Homeಮುಖಪುಟಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

- Advertisement -
- Advertisement -

ಉನ್ನಾವೊ ಜಿಲ್ಲೆಯ ಮೂವರು ದಲಿತ ಬಾಲಕಿಯರಿಗೆ ವಿಷಪ್ರಾಶನ ಮಾಡಿಸಿದ ಆರೋಪದಲ್ಲಿ 28 ವರ್ಷದ ಯುವಕನನ್ನು ಬಂಧಿಸಿ, ಅವನ ಜೊತೆಗಿದ್ದ ಇನ್ನೊಬ್ಬ ಅಪ್ರಾಪ್ತ ವಯಸ್ಕನನ್ನು ವಶಕ್ಕೆ ಪಡೆದಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಹೇಳಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನೀರಿನಲ್ಲಿ ಕೀಟನಾಶಕವನ್ನು ಬೆರೆಸಿದ್ದಾಗಿ ಆರೋಪಿ ವಿನಯ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಬಾಲಕಿಯರಲ್ಲಿ ಹಿರಿಯಳಾದ 17 ವರ್ಷದ ಬಾಲಕಿಯನ್ನು ಗುರಿಯಾಗಿಸಿಕೊಂಡು ನೀರಿನಲ್ಲಿ ಕ್ರಿಮಿನಾಶಕ ಬೆರಸಿ ನೀಡಿದ್ದಾಗಿ ವಿನಯ್ ಹೇಳಿದ್ದಾನೆ. ಅವಳು ತನ್ನ ಪ್ರೀತಿಯನ್ನು ನಿರಾಕರಿಸಿ, ಮೊಬೈಲ್ ನಂಬರ್ ಕೊಡಲೂ ಒಪ್ಪದಿದ್ದಾಗ ಸಿಟ್ಟು ಬಂದು ಈ ಕೃತ್ಯ ಎಸಗಿದ್ದಾಗಿ ವಿನಯ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.. ಉಳಿದ ಇಬ್ಬರು ಬಾಲಕಿಯರೂ ಅದೇ ನೀರನ್ನು ಕುಡಿದಿದ್ದರು ಎನ್ನಲಾಗಿದೆ.

13 ಮತ್ತು 16 ವರ್ಷದ ದಲಿತ ಬಾಲಕಿಯರು ಬುಧವಾರ ಸಂಜೆ ಶವವಾಗಿ ಪತ್ತೆಯಾಗಿದ್ದರೆ, 17 ವರ್ಷದ ಬಾಲಕಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಂಬಂಧಿಕರ ಪ್ರಕಾರ ಮೂವರೂ ಮೇವು ಸಂಗ್ರಹಿಸಲು ಕುಟುಂಬದ ಜಮೀನುಗಳಿಗೆ ಹೋಗಿದ್ದರು.

ಬಾಲಕಿಯರ ಪಕ್ಕದ ಹಳ್ಳಿಯವನಾದ ವಿನಯ್ ಜಮೀನು ಬಾಲಕಿಯರ ಜಮೀನಿನ ಪಕ್ಕದಲ್ಲೇ ಇದೆ. ಲಾಕ್‌ಡೌನ್ ಸಮಯದಿಂದ ವಿನಯ್ ಬಾಲಕಿಯರ ಜೊತೆ ಸ್ನೇಹ ಬೆಳೆಸಿದ್ದ. ಆಗಾಗ ಜಮೀನಿನಲ್ಲಿ ಅವರನ್ನು ಭೇಟಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಿನಯ್ ಮತ್ತು ಇನ್ನೊಬ್ಬ ಅಪ್ರಾಪ್ತ ಆರೋಪಿ ಕೂಡ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಶುಕ್ರವಾರ ಸಂಜೆ ಉನ್ನಾವೊದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಲಕ್ನೋ ರೇಂಜ್ ಇನ್ಸ್ಪೆಕ್ಟರ್ ಜನರಲ್ (ಐಜಿ) ಲಕ್ಷ್ಮಿ ಸಿಂಗ್, “ಆರೋಪಿಗಳನ್ನು ಹತ್ತಿರದ ಕ್ರಾಸ್ ಬಳಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಅವರಲ್ಲಿ ಒಬ್ಬರು ವಿನಯ್ ಅಲಿಯಾಸ್ ಲಂಬು ಮತ್ತು ಇನ್ನೊಬ್ಬರು ಮೈನರ್. ವಿಚಾರಣೆಯ ನಂತರ, ವಿನಯ್ ಅಪರಾಧವನ್ನು ಒಪ್ಪಿಕೊಂಡ ಮತ್ತು ಘಟನೆಗಳ ಸಂಪೂರ್ಣ ಅನುಕ್ರಮವನ್ನು ನಮಗೆ ತಿಳಿಸಿದ” ಎಂದಿದ್ದಾರೆ.

ಹಲ್ಲೆ ನಡೆಸಿದ ಯಾವುದೇ ಪುರಾವೆಗಳು ದೊರೆತಿಲ್ಲ ಎಂದು ಪೊಲೀಸರು ಪುನರಾವರ್ತಿಸಿದರು. “ಶವಪರೀಕ್ಷೆಯ ವರದಿಯ ಪ್ರಕಾರ, ಹುಡುಗಿಯರ ಮೇಲೆ ಯಾವುದೇ ಬಾಹ್ಯ ಅಥವಾ ಆಂತರಿಕ ಗಾಯಗಳು ಕಂಡುಬಂದಿಲ್ಲ. ಹಲ್ಲೆಯ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, ಮತ್ತು ಆರೋಪಿ ನೀಡಿದ ಹೇಳಿಕೆಯಲ್ಲಿ ಬಾಲಕಿಯರ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ ಎಂದು ಐಜಿ ಹೇಳಿದ್ದಾರೆ, ಕುಟುಂಬದ ಕೆಲವು ಸದಸ್ಯರು ಆರೋಪಿಸಿರುವಂತೆ ವಿನಯ್ ಹುಡುಗಿಯರ ಕೈಕಾಲು ಕಟ್ಟಿಹಾಕಿದ್ದನ್ನು ನಿರಾಕರಿಸಿದ್ದಾನೆ ಎಂದು ಹೇಳಿದರು.

“17 ವರ್ಷದ ಬಾಲಕಿಗೆ ಪ್ರೀತಿಸುವಂತೆ ವಿನಯ್ ಒತ್ತಾಯಿಸಿ ವಿಫಲನಾಗಿದ್ದ. ಅವನು ಕೋಪದಿಂದ ಅಪರಾಧ ಮಾಡಿದ್ದಾನೆ. ತನ್ನ ಜಮೀನಿನಲ್ಲಿ ಇಟ್ಟಿದ್ದ ಕೀಟನಾಶಕವನ್ನು ನೀರಿನಲ್ಲಿ ಬೆರೆಸಿ ಕೃತ್ಯ ಎಸಗಿದ್ದಾನೆ ಎಮದು ಐಜಿ ವಿವರಿಸಿದ್ದಾರೆ.
ಅಪ್ರಾಪ್ತ ವಯಸ್ಕನು ವಿನಯ್‌ಗೆ ಸಮೀಪದ ಅಂಗಡಿಯಿಂದ ತಿಂಡಿ ತಂದು ಕೊಟ್ಟಿದ್ದಾನೆ. ಹುಡುಗಿಯರು ಅಂಗಡಿಯಿಂದ ಕೆಲವು ತಿಂಡಿಗಳನ್ನು ತಂದಿದ್ದಾರೆ. ಅವರು ವಿನಯ್ ಜಮೀನಿನ ಬಳಿ ಭೇಟಿಯಾಗಿ ಸ್ವಲ್ಪ ಹೊತ್ತು ಮಾತನಾಡಿದ್ದಾರೆ. ತದನಂತರ ವಿನಯ್ 17 ವರ್ಷದ ಬಾಲಕಿಗೆ (ಕೀಟನಾಶಕದೊಂದಿಗೆ) ನೀರನ್ನು ನೀಡಿದ. ಅವಳು ನೀರು ಕುಡಿದ ನಂತರ, ಇತರ ಇಬ್ಬರು ಹುಡುಗಿಯರು ಬಾಟಲಿಯನ್ನು ಕಿತ್ತುಕೊಂಡು ತಾವೂ ಕುಡಿದರು. ವಿನಯ್ ಇತರ ಹುಡುಗಿಯರಿಗೆ ನೀರು ಕುಡಿಯದಿರಲು ಒತ್ತಾಯಿಸಿದ್ದಾನೆ. ಆದರೆ ಅವರು ಕೇಳಲಿಲ್ಲ…’ ಎಂದು ಐಜಿ ಹೇಳಿದ್ದಾರೆ.

“ನೀರನ್ನು ಕುಡಿದ ನಂತರ, ಅವರು ಪ್ರಜ್ಞಾಹೀನರಾದರು ಮತ್ತು ನೊರೆ ಪದಾರ್ಥವು ಅವರ ಬಾಯಿಯಿಂದ ಹೊರಬರಲು ಪ್ರಾರಂಭಿಸಿತು. ವಿನಯ್ ಮತ್ತು ಅವನ ಸಹಚರ ಭಯಭೀತರಾಗಿ ಓಡಿಹೋದರು” ಎಂದು ಐಜಿ ತಿಳಿಸಿದ್ದಾರೆ.

ಇತರ ಜನರು ಭಾಗಿಯಾಗಿರಬಹುದೇ ಎಂದು ಕೇಳಿದಾಗ, ಐಜಿ, “ಇಲ್ಲಿಯವರೆಗೆ, ನಾವು ಸಂಗ್ರಹಿಸಿದ ಸಾಕ್ಷ್ಯಗಳು ಮತ್ತು ಸಮೀಪದ ಮನೆಗಳವರು ನಮಗೆ ನೀಡಿದ ಮಾಹಿತಿಯು ಈ ಇಬ್ಬರು ಮಾತ್ರ ಅಪರಾಧ ಎಸಗಿರುವುದನ್ನು ಸೂಚಿಸುತ್ತದೆ. ಅಲ್ಲದೆ, ಪ್ರಶ್ನಿಸುವಾಗ ಅವರು ಬೇರೆ ಯಾರನ್ನೂ ಹೆಸರಿಸಿಲ್ಲ’ ಎಂದಿದ್ದಾರೆ.

ಅಪರಾಧದ ಸ್ಥಳದಿಂದ ಕೆಲವು ಸ್ನ್ಯಾಕ್ ಪ್ಯಾಕೆಟ್, ಸಿಗರೇಟ್ ತುಂಡು ಮತ್ತು ನೀರಿನ ಬಾಟಲಿಯನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆರೋಪ ಮಾಡಿದವರು ಕ್ರಮ ಎದುರಿಸಬೇಕಾಗುತ್ತದೆ ಎಂದು ಸರ್ಕಾರದ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.


ಇದನ್ನೂ ಓದಿ: ಉನ್ನಾವೊದಲ್ಲಿ ಇಬ್ಬರು ದಲಿತ ಬಾಲಕಿಯರ ಶವ ಪತ್ತೆ: ಮತ್ತೊಬ್ಬಳ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...