Homeಅಂತರಾಷ್ಟ್ರೀಯಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

- Advertisement -
- Advertisement -

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ತೀವ್ರ ಬಲಪಂಥೀಯ ಮಿತ್ರಪಕ್ಷಗಳು ನೀಡಿದ್ದ ಪ್ರಮುಖ ಭರವಸೆಯನ್ನು ಈ ಮೂಲಕ ಈಡೇರಿಸಿದಂತಾಗಿದೆ.

ಹೊಸ ಕಾನೂನಿನಿಂದಾಗಿ ಇಸ್ರೇಲ್ ದೇಶವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದೆ. ಈಗಾಗಲೇ ಆಕ್ರಮಿತ ಪಶ್ಚಿಮ ದಂಡೆಯಲ್ಲಿ, ಇಸ್ರೇಲ್ ಸೇನೆ ಮತ್ತು ಅಲ್ಲಿನ ವಸಾಹತುಗಾರರು ಪ್ಯಾಲೆಸ್ತೀನಿಯರ ಮೇಲೆ ನಡೆಸುತ್ತಿರುವ ಹಿಂಸಾಚಾರ ಹೆಚ್ಚುತ್ತಿದೆ. ಈ ಕಾರಣದಿಂದಾಗಿ ಇಸ್ರೇಲ್ ಜಗತ್ತಿನಾದ್ಯಂತ ಹಲವು ದೇಶಗಳ ಕೆಂಗಣ್ಣಿಗೆ ಗುರಿಯಾಗಿವೆ.

ವರದಿಗಳ ಪ್ರಕಾರ, ಇಸ್ರೇಲ್ ಅಂಗೀಕರಿಸಿದ ಹೊಸ ಕಾನೂನಿನಡಿ ಅಪರಾಧಿಯನ್ನು ಶಿಕ್ಷೆ ಪ್ರಕಟವಾದ 90 ದಿನಗಳ ಒಳಗಾಗಿ ಗಲ್ಲಿಗೇರಿಸಬೇಕು. ಈ ಶಿಕ್ಷೆಯನ್ನು ರದ್ದುಗೊಳಿಸುವಂತೆ ಅಥವಾ ಕ್ಷಮಿಸುವಂತೆ ಕೇಳಿಕೊಳ್ಳುವ ಹಕ್ಕು ಅಪರಾಧಿಗೆ ಇರುವುದಿಲ್ಲ. ಕೆಲವು ಸಂದರ್ಭಗಳಲ್ಲಿ ಮರಣದಂಡನೆಗೆ ಬದಲಾಗಿ ಜೀವಾವಧಿ ಶಿಕ್ಷೆಯನ್ನು ನೀಡುವ ಅವಕಾಶವೂ ಇದೆ. ವಿಶೇಷ ಸಂದರ್ಭಗಳಲ್ಲಿ ಶಿಕ್ಷೆ ಜಾರಿಯನ್ನು ಸ್ವಲ್ಪ ದಿನ ಮುಂದೂಡಲು ಅವಕಾಶವಿದೆ.

ಹೊಸ ಕಾನೂನನ್ನು ಇಸ್ರೇಲ್‌ನ ತೀವ್ರ ಬಲಪಂಥೀಯ ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರು ರೂಪಿಸಿದ್ದಾರೆ. ವಿಶೇಷವೆಂದರೆ, ಈ ಕಾನೂನಿನ ಪರವಾಗಿ ಮತದಾನ ನಡೆಯುವ ಮುನ್ನ ಅವರು ತಮ್ಮ ಅಂಗಿಯ ಮೇಲೆ ‘ ನೇಣು ಕುಣಿಕೆ’ ಆಕಾರದ ಪಿನ್ ಧರಿಸುವ ಮೂಲಕ ಈ ಕಠಿಣ ಶಿಕ್ಷೆಯ ಪರವಾಗಿ ತಮ್ಮ ಬೆಂಬಲವನ್ನು ಪ್ರದರ್ಶಿಸಿದ್ದರು.

ಹೊಸ ಕಾನೂನು ಇಸ್ರೇಲ್‌ನ ಮಿತ್ರ ದೇಶಗಳಲ್ಲಿ (ವಿಶೇಷವಾಗಿ ಪಾಶ್ಚಿಮಾತ್ಯ ದೇಶಗಳಲ್ಲಿ) ಆತಂಕ ಮೂಡಿಸಿದೆ. ಪ್ರಧಾನಿ ನೆತನ್ಯಾಹು ಅವರ ನೇತೃತ್ವದ ‘ರಾಷ್ಟ್ರೀಯವಾದಿ-ಧಾರ್ಮಿಕ’ ಮೈತ್ರಿಕೂಟವು ಇತ್ತೀಚೆಗೆ ಕೈಗೊಳ್ಳುತ್ತಿರುವ ಸರಣಿ ನಿರ್ಧಾರಗಳಲ್ಲಿ ಇದೂ ಒಂದು. ಈಗಾಗಲೇ ಆಕ್ರಮಿತ ಪಶ್ಚಿಮ ದಂಡೆ ಪ್ರದೇಶದಲ್ಲಿ ಪ್ಯಾಲೆಸ್ತೀನಿಯರ ಮೇಲೆ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಅಸಮಾಧಾನ ಹೊಂದಿರುವ ಈ ಮಿತ್ರ ದೇಶಗಳು, ಈಗ ಈ ಮರಣದಂಡನೆ ಕಾನೂನಿನ ಬಗ್ಗೆಯೂ ತೀವ್ರ ಟೀಕೆ ವ್ಯಕ್ತಪಡಿಸಿವೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಎದುರಾಗಬಹುದಾದ ತೀವ್ರ ವಿರೋಧ ಮತ್ತು ಟೀಕೆಗಳನ್ನು ತಡೆಯುವ ಪ್ರಯತ್ನವಾಗಿ, ಈ ಕಾನೂನಿನ ಕೆಲವು ಕಠಿಣ ನಿಯಮಗಳನ್ನು ಸ್ವಲ್ಪ ಸಡಿಲಗೊಳಿಸುವಂತೆ ಪ್ರಧಾನಿ ನೆತನ್ಯಾಹು ಅವರು ಸೂಚಿಸಿದ್ದಾರೆ ಎಂದು ಇಸ್ರೇಲ್‌ನ ಮಾಧ್ಯಮಗಳು ವರದಿ ಮಾಡಿವೆ.

ಆರಂಭದಲ್ಲಿ ಸಿದ್ಧಪಡಿಸಿದ ಮಸೂದೆಯಲ್ಲಿ, ಪಶ್ಚಿಮ ದಂಡೆಯ ಮಿಲಿಟರಿ ನ್ಯಾಯಾಲಯಗಳಲ್ಲಿ ಭಯೋತ್ಪಾದನಾ ಕೃತ್ಯಗಳ ಅಪರಾಧ ಸಾಬೀತಾದ ಇಸ್ರೇಲೇತರ ನಾಗರಿಕರಿಗೆ (ಪ್ಯಾಲೆಸ್ತೀನಿಯರಿಗೆ) ಕಡ್ಡಾಯವಾಗಿ ಮರಣದಂಡನೆ ವಿಧಿಸಬೇಕು ಎಂದಿತ್ತು.

ಈಗ ಬದಲಾದ ಕಾನೂನಿನಲ್ಲಿ, ಮರಣದಂಡನೆಗೆ ಬದಲಾಗಿ ಜೀವಾವಧಿ ಶಿಕ್ಷೆಯನ್ನು ನೀಡುವ ಆಯ್ಕೆಯನ್ನೂ ಸೇರಿಸಲಾಗಿದೆ.

ಇಸ್ರೇಲ್‌ನ ಸಾಮಾನ್ಯ ನಾಗರಿಕ ನ್ಯಾಯಾಲಯಗಳಲ್ಲಿಯೂ ಈ ಹೊಸ ನಿಯಮ ಜಾರಿಗೆ ಬರಲಿದೆ. ನಾಗರಿಕ ನ್ಯಾಯಾಲಯಗಳ ಕಾನೂನು ಪ್ರಕಾರ, ಇಸ್ರೇಲ್ ದೇಶದ ಅಸ್ತಿತ್ವವನ್ನು ಅಳಿಸಿಹಾಕಬೇಕು ಎಂಬ ಕೆಟ್ಟ ಉದ್ದೇಶದಿಂದ ಯಾರನ್ನಾದರೂ ಕೊಲೆ ಮಾಡಿದವರಿಗೆ ಈ ಶಿಕ್ಷೆ ಅನ್ವಯವಾಗುತ್ತದೆ. ಅಂತಹ ಅಪರಾಧಿಗಳಿಗೆ ಕಡ್ಡಾಯವಾಗಿ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಯನ್ನು ನೀಡಲೇಬೇಕು ಎಂದು ಈ ಕಾನೂನು ಹೇಳುತ್ತದೆ.

ವಿವಿಧ ದೇಶಗಳು ಮತ್ತು ಮಾನವ ಹಕ್ಕು ಸಂಘಟನೆಗಳಿಂದ ವಿರೋಧ

ಇಸ್ರೇಲ್‌ನ ಹೊಸ ಕಾನೂನಿನ ಮೇಲೆ ಮತದಾನ ನಡೆಯುವ ಮೊದಲೇ, ಯುರೋಪಿನ ಪ್ರಮುಖ ದೇಶಗಳಾದ ಜರ್ಮನಿ, ಫ್ರಾನ್ಸ್, ಇಟಲಿ ಮತ್ತು ಬ್ರಿಟನ್ ವಿದೇಶಾಂಗ ಸಚಿವರು ಇದನ್ನು ತೀವ್ರವಾಗಿ ವಿರೋಧಿಸಿದ್ದರು.

ಈ ಕಾನೂನು ಮುಖ್ಯವಾಗಿ ಪ್ಯಾಲೆಸ್ತೀನಿಯರನ್ನು ಗುರಿಯಾಗಿಸಿಕೊಂಡಿದೆ, ಹಾಗಾಗಿ ಇದು ಒಂದು ಕಡೆಯ ಜನರನ್ನು ಮಾತ್ರ ಶಿಕ್ಷಿಸುವ ‘ತಾರತಮ್ಯದ ಕಾನೂನು’ ಎಂದು ಅವರು ಟೀಕಿಸಿದ್ದರು.

ಹೊಸ ಕಾನೂನನ್ನು ಜಾರಿಗೆ ತಂದರೆ, ಇಸ್ರೇಲ್ ದೇಶವು ಈವರೆಗೆ ಪಾಲಿಸಿಕೊಂಡು ಬಂದಿರುವ ಪ್ರಜಾಪ್ರಭುತ್ವದ ತತ್ವಗಳಿಗೆ ಧಕ್ಕೆ ಉಂಟಾಗುತ್ತದೆ. ಇಸ್ರೇಲ್ ಜಾಗತಿಕ ಮಟ್ಟದಲ್ಲಿ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನೀಡಿರುವ ಭರವಸೆಗಳಿಗೆ ಈ ಕಾನೂನು ವಿರುದ್ಧವಾಗಿದೆ ಎಂದು ಜರ್ಮನಿ, ಫ್ರಾನ್ಸ್, ಇಟಲಿ ಮತ್ತು ಬ್ರಿಟನ್ ದೇಶಗಳ ವಿದೇಶಾಂಗ ಸಚಿವರು ಭಾನುವಾರ (ಮಾರ್ಚ್ 29, 2026) ಜಂಟಿ ಹೇಳಿಕೆ ನೀಡಿದ್ದಾರೆ.

ವಿಶ್ವಸಂಸ್ಥೆಯ ತಜ್ಞರ ತಂಡವೊಂದು ಈ ಕಾನೂನಿನ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಈ ಕಾನೂನಿನಲ್ಲಿ ‘ಭಯೋತ್ಪಾದಕ’ ಎಂಬ ಪದಕ್ಕೆ ನೀಡಿರುವ ವಿವರಣೆ ತುಂಬಾ ಅಸ್ಪಷ್ಟವಾಗಿದೆ ಮತ್ತು ಅತಿಯಾಗಿ ವಿಸ್ತರಿಸಲ್ಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಇದರ ಅರ್ಥವೇನೆಂದರೆ, ನಿಜವಾಗಿ ಭಯೋತ್ಪಾದನಾ ಕೃತ್ಯವಲ್ಲದ ಸಾಮಾನ್ಯ ಪ್ರತಿಭಟನೆ ಅಥವಾ ನಡವಳಿಕೆಗಳಿಗೂ ಸಹ ಈ ಕಾನೂನಿನ ಅಡಿಯಲ್ಲಿ ಮರಣದಂಡನೆ ವಿಧಿಸುವ ಅಪಾಯವಿದೆ.

ಇಸ್ರೇಲ್‌ನ ಸಚಿವ ಬೆನ್-ಗ್ವಿರ್, ಮರಣದಂಡನೆ ಶಿಕ್ಷೆ ಜಾರಿಗೆ ಬಂದರೆ ಪ್ಯಾಲೆಸ್ತೀನಿಯರು ಇಸ್ರೇಲಿಗಳ ಮೇಲೆ ದಾಳಿ ನಡೆಸಲು ಹೆದರುತ್ತಾರೆ ಎಂದು ವಾದಿಸಿದ್ದಾರೆ. ಇಸ್ರೇಲಿ ಜೈಲಿನಲ್ಲಿರುವ ಪ್ಯಾಲೆಸ್ತೀನಿಯನ್ ಕೈದಿಗಳನ್ನು ಬಿಡಿಸಿಕೊಳ್ಳುವ ಉದ್ದೇಶದಿಂದ ಇಸ್ರೇಲಿಗಳನ್ನು ಅಪಹರಿಸಿ, ನಂತರ ಅವರನ್ನು ಅದಲು-ಬದಲು (swap deals) ಮಾಡಿಕೊಳ್ಳುವ ಪ್ರಯತ್ನಗಳಿಗೆ ಈ ಕಾನೂನು ತಡೆ ಹಾಕುತ್ತದೆ ಎಂದು ಹೇಳಿದ್ದಾರೆ.

ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಟರ್‌ ನ್ಯಾಷನಲ್ ಇಸ್ರೇಲ್‌ನ ಹೊಸ ಕಾನೂನನ್ನು ತೀವ್ರವಾಗಿ ವಿರೋಧಿಸಿದೆ. ಅಪರಾಧಗಳನ್ನು ಕಡಿಮೆ ಮಾಡುವಲ್ಲಿ ಮರಣದಂಡನೆಯು ಜೀವಾವಧಿ ಶಿಕ್ಷೆಗಿಂತ ಹೆಚ್ಚು ಪರಿಣಾಮಕಾರಿ ಎಂಬುದಕ್ಕೆ ಯಾವುದೇ ಆಧಾರ ಅಥವಾ ಸಾಕ್ಷ್ಯಗಳಿಲ್ಲ ಎಂದಿದೆ.

ವರದಿಗ ಪ್ರಕಾರ, ಹೊಸ ಕಾನೂನು ಜಾರಿಯಾಗುವ ಹಂತದಲ್ಲಿದ್ದಾಗ, ಇಸ್ರೇಲ್‌ನ ಸ್ವಂತ ಭದ್ರತಾ ತಜ್ಞರು ಮತ್ತು ಕಾನೂನು ತಜ್ಞರು ಕೂಡ ಇದನ್ನು ವಿರೋಧಿಸಿದ್ದರು. ಈ ಕಾನೂನು ಇಸ್ರೇಲ್‌ನ ಮೂಲಭೂತ ಕಾನೂನುಗಳಿಗೆ ಅಥವಾ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಕಠಿಣ ಶಿಕ್ಷೆ ನೀಡುವುದರಿಂದ ಅಪರಾಧಗಳು ಕಡಿಮೆಯಾಗುತ್ತವೆ ಎನ್ನುವುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ, ಹಾಗಾಗಿ ಇದು ಪರಿಣಾಮಕಾರಿಯಲ್ಲ ಎಂದು ಅವರು ವಾದಿಸಿದ್ದಾರೆ.

ಇಸ್ರೇಲ್‌ನ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ವಿರೋಧ ಪಕ್ಷದ ಸಂಸದರು ಈ ಹೊಸ ಕಾನೂನನ್ನು ವಿರೋಧಿಸಿದ್ದಾರೆ.

 



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...