Homeಮುಖಪುಟಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

- Advertisement -
- Advertisement -

ಉನ್ನಾವೊ ಜಿಲ್ಲೆಯ ಮೂವರು ದಲಿತ ಬಾಲಕಿಯರಿಗೆ ವಿಷಪ್ರಾಶನ ಮಾಡಿಸಿದ ಆರೋಪದಲ್ಲಿ 28 ವರ್ಷದ ಯುವಕನನ್ನು ಬಂಧಿಸಿ, ಅವನ ಜೊತೆಗಿದ್ದ ಇನ್ನೊಬ್ಬ ಅಪ್ರಾಪ್ತ ವಯಸ್ಕನನ್ನು ವಶಕ್ಕೆ ಪಡೆದಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಹೇಳಿಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನೀರಿನಲ್ಲಿ ಕೀಟನಾಶಕವನ್ನು ಬೆರೆಸಿದ್ದಾಗಿ ಆರೋಪಿ ವಿನಯ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಬಾಲಕಿಯರಲ್ಲಿ ಹಿರಿಯಳಾದ 17 ವರ್ಷದ ಬಾಲಕಿಯನ್ನು ಗುರಿಯಾಗಿಸಿಕೊಂಡು ನೀರಿನಲ್ಲಿ ಕ್ರಿಮಿನಾಶಕ ಬೆರಸಿ ನೀಡಿದ್ದಾಗಿ ವಿನಯ್ ಹೇಳಿದ್ದಾನೆ. ಅವಳು ತನ್ನ ಪ್ರೀತಿಯನ್ನು ನಿರಾಕರಿಸಿ, ಮೊಬೈಲ್ ನಂಬರ್ ಕೊಡಲೂ ಒಪ್ಪದಿದ್ದಾಗ ಸಿಟ್ಟು ಬಂದು ಈ ಕೃತ್ಯ ಎಸಗಿದ್ದಾಗಿ ವಿನಯ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.. ಉಳಿದ ಇಬ್ಬರು ಬಾಲಕಿಯರೂ ಅದೇ ನೀರನ್ನು ಕುಡಿದಿದ್ದರು ಎನ್ನಲಾಗಿದೆ.

13 ಮತ್ತು 16 ವರ್ಷದ ದಲಿತ ಬಾಲಕಿಯರು ಬುಧವಾರ ಸಂಜೆ ಶವವಾಗಿ ಪತ್ತೆಯಾಗಿದ್ದರೆ, 17 ವರ್ಷದ ಬಾಲಕಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಂಬಂಧಿಕರ ಪ್ರಕಾರ ಮೂವರೂ ಮೇವು ಸಂಗ್ರಹಿಸಲು ಕುಟುಂಬದ ಜಮೀನುಗಳಿಗೆ ಹೋಗಿದ್ದರು.

ಬಾಲಕಿಯರ ಪಕ್ಕದ ಹಳ್ಳಿಯವನಾದ ವಿನಯ್ ಜಮೀನು ಬಾಲಕಿಯರ ಜಮೀನಿನ ಪಕ್ಕದಲ್ಲೇ ಇದೆ. ಲಾಕ್‌ಡೌನ್ ಸಮಯದಿಂದ ವಿನಯ್ ಬಾಲಕಿಯರ ಜೊತೆ ಸ್ನೇಹ ಬೆಳೆಸಿದ್ದ. ಆಗಾಗ ಜಮೀನಿನಲ್ಲಿ ಅವರನ್ನು ಭೇಟಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಿನಯ್ ಮತ್ತು ಇನ್ನೊಬ್ಬ ಅಪ್ರಾಪ್ತ ಆರೋಪಿ ಕೂಡ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಶುಕ್ರವಾರ ಸಂಜೆ ಉನ್ನಾವೊದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಲಕ್ನೋ ರೇಂಜ್ ಇನ್ಸ್ಪೆಕ್ಟರ್ ಜನರಲ್ (ಐಜಿ) ಲಕ್ಷ್ಮಿ ಸಿಂಗ್, “ಆರೋಪಿಗಳನ್ನು ಹತ್ತಿರದ ಕ್ರಾಸ್ ಬಳಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಅವರಲ್ಲಿ ಒಬ್ಬರು ವಿನಯ್ ಅಲಿಯಾಸ್ ಲಂಬು ಮತ್ತು ಇನ್ನೊಬ್ಬರು ಮೈನರ್. ವಿಚಾರಣೆಯ ನಂತರ, ವಿನಯ್ ಅಪರಾಧವನ್ನು ಒಪ್ಪಿಕೊಂಡ ಮತ್ತು ಘಟನೆಗಳ ಸಂಪೂರ್ಣ ಅನುಕ್ರಮವನ್ನು ನಮಗೆ ತಿಳಿಸಿದ” ಎಂದಿದ್ದಾರೆ.

ಹಲ್ಲೆ ನಡೆಸಿದ ಯಾವುದೇ ಪುರಾವೆಗಳು ದೊರೆತಿಲ್ಲ ಎಂದು ಪೊಲೀಸರು ಪುನರಾವರ್ತಿಸಿದರು. “ಶವಪರೀಕ್ಷೆಯ ವರದಿಯ ಪ್ರಕಾರ, ಹುಡುಗಿಯರ ಮೇಲೆ ಯಾವುದೇ ಬಾಹ್ಯ ಅಥವಾ ಆಂತರಿಕ ಗಾಯಗಳು ಕಂಡುಬಂದಿಲ್ಲ. ಹಲ್ಲೆಯ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, ಮತ್ತು ಆರೋಪಿ ನೀಡಿದ ಹೇಳಿಕೆಯಲ್ಲಿ ಬಾಲಕಿಯರ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ ಎಂದು ಐಜಿ ಹೇಳಿದ್ದಾರೆ, ಕುಟುಂಬದ ಕೆಲವು ಸದಸ್ಯರು ಆರೋಪಿಸಿರುವಂತೆ ವಿನಯ್ ಹುಡುಗಿಯರ ಕೈಕಾಲು ಕಟ್ಟಿಹಾಕಿದ್ದನ್ನು ನಿರಾಕರಿಸಿದ್ದಾನೆ ಎಂದು ಹೇಳಿದರು.

“17 ವರ್ಷದ ಬಾಲಕಿಗೆ ಪ್ರೀತಿಸುವಂತೆ ವಿನಯ್ ಒತ್ತಾಯಿಸಿ ವಿಫಲನಾಗಿದ್ದ. ಅವನು ಕೋಪದಿಂದ ಅಪರಾಧ ಮಾಡಿದ್ದಾನೆ. ತನ್ನ ಜಮೀನಿನಲ್ಲಿ ಇಟ್ಟಿದ್ದ ಕೀಟನಾಶಕವನ್ನು ನೀರಿನಲ್ಲಿ ಬೆರೆಸಿ ಕೃತ್ಯ ಎಸಗಿದ್ದಾನೆ ಎಮದು ಐಜಿ ವಿವರಿಸಿದ್ದಾರೆ.
ಅಪ್ರಾಪ್ತ ವಯಸ್ಕನು ವಿನಯ್‌ಗೆ ಸಮೀಪದ ಅಂಗಡಿಯಿಂದ ತಿಂಡಿ ತಂದು ಕೊಟ್ಟಿದ್ದಾನೆ. ಹುಡುಗಿಯರು ಅಂಗಡಿಯಿಂದ ಕೆಲವು ತಿಂಡಿಗಳನ್ನು ತಂದಿದ್ದಾರೆ. ಅವರು ವಿನಯ್ ಜಮೀನಿನ ಬಳಿ ಭೇಟಿಯಾಗಿ ಸ್ವಲ್ಪ ಹೊತ್ತು ಮಾತನಾಡಿದ್ದಾರೆ. ತದನಂತರ ವಿನಯ್ 17 ವರ್ಷದ ಬಾಲಕಿಗೆ (ಕೀಟನಾಶಕದೊಂದಿಗೆ) ನೀರನ್ನು ನೀಡಿದ. ಅವಳು ನೀರು ಕುಡಿದ ನಂತರ, ಇತರ ಇಬ್ಬರು ಹುಡುಗಿಯರು ಬಾಟಲಿಯನ್ನು ಕಿತ್ತುಕೊಂಡು ತಾವೂ ಕುಡಿದರು. ವಿನಯ್ ಇತರ ಹುಡುಗಿಯರಿಗೆ ನೀರು ಕುಡಿಯದಿರಲು ಒತ್ತಾಯಿಸಿದ್ದಾನೆ. ಆದರೆ ಅವರು ಕೇಳಲಿಲ್ಲ…’ ಎಂದು ಐಜಿ ಹೇಳಿದ್ದಾರೆ.

“ನೀರನ್ನು ಕುಡಿದ ನಂತರ, ಅವರು ಪ್ರಜ್ಞಾಹೀನರಾದರು ಮತ್ತು ನೊರೆ ಪದಾರ್ಥವು ಅವರ ಬಾಯಿಯಿಂದ ಹೊರಬರಲು ಪ್ರಾರಂಭಿಸಿತು. ವಿನಯ್ ಮತ್ತು ಅವನ ಸಹಚರ ಭಯಭೀತರಾಗಿ ಓಡಿಹೋದರು” ಎಂದು ಐಜಿ ತಿಳಿಸಿದ್ದಾರೆ.

ಇತರ ಜನರು ಭಾಗಿಯಾಗಿರಬಹುದೇ ಎಂದು ಕೇಳಿದಾಗ, ಐಜಿ, “ಇಲ್ಲಿಯವರೆಗೆ, ನಾವು ಸಂಗ್ರಹಿಸಿದ ಸಾಕ್ಷ್ಯಗಳು ಮತ್ತು ಸಮೀಪದ ಮನೆಗಳವರು ನಮಗೆ ನೀಡಿದ ಮಾಹಿತಿಯು ಈ ಇಬ್ಬರು ಮಾತ್ರ ಅಪರಾಧ ಎಸಗಿರುವುದನ್ನು ಸೂಚಿಸುತ್ತದೆ. ಅಲ್ಲದೆ, ಪ್ರಶ್ನಿಸುವಾಗ ಅವರು ಬೇರೆ ಯಾರನ್ನೂ ಹೆಸರಿಸಿಲ್ಲ’ ಎಂದಿದ್ದಾರೆ.

ಅಪರಾಧದ ಸ್ಥಳದಿಂದ ಕೆಲವು ಸ್ನ್ಯಾಕ್ ಪ್ಯಾಕೆಟ್, ಸಿಗರೇಟ್ ತುಂಡು ಮತ್ತು ನೀರಿನ ಬಾಟಲಿಯನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆರೋಪ ಮಾಡಿದವರು ಕ್ರಮ ಎದುರಿಸಬೇಕಾಗುತ್ತದೆ ಎಂದು ಸರ್ಕಾರದ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.


ಇದನ್ನೂ ಓದಿ: ಉನ್ನಾವೊದಲ್ಲಿ ಇಬ್ಬರು ದಲಿತ ಬಾಲಕಿಯರ ಶವ ಪತ್ತೆ: ಮತ್ತೊಬ್ಬಳ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...