Homeಮುಖಪುಟಕೋಚಿಂಗ್ ಸೆಂಟರ್‌ನಲ್ಲಿ ಯುಪಿಎಸ್‌ಸಿ ಆಕಾಂಕ್ಷಿಗಳ ಸಾವು; ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ

ಕೋಚಿಂಗ್ ಸೆಂಟರ್‌ನಲ್ಲಿ ಯುಪಿಎಸ್‌ಸಿ ಆಕಾಂಕ್ಷಿಗಳ ಸಾವು; ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ

- Advertisement -
- Advertisement -

ಕಳೆದ ತಿಂಗಳು ದೆಹಲಿಯ ಕೋಚಿಂಗ್ ಸೆಂಟರ್‌ನಲ್ಲಿ ಸಂಭವಿಸಿದ ಸಾವುಗಳ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ (ಆಗಸ್ಟ್ 5) ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ವಿಷಯದ ಬಗ್ಗೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಕೋಚಿಂಗ್ ಸೆಂಟರ್‌ಗಳಲ್ಲಿನ ಸುರಕ್ಷತಾ ಮಾನದಂಡಗಳಿಗೆ ಸಂಬಂಧಿಸಿದ ವಿಷಯದ ಬಗ್ಗೆ ನ್ಯಾಯಾಲಯವು ಗಮನಹರಿಸಿತು. ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳಲ್ಲಿ ಇತ್ತೀಚಿನ ಘಟನೆಗಳು ವಿವಿಧ ಪರೀಕ್ಷೆಗಳ ಯುವ ಆಕಾಂಕ್ಷಿಗಳ ಜೀವವನ್ನು ಬಲಿತೆಗೆದುಕೊಳ್ಳುವ ಬಗ್ಗೆ ಕಳವಳ ವ್ಯಕ್ತಪಡಿಸಿತು.

ಇಲ್ಲಿಯವರೆಗೆ ಯಾವ ಸುರಕ್ಷತಾ ಮಾನದಂಡಗಳನ್ನು ನಿಗದಿಪಡಿಸಲಾಗಿದೆ ಎಂಬುದಕ್ಕೆ ಕಾರಣವನ್ನು ತೋರಿಸಲು ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಮತ್ತು ಎಂಸಿಡಿಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ರಾಷ್ಟ್ರ ರಾಜಧಾನಿಯ ಓಲ್ಡ್ ರಾಜಿಂದರ್ ನಗರದಲ್ಲಿರುವ ಯುಪಿಎಸ್‌ಸಿ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಲ್ಲಿ ಮೂವರು ವಿದ್ಯಾರ್ಥಿಗಳ ಸಾವಿನ ಕುರಿತು ಕೋಚಿಂಗ್ ಸೆಂಟರ್‌ಗಳನ್ನು ತರಾಟೆಗೆ ತೆಗೆದುಕೊಂಡಿತು. “ಅವರು ಆಕಾಂಕ್ಷಿಗಳ ಜೀವನದ ಜೊತೆ ಆಟವಾಡುತ್ತಿದ್ದಾರೆ” ಎಂದು ಹೇಳಿದರು.

“ಈ ಸ್ಥಳಗಳು (ಕೋಚಿಂಗ್ ಸೆಂಟರ್‌ಗಳು) ಸಾವಿನ ಕೋಣೆಗಳಾಗಿ ಮಾರ್ಪಟ್ಟಿವೆ. ಸುರಕ್ಷತಾ ನಿಯಮಗಳು ಮತ್ತು ಗೌರವಯುತ ಜೀವನಕ್ಕಾಗಿ ಮೂಲ ಮಾನದಂಡಗಳ ಸಂಪೂರ್ಣ ಅನುಸರಣೆ ಇಲ್ಲದಿದ್ದರೆ ಕೋಚಿಂಗ್ ಸಂಸ್ಥೆಗಳು ಆನ್‌ಲೈನ್‌ನಲ್ಲಿ ಕಾರ್ಯನಿರ್ವಹಿಸಬಹುದು. ಕೋಚಿಂಗ್ ಸೆಂಟರ್‌ಗಳು ವಿವಿಧ ಭಾಗಗಳಿಂದ ಬರುವ ಆಕಾಂಕ್ಷಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿವೆ. ದೇಶದ ಯಾವುದೇ ಸಂಸ್ಥೆಯು ಸುರಕ್ಷತಾ ನಿಯಮಗಳನ್ನು ಅನುಸರಿಸದ ಹೊರತು ಕಾರ್ಯನಿರ್ವಹಿಸಲು ಅನುಮತಿಸಬಾರದು” ಎಂದು ಪೀಠ ಹೇಳಿದೆ.

ದೆಹಲಿ ಕೋಚಿಂಗ್ ಸೆಂಟರ್ ಸಾವುಗಳು

ಜುಲೈ 27 ರಂದು ಸಂಜೆ ಓಲ್ಡ್ ರಾಜಿಂದರ್ ನಗರದ ರಾವ್ ಐಎಎಸ್ ಸ್ಟಡಿ ಸರ್ಕಲ್‌ನ ನೆಲಮಾಳಿಗೆಯಲ್ಲಿ ಜಲಾವೃತದಿಂದಾಗಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವನ್ನಪ್ಪಿದ ದಿನಗಳ ನಂತರ ಈ ವಿಷಯದ ಕುರಿತು ಸುಪ್ರೀಂ ಹೇಳಿಕೆಗಳು ಬಂದಿವೆ.

ಉತ್ತರ ಪ್ರದೇಶದ ಶ್ರೇಯಾ ಯಾದವ್ (25), ತೆಲಂಗಾಣದ ತಾನ್ಯಾ ಸೋನಿ (25) ಮತ್ತು ಕೇರಳದ ನೆವಿನ್ ಡೆಲ್ವಿನ್ (24) ಮೃತಪಟ್ಟ ಮೂವರು ಆಕಾಂಕ್ಷಿಗಳು.

ಮೂರು ಯುಒಇಎಸ್‌ಸಿ ಆಕಾಂಕ್ಷಿಗಳ ಸಾವಿನ ತನಿಖೆಯನ್ನು ದೆಹಲಿ ಹೈಕೋರ್ಟ್ ಆಗಸ್ಟ್ 2 ರಂದು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಿತು. ಘಟನೆಗಳ ಗಂಭೀರತೆ ಮತ್ತು ಸಾರ್ವಜನಿಕ ಸೇವಕರು ಭ್ರಷ್ಟಾಚಾರದ ಸಂಭಾವ್ಯ ಒಳಗೊಳ್ಳುವಿಕೆ ಈ ನಿರ್ಧಾರಕ್ಕೆ ಕಾರಣವೆಂದು ನ್ಯಾಯಾಲಯವು ಉಲ್ಲೇಖಿಸಿದೆ. ನ್ಯಾಯಾಲಯದ ನಿರ್ದೇಶನಗಳನ್ನು ನಾಗರಿಕ ಸಂಸ್ಥೆಗಳು ಸಂಪೂರ್ಣವಾಗಿ ಅನುಸರಿಸುತ್ತಿಲ್ಲ ಎಂಬುದನ್ನು ಇತ್ತೀಚಿನ ದುರಂತಗಳು ತೋರಿಸಿವೆ ಎಂದು ಹೈಕೋರ್ಟ್ ಹೇಳಿತ್ತು.

ಮೂವರು ಆಕಾಂಕ್ಷಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಸ್‌ಮೆಂಟ್‌ನ ಮಾಲೀಕ ಸೇರಿದಂತೆ ಇನ್ನೂ ಐವರನ್ನು ದೆಹಲಿ ಪೊಲೀಸರು ಮೊದಲು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಜುಲೈ 29 ರಂದು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳಲ್ಲಿ ನೆಲಮಾಳಿಗೆಯ ಮಾಲೀಕರು ಮತ್ತು ಸಿಬ್ಬಂದಿ ಸೇರಿದ್ದಾರೆ.

ಇದನ್ನೂ ಓದಿ; ವಯನಾಡ್ ಭೂಕುಸಿತ ದುರಂತ: ರಕ್ಷಣಾ ಕಾರ್ಯಕರ್ತರಿಗೆ ಡ್ರೋನ್‌ ಮೂಲಕ ಆಹಾರ ಪೂರೈಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...