Homeಮುಖಪುಟಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

ಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಸಾವಿಗೆ ಜಗತ್ತಿನ ಮಾನವಹಕ್ಕುಗಳ ಹೋರಾಟಗಾರರು ಮತ್ತು ಸಂಘಟನೆಗಳು ಕಂಬನಿ ಮಿಡಿದಿವೆ. ಸ್ವಾಮಿ ಸಾವು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆಗೆ ಹಿಡಿದ ಕನ್ನಡಿಯೆಂದು ವಿಷಾದ ವ್ಯಕ್ತಪಡಿಸಿದ್ದಾರೆ. ದೇಶ ವಿದೇಶದ ಸಾವಿರಾರು ಜನರ ಶೋಕ ತಪ್ತ ಸಂದೇಶಗಳಿಂದ ಟ್ವಿಟ್ಟರ್ ಮತ್ತು ಫೇಸ್‌ಬುಕ್‌ಗಳು ತುಂಬಿ ಹೋಗಿವೆ. ಸ್ಟಾನ್ ಸ್ಟಾಮಿ ಸಾವು ಜಾಗತಿಕ ಮಾನವ ಹಕ್ಕುಗಳ ಹೋರಾಟಕ್ಕೆ ದೊಡ್ಡ ಹಿನ್ನಡೆಯೆಂದು ವ್ಯವಸ್ಥೆಯ ವಿರುದ್ಧ ಜಾಗತಿಕ ಚಿಂತಕರು ಮತ್ತು ವಿಚಾರವಂತರು ಆಕ್ರೋಶ ಹೊರಹಾಕಿದ್ದಾರೆ.

ಯುರೋಪಿಯನ್ ಯೂನಿಯನ್ ಮಾನವ ಹಕ್ಕುಗಳ ವಿಶೇಷ ಪ್ರತಿನಿಧಿ ಎಮೋನ್ ಗ್ಲಿಮೋರ್, ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೋರಾಟದ ವರದಿಗಾರ್ತಿ ಮೇರಿ ಲಾವ್ಲರ್ ಫಾಧರ್ ಸ್ಟ್ಯಾನ್ ಸ್ವಾಮಿ ಸಾವಿಗೆ ಸಂತಾಪ ವ್ಯಕ್ತಪಡಿಸಿ ಅಂತರಾಷ್ಟ್ರೀಯ ಮಾನವ ಹಕ್ಕುಗಳ ವೇದಿಕೆಯಲ್ಲಿ ವಿಷಯವನ್ನು ಪ್ರಸ್ತಾಪಿಸುವುದಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

“ಸ್ಟ್ಯಾನ್ ಸ್ವಾಮಿ ಸಾವಿನ ಸುದ್ದಿ ಅತ್ಯಂತ ವಿನಾಶಕಾರಿಯಂತೆ ಬಡಿದಪ್ಪಳಿಸಿದೆ. ಫಾಧರ್ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾರೆ. ಅವರನ್ನು 9 ತಿಂಗಳು ಕಾಲ ಸುಳ್ಳು ಆರೋಪಗಳಡಿ ಜೈಲಿನಲ್ಲಿರಿಸಲಾಗಿದೆ. ಮಾನವ ಹಕ್ಕುಗಳ ಹೋರಾಟಗಾರರನ್ನು ಜೈಲಿಗೆ ಕಳಿಸುವ ಪ್ರಭುತ್ವದ ದಮನಕಾರಿ ನೀತಿಗಳನ್ನು ಸಹಿಸಲು ಸಾಧ್ಯವಿಲ್ಲವೆಂದು” ಮೇರಿ ಲಾವ್ಲರ್ ಟ್ವೀಟ್ ಮಾಡಿದ್ದಾರೆ.

ಯುರೋಪಿಯನ್ ಯೂನಿಯನ್‌ನ ಎಮೋನ್ ಗ್ಲಿಮೋರ್‌ ಟ್ವೀಟ್ ಮಾಡಿ “ಭಾರತದಿಂದ ಬಂದಿರುವ ಸುದ್ದಿ ನನಗೆ ಆಘಾತವನ್ನುಂಟುಮಾಡಿದೆ. ಫಾಧರ್ ಸ್ಟ್ಯಾನ್ ಸ್ವಾಮಿ ನಮ್ಮನ್ನಗಲಿದ್ದಾರೆ. ಯುರೋಪಿಯನ್ ಯೂನಿಯನ್ ಸತತವಾಗಿ ಸ್ವಾಮಿ ಅವರ ಬಂಧನದ ವಿರುದ್ಧ ಭಾರತದ ಅಧಿಕಾರಗಳೊಂದಿಗೆ ಮಾತುಕತೆ ನಡೆಸುತ್ತಲೇ ಬಂದಿದೆ” ಎಂದಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಸ್ವಿಟ್ಜರ್‌ಲ್ಯಾಂಡ್‌ನಲ್ಲಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಸ್ಟ್ಯಾನ್‌ ಸ್ವಾಮಿ ಆರೋಗ್ಯದ ಕುರಿತಾಗಿ ತೀವ್ರ ಕಳವಳ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಜೈಲಿನಲ್ಲಿರುವ ಸ್ಟ್ಯಾನ್‌ ಸ್ವಾಮಿಗೆ ಅಗತ್ಯ ಸೌಲಭ್ಯ ಖಚಿತ ಪಡಿಸಲು NHRC ಮಧ್ಯಪ್ರವೇಶಕ್ಕೆ ಒತ್ತಾಯ

ವಿಶ್ವಸಂಸ್ಥೆ ಸ್ಟ್ಯಾನ್‌ ಸ್ವಾಮಿ ಅಥವಾ ಇತರರನ್ನು ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳೆಂದು ಪರಿಗಣಿಸಿಲ್ಲ. ಭಾರತದಲ್ಲಿ ಬಂಧನಕ್ಕೆ ಒಳಗಾದ ಹೋರಾಟಗಾರರು ವಯಸ್ಸು ಮತ್ತು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರನ್ನು ಬಂಧನದಿಂದ ಬಿಡುಗಡೆ ಗೊಳಿಸಬೇಕೆಂದು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಅಂತರಾಷ್ಟ್ರೀಯ ಮಾನವಹಕ್ಕುಗಳ ಆಯೋಗ ಕೂಡ ಹೇಳಿತ್ತು. ಈ ಸಂಬಂಧ ಕಳೆದ ಮಾರ್ಚ್‌ನಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗವು ಭಾರತ ಸರ್ಕಾರಕ್ಕೆ ಈ ಸಂಬಂಧ ಪತ್ರವನ್ನು ಸಹ ಬರೆದಿತ್ತು.

ಅಂತರಾಷ್ಟ್ರೀಯ ಸಮುದಾಯದ ಜೊತೆ ಭಾರತದ ವಿವಿಧ ಗಣ್ಯರು ರಾಜಕಾರಣಿಗಳು ಸ್ಟ್ಯಾನ್ ಸ್ವಾಮಿ ಸಾವಿಗೆ ಸಂತಾಪ ಸೂಚಿಸಿ ಸರ್ಕಾರದ ದಮನಕಾರಿ ನಿಲುವನ್ನು ತೀವ್ರವಾಗಿ ಖಂಡಿಸಿದ್ದಾರೆ. ಝಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೇನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌,  ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಶಶಿ ತರೂರ್ ಸೇರಿದಂತೆ ಇನ್ನೂ ಅನೇಕ ನಾಯಕರು ಸ್ಟ್ಯಾನ್ ಸ್ವಾಮಿ ಸಾವಿಗೆ ದುಃಖ ವ್ಯಕ್ತಪಡಿಸಿದ್ದಾರೆ.

 

ಹೇಮಂತ್‌ ಸೊರೇನ್ ಅವರು “ಝಾರ್ಖಂಡ್‌ ರಾಜ್ಯದಲ್ಲಿ ಫಾದರ್ ಸ್ವಾಮಿ ದಶಕಗಳ ಕಾಲ ಬುಡಕಟ್ಟು ಜನರ ಹಕ್ಕಿಗಾಗಿ ಹೋರಾಟ ನಡೆಸಿದ್ದರು. ಸೊರೇನ್ ಸ್ವಾಮಿ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...