Homeಮುಖಪುಟಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

- Advertisement -
- Advertisement -

ಉನ್ನಾವೊ ಜಿಲ್ಲೆಯ ಮೂವರು ದಲಿತ ಬಾಲಕಿಯರಿಗೆ ವಿಷಪ್ರಾಶನ ಮಾಡಿಸಿದ ಆರೋಪದಲ್ಲಿ 28 ವರ್ಷದ ಯುವಕನನ್ನು ಬಂಧಿಸಿ, ಅವನ ಜೊತೆಗಿದ್ದ ಇನ್ನೊಬ್ಬ ಅಪ್ರಾಪ್ತ ವಯಸ್ಕನನ್ನು ವಶಕ್ಕೆ ಪಡೆದಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಹೇಳಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನೀರಿನಲ್ಲಿ ಕೀಟನಾಶಕವನ್ನು ಬೆರೆಸಿದ್ದಾಗಿ ಆರೋಪಿ ವಿನಯ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಬಾಲಕಿಯರಲ್ಲಿ ಹಿರಿಯಳಾದ 17 ವರ್ಷದ ಬಾಲಕಿಯನ್ನು ಗುರಿಯಾಗಿಸಿಕೊಂಡು ನೀರಿನಲ್ಲಿ ಕ್ರಿಮಿನಾಶಕ ಬೆರಸಿ ನೀಡಿದ್ದಾಗಿ ವಿನಯ್ ಹೇಳಿದ್ದಾನೆ. ಅವಳು ತನ್ನ ಪ್ರೀತಿಯನ್ನು ನಿರಾಕರಿಸಿ, ಮೊಬೈಲ್ ನಂಬರ್ ಕೊಡಲೂ ಒಪ್ಪದಿದ್ದಾಗ ಸಿಟ್ಟು ಬಂದು ಈ ಕೃತ್ಯ ಎಸಗಿದ್ದಾಗಿ ವಿನಯ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.. ಉಳಿದ ಇಬ್ಬರು ಬಾಲಕಿಯರೂ ಅದೇ ನೀರನ್ನು ಕುಡಿದಿದ್ದರು ಎನ್ನಲಾಗಿದೆ.

13 ಮತ್ತು 16 ವರ್ಷದ ದಲಿತ ಬಾಲಕಿಯರು ಬುಧವಾರ ಸಂಜೆ ಶವವಾಗಿ ಪತ್ತೆಯಾಗಿದ್ದರೆ, 17 ವರ್ಷದ ಬಾಲಕಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಂಬಂಧಿಕರ ಪ್ರಕಾರ ಮೂವರೂ ಮೇವು ಸಂಗ್ರಹಿಸಲು ಕುಟುಂಬದ ಜಮೀನುಗಳಿಗೆ ಹೋಗಿದ್ದರು.

ಬಾಲಕಿಯರ ಪಕ್ಕದ ಹಳ್ಳಿಯವನಾದ ವಿನಯ್ ಜಮೀನು ಬಾಲಕಿಯರ ಜಮೀನಿನ ಪಕ್ಕದಲ್ಲೇ ಇದೆ. ಲಾಕ್‌ಡೌನ್ ಸಮಯದಿಂದ ವಿನಯ್ ಬಾಲಕಿಯರ ಜೊತೆ ಸ್ನೇಹ ಬೆಳೆಸಿದ್ದ. ಆಗಾಗ ಜಮೀನಿನಲ್ಲಿ ಅವರನ್ನು ಭೇಟಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಿನಯ್ ಮತ್ತು ಇನ್ನೊಬ್ಬ ಅಪ್ರಾಪ್ತ ಆರೋಪಿ ಕೂಡ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಶುಕ್ರವಾರ ಸಂಜೆ ಉನ್ನಾವೊದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಲಕ್ನೋ ರೇಂಜ್ ಇನ್ಸ್ಪೆಕ್ಟರ್ ಜನರಲ್ (ಐಜಿ) ಲಕ್ಷ್ಮಿ ಸಿಂಗ್, “ಆರೋಪಿಗಳನ್ನು ಹತ್ತಿರದ ಕ್ರಾಸ್ ಬಳಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಅವರಲ್ಲಿ ಒಬ್ಬರು ವಿನಯ್ ಅಲಿಯಾಸ್ ಲಂಬು ಮತ್ತು ಇನ್ನೊಬ್ಬರು ಮೈನರ್. ವಿಚಾರಣೆಯ ನಂತರ, ವಿನಯ್ ಅಪರಾಧವನ್ನು ಒಪ್ಪಿಕೊಂಡ ಮತ್ತು ಘಟನೆಗಳ ಸಂಪೂರ್ಣ ಅನುಕ್ರಮವನ್ನು ನಮಗೆ ತಿಳಿಸಿದ” ಎಂದಿದ್ದಾರೆ.

ಹಲ್ಲೆ ನಡೆಸಿದ ಯಾವುದೇ ಪುರಾವೆಗಳು ದೊರೆತಿಲ್ಲ ಎಂದು ಪೊಲೀಸರು ಪುನರಾವರ್ತಿಸಿದರು. “ಶವಪರೀಕ್ಷೆಯ ವರದಿಯ ಪ್ರಕಾರ, ಹುಡುಗಿಯರ ಮೇಲೆ ಯಾವುದೇ ಬಾಹ್ಯ ಅಥವಾ ಆಂತರಿಕ ಗಾಯಗಳು ಕಂಡುಬಂದಿಲ್ಲ. ಹಲ್ಲೆಯ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, ಮತ್ತು ಆರೋಪಿ ನೀಡಿದ ಹೇಳಿಕೆಯಲ್ಲಿ ಬಾಲಕಿಯರ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ ಎಂದು ಐಜಿ ಹೇಳಿದ್ದಾರೆ, ಕುಟುಂಬದ ಕೆಲವು ಸದಸ್ಯರು ಆರೋಪಿಸಿರುವಂತೆ ವಿನಯ್ ಹುಡುಗಿಯರ ಕೈಕಾಲು ಕಟ್ಟಿಹಾಕಿದ್ದನ್ನು ನಿರಾಕರಿಸಿದ್ದಾನೆ ಎಂದು ಹೇಳಿದರು.

“17 ವರ್ಷದ ಬಾಲಕಿಗೆ ಪ್ರೀತಿಸುವಂತೆ ವಿನಯ್ ಒತ್ತಾಯಿಸಿ ವಿಫಲನಾಗಿದ್ದ. ಅವನು ಕೋಪದಿಂದ ಅಪರಾಧ ಮಾಡಿದ್ದಾನೆ. ತನ್ನ ಜಮೀನಿನಲ್ಲಿ ಇಟ್ಟಿದ್ದ ಕೀಟನಾಶಕವನ್ನು ನೀರಿನಲ್ಲಿ ಬೆರೆಸಿ ಕೃತ್ಯ ಎಸಗಿದ್ದಾನೆ ಎಮದು ಐಜಿ ವಿವರಿಸಿದ್ದಾರೆ.
ಅಪ್ರಾಪ್ತ ವಯಸ್ಕನು ವಿನಯ್‌ಗೆ ಸಮೀಪದ ಅಂಗಡಿಯಿಂದ ತಿಂಡಿ ತಂದು ಕೊಟ್ಟಿದ್ದಾನೆ. ಹುಡುಗಿಯರು ಅಂಗಡಿಯಿಂದ ಕೆಲವು ತಿಂಡಿಗಳನ್ನು ತಂದಿದ್ದಾರೆ. ಅವರು ವಿನಯ್ ಜಮೀನಿನ ಬಳಿ ಭೇಟಿಯಾಗಿ ಸ್ವಲ್ಪ ಹೊತ್ತು ಮಾತನಾಡಿದ್ದಾರೆ. ತದನಂತರ ವಿನಯ್ 17 ವರ್ಷದ ಬಾಲಕಿಗೆ (ಕೀಟನಾಶಕದೊಂದಿಗೆ) ನೀರನ್ನು ನೀಡಿದ. ಅವಳು ನೀರು ಕುಡಿದ ನಂತರ, ಇತರ ಇಬ್ಬರು ಹುಡುಗಿಯರು ಬಾಟಲಿಯನ್ನು ಕಿತ್ತುಕೊಂಡು ತಾವೂ ಕುಡಿದರು. ವಿನಯ್ ಇತರ ಹುಡುಗಿಯರಿಗೆ ನೀರು ಕುಡಿಯದಿರಲು ಒತ್ತಾಯಿಸಿದ್ದಾನೆ. ಆದರೆ ಅವರು ಕೇಳಲಿಲ್ಲ…’ ಎಂದು ಐಜಿ ಹೇಳಿದ್ದಾರೆ.

“ನೀರನ್ನು ಕುಡಿದ ನಂತರ, ಅವರು ಪ್ರಜ್ಞಾಹೀನರಾದರು ಮತ್ತು ನೊರೆ ಪದಾರ್ಥವು ಅವರ ಬಾಯಿಯಿಂದ ಹೊರಬರಲು ಪ್ರಾರಂಭಿಸಿತು. ವಿನಯ್ ಮತ್ತು ಅವನ ಸಹಚರ ಭಯಭೀತರಾಗಿ ಓಡಿಹೋದರು” ಎಂದು ಐಜಿ ತಿಳಿಸಿದ್ದಾರೆ.

ಇತರ ಜನರು ಭಾಗಿಯಾಗಿರಬಹುದೇ ಎಂದು ಕೇಳಿದಾಗ, ಐಜಿ, “ಇಲ್ಲಿಯವರೆಗೆ, ನಾವು ಸಂಗ್ರಹಿಸಿದ ಸಾಕ್ಷ್ಯಗಳು ಮತ್ತು ಸಮೀಪದ ಮನೆಗಳವರು ನಮಗೆ ನೀಡಿದ ಮಾಹಿತಿಯು ಈ ಇಬ್ಬರು ಮಾತ್ರ ಅಪರಾಧ ಎಸಗಿರುವುದನ್ನು ಸೂಚಿಸುತ್ತದೆ. ಅಲ್ಲದೆ, ಪ್ರಶ್ನಿಸುವಾಗ ಅವರು ಬೇರೆ ಯಾರನ್ನೂ ಹೆಸರಿಸಿಲ್ಲ’ ಎಂದಿದ್ದಾರೆ.

ಅಪರಾಧದ ಸ್ಥಳದಿಂದ ಕೆಲವು ಸ್ನ್ಯಾಕ್ ಪ್ಯಾಕೆಟ್, ಸಿಗರೇಟ್ ತುಂಡು ಮತ್ತು ನೀರಿನ ಬಾಟಲಿಯನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆರೋಪ ಮಾಡಿದವರು ಕ್ರಮ ಎದುರಿಸಬೇಕಾಗುತ್ತದೆ ಎಂದು ಸರ್ಕಾರದ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.


ಇದನ್ನೂ ಓದಿ: ಉನ್ನಾವೊದಲ್ಲಿ ಇಬ್ಬರು ದಲಿತ ಬಾಲಕಿಯರ ಶವ ಪತ್ತೆ: ಮತ್ತೊಬ್ಬಳ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...