Homeಮುಖಪುಟಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

- Advertisement -
- Advertisement -

ಉನ್ನಾವೊ ಜಿಲ್ಲೆಯ ಮೂವರು ದಲಿತ ಬಾಲಕಿಯರಿಗೆ ವಿಷಪ್ರಾಶನ ಮಾಡಿಸಿದ ಆರೋಪದಲ್ಲಿ 28 ವರ್ಷದ ಯುವಕನನ್ನು ಬಂಧಿಸಿ, ಅವನ ಜೊತೆಗಿದ್ದ ಇನ್ನೊಬ್ಬ ಅಪ್ರಾಪ್ತ ವಯಸ್ಕನನ್ನು ವಶಕ್ಕೆ ಪಡೆದಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಹೇಳಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನೀರಿನಲ್ಲಿ ಕೀಟನಾಶಕವನ್ನು ಬೆರೆಸಿದ್ದಾಗಿ ಆರೋಪಿ ವಿನಯ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಬಾಲಕಿಯರಲ್ಲಿ ಹಿರಿಯಳಾದ 17 ವರ್ಷದ ಬಾಲಕಿಯನ್ನು ಗುರಿಯಾಗಿಸಿಕೊಂಡು ನೀರಿನಲ್ಲಿ ಕ್ರಿಮಿನಾಶಕ ಬೆರಸಿ ನೀಡಿದ್ದಾಗಿ ವಿನಯ್ ಹೇಳಿದ್ದಾನೆ. ಅವಳು ತನ್ನ ಪ್ರೀತಿಯನ್ನು ನಿರಾಕರಿಸಿ, ಮೊಬೈಲ್ ನಂಬರ್ ಕೊಡಲೂ ಒಪ್ಪದಿದ್ದಾಗ ಸಿಟ್ಟು ಬಂದು ಈ ಕೃತ್ಯ ಎಸಗಿದ್ದಾಗಿ ವಿನಯ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.. ಉಳಿದ ಇಬ್ಬರು ಬಾಲಕಿಯರೂ ಅದೇ ನೀರನ್ನು ಕುಡಿದಿದ್ದರು ಎನ್ನಲಾಗಿದೆ.

13 ಮತ್ತು 16 ವರ್ಷದ ದಲಿತ ಬಾಲಕಿಯರು ಬುಧವಾರ ಸಂಜೆ ಶವವಾಗಿ ಪತ್ತೆಯಾಗಿದ್ದರೆ, 17 ವರ್ಷದ ಬಾಲಕಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಂಬಂಧಿಕರ ಪ್ರಕಾರ ಮೂವರೂ ಮೇವು ಸಂಗ್ರಹಿಸಲು ಕುಟುಂಬದ ಜಮೀನುಗಳಿಗೆ ಹೋಗಿದ್ದರು.

ಬಾಲಕಿಯರ ಪಕ್ಕದ ಹಳ್ಳಿಯವನಾದ ವಿನಯ್ ಜಮೀನು ಬಾಲಕಿಯರ ಜಮೀನಿನ ಪಕ್ಕದಲ್ಲೇ ಇದೆ. ಲಾಕ್‌ಡೌನ್ ಸಮಯದಿಂದ ವಿನಯ್ ಬಾಲಕಿಯರ ಜೊತೆ ಸ್ನೇಹ ಬೆಳೆಸಿದ್ದ. ಆಗಾಗ ಜಮೀನಿನಲ್ಲಿ ಅವರನ್ನು ಭೇಟಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಿನಯ್ ಮತ್ತು ಇನ್ನೊಬ್ಬ ಅಪ್ರಾಪ್ತ ಆರೋಪಿ ಕೂಡ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಶುಕ್ರವಾರ ಸಂಜೆ ಉನ್ನಾವೊದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಲಕ್ನೋ ರೇಂಜ್ ಇನ್ಸ್ಪೆಕ್ಟರ್ ಜನರಲ್ (ಐಜಿ) ಲಕ್ಷ್ಮಿ ಸಿಂಗ್, “ಆರೋಪಿಗಳನ್ನು ಹತ್ತಿರದ ಕ್ರಾಸ್ ಬಳಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಅವರಲ್ಲಿ ಒಬ್ಬರು ವಿನಯ್ ಅಲಿಯಾಸ್ ಲಂಬು ಮತ್ತು ಇನ್ನೊಬ್ಬರು ಮೈನರ್. ವಿಚಾರಣೆಯ ನಂತರ, ವಿನಯ್ ಅಪರಾಧವನ್ನು ಒಪ್ಪಿಕೊಂಡ ಮತ್ತು ಘಟನೆಗಳ ಸಂಪೂರ್ಣ ಅನುಕ್ರಮವನ್ನು ನಮಗೆ ತಿಳಿಸಿದ” ಎಂದಿದ್ದಾರೆ.

ಹಲ್ಲೆ ನಡೆಸಿದ ಯಾವುದೇ ಪುರಾವೆಗಳು ದೊರೆತಿಲ್ಲ ಎಂದು ಪೊಲೀಸರು ಪುನರಾವರ್ತಿಸಿದರು. “ಶವಪರೀಕ್ಷೆಯ ವರದಿಯ ಪ್ರಕಾರ, ಹುಡುಗಿಯರ ಮೇಲೆ ಯಾವುದೇ ಬಾಹ್ಯ ಅಥವಾ ಆಂತರಿಕ ಗಾಯಗಳು ಕಂಡುಬಂದಿಲ್ಲ. ಹಲ್ಲೆಯ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, ಮತ್ತು ಆರೋಪಿ ನೀಡಿದ ಹೇಳಿಕೆಯಲ್ಲಿ ಬಾಲಕಿಯರ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ ಎಂದು ಐಜಿ ಹೇಳಿದ್ದಾರೆ, ಕುಟುಂಬದ ಕೆಲವು ಸದಸ್ಯರು ಆರೋಪಿಸಿರುವಂತೆ ವಿನಯ್ ಹುಡುಗಿಯರ ಕೈಕಾಲು ಕಟ್ಟಿಹಾಕಿದ್ದನ್ನು ನಿರಾಕರಿಸಿದ್ದಾನೆ ಎಂದು ಹೇಳಿದರು.

“17 ವರ್ಷದ ಬಾಲಕಿಗೆ ಪ್ರೀತಿಸುವಂತೆ ವಿನಯ್ ಒತ್ತಾಯಿಸಿ ವಿಫಲನಾಗಿದ್ದ. ಅವನು ಕೋಪದಿಂದ ಅಪರಾಧ ಮಾಡಿದ್ದಾನೆ. ತನ್ನ ಜಮೀನಿನಲ್ಲಿ ಇಟ್ಟಿದ್ದ ಕೀಟನಾಶಕವನ್ನು ನೀರಿನಲ್ಲಿ ಬೆರೆಸಿ ಕೃತ್ಯ ಎಸಗಿದ್ದಾನೆ ಎಮದು ಐಜಿ ವಿವರಿಸಿದ್ದಾರೆ.
ಅಪ್ರಾಪ್ತ ವಯಸ್ಕನು ವಿನಯ್‌ಗೆ ಸಮೀಪದ ಅಂಗಡಿಯಿಂದ ತಿಂಡಿ ತಂದು ಕೊಟ್ಟಿದ್ದಾನೆ. ಹುಡುಗಿಯರು ಅಂಗಡಿಯಿಂದ ಕೆಲವು ತಿಂಡಿಗಳನ್ನು ತಂದಿದ್ದಾರೆ. ಅವರು ವಿನಯ್ ಜಮೀನಿನ ಬಳಿ ಭೇಟಿಯಾಗಿ ಸ್ವಲ್ಪ ಹೊತ್ತು ಮಾತನಾಡಿದ್ದಾರೆ. ತದನಂತರ ವಿನಯ್ 17 ವರ್ಷದ ಬಾಲಕಿಗೆ (ಕೀಟನಾಶಕದೊಂದಿಗೆ) ನೀರನ್ನು ನೀಡಿದ. ಅವಳು ನೀರು ಕುಡಿದ ನಂತರ, ಇತರ ಇಬ್ಬರು ಹುಡುಗಿಯರು ಬಾಟಲಿಯನ್ನು ಕಿತ್ತುಕೊಂಡು ತಾವೂ ಕುಡಿದರು. ವಿನಯ್ ಇತರ ಹುಡುಗಿಯರಿಗೆ ನೀರು ಕುಡಿಯದಿರಲು ಒತ್ತಾಯಿಸಿದ್ದಾನೆ. ಆದರೆ ಅವರು ಕೇಳಲಿಲ್ಲ…’ ಎಂದು ಐಜಿ ಹೇಳಿದ್ದಾರೆ.

“ನೀರನ್ನು ಕುಡಿದ ನಂತರ, ಅವರು ಪ್ರಜ್ಞಾಹೀನರಾದರು ಮತ್ತು ನೊರೆ ಪದಾರ್ಥವು ಅವರ ಬಾಯಿಯಿಂದ ಹೊರಬರಲು ಪ್ರಾರಂಭಿಸಿತು. ವಿನಯ್ ಮತ್ತು ಅವನ ಸಹಚರ ಭಯಭೀತರಾಗಿ ಓಡಿಹೋದರು” ಎಂದು ಐಜಿ ತಿಳಿಸಿದ್ದಾರೆ.

ಇತರ ಜನರು ಭಾಗಿಯಾಗಿರಬಹುದೇ ಎಂದು ಕೇಳಿದಾಗ, ಐಜಿ, “ಇಲ್ಲಿಯವರೆಗೆ, ನಾವು ಸಂಗ್ರಹಿಸಿದ ಸಾಕ್ಷ್ಯಗಳು ಮತ್ತು ಸಮೀಪದ ಮನೆಗಳವರು ನಮಗೆ ನೀಡಿದ ಮಾಹಿತಿಯು ಈ ಇಬ್ಬರು ಮಾತ್ರ ಅಪರಾಧ ಎಸಗಿರುವುದನ್ನು ಸೂಚಿಸುತ್ತದೆ. ಅಲ್ಲದೆ, ಪ್ರಶ್ನಿಸುವಾಗ ಅವರು ಬೇರೆ ಯಾರನ್ನೂ ಹೆಸರಿಸಿಲ್ಲ’ ಎಂದಿದ್ದಾರೆ.

ಅಪರಾಧದ ಸ್ಥಳದಿಂದ ಕೆಲವು ಸ್ನ್ಯಾಕ್ ಪ್ಯಾಕೆಟ್, ಸಿಗರೇಟ್ ತುಂಡು ಮತ್ತು ನೀರಿನ ಬಾಟಲಿಯನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆರೋಪ ಮಾಡಿದವರು ಕ್ರಮ ಎದುರಿಸಬೇಕಾಗುತ್ತದೆ ಎಂದು ಸರ್ಕಾರದ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.


ಇದನ್ನೂ ಓದಿ: ಉನ್ನಾವೊದಲ್ಲಿ ಇಬ್ಬರು ದಲಿತ ಬಾಲಕಿಯರ ಶವ ಪತ್ತೆ: ಮತ್ತೊಬ್ಬಳ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...