Homeಮುಖಪುಟಹೊಸ ಕ್ರಿಮಿನಲ್ ಕಾನೂನುಗಳಡಿ ಗುಂಪು ಹತ್ಯೆಯ ಅಪರಾಧಕ್ಕೆ ಮರಣದಂಡನೆ: ಅಮಿತ್ ಶಾ

ಹೊಸ ಕ್ರಿಮಿನಲ್ ಕಾನೂನುಗಳಡಿ ಗುಂಪು ಹತ್ಯೆಯ ಅಪರಾಧಕ್ಕೆ ಮರಣದಂಡನೆ: ಅಮಿತ್ ಶಾ

- Advertisement -
- Advertisement -

ಮೂರು ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ (ಎರಡನೆಯ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೆಯ) ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ (ಎರಡನೆಯ) ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.

ಈ ಮೂರು ಮಸೂದೆಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ- 1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್- 1898, ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್-1872 ಅನ್ನು ಬದಲಾಯಿಸುತ್ತದೆ.

ಮಸೂದೆಗಳ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತೀಯ ನ್ಯಾಯ (ಎರಡನೆಯ) ಸಂಹಿತಾ (ಹಳೆಯ ಭಾರತೀಯ ದಂಡ ಸಂಹಿತೆ) ಅಡಿ ಗುಂಪು ಹತ್ಯೆಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಐದು ಅಥವಾ ಹೆಚ್ಚು ಜನರ ಗುಂಪು ಒಬ್ಬ ವ್ಯಕ್ತಿಯ ಜನಾಂಗ, ಜಾತಿ, ಲಿಂಗ, ಭಾಷೆ ಅಥವಾ ವೈಯಕ್ತಿಕ ನಂಬಿಕೆಯ ಆಧಾರಗಳ ಮೇಲೆ ಕೊಲೆ ಅಥವಾ ಗಂಭೀರ ಗಾಯ ಮಾಡಿದರೆ ಅದು ಗುಂಪು ಹತ್ಯೆಯಾಗಲಿದೆ. ಇಂತಹ ಅಪರಾಧಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗುವುದು ಎಂದು ಅಮಿತ್ ಶಾ ವಿವರಿಸಿದ್ದಾರೆ.

ಲೋಕಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ನೀವು 58 ವರ್ಷಗಳ ಕಾಲ ದೇಶವನ್ನು ಆಳಿದ್ದೀರಿ. ಆದರೆ, ಯಾಕೆ ಗುಂಪು ಹತ್ಯೆಯನ್ನು ಕಾನೂನಿನಲ್ಲಿ ಸೇರಿಸಿಲ್ಲ? ಬಿಜೆಪಿಯನ್ನು ನಿಂದಿಸಲು ಗುಂಪು ಹತ್ಯೆ ಎಂಬ ಪದ ಬಳಸುವ ನೀವು, ಅಧಿಕಾರದಲ್ಲಿದ್ದಾಗ ಅದನ್ನು ಕ್ರಿಮಿನಲ್ ಕಾನೂನಿನಲ್ಲಿ ಸೇರಿಸಲು ಯಾಕೆ ಮರೆತಿರಿ? ಎಂದು ಪ್ರಶ್ನಿಸಿದ್ದಾರೆ.

ಒಮ್ಮೆ ನಾನು ಕಾಂಗ್ರೆಸ್ ನಾಯಕ ಚಿದಂಬರಂ ಅವರ ಭಾಷಣ ಕೇಳುತ್ತಿದ್ದೆ. ಅದರಲ್ಲಿ ಅವರು, “ಗೃಹ ಸಚಿವರಿಗೆ ಒಂದು ಸವಾಲು, ಹೊಸ ಕ್ರಿಮಿನಲ್ ಕಾನೂನು ತಂದರೆ ಅವರು ಗುಂಪು ಹತ್ಯೆಯನ್ನು ಏನೆಂದು ಪರಿಗಣಿಸುತ್ತಾರೆ? ಎಂದಿದ್ದರು” ಎಂದು ಹೇಳಿದರು.

ಚಿದಂಬರಂ ಅವರ ಹಳೆಯ ಪ್ರಶ್ನೆಗೆ ಲೋಕಸಭೆಯಲ್ಲಿ ಉತ್ತರಿಸಿದ ಅಮಿತ್ ಶಾ, “ಚಿದಂಬರಂ ಅವರು ಬಿಜೆಪಿ ಅಥವಾ ಅದರ ತತ್ವಗಳನ್ನು ಅರ್ಥ ಮಾಡಿಕೊಂಡಿಲ್ಲ. ನಮ್ಮ ಪಕ್ಷವು ಒಂದೇ ಸಿದ್ಧಾಂತವನ್ನು ಹೊಂದಿದೆ ‘ಅದು ರಾಷ್ಟ್ರದ ಅಭಿವೃದ್ಧಿಯಾಗಿದೆ’ ಎಂದು ಅಮಿತ್ ಶಾ ತಿರುಗೇಟು ಕೊಟ್ಟರು.

ಹೊಸ ಕ್ರಿಮಿನಲ್ ಮಸೂದೆಗಳ ಕುರಿತು ಮಾತನಾಡಿದ ಅಮಿತ್‌ ಶಾ, ಪ್ರಸ್ತಾವಿತ ಕಾನೂನುಗಳನ್ನು ಸಮಗ್ರ ಸಮಾಲೋಚನೆಯ ನಂತರ ರಚಿಸಲಾಗಿದೆ ಮತ್ತು ಸದನದ ಅನುಮೋದನೆಗೆ ತರುವ ಮೊದಲು ಕರಡು ಶಾಸನಗಳ ಕೂಲಂಕುಷವಾಗಿ ಪರಿಶೀಲಿಸಲಾಗಿದೆ. ಅಸ್ತಿತ್ವದಲ್ಲಿರುವ ಕ್ರಿಮಿನಲ್ ಕಾನೂನುಗಳು ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ. ಅವುಗಳು ಶಿಕ್ಷಿಸುವ ಉದ್ದೇಶವನ್ನು ಹೊಂದಿದೆಯೇ ಹೊರತು, ನ್ಯಾಯ ನೀಡುವ ಉದ್ದೇಶ ಹೊಂದಿರಲಿಲ್ಲ ಎಂದು ಹೇಳಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆಯಿಂದ ವಿರೋಧ ಪಕ್ಷದ ಸಂಸದರನ್ನು ಸಾಮೂಹಿಕವಾಗಿ ಅಮಾನತುಗೊಳಿಸಿದ ಬೆನ್ನಲ್ಲೇ ಕ್ರಿಮಿನಲ್ ಮಸೂದೆಗಳು ಲೋಕಸಭೆಯಲ್ಲಿ ಅಂಗೀಕಾರಗೊಂಡಿವೆ. ಲೋಕಸಭೆ ಮತ್ತು ರಾಜ್ಯಸಭೆಯಿಂದ ಒಟ್ಟು 143 ಸಂಸದರನ್ನು ಅಮಾನತುಗೊಳಿಸಲಾಗಿದೆ. ಈ ಪೈಕಿ 97 ಸಂಸದರು ಲೋಕಸಭೆಯಿಂದ ಅಮಾನತುಗೊಂಡಿದ್ದಾರೆ. ಅಂದರೆ, ಲೋಕಸಭೆಯ ಒಟ್ಟು ಸದಸ್ಯರಲ್ಲಿ ಶೇಕಡಾ 68ಕ್ಕಿಂತ ಹೆಚ್ಚು ಪ್ರತಿಪಕ್ಷಗಳ ಸಂಸದರನ್ನು ಅಮಾನತು ಮಾಡಲಾಗಿದೆ. ಒಂದರ್ಥದಲ್ಲಿ ಪ್ರತಿಪಕ್ಷವಿಲ್ಲದೆ ಕೇವಲ ಆಡಳಿತ ಪಕ್ಷ ಮಹತ್ವದ ಮಸೂದೆಗಳಿಗೆ ಅಂಗೀಕಾರ ಪಡೆದುಕೊಂಡಿದೆ.

ಇದನ್ನೂ ಓದಿ: ಸಂಸದರ ಸಾಮೂಹಿಕ ಅಮಾನತಿನ ಬೆನ್ನಲ್ಲಿ ಲೋಕಸಭೆಯಲ್ಲಿ 3 ಕ್ರಿಮಿನಲ್ ಕಾನೂನು ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...