Homeಮುಖಪುಟನವಜಾತ ಶಿಶುಗಳ ಸಾವು : ಸರ್ಕಾರಗಳ ಹೊಣೆಗೇಡಿತನಕ್ಕೆ ಸಾಕ್ಷಿ

ನವಜಾತ ಶಿಶುಗಳ ಸಾವು : ಸರ್ಕಾರಗಳ ಹೊಣೆಗೇಡಿತನಕ್ಕೆ ಸಾಕ್ಷಿ

ನಮ್ಮ ಪ್ರಧಾನಿಗಳು ಮಕ್ಕಳ ಮುಂದೆ ಪಾಕಿಸ್ತಾನ ದ್ವೇಷದ ಮಾತುಗಳನ್ನಾಡುತ್ತಾರೆ. ಆದರೆ ಹಸಿವಿನ ಸೂಚ್ಯಂಕದಲ್ಲಿ ನಮ್ಮ ಪ್ರಗತಿ ಪಾಕಿಸ್ತಾನ ಮತ್ತು ಬಾಂಗ್ಲಾಗಳಿಗಿಂತ ಕಳಪೆ. ನವಜಾತ ಶಿಶುಗಳ ರಕ್ಷಣೆಯಲ್ಲಿ ಪಾಕಿಸ್ತಾನ ನಮಗಿಂತ ಕೊಂಚ ಮುಂದಿದೆ ಎಂಬ ಅಂಶಗಳನ್ನು ಮರೆಯದಿರೋಣ.

- Advertisement -
- Advertisement -

ಹೊಸ ವರ್ಷದ ದಿನದಂದು ಭಾರತದಲ್ಲಿ 67,385 ಶಿಶುಗಳು ಜನಿಸಿದ್ದು, ವಿಶ್ವದಲ್ಲೇ ಇದು ಅಧಿಕ. ಆದರೆ, ಇದೇ ಹೊತ್ತಿನಲ್ಲಿ ರಾಜಸ್ತಾನದ ಕೋಟಾದ ಜೆಕೆ ಲೊನ್ ಸರ್ಕಾರಿ ಆಸ್ಪತ್ರೆಯಲ್ಲಿ ಡಿಸೆಂಬರ್ ತಿಂಗಳೊಂದರಲ್ಲೇ 100ಕ್ಕೂ ಹೆಚ್ಚು ಶಿಶುಗಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಅದಕ್ಕಿಂತ ಆಘಾತಕಾರಿಯಾದದ್ದು, ಈ ವಿಷಯ ಎತ್ತಿಕೊಂಡು ರಾಜಕೀಯ ಮಾಡುತ್ತಿರುವುದು.

ರಾಜಸ್ತಾನದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನವಜಾತ ಶಿಶುಗಳ ಸಾವಿನ ಪ್ರಮಾಣ ಇನ್ನೂ ಹೆಚ್ಚಿತ್ತು ಎಂದು ಹೇಳಿದ್ದಾರೆ. ಇಲ್ಲಿ ಆಸ್ಪತ್ರೆಗಳ ಸುಧಾರಣೆಗೆ ತುರ್ತು ಯೋಜನೆ ರೂಪಿಸುವ ಬದಲು ರಾಜಕೀಯ ಮೇಲುಗೈ ಪಡೆಯುವ ಕೀಳು ಪೈಪೋಟಿ ಶುರುವಾದಂತಿದೆ.

ಬಿಜೆಪಿ ಆಡಳಿತದ ಅವಧಿಯಲ್ಲೂ ಅಲ್ಲಿ ನವಜಾತ ಶಿಶುಗಳ ಪ್ರಮಾಣ ಜಾಸ್ತಿಯೇ ಇತ್ತು ಎಂಬುದೂ ಸತ್ಯ. ಆದರೆ ಈಗ ಪರಸ್ಪರ ದೋಷಾರೂಪಣೆ ಮಾಡುತ್ತ ಕೂಡುವ ಬದಲು ಕೇಂದ್ರದ ನೆರವಿನೊಂದಿಗೆ ನವಜಾತ ಶಿಶುಗಳ ರಕ್ಷಣೆಗೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಅಲ್ಲಿ ಇನ್‌ಕ್ಯುಬೇಟರ್ ಮತ್ತು ಐಸಿಯು ಘಟಕಗಳ ಕೊರತೆಯಿದೆ, ಇರುವ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ವರದಿಯಾಗಿದೆ.

ಕಳೆದ ವರ್ಷ ಉತ್ತರಪ್ರದೇಶದಲ್ಲಿ ಒಂದೇ ಆಸ್ಪತ್ರೆಯಲ್ಲಿ ವಾರದೊಪ್ಪತ್ತಿನಲ್ಲಿ ಹಲವಾರು ನವಜಾತ ಶಿಶುಗಳು ಸಾವನ್ನಪ್ಪಿದ್ದವು ಎಂಬುದನ್ನು ಇಲ್ಲಿ ನೆನೆಯಬಹುದು. ದಕ್ಷಿಣದ ರಾಜ್ಯಗಳಿಗೆ ಹೋಲಿಸಿದರೆ ಉತ್ತರದ ರಾಜ್ಯಗಳಲ್ಲಿ ಅದರಲ್ಲೂ ಭಿಮಾರು ರಾಜ್ಯಗಳಲ್ಲಿ ಈ ಸಮಸ್ಯೆ ತೀವ್ರವಾಗಿದೆ ಎಂಬುದೂ ಇಲ್ಲಿ ಉಲ್ಲೇಖಾರ್ಹ.

ನವಜಾತ ಶಿಶುಗಳ ರಕ್ಷಣೆಗಾಗಿ ವಿಶ್ವಸಂಸ್ಥೆ ಹಲವು ಕಾರ್ಯಕ್ರಮ ರೂಪಿಸಿದೆ, ಧನ ಸಹಾಯವನ್ನೂ ನೀಡುತ್ತಿದೆ. ಆದರೆ, ವಿಶ್ವದಾದ್ಯಂತ ನಿರೀಕ್ಷಿತ ಗುರಿ ಮುಟ್ಟುವುದಕ್ಕೆ ಸ್ಥಳೀಯ ಆಡಳಿತಗಳಿಂದ ಸಾಧ್ಯವಾಗಿಲ್ಲ.
ಕಡಿಮೆ ತೂಕ, ಅವಧಿಪೂರ್ವ ಜನನ, ಸುಸೂತ್ರವಾಗದ ಹೆರಿಗೆಗಳು ಮತ್ತು ಸಿಫ್ರಸ್‌ನಂತಹ ಕಾಯಿಲೆಗಳು ನವಜಾತ ಶಿಶುಗಳನ್ನು ಬಲಿ ತೆಗೆದುಕೊಳ್ಳುತ್ತಿವೆ. ಶುದ್ಧ ನೀರು, ಸ್ವಚ್ಛತೆ ಮತ್ತು ಪೌಷ್ಟಿಕಾಂಶಗಳ ಕೊರತೆ ಮತ್ತು ಪ್ರಾಥಮಿಕ ಆರೋಗ್ಯ ಸೇವೆಗಳ ಅಲಭ್ಯತೆ ಅಥವಾ ಕೊರತೆಯೇ ಇದಕ್ಕೆಲ್ಲ ಮೂಲ ಕಾರಣ. ಈ ಸೌಲಭ್ಯಗಳನ್ನು ಒದಗಿಸುವತ್ತ ನಮ್ಮ ಸರ್ಕಾರಗಳು ತುರ್ತ ಗಮನ ನೀಡಬೇಕಾಗಿದೆ.

ಇಡೀ ವಿಶ್ವದಲ್ಲೇ ನವಜಾತ ಶಿಶುಗಳ ಸಾವಿನ ಪ್ರಮಾಣದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ ಎಂಬುದು ನಾಚಿಕೆಯ ಮತ್ತು ಕಳವಳದ ಸಂಗತಿ.

ನಮ್ಮ ಪ್ರಧಾನಿಗಳು ಮಕ್ಕಳ ಮುಂದೆ ಪಾಕಿಸ್ತಾನ ದ್ವೇಷದ ಮಾತುಗಳನ್ನಾಡುತ್ತಾರೆ. ಆದರೆ ಹಸಿವಿನ ಸೂಚ್ಯಂಕದಲ್ಲಿ ನಮ್ಮ ಪ್ರಗತಿ ಪಾಕಿಸ್ತಾನ ಮತ್ತು ಬಾಂಗ್ಲಾಗಳಿಗಿಂತ ಕಳಪೆ. ನವಜಾತ ಶಿಶುಗಳ ರಕ್ಷಣೆಯಲ್ಲಿ ಪಾಕಿಸ್ತಾನ ನಮಗಿಂತ ಕೊಂಚ ಮುಂದಿದೆ ಎಂಬ ಅಂಶಗಳನ್ನು ಮರೆಯದಿರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...