Homeಮುಖಪುಟಉತ್ತರಪ್ರದೇಶದಲ್ಲಿ ಮತ್ತಿಬ್ಬರು ಯುವ ಸಹೋದರಿಯರ ಸಂಶಯಾಸ್ಪದ ಸಾವು: ಕೊಲೆ ಶಂಕೆ

ಉತ್ತರಪ್ರದೇಶದಲ್ಲಿ ಮತ್ತಿಬ್ಬರು ಯುವ ಸಹೋದರಿಯರ ಸಂಶಯಾಸ್ಪದ ಸಾವು: ಕೊಲೆ ಶಂಕೆ

- Advertisement -
- Advertisement -

ಉತ್ತರಪ್ರದೇಶ ರಾಜಧಾನಿ ಲಖನೌದಿಂದ 270 ಕಿ.ಮೀ ದೂರದಲ್ಲಿರುವ ಪಿಲ್ಭಿತ್ ಜಿಲ್ಲೆಯಲ್ಲಿ ಇಬ್ಬರು ಸಹೋದರಿಯರು ನಾಪತ್ತೆಯಾದ ಕೆಲವೇ ಗಂಟೆಗಳ ನಂತರ, ಶವಗಳಾಗಿ ಪತ್ತೆಯಾಗಿದ್ದಾರೆ. ಅವುಗಳಲ್ಲಿ ಒಂದು ಶವ ಮರದಿಂದ ನೇತಾಡುತ್ತಿರುವುದಾಗಿ ಕಂಡುಬಂದಿದೆ.

ಈ ಕುಟುಂಬವು ಉತ್ತರಾಖಂಡ ಮತ್ತು ನೇಪಾಳದ ಗಡಿಯಲ್ಲಿರುವ ಜಿಲ್ಲೆಯ ಇಟ್ಟಿಗೆ ಭಟ್ಟಿಗಳಲ್ಲಿ ಕೆಲಸ ಮಾಡುತ್ತಿದ್ದು ಅಲ್ಲೇ ವಾಸವಿದೆ.

18 ಮತ್ತು 20 ವರ್ಷ ವಯಸ್ಸಿನ ಈ ಇಬ್ಬರು ಯುವತಿಯರು ನಿನ್ನೆ ಸಂಜೆ ತಮ್ಮ ಮನೆಯಿಂದ ಹೊರಬಂದಿದ್ದರು. ಅವರು ಹಿಂತಿರುಗದಿದ್ದಾಗ, ಕುಟುಂಬ ಸದಸ್ಯರು ಅವರನ್ನು ಹುಡುಕಲು ಪ್ರಾರಂಭಿಸಿದರು. ನಂತರ ಅವರಿಗೆ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ.

ಎರಡೂ ದೇಹಗಳು ಗಾಯದ ಗುರುತುಗಳನ್ನು ಹೊಂದಿವೆ. ಆದರೆ ಇದುವರೆಗೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ದೃಢಪಟ್ಟಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

“ಕುಟುಂಬವು ಮೂರು-ನಾಲ್ಕು ತಿಂಗಳಿನಿಂದ ಇಟ್ಟಿಗೆ ಭಟ್ಟಿಗಳಲ್ಲಿ (ಗೂಡುಗಳಲ್ಲಿ) ಕೆಲಸ ಮಾಡುತ್ತಿತ್ತು. ನಿನ್ನೆ ಸಂಜೆ ಸುಮಾರು 7 ಗಂಟೆಗೆ ಸಹೋದರಿಯರು ಮನೆಯಿಂದ ಹೊರಟರು. ಕುಟುಂಬ ಸದಸ್ಯರು ತಿರುಗಾಡಲು ಹೋಗಿದ್ದಾರೆಂದು ಭಾವಿಸಿದ್ದರು, ಆದರೆ ಯುವತಿಯರು ಹಿಂತಿರುಗದಿದ್ದಾಗ, ಅವರು ಹುಡುಕಲು ಪ್ರಾರಂಭಿಸಿದರು ಎಂದು ಪಿಲಿಭಿತ್ ಪೊಲೀಸ್ ಮುಖ್ಯಸ್ಥ ಜೈ ಪ್ರಕಾಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅವರಲ್ಲಿ ಒಬ್ಬರು ಶವ ಬೇಗ ದೊರೆಯಿತು. ಆದರೆ ಪೊಲೀಸರಿಗೆ ಮಾಹಿತಿ ನೀಡಿಲ್ಲ. ಎರಡನೇ ಮಹಿಳೆಗಾಗಿ ಶೋಧ ಮುಂದುವರೆದಿದೆ ಮತ್ತು ಮಂಗಳವಾರ ಬೆಳಿಗ್ಗೆ ಮರದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

ನಂತರ ಕುಟುಂಬವು ಪೊಲೀಸರಿಗೆ ಮಾಹಿತಿ ನೀಡಿತು, ನಾವು ಸ್ಥಳವನ್ನು ಪರಿಶೀಲಿಸಿದ್ದೇವೆ. ಇಲ್ಲಿಯವರೆಗೆ ಲೈಂಗಿಕ ದೌರ್ಜನ್ಯದ ಬಗ್ಗೆ ಯಾವುದೇ ದೂರು ಬಂದಿಲ್ಲ, ಅಂತಹ ಕುರುಹು ಕಂಡಿಲ್ಲ. ಸಾವಿಗೆ ಕಾರಣವೇನು ಎಂದು ನಾವು ತನಿಖೆ ನಡೆಸುತ್ತಿದ್ದೇವೆ. ಇಬ್ಬರೂ ಯುವತಿಯರ ಕುತ್ತಿಗೆಗೆ ಗಾಯದ ಗುರುತುಗಳಿವೆ ಎಂದು ಜೈ ಪ್ರಕಾಶ ಹೇಳಿದರು.

“ನಾವು ಎರಡೂ ದೇಹಗಳನ್ನು ಪರಸ್ಪರ ಹತ್ತಿರದಲ್ಲಿ ಕಂಡುಕೊಂಡಿದ್ದೇವೆ. ಅವರಲ್ಲಿ ಒಬ್ಬರ ದೇಹದ ಪಕ್ಕದಲ್ಲಿ ಮೊಬೈಲ್ ಫೋನ್ ಬಿದ್ದಿತ್ತು. ನಾವು ಬೇರೆ ಪ್ರದೇಶದವರು, ಆದರೆ ನಾವು ಇಲ್ಲಿ ವಾಸಿಸುತ್ತಿದ್ದೇವೆ ಮತ್ತು ಇಟ್ಟಿಗೆ ಗೂಡುಗಳಲ್ಲಿ ಕೆಲಸ ಮಾಡುತ್ತೇವೆ” ಎಂದು ಹುಡುಗಿಯರ ತಾಯಿ ಸ್ಥಳೀಯ ಪತ್ರಕರ್ತರಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ- ಶಾಲೆಗೆ ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...