Homeಮುಖಪುಟಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

- Advertisement -
- Advertisement -

ಉನ್ನಾವೊ ಜಿಲ್ಲೆಯ ಮೂವರು ದಲಿತ ಬಾಲಕಿಯರಿಗೆ ವಿಷಪ್ರಾಶನ ಮಾಡಿಸಿದ ಆರೋಪದಲ್ಲಿ 28 ವರ್ಷದ ಯುವಕನನ್ನು ಬಂಧಿಸಿ, ಅವನ ಜೊತೆಗಿದ್ದ ಇನ್ನೊಬ್ಬ ಅಪ್ರಾಪ್ತ ವಯಸ್ಕನನ್ನು ವಶಕ್ಕೆ ಪಡೆದಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಹೇಳಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನೀರಿನಲ್ಲಿ ಕೀಟನಾಶಕವನ್ನು ಬೆರೆಸಿದ್ದಾಗಿ ಆರೋಪಿ ವಿನಯ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಬಾಲಕಿಯರಲ್ಲಿ ಹಿರಿಯಳಾದ 17 ವರ್ಷದ ಬಾಲಕಿಯನ್ನು ಗುರಿಯಾಗಿಸಿಕೊಂಡು ನೀರಿನಲ್ಲಿ ಕ್ರಿಮಿನಾಶಕ ಬೆರಸಿ ನೀಡಿದ್ದಾಗಿ ವಿನಯ್ ಹೇಳಿದ್ದಾನೆ. ಅವಳು ತನ್ನ ಪ್ರೀತಿಯನ್ನು ನಿರಾಕರಿಸಿ, ಮೊಬೈಲ್ ನಂಬರ್ ಕೊಡಲೂ ಒಪ್ಪದಿದ್ದಾಗ ಸಿಟ್ಟು ಬಂದು ಈ ಕೃತ್ಯ ಎಸಗಿದ್ದಾಗಿ ವಿನಯ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.. ಉಳಿದ ಇಬ್ಬರು ಬಾಲಕಿಯರೂ ಅದೇ ನೀರನ್ನು ಕುಡಿದಿದ್ದರು ಎನ್ನಲಾಗಿದೆ.

13 ಮತ್ತು 16 ವರ್ಷದ ದಲಿತ ಬಾಲಕಿಯರು ಬುಧವಾರ ಸಂಜೆ ಶವವಾಗಿ ಪತ್ತೆಯಾಗಿದ್ದರೆ, 17 ವರ್ಷದ ಬಾಲಕಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಂಬಂಧಿಕರ ಪ್ರಕಾರ ಮೂವರೂ ಮೇವು ಸಂಗ್ರಹಿಸಲು ಕುಟುಂಬದ ಜಮೀನುಗಳಿಗೆ ಹೋಗಿದ್ದರು.

ಬಾಲಕಿಯರ ಪಕ್ಕದ ಹಳ್ಳಿಯವನಾದ ವಿನಯ್ ಜಮೀನು ಬಾಲಕಿಯರ ಜಮೀನಿನ ಪಕ್ಕದಲ್ಲೇ ಇದೆ. ಲಾಕ್‌ಡೌನ್ ಸಮಯದಿಂದ ವಿನಯ್ ಬಾಲಕಿಯರ ಜೊತೆ ಸ್ನೇಹ ಬೆಳೆಸಿದ್ದ. ಆಗಾಗ ಜಮೀನಿನಲ್ಲಿ ಅವರನ್ನು ಭೇಟಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಿನಯ್ ಮತ್ತು ಇನ್ನೊಬ್ಬ ಅಪ್ರಾಪ್ತ ಆರೋಪಿ ಕೂಡ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಶುಕ್ರವಾರ ಸಂಜೆ ಉನ್ನಾವೊದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಲಕ್ನೋ ರೇಂಜ್ ಇನ್ಸ್ಪೆಕ್ಟರ್ ಜನರಲ್ (ಐಜಿ) ಲಕ್ಷ್ಮಿ ಸಿಂಗ್, “ಆರೋಪಿಗಳನ್ನು ಹತ್ತಿರದ ಕ್ರಾಸ್ ಬಳಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಅವರಲ್ಲಿ ಒಬ್ಬರು ವಿನಯ್ ಅಲಿಯಾಸ್ ಲಂಬು ಮತ್ತು ಇನ್ನೊಬ್ಬರು ಮೈನರ್. ವಿಚಾರಣೆಯ ನಂತರ, ವಿನಯ್ ಅಪರಾಧವನ್ನು ಒಪ್ಪಿಕೊಂಡ ಮತ್ತು ಘಟನೆಗಳ ಸಂಪೂರ್ಣ ಅನುಕ್ರಮವನ್ನು ನಮಗೆ ತಿಳಿಸಿದ” ಎಂದಿದ್ದಾರೆ.

ಹಲ್ಲೆ ನಡೆಸಿದ ಯಾವುದೇ ಪುರಾವೆಗಳು ದೊರೆತಿಲ್ಲ ಎಂದು ಪೊಲೀಸರು ಪುನರಾವರ್ತಿಸಿದರು. “ಶವಪರೀಕ್ಷೆಯ ವರದಿಯ ಪ್ರಕಾರ, ಹುಡುಗಿಯರ ಮೇಲೆ ಯಾವುದೇ ಬಾಹ್ಯ ಅಥವಾ ಆಂತರಿಕ ಗಾಯಗಳು ಕಂಡುಬಂದಿಲ್ಲ. ಹಲ್ಲೆಯ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, ಮತ್ತು ಆರೋಪಿ ನೀಡಿದ ಹೇಳಿಕೆಯಲ್ಲಿ ಬಾಲಕಿಯರ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ ಎಂದು ಐಜಿ ಹೇಳಿದ್ದಾರೆ, ಕುಟುಂಬದ ಕೆಲವು ಸದಸ್ಯರು ಆರೋಪಿಸಿರುವಂತೆ ವಿನಯ್ ಹುಡುಗಿಯರ ಕೈಕಾಲು ಕಟ್ಟಿಹಾಕಿದ್ದನ್ನು ನಿರಾಕರಿಸಿದ್ದಾನೆ ಎಂದು ಹೇಳಿದರು.

“17 ವರ್ಷದ ಬಾಲಕಿಗೆ ಪ್ರೀತಿಸುವಂತೆ ವಿನಯ್ ಒತ್ತಾಯಿಸಿ ವಿಫಲನಾಗಿದ್ದ. ಅವನು ಕೋಪದಿಂದ ಅಪರಾಧ ಮಾಡಿದ್ದಾನೆ. ತನ್ನ ಜಮೀನಿನಲ್ಲಿ ಇಟ್ಟಿದ್ದ ಕೀಟನಾಶಕವನ್ನು ನೀರಿನಲ್ಲಿ ಬೆರೆಸಿ ಕೃತ್ಯ ಎಸಗಿದ್ದಾನೆ ಎಮದು ಐಜಿ ವಿವರಿಸಿದ್ದಾರೆ.
ಅಪ್ರಾಪ್ತ ವಯಸ್ಕನು ವಿನಯ್‌ಗೆ ಸಮೀಪದ ಅಂಗಡಿಯಿಂದ ತಿಂಡಿ ತಂದು ಕೊಟ್ಟಿದ್ದಾನೆ. ಹುಡುಗಿಯರು ಅಂಗಡಿಯಿಂದ ಕೆಲವು ತಿಂಡಿಗಳನ್ನು ತಂದಿದ್ದಾರೆ. ಅವರು ವಿನಯ್ ಜಮೀನಿನ ಬಳಿ ಭೇಟಿಯಾಗಿ ಸ್ವಲ್ಪ ಹೊತ್ತು ಮಾತನಾಡಿದ್ದಾರೆ. ತದನಂತರ ವಿನಯ್ 17 ವರ್ಷದ ಬಾಲಕಿಗೆ (ಕೀಟನಾಶಕದೊಂದಿಗೆ) ನೀರನ್ನು ನೀಡಿದ. ಅವಳು ನೀರು ಕುಡಿದ ನಂತರ, ಇತರ ಇಬ್ಬರು ಹುಡುಗಿಯರು ಬಾಟಲಿಯನ್ನು ಕಿತ್ತುಕೊಂಡು ತಾವೂ ಕುಡಿದರು. ವಿನಯ್ ಇತರ ಹುಡುಗಿಯರಿಗೆ ನೀರು ಕುಡಿಯದಿರಲು ಒತ್ತಾಯಿಸಿದ್ದಾನೆ. ಆದರೆ ಅವರು ಕೇಳಲಿಲ್ಲ…’ ಎಂದು ಐಜಿ ಹೇಳಿದ್ದಾರೆ.

“ನೀರನ್ನು ಕುಡಿದ ನಂತರ, ಅವರು ಪ್ರಜ್ಞಾಹೀನರಾದರು ಮತ್ತು ನೊರೆ ಪದಾರ್ಥವು ಅವರ ಬಾಯಿಯಿಂದ ಹೊರಬರಲು ಪ್ರಾರಂಭಿಸಿತು. ವಿನಯ್ ಮತ್ತು ಅವನ ಸಹಚರ ಭಯಭೀತರಾಗಿ ಓಡಿಹೋದರು” ಎಂದು ಐಜಿ ತಿಳಿಸಿದ್ದಾರೆ.

ಇತರ ಜನರು ಭಾಗಿಯಾಗಿರಬಹುದೇ ಎಂದು ಕೇಳಿದಾಗ, ಐಜಿ, “ಇಲ್ಲಿಯವರೆಗೆ, ನಾವು ಸಂಗ್ರಹಿಸಿದ ಸಾಕ್ಷ್ಯಗಳು ಮತ್ತು ಸಮೀಪದ ಮನೆಗಳವರು ನಮಗೆ ನೀಡಿದ ಮಾಹಿತಿಯು ಈ ಇಬ್ಬರು ಮಾತ್ರ ಅಪರಾಧ ಎಸಗಿರುವುದನ್ನು ಸೂಚಿಸುತ್ತದೆ. ಅಲ್ಲದೆ, ಪ್ರಶ್ನಿಸುವಾಗ ಅವರು ಬೇರೆ ಯಾರನ್ನೂ ಹೆಸರಿಸಿಲ್ಲ’ ಎಂದಿದ್ದಾರೆ.

ಅಪರಾಧದ ಸ್ಥಳದಿಂದ ಕೆಲವು ಸ್ನ್ಯಾಕ್ ಪ್ಯಾಕೆಟ್, ಸಿಗರೇಟ್ ತುಂಡು ಮತ್ತು ನೀರಿನ ಬಾಟಲಿಯನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆರೋಪ ಮಾಡಿದವರು ಕ್ರಮ ಎದುರಿಸಬೇಕಾಗುತ್ತದೆ ಎಂದು ಸರ್ಕಾರದ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.


ಇದನ್ನೂ ಓದಿ: ಉನ್ನಾವೊದಲ್ಲಿ ಇಬ್ಬರು ದಲಿತ ಬಾಲಕಿಯರ ಶವ ಪತ್ತೆ: ಮತ್ತೊಬ್ಬಳ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...