. ಶುದ್ಧ ನೀರು, ಸ್ವಚ್ಛತೆ ಮತ್ತು ಪೌಷ್ಟಿಕಾಂಶಗಳ ಕೊರತೆ ಮತ್ತು ಪ್ರಾಥಮಿಕ ಆರೋಗ್ಯ ಸೇವೆಗಳ ಅಲಭ್ಯತೆ ಅಥವಾ ಕೊರತೆಯೇ ಇದಕ್ಕೆಲ್ಲ ಮೂಲ ಕಾರಣ. ಈ ಸೌಲಭ್ಯಗಳನ್ನು ಒದಗಿಸುವತ್ತ ನಮ್ಮ ಸರ್ಕಾರಗಳು ತುರ್ತ ಗಮನ ನೀಡಬೇಕಾಗಿದೆ.

ಇಡೀ ವಿಶ್ವದಲ್ಲೇ ನವಜಾತ ಶಿಶುಗಳ ಸಾವಿನ ಪ್ರಮಾಣದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ ಎಂಬುದು ನಾಚಿಕೆಯ ಮತ್ತು ಕಳವಳದ ಸಂಗತಿ.

ನಮ್ಮ ಪ್ರಧಾನಿಗಳು ಮಕ್ಕಳ ಮುಂದೆ ಪಾಕಿಸ್ತಾನ ದ್ವೇಷದ ಮಾತುಗಳನ್ನಾಡುತ್ತಾರೆ. ಆದರೆ ಹಸಿವಿನ ಸೂಚ್ಯಂಕದಲ್ಲಿ ನಮ್ಮ ಪ್ರಗತಿ ಪಾಕಿಸ್ತಾನ ಮತ್ತು ಬಾಂಗ್ಲಾಗಳಿಗಿಂತ ಕಳಪೆ. ನವಜಾತ ಶಿಶುಗಳ ರಕ್ಷಣೆಯಲ್ಲಿ ಪಾಕಿಸ್ತಾನ ನಮಗಿಂತ ಕೊಂಚ ಮುಂದಿದೆ ಎಂಬ ಅಂಶಗಳನ್ನು ಮರೆಯದಿರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...