Homeಮುಖಪುಟಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

ಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಸಾವಿಗೆ ಜಗತ್ತಿನ ಮಾನವಹಕ್ಕುಗಳ ಹೋರಾಟಗಾರರು ಮತ್ತು ಸಂಘಟನೆಗಳು ಕಂಬನಿ ಮಿಡಿದಿವೆ. ಸ್ವಾಮಿ ಸಾವು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆಗೆ ಹಿಡಿದ ಕನ್ನಡಿಯೆಂದು ವಿಷಾದ ವ್ಯಕ್ತಪಡಿಸಿದ್ದಾರೆ. ದೇಶ ವಿದೇಶದ ಸಾವಿರಾರು ಜನರ ಶೋಕ ತಪ್ತ ಸಂದೇಶಗಳಿಂದ ಟ್ವಿಟ್ಟರ್ ಮತ್ತು ಫೇಸ್‌ಬುಕ್‌ಗಳು ತುಂಬಿ ಹೋಗಿವೆ. ಸ್ಟಾನ್ ಸ್ಟಾಮಿ ಸಾವು ಜಾಗತಿಕ ಮಾನವ ಹಕ್ಕುಗಳ ಹೋರಾಟಕ್ಕೆ ದೊಡ್ಡ ಹಿನ್ನಡೆಯೆಂದು ವ್ಯವಸ್ಥೆಯ ವಿರುದ್ಧ ಜಾಗತಿಕ ಚಿಂತಕರು ಮತ್ತು ವಿಚಾರವಂತರು ಆಕ್ರೋಶ ಹೊರಹಾಕಿದ್ದಾರೆ.

ಯುರೋಪಿಯನ್ ಯೂನಿಯನ್ ಮಾನವ ಹಕ್ಕುಗಳ ವಿಶೇಷ ಪ್ರತಿನಿಧಿ ಎಮೋನ್ ಗ್ಲಿಮೋರ್, ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೋರಾಟದ ವರದಿಗಾರ್ತಿ ಮೇರಿ ಲಾವ್ಲರ್ ಫಾಧರ್ ಸ್ಟ್ಯಾನ್ ಸ್ವಾಮಿ ಸಾವಿಗೆ ಸಂತಾಪ ವ್ಯಕ್ತಪಡಿಸಿ ಅಂತರಾಷ್ಟ್ರೀಯ ಮಾನವ ಹಕ್ಕುಗಳ ವೇದಿಕೆಯಲ್ಲಿ ವಿಷಯವನ್ನು ಪ್ರಸ್ತಾಪಿಸುವುದಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

“ಸ್ಟ್ಯಾನ್ ಸ್ವಾಮಿ ಸಾವಿನ ಸುದ್ದಿ ಅತ್ಯಂತ ವಿನಾಶಕಾರಿಯಂತೆ ಬಡಿದಪ್ಪಳಿಸಿದೆ. ಫಾಧರ್ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾರೆ. ಅವರನ್ನು 9 ತಿಂಗಳು ಕಾಲ ಸುಳ್ಳು ಆರೋಪಗಳಡಿ ಜೈಲಿನಲ್ಲಿರಿಸಲಾಗಿದೆ. ಮಾನವ ಹಕ್ಕುಗಳ ಹೋರಾಟಗಾರರನ್ನು ಜೈಲಿಗೆ ಕಳಿಸುವ ಪ್ರಭುತ್ವದ ದಮನಕಾರಿ ನೀತಿಗಳನ್ನು ಸಹಿಸಲು ಸಾಧ್ಯವಿಲ್ಲವೆಂದು” ಮೇರಿ ಲಾವ್ಲರ್ ಟ್ವೀಟ್ ಮಾಡಿದ್ದಾರೆ.

ಯುರೋಪಿಯನ್ ಯೂನಿಯನ್‌ನ ಎಮೋನ್ ಗ್ಲಿಮೋರ್‌ ಟ್ವೀಟ್ ಮಾಡಿ “ಭಾರತದಿಂದ ಬಂದಿರುವ ಸುದ್ದಿ ನನಗೆ ಆಘಾತವನ್ನುಂಟುಮಾಡಿದೆ. ಫಾಧರ್ ಸ್ಟ್ಯಾನ್ ಸ್ವಾಮಿ ನಮ್ಮನ್ನಗಲಿದ್ದಾರೆ. ಯುರೋಪಿಯನ್ ಯೂನಿಯನ್ ಸತತವಾಗಿ ಸ್ವಾಮಿ ಅವರ ಬಂಧನದ ವಿರುದ್ಧ ಭಾರತದ ಅಧಿಕಾರಗಳೊಂದಿಗೆ ಮಾತುಕತೆ ನಡೆಸುತ್ತಲೇ ಬಂದಿದೆ” ಎಂದಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಸ್ವಿಟ್ಜರ್‌ಲ್ಯಾಂಡ್‌ನಲ್ಲಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಸ್ಟ್ಯಾನ್‌ ಸ್ವಾಮಿ ಆರೋಗ್ಯದ ಕುರಿತಾಗಿ ತೀವ್ರ ಕಳವಳ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಜೈಲಿನಲ್ಲಿರುವ ಸ್ಟ್ಯಾನ್‌ ಸ್ವಾಮಿಗೆ ಅಗತ್ಯ ಸೌಲಭ್ಯ ಖಚಿತ ಪಡಿಸಲು NHRC ಮಧ್ಯಪ್ರವೇಶಕ್ಕೆ ಒತ್ತಾಯ

ವಿಶ್ವಸಂಸ್ಥೆ ಸ್ಟ್ಯಾನ್‌ ಸ್ವಾಮಿ ಅಥವಾ ಇತರರನ್ನು ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳೆಂದು ಪರಿಗಣಿಸಿಲ್ಲ. ಭಾರತದಲ್ಲಿ ಬಂಧನಕ್ಕೆ ಒಳಗಾದ ಹೋರಾಟಗಾರರು ವಯಸ್ಸು ಮತ್ತು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರನ್ನು ಬಂಧನದಿಂದ ಬಿಡುಗಡೆ ಗೊಳಿಸಬೇಕೆಂದು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಅಂತರಾಷ್ಟ್ರೀಯ ಮಾನವಹಕ್ಕುಗಳ ಆಯೋಗ ಕೂಡ ಹೇಳಿತ್ತು. ಈ ಸಂಬಂಧ ಕಳೆದ ಮಾರ್ಚ್‌ನಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗವು ಭಾರತ ಸರ್ಕಾರಕ್ಕೆ ಈ ಸಂಬಂಧ ಪತ್ರವನ್ನು ಸಹ ಬರೆದಿತ್ತು.

ಅಂತರಾಷ್ಟ್ರೀಯ ಸಮುದಾಯದ ಜೊತೆ ಭಾರತದ ವಿವಿಧ ಗಣ್ಯರು ರಾಜಕಾರಣಿಗಳು ಸ್ಟ್ಯಾನ್ ಸ್ವಾಮಿ ಸಾವಿಗೆ ಸಂತಾಪ ಸೂಚಿಸಿ ಸರ್ಕಾರದ ದಮನಕಾರಿ ನಿಲುವನ್ನು ತೀವ್ರವಾಗಿ ಖಂಡಿಸಿದ್ದಾರೆ. ಝಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೇನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌,  ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಶಶಿ ತರೂರ್ ಸೇರಿದಂತೆ ಇನ್ನೂ ಅನೇಕ ನಾಯಕರು ಸ್ಟ್ಯಾನ್ ಸ್ವಾಮಿ ಸಾವಿಗೆ ದುಃಖ ವ್ಯಕ್ತಪಡಿಸಿದ್ದಾರೆ.

 

ಹೇಮಂತ್‌ ಸೊರೇನ್ ಅವರು “ಝಾರ್ಖಂಡ್‌ ರಾಜ್ಯದಲ್ಲಿ ಫಾದರ್ ಸ್ವಾಮಿ ದಶಕಗಳ ಕಾಲ ಬುಡಕಟ್ಟು ಜನರ ಹಕ್ಕಿಗಾಗಿ ಹೋರಾಟ ನಡೆಸಿದ್ದರು. ಸೊರೇನ್ ಸ್ವಾಮಿ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....