Homeಮುಖಪುಟಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

- Advertisement -
- Advertisement -

ಉನ್ನಾವೊ ಜಿಲ್ಲೆಯ ಮೂವರು ದಲಿತ ಬಾಲಕಿಯರಿಗೆ ವಿಷಪ್ರಾಶನ ಮಾಡಿಸಿದ ಆರೋಪದಲ್ಲಿ 28 ವರ್ಷದ ಯುವಕನನ್ನು ಬಂಧಿಸಿ, ಅವನ ಜೊತೆಗಿದ್ದ ಇನ್ನೊಬ್ಬ ಅಪ್ರಾಪ್ತ ವಯಸ್ಕನನ್ನು ವಶಕ್ಕೆ ಪಡೆದಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಹೇಳಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನೀರಿನಲ್ಲಿ ಕೀಟನಾಶಕವನ್ನು ಬೆರೆಸಿದ್ದಾಗಿ ಆರೋಪಿ ವಿನಯ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಬಾಲಕಿಯರಲ್ಲಿ ಹಿರಿಯಳಾದ 17 ವರ್ಷದ ಬಾಲಕಿಯನ್ನು ಗುರಿಯಾಗಿಸಿಕೊಂಡು ನೀರಿನಲ್ಲಿ ಕ್ರಿಮಿನಾಶಕ ಬೆರಸಿ ನೀಡಿದ್ದಾಗಿ ವಿನಯ್ ಹೇಳಿದ್ದಾನೆ. ಅವಳು ತನ್ನ ಪ್ರೀತಿಯನ್ನು ನಿರಾಕರಿಸಿ, ಮೊಬೈಲ್ ನಂಬರ್ ಕೊಡಲೂ ಒಪ್ಪದಿದ್ದಾಗ ಸಿಟ್ಟು ಬಂದು ಈ ಕೃತ್ಯ ಎಸಗಿದ್ದಾಗಿ ವಿನಯ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.. ಉಳಿದ ಇಬ್ಬರು ಬಾಲಕಿಯರೂ ಅದೇ ನೀರನ್ನು ಕುಡಿದಿದ್ದರು ಎನ್ನಲಾಗಿದೆ.

13 ಮತ್ತು 16 ವರ್ಷದ ದಲಿತ ಬಾಲಕಿಯರು ಬುಧವಾರ ಸಂಜೆ ಶವವಾಗಿ ಪತ್ತೆಯಾಗಿದ್ದರೆ, 17 ವರ್ಷದ ಬಾಲಕಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಂಬಂಧಿಕರ ಪ್ರಕಾರ ಮೂವರೂ ಮೇವು ಸಂಗ್ರಹಿಸಲು ಕುಟುಂಬದ ಜಮೀನುಗಳಿಗೆ ಹೋಗಿದ್ದರು.

ಬಾಲಕಿಯರ ಪಕ್ಕದ ಹಳ್ಳಿಯವನಾದ ವಿನಯ್ ಜಮೀನು ಬಾಲಕಿಯರ ಜಮೀನಿನ ಪಕ್ಕದಲ್ಲೇ ಇದೆ. ಲಾಕ್‌ಡೌನ್ ಸಮಯದಿಂದ ವಿನಯ್ ಬಾಲಕಿಯರ ಜೊತೆ ಸ್ನೇಹ ಬೆಳೆಸಿದ್ದ. ಆಗಾಗ ಜಮೀನಿನಲ್ಲಿ ಅವರನ್ನು ಭೇಟಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಿನಯ್ ಮತ್ತು ಇನ್ನೊಬ್ಬ ಅಪ್ರಾಪ್ತ ಆರೋಪಿ ಕೂಡ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಶುಕ್ರವಾರ ಸಂಜೆ ಉನ್ನಾವೊದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಲಕ್ನೋ ರೇಂಜ್ ಇನ್ಸ್ಪೆಕ್ಟರ್ ಜನರಲ್ (ಐಜಿ) ಲಕ್ಷ್ಮಿ ಸಿಂಗ್, “ಆರೋಪಿಗಳನ್ನು ಹತ್ತಿರದ ಕ್ರಾಸ್ ಬಳಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಅವರಲ್ಲಿ ಒಬ್ಬರು ವಿನಯ್ ಅಲಿಯಾಸ್ ಲಂಬು ಮತ್ತು ಇನ್ನೊಬ್ಬರು ಮೈನರ್. ವಿಚಾರಣೆಯ ನಂತರ, ವಿನಯ್ ಅಪರಾಧವನ್ನು ಒಪ್ಪಿಕೊಂಡ ಮತ್ತು ಘಟನೆಗಳ ಸಂಪೂರ್ಣ ಅನುಕ್ರಮವನ್ನು ನಮಗೆ ತಿಳಿಸಿದ” ಎಂದಿದ್ದಾರೆ.

ಹಲ್ಲೆ ನಡೆಸಿದ ಯಾವುದೇ ಪುರಾವೆಗಳು ದೊರೆತಿಲ್ಲ ಎಂದು ಪೊಲೀಸರು ಪುನರಾವರ್ತಿಸಿದರು. “ಶವಪರೀಕ್ಷೆಯ ವರದಿಯ ಪ್ರಕಾರ, ಹುಡುಗಿಯರ ಮೇಲೆ ಯಾವುದೇ ಬಾಹ್ಯ ಅಥವಾ ಆಂತರಿಕ ಗಾಯಗಳು ಕಂಡುಬಂದಿಲ್ಲ. ಹಲ್ಲೆಯ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, ಮತ್ತು ಆರೋಪಿ ನೀಡಿದ ಹೇಳಿಕೆಯಲ್ಲಿ ಬಾಲಕಿಯರ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ ಎಂದು ಐಜಿ ಹೇಳಿದ್ದಾರೆ, ಕುಟುಂಬದ ಕೆಲವು ಸದಸ್ಯರು ಆರೋಪಿಸಿರುವಂತೆ ವಿನಯ್ ಹುಡುಗಿಯರ ಕೈಕಾಲು ಕಟ್ಟಿಹಾಕಿದ್ದನ್ನು ನಿರಾಕರಿಸಿದ್ದಾನೆ ಎಂದು ಹೇಳಿದರು.

“17 ವರ್ಷದ ಬಾಲಕಿಗೆ ಪ್ರೀತಿಸುವಂತೆ ವಿನಯ್ ಒತ್ತಾಯಿಸಿ ವಿಫಲನಾಗಿದ್ದ. ಅವನು ಕೋಪದಿಂದ ಅಪರಾಧ ಮಾಡಿದ್ದಾನೆ. ತನ್ನ ಜಮೀನಿನಲ್ಲಿ ಇಟ್ಟಿದ್ದ ಕೀಟನಾಶಕವನ್ನು ನೀರಿನಲ್ಲಿ ಬೆರೆಸಿ ಕೃತ್ಯ ಎಸಗಿದ್ದಾನೆ ಎಮದು ಐಜಿ ವಿವರಿಸಿದ್ದಾರೆ.
ಅಪ್ರಾಪ್ತ ವಯಸ್ಕನು ವಿನಯ್‌ಗೆ ಸಮೀಪದ ಅಂಗಡಿಯಿಂದ ತಿಂಡಿ ತಂದು ಕೊಟ್ಟಿದ್ದಾನೆ. ಹುಡುಗಿಯರು ಅಂಗಡಿಯಿಂದ ಕೆಲವು ತಿಂಡಿಗಳನ್ನು ತಂದಿದ್ದಾರೆ. ಅವರು ವಿನಯ್ ಜಮೀನಿನ ಬಳಿ ಭೇಟಿಯಾಗಿ ಸ್ವಲ್ಪ ಹೊತ್ತು ಮಾತನಾಡಿದ್ದಾರೆ. ತದನಂತರ ವಿನಯ್ 17 ವರ್ಷದ ಬಾಲಕಿಗೆ (ಕೀಟನಾಶಕದೊಂದಿಗೆ) ನೀರನ್ನು ನೀಡಿದ. ಅವಳು ನೀರು ಕುಡಿದ ನಂತರ, ಇತರ ಇಬ್ಬರು ಹುಡುಗಿಯರು ಬಾಟಲಿಯನ್ನು ಕಿತ್ತುಕೊಂಡು ತಾವೂ ಕುಡಿದರು. ವಿನಯ್ ಇತರ ಹುಡುಗಿಯರಿಗೆ ನೀರು ಕುಡಿಯದಿರಲು ಒತ್ತಾಯಿಸಿದ್ದಾನೆ. ಆದರೆ ಅವರು ಕೇಳಲಿಲ್ಲ…’ ಎಂದು ಐಜಿ ಹೇಳಿದ್ದಾರೆ.

“ನೀರನ್ನು ಕುಡಿದ ನಂತರ, ಅವರು ಪ್ರಜ್ಞಾಹೀನರಾದರು ಮತ್ತು ನೊರೆ ಪದಾರ್ಥವು ಅವರ ಬಾಯಿಯಿಂದ ಹೊರಬರಲು ಪ್ರಾರಂಭಿಸಿತು. ವಿನಯ್ ಮತ್ತು ಅವನ ಸಹಚರ ಭಯಭೀತರಾಗಿ ಓಡಿಹೋದರು” ಎಂದು ಐಜಿ ತಿಳಿಸಿದ್ದಾರೆ.

ಇತರ ಜನರು ಭಾಗಿಯಾಗಿರಬಹುದೇ ಎಂದು ಕೇಳಿದಾಗ, ಐಜಿ, “ಇಲ್ಲಿಯವರೆಗೆ, ನಾವು ಸಂಗ್ರಹಿಸಿದ ಸಾಕ್ಷ್ಯಗಳು ಮತ್ತು ಸಮೀಪದ ಮನೆಗಳವರು ನಮಗೆ ನೀಡಿದ ಮಾಹಿತಿಯು ಈ ಇಬ್ಬರು ಮಾತ್ರ ಅಪರಾಧ ಎಸಗಿರುವುದನ್ನು ಸೂಚಿಸುತ್ತದೆ. ಅಲ್ಲದೆ, ಪ್ರಶ್ನಿಸುವಾಗ ಅವರು ಬೇರೆ ಯಾರನ್ನೂ ಹೆಸರಿಸಿಲ್ಲ’ ಎಂದಿದ್ದಾರೆ.

ಅಪರಾಧದ ಸ್ಥಳದಿಂದ ಕೆಲವು ಸ್ನ್ಯಾಕ್ ಪ್ಯಾಕೆಟ್, ಸಿಗರೇಟ್ ತುಂಡು ಮತ್ತು ನೀರಿನ ಬಾಟಲಿಯನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆರೋಪ ಮಾಡಿದವರು ಕ್ರಮ ಎದುರಿಸಬೇಕಾಗುತ್ತದೆ ಎಂದು ಸರ್ಕಾರದ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.


ಇದನ್ನೂ ಓದಿ: ಉನ್ನಾವೊದಲ್ಲಿ ಇಬ್ಬರು ದಲಿತ ಬಾಲಕಿಯರ ಶವ ಪತ್ತೆ: ಮತ್ತೊಬ್ಬಳ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...