Homeಮುಖಪುಟಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

ಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಸಾವಿಗೆ ಜಗತ್ತಿನ ಮಾನವಹಕ್ಕುಗಳ ಹೋರಾಟಗಾರರು ಮತ್ತು ಸಂಘಟನೆಗಳು ಕಂಬನಿ ಮಿಡಿದಿವೆ. ಸ್ವಾಮಿ ಸಾವು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆಗೆ ಹಿಡಿದ ಕನ್ನಡಿಯೆಂದು ವಿಷಾದ ವ್ಯಕ್ತಪಡಿಸಿದ್ದಾರೆ. ದೇಶ ವಿದೇಶದ ಸಾವಿರಾರು ಜನರ ಶೋಕ ತಪ್ತ ಸಂದೇಶಗಳಿಂದ ಟ್ವಿಟ್ಟರ್ ಮತ್ತು ಫೇಸ್‌ಬುಕ್‌ಗಳು ತುಂಬಿ ಹೋಗಿವೆ. ಸ್ಟಾನ್ ಸ್ಟಾಮಿ ಸಾವು ಜಾಗತಿಕ ಮಾನವ ಹಕ್ಕುಗಳ ಹೋರಾಟಕ್ಕೆ ದೊಡ್ಡ ಹಿನ್ನಡೆಯೆಂದು ವ್ಯವಸ್ಥೆಯ ವಿರುದ್ಧ ಜಾಗತಿಕ ಚಿಂತಕರು ಮತ್ತು ವಿಚಾರವಂತರು ಆಕ್ರೋಶ ಹೊರಹಾಕಿದ್ದಾರೆ.

ಯುರೋಪಿಯನ್ ಯೂನಿಯನ್ ಮಾನವ ಹಕ್ಕುಗಳ ವಿಶೇಷ ಪ್ರತಿನಿಧಿ ಎಮೋನ್ ಗ್ಲಿಮೋರ್, ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೋರಾಟದ ವರದಿಗಾರ್ತಿ ಮೇರಿ ಲಾವ್ಲರ್ ಫಾಧರ್ ಸ್ಟ್ಯಾನ್ ಸ್ವಾಮಿ ಸಾವಿಗೆ ಸಂತಾಪ ವ್ಯಕ್ತಪಡಿಸಿ ಅಂತರಾಷ್ಟ್ರೀಯ ಮಾನವ ಹಕ್ಕುಗಳ ವೇದಿಕೆಯಲ್ಲಿ ವಿಷಯವನ್ನು ಪ್ರಸ್ತಾಪಿಸುವುದಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

“ಸ್ಟ್ಯಾನ್ ಸ್ವಾಮಿ ಸಾವಿನ ಸುದ್ದಿ ಅತ್ಯಂತ ವಿನಾಶಕಾರಿಯಂತೆ ಬಡಿದಪ್ಪಳಿಸಿದೆ. ಫಾಧರ್ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾರೆ. ಅವರನ್ನು 9 ತಿಂಗಳು ಕಾಲ ಸುಳ್ಳು ಆರೋಪಗಳಡಿ ಜೈಲಿನಲ್ಲಿರಿಸಲಾಗಿದೆ. ಮಾನವ ಹಕ್ಕುಗಳ ಹೋರಾಟಗಾರರನ್ನು ಜೈಲಿಗೆ ಕಳಿಸುವ ಪ್ರಭುತ್ವದ ದಮನಕಾರಿ ನೀತಿಗಳನ್ನು ಸಹಿಸಲು ಸಾಧ್ಯವಿಲ್ಲವೆಂದು” ಮೇರಿ ಲಾವ್ಲರ್ ಟ್ವೀಟ್ ಮಾಡಿದ್ದಾರೆ.

ಯುರೋಪಿಯನ್ ಯೂನಿಯನ್‌ನ ಎಮೋನ್ ಗ್ಲಿಮೋರ್‌ ಟ್ವೀಟ್ ಮಾಡಿ “ಭಾರತದಿಂದ ಬಂದಿರುವ ಸುದ್ದಿ ನನಗೆ ಆಘಾತವನ್ನುಂಟುಮಾಡಿದೆ. ಫಾಧರ್ ಸ್ಟ್ಯಾನ್ ಸ್ವಾಮಿ ನಮ್ಮನ್ನಗಲಿದ್ದಾರೆ. ಯುರೋಪಿಯನ್ ಯೂನಿಯನ್ ಸತತವಾಗಿ ಸ್ವಾಮಿ ಅವರ ಬಂಧನದ ವಿರುದ್ಧ ಭಾರತದ ಅಧಿಕಾರಗಳೊಂದಿಗೆ ಮಾತುಕತೆ ನಡೆಸುತ್ತಲೇ ಬಂದಿದೆ” ಎಂದಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಸ್ವಿಟ್ಜರ್‌ಲ್ಯಾಂಡ್‌ನಲ್ಲಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಸ್ಟ್ಯಾನ್‌ ಸ್ವಾಮಿ ಆರೋಗ್ಯದ ಕುರಿತಾಗಿ ತೀವ್ರ ಕಳವಳ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಜೈಲಿನಲ್ಲಿರುವ ಸ್ಟ್ಯಾನ್‌ ಸ್ವಾಮಿಗೆ ಅಗತ್ಯ ಸೌಲಭ್ಯ ಖಚಿತ ಪಡಿಸಲು NHRC ಮಧ್ಯಪ್ರವೇಶಕ್ಕೆ ಒತ್ತಾಯ

ವಿಶ್ವಸಂಸ್ಥೆ ಸ್ಟ್ಯಾನ್‌ ಸ್ವಾಮಿ ಅಥವಾ ಇತರರನ್ನು ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳೆಂದು ಪರಿಗಣಿಸಿಲ್ಲ. ಭಾರತದಲ್ಲಿ ಬಂಧನಕ್ಕೆ ಒಳಗಾದ ಹೋರಾಟಗಾರರು ವಯಸ್ಸು ಮತ್ತು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರನ್ನು ಬಂಧನದಿಂದ ಬಿಡುಗಡೆ ಗೊಳಿಸಬೇಕೆಂದು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಅಂತರಾಷ್ಟ್ರೀಯ ಮಾನವಹಕ್ಕುಗಳ ಆಯೋಗ ಕೂಡ ಹೇಳಿತ್ತು. ಈ ಸಂಬಂಧ ಕಳೆದ ಮಾರ್ಚ್‌ನಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗವು ಭಾರತ ಸರ್ಕಾರಕ್ಕೆ ಈ ಸಂಬಂಧ ಪತ್ರವನ್ನು ಸಹ ಬರೆದಿತ್ತು.

ಅಂತರಾಷ್ಟ್ರೀಯ ಸಮುದಾಯದ ಜೊತೆ ಭಾರತದ ವಿವಿಧ ಗಣ್ಯರು ರಾಜಕಾರಣಿಗಳು ಸ್ಟ್ಯಾನ್ ಸ್ವಾಮಿ ಸಾವಿಗೆ ಸಂತಾಪ ಸೂಚಿಸಿ ಸರ್ಕಾರದ ದಮನಕಾರಿ ನಿಲುವನ್ನು ತೀವ್ರವಾಗಿ ಖಂಡಿಸಿದ್ದಾರೆ. ಝಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೇನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌,  ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಶಶಿ ತರೂರ್ ಸೇರಿದಂತೆ ಇನ್ನೂ ಅನೇಕ ನಾಯಕರು ಸ್ಟ್ಯಾನ್ ಸ್ವಾಮಿ ಸಾವಿಗೆ ದುಃಖ ವ್ಯಕ್ತಪಡಿಸಿದ್ದಾರೆ.

 

ಹೇಮಂತ್‌ ಸೊರೇನ್ ಅವರು “ಝಾರ್ಖಂಡ್‌ ರಾಜ್ಯದಲ್ಲಿ ಫಾದರ್ ಸ್ವಾಮಿ ದಶಕಗಳ ಕಾಲ ಬುಡಕಟ್ಟು ಜನರ ಹಕ್ಕಿಗಾಗಿ ಹೋರಾಟ ನಡೆಸಿದ್ದರು. ಸೊರೇನ್ ಸ್ವಾಮಿ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...