Homeಮುಖಪುಟಉತ್ತರಪ್ರದೇಶದಲ್ಲಿ ಮತ್ತಿಬ್ಬರು ಯುವ ಸಹೋದರಿಯರ ಸಂಶಯಾಸ್ಪದ ಸಾವು: ಕೊಲೆ ಶಂಕೆ

ಉತ್ತರಪ್ರದೇಶದಲ್ಲಿ ಮತ್ತಿಬ್ಬರು ಯುವ ಸಹೋದರಿಯರ ಸಂಶಯಾಸ್ಪದ ಸಾವು: ಕೊಲೆ ಶಂಕೆ

- Advertisement -
- Advertisement -

ಉತ್ತರಪ್ರದೇಶ ರಾಜಧಾನಿ ಲಖನೌದಿಂದ 270 ಕಿ.ಮೀ ದೂರದಲ್ಲಿರುವ ಪಿಲ್ಭಿತ್ ಜಿಲ್ಲೆಯಲ್ಲಿ ಇಬ್ಬರು ಸಹೋದರಿಯರು ನಾಪತ್ತೆಯಾದ ಕೆಲವೇ ಗಂಟೆಗಳ ನಂತರ, ಶವಗಳಾಗಿ ಪತ್ತೆಯಾಗಿದ್ದಾರೆ. ಅವುಗಳಲ್ಲಿ ಒಂದು ಶವ ಮರದಿಂದ ನೇತಾಡುತ್ತಿರುವುದಾಗಿ ಕಂಡುಬಂದಿದೆ.

ಈ ಕುಟುಂಬವು ಉತ್ತರಾಖಂಡ ಮತ್ತು ನೇಪಾಳದ ಗಡಿಯಲ್ಲಿರುವ ಜಿಲ್ಲೆಯ ಇಟ್ಟಿಗೆ ಭಟ್ಟಿಗಳಲ್ಲಿ ಕೆಲಸ ಮಾಡುತ್ತಿದ್ದು ಅಲ್ಲೇ ವಾಸವಿದೆ.

18 ಮತ್ತು 20 ವರ್ಷ ವಯಸ್ಸಿನ ಈ ಇಬ್ಬರು ಯುವತಿಯರು ನಿನ್ನೆ ಸಂಜೆ ತಮ್ಮ ಮನೆಯಿಂದ ಹೊರಬಂದಿದ್ದರು. ಅವರು ಹಿಂತಿರುಗದಿದ್ದಾಗ, ಕುಟುಂಬ ಸದಸ್ಯರು ಅವರನ್ನು ಹುಡುಕಲು ಪ್ರಾರಂಭಿಸಿದರು. ನಂತರ ಅವರಿಗೆ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ.

ಎರಡೂ ದೇಹಗಳು ಗಾಯದ ಗುರುತುಗಳನ್ನು ಹೊಂದಿವೆ. ಆದರೆ ಇದುವರೆಗೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ದೃಢಪಟ್ಟಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

“ಕುಟುಂಬವು ಮೂರು-ನಾಲ್ಕು ತಿಂಗಳಿನಿಂದ ಇಟ್ಟಿಗೆ ಭಟ್ಟಿಗಳಲ್ಲಿ (ಗೂಡುಗಳಲ್ಲಿ) ಕೆಲಸ ಮಾಡುತ್ತಿತ್ತು. ನಿನ್ನೆ ಸಂಜೆ ಸುಮಾರು 7 ಗಂಟೆಗೆ ಸಹೋದರಿಯರು ಮನೆಯಿಂದ ಹೊರಟರು. ಕುಟುಂಬ ಸದಸ್ಯರು ತಿರುಗಾಡಲು ಹೋಗಿದ್ದಾರೆಂದು ಭಾವಿಸಿದ್ದರು, ಆದರೆ ಯುವತಿಯರು ಹಿಂತಿರುಗದಿದ್ದಾಗ, ಅವರು ಹುಡುಕಲು ಪ್ರಾರಂಭಿಸಿದರು ಎಂದು ಪಿಲಿಭಿತ್ ಪೊಲೀಸ್ ಮುಖ್ಯಸ್ಥ ಜೈ ಪ್ರಕಾಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅವರಲ್ಲಿ ಒಬ್ಬರು ಶವ ಬೇಗ ದೊರೆಯಿತು. ಆದರೆ ಪೊಲೀಸರಿಗೆ ಮಾಹಿತಿ ನೀಡಿಲ್ಲ. ಎರಡನೇ ಮಹಿಳೆಗಾಗಿ ಶೋಧ ಮುಂದುವರೆದಿದೆ ಮತ್ತು ಮಂಗಳವಾರ ಬೆಳಿಗ್ಗೆ ಮರದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

ನಂತರ ಕುಟುಂಬವು ಪೊಲೀಸರಿಗೆ ಮಾಹಿತಿ ನೀಡಿತು, ನಾವು ಸ್ಥಳವನ್ನು ಪರಿಶೀಲಿಸಿದ್ದೇವೆ. ಇಲ್ಲಿಯವರೆಗೆ ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ದೂರು ಬಂದಿಲ್ಲ, ಅಂತಹ ಕುರುಹು ಕಂಡಿಲ್ಲ. ಸಾವಿಗೆ ಕಾರಣವೇನು ಎಂದು ನಾವು ತನಿಖೆ ನಡೆಸುತ್ತಿದ್ದೇವೆ. ಇಬ್ಬರೂ ಯುವತಿಯರ ಕುತ್ತಿಗೆಗೆ ಗಾಯದ ಗುರುತುಗಳಿವೆ ಎಂದು ಜೈ ಪ್ರಕಾಶ ಹೇಳಿದರು.

“ನಾವು ಎರಡೂ ದೇಹಗಳನ್ನು ಪರಸ್ಪರ ಹತ್ತಿರದಲ್ಲಿ ಕಂಡುಕೊಂಡಿದ್ದೇವೆ. ಅವರಲ್ಲಿ ಒಬ್ಬರ ದೇಹದ ಪಕ್ಕದಲ್ಲಿ ಮೊಬೈಲ್ ಫೋನ್ ಬಿದ್ದಿತ್ತು. ನಾವು ಬೇರೆ ಪ್ರದೇಶದವರು, ಆದರೆ ನಾವು ಇಲ್ಲಿ ವಾಸಿಸುತ್ತಿದ್ದೇವೆ ಮತ್ತು ಇಟ್ಟಿಗೆ ಗೂಡುಗಳಲ್ಲಿ ಕೆಲಸ ಮಾಡುತ್ತೇವೆ” ಎಂದು ಹುಡುಗಿಯರ ತಾಯಿ ಸ್ಥಳೀಯ ಪತ್ರಕರ್ತರಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ- ಶಾಲೆಗೆ ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...