Homeಮುಖಪುಟಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

ಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಸಾವಿಗೆ ಜಗತ್ತಿನ ಮಾನವಹಕ್ಕುಗಳ ಹೋರಾಟಗಾರರು ಮತ್ತು ಸಂಘಟನೆಗಳು ಕಂಬನಿ ಮಿಡಿದಿವೆ. ಸ್ವಾಮಿ ಸಾವು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆಗೆ ಹಿಡಿದ ಕನ್ನಡಿಯೆಂದು ವಿಷಾದ ವ್ಯಕ್ತಪಡಿಸಿದ್ದಾರೆ. ದೇಶ ವಿದೇಶದ ಸಾವಿರಾರು ಜನರ ಶೋಕ ತಪ್ತ ಸಂದೇಶಗಳಿಂದ ಟ್ವಿಟ್ಟರ್ ಮತ್ತು ಫೇಸ್‌ಬುಕ್‌ಗಳು ತುಂಬಿ ಹೋಗಿವೆ. ಸ್ಟಾನ್ ಸ್ಟಾಮಿ ಸಾವು ಜಾಗತಿಕ ಮಾನವ ಹಕ್ಕುಗಳ ಹೋರಾಟಕ್ಕೆ ದೊಡ್ಡ ಹಿನ್ನಡೆಯೆಂದು ವ್ಯವಸ್ಥೆಯ ವಿರುದ್ಧ ಜಾಗತಿಕ ಚಿಂತಕರು ಮತ್ತು ವಿಚಾರವಂತರು ಆಕ್ರೋಶ ಹೊರಹಾಕಿದ್ದಾರೆ.

ಯುರೋಪಿಯನ್ ಯೂನಿಯನ್ ಮಾನವ ಹಕ್ಕುಗಳ ವಿಶೇಷ ಪ್ರತಿನಿಧಿ ಎಮೋನ್ ಗ್ಲಿಮೋರ್, ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೋರಾಟದ ವರದಿಗಾರ್ತಿ ಮೇರಿ ಲಾವ್ಲರ್ ಫಾಧರ್ ಸ್ಟ್ಯಾನ್ ಸ್ವಾಮಿ ಸಾವಿಗೆ ಸಂತಾಪ ವ್ಯಕ್ತಪಡಿಸಿ ಅಂತರಾಷ್ಟ್ರೀಯ ಮಾನವ ಹಕ್ಕುಗಳ ವೇದಿಕೆಯಲ್ಲಿ ವಿಷಯವನ್ನು ಪ್ರಸ್ತಾಪಿಸುವುದಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ನಿಧನ

“ಸ್ಟ್ಯಾನ್ ಸ್ವಾಮಿ ಸಾವಿನ ಸುದ್ದಿ ಅತ್ಯಂತ ವಿನಾಶಕಾರಿಯಂತೆ ಬಡಿದಪ್ಪಳಿಸಿದೆ. ಫಾಧರ್ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾರೆ. ಅವರನ್ನು 9 ತಿಂಗಳು ಕಾಲ ಸುಳ್ಳು ಆರೋಪಗಳಡಿ ಜೈಲಿನಲ್ಲಿರಿಸಲಾಗಿದೆ. ಮಾನವ ಹಕ್ಕುಗಳ ಹೋರಾಟಗಾರರನ್ನು ಜೈಲಿಗೆ ಕಳಿಸುವ ಪ್ರಭುತ್ವದ ದಮನಕಾರಿ ನೀತಿಗಳನ್ನು ಸಹಿಸಲು ಸಾಧ್ಯವಿಲ್ಲವೆಂದು” ಮೇರಿ ಲಾವ್ಲರ್ ಟ್ವೀಟ್ ಮಾಡಿದ್ದಾರೆ.

ಯುರೋಪಿಯನ್ ಯೂನಿಯನ್‌ನ ಎಮೋನ್ ಗ್ಲಿಮೋರ್‌ ಟ್ವೀಟ್ ಮಾಡಿ “ಭಾರತದಿಂದ ಬಂದಿರುವ ಸುದ್ದಿ ನನಗೆ ಆಘಾತವನ್ನುಂಟುಮಾಡಿದೆ. ಫಾಧರ್ ಸ್ಟ್ಯಾನ್ ಸ್ವಾಮಿ ನಮ್ಮನ್ನಗಲಿದ್ದಾರೆ. ಯುರೋಪಿಯನ್ ಯೂನಿಯನ್ ಸತತವಾಗಿ ಸ್ವಾಮಿ ಅವರ ಬಂಧನದ ವಿರುದ್ಧ ಭಾರತದ ಅಧಿಕಾರಗಳೊಂದಿಗೆ ಮಾತುಕತೆ ನಡೆಸುತ್ತಲೇ ಬಂದಿದೆ” ಎಂದಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಸ್ವಿಟ್ಜರ್‌ಲ್ಯಾಂಡ್‌ನಲ್ಲಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಸ್ಟ್ಯಾನ್‌ ಸ್ವಾಮಿ ಆರೋಗ್ಯದ ಕುರಿತಾಗಿ ತೀವ್ರ ಕಳವಳ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಜೈಲಿನಲ್ಲಿರುವ ಸ್ಟ್ಯಾನ್‌ ಸ್ವಾಮಿಗೆ ಅಗತ್ಯ ಸೌಲಭ್ಯ ಖಚಿತ ಪಡಿಸಲು NHRC ಮಧ್ಯಪ್ರವೇಶಕ್ಕೆ ಒತ್ತಾಯ

ವಿಶ್ವಸಂಸ್ಥೆ ಸ್ಟ್ಯಾನ್‌ ಸ್ವಾಮಿ ಅಥವಾ ಇತರರನ್ನು ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳೆಂದು ಪರಿಗಣಿಸಿಲ್ಲ. ಭಾರತದಲ್ಲಿ ಬಂಧನಕ್ಕೆ ಒಳಗಾದ ಹೋರಾಟಗಾರರು ವಯಸ್ಸು ಮತ್ತು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರನ್ನು ಬಂಧನದಿಂದ ಬಿಡುಗಡೆ ಗೊಳಿಸಬೇಕೆಂದು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಅಂತರಾಷ್ಟ್ರೀಯ ಮಾನವಹಕ್ಕುಗಳ ಆಯೋಗ ಕೂಡ ಹೇಳಿತ್ತು. ಈ ಸಂಬಂಧ ಕಳೆದ ಮಾರ್ಚ್‌ನಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗವು ಭಾರತ ಸರ್ಕಾರಕ್ಕೆ ಈ ಸಂಬಂಧ ಪತ್ರವನ್ನು ಸಹ ಬರೆದಿತ್ತು.

ಅಂತರಾಷ್ಟ್ರೀಯ ಸಮುದಾಯದ ಜೊತೆ ಭಾರತದ ವಿವಿಧ ಗಣ್ಯರು ರಾಜಕಾರಣಿಗಳು ಸ್ಟ್ಯಾನ್ ಸ್ವಾಮಿ ಸಾವಿಗೆ ಸಂತಾಪ ಸೂಚಿಸಿ ಸರ್ಕಾರದ ದಮನಕಾರಿ ನಿಲುವನ್ನು ತೀವ್ರವಾಗಿ ಖಂಡಿಸಿದ್ದಾರೆ. ಝಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೇನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌,  ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಶಶಿ ತರೂರ್ ಸೇರಿದಂತೆ ಇನ್ನೂ ಅನೇಕ ನಾಯಕರು ಸ್ಟ್ಯಾನ್ ಸ್ವಾಮಿ ಸಾವಿಗೆ ದುಃಖ ವ್ಯಕ್ತಪಡಿಸಿದ್ದಾರೆ.

 

ಹೇಮಂತ್‌ ಸೊರೇನ್ ಅವರು “ಝಾರ್ಖಂಡ್‌ ರಾಜ್ಯದಲ್ಲಿ ಫಾದರ್ ಸ್ವಾಮಿ ದಶಕಗಳ ಕಾಲ ಬುಡಕಟ್ಟು ಜನರ ಹಕ್ಕಿಗಾಗಿ ಹೋರಾಟ ನಡೆಸಿದ್ದರು. ಸೊರೇನ್ ಸ್ವಾಮಿ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...