Homeಅಂತರಾಷ್ಟ್ರೀಯಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

- Advertisement -
- Advertisement -

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ತೀವ್ರ ಬಲಪಂಥೀಯ ಮಿತ್ರಪಕ್ಷಗಳು ನೀಡಿದ್ದ ಪ್ರಮುಖ ಭರವಸೆಯನ್ನು ಈ ಮೂಲಕ ಈಡೇರಿಸಿದಂತಾಗಿದೆ.

ಹೊಸ ಕಾನೂನಿನಿಂದಾಗಿ ಇಸ್ರೇಲ್ ದೇಶವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದೆ. ಈಗಾಗಲೇ ಆಕ್ರಮಿತ ಪಶ್ಚಿಮ ದಂಡೆಯಲ್ಲಿ, ಇಸ್ರೇಲ್ ಸೇನೆ ಮತ್ತು ಅಲ್ಲಿನ ವಸಾಹತುಗಾರರು ಪ್ಯಾಲೆಸ್ತೀನಿಯರ ಮೇಲೆ ನಡೆಸುತ್ತಿರುವ ಹಿಂಸಾಚಾರ ಹೆಚ್ಚುತ್ತಿದೆ. ಈ ಕಾರಣದಿಂದಾಗಿ ಇಸ್ರೇಲ್ ಜಗತ್ತಿನಾದ್ಯಂತ ಹಲವು ದೇಶಗಳ ಕೆಂಗಣ್ಣಿಗೆ ಗುರಿಯಾಗಿವೆ.

ವರದಿಗಳ ಪ್ರಕಾರ, ಇಸ್ರೇಲ್ ಅಂಗೀಕರಿಸಿದ ಹೊಸ ಕಾನೂನಿನಡಿ ಅಪರಾಧಿಯನ್ನು ಶಿಕ್ಷೆ ಪ್ರಕಟವಾದ 90 ದಿನಗಳ ಒಳಗಾಗಿ ಗಲ್ಲಿಗೇರಿಸಬೇಕು. ಈ ಶಿಕ್ಷೆಯನ್ನು ರದ್ದುಗೊಳಿಸುವಂತೆ ಅಥವಾ ಕ್ಷಮಿಸುವಂತೆ ಕೇಳಿಕೊಳ್ಳುವ ಹಕ್ಕು ಅಪರಾಧಿಗೆ ಇರುವುದಿಲ್ಲ. ಕೆಲವು ಸಂದರ್ಭಗಳಲ್ಲಿ ಮರಣದಂಡನೆಗೆ ಬದಲಾಗಿ ಜೀವಾವಧಿ ಶಿಕ್ಷೆಯನ್ನು ನೀಡುವ ಅವಕಾಶವೂ ಇದೆ. ವಿಶೇಷ ಸಂದರ್ಭಗಳಲ್ಲಿ ಶಿಕ್ಷೆ ಜಾರಿಯನ್ನು ಸ್ವಲ್ಪ ದಿನ ಮುಂದೂಡಲು ಅವಕಾಶವಿದೆ.

ಹೊಸ ಕಾನೂನನ್ನು ಇಸ್ರೇಲ್‌ನ ತೀವ್ರ ಬಲಪಂಥೀಯ ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರು ರೂಪಿಸಿದ್ದಾರೆ. ವಿಶೇಷವೆಂದರೆ, ಈ ಕಾನೂನಿನ ಪರವಾಗಿ ಮತದಾನ ನಡೆಯುವ ಮುನ್ನ ಅವರು ತಮ್ಮ ಅಂಗಿಯ ಮೇಲೆ ‘ ನೇಣು ಕುಣಿಕೆ’ ಆಕಾರದ ಪಿನ್ ಧರಿಸುವ ಮೂಲಕ ಈ ಕಠಿಣ ಶಿಕ್ಷೆಯ ಪರವಾಗಿ ತಮ್ಮ ಬೆಂಬಲವನ್ನು ಪ್ರದರ್ಶಿಸಿದ್ದರು.

ಹೊಸ ಕಾನೂನು ಇಸ್ರೇಲ್‌ನ ಮಿತ್ರ ದೇಶಗಳಲ್ಲಿ (ವಿಶೇಷವಾಗಿ ಪಾಶ್ಚಿಮಾತ್ಯ ದೇಶಗಳಲ್ಲಿ) ಆತಂಕ ಮೂಡಿಸಿದೆ. ಪ್ರಧಾನಿ ನೆತನ್ಯಾಹು ಅವರ ನೇತೃತ್ವದ ‘ರಾಷ್ಟ್ರೀಯವಾದಿ-ಧಾರ್ಮಿಕ’ ಮೈತ್ರಿಕೂಟವು ಇತ್ತೀಚೆಗೆ ಕೈಗೊಳ್ಳುತ್ತಿರುವ ಸರಣಿ ನಿರ್ಧಾರಗಳಲ್ಲಿ ಇದೂ ಒಂದು. ಈಗಾಗಲೇ ಆಕ್ರಮಿತ ಪಶ್ಚಿಮ ದಂಡೆ ಪ್ರದೇಶದಲ್ಲಿ ಪ್ಯಾಲೆಸ್ತೀನಿಯರ ಮೇಲೆ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಅಸಮಾಧಾನ ಹೊಂದಿರುವ ಈ ಮಿತ್ರ ದೇಶಗಳು, ಈಗ ಈ ಮರಣದಂಡನೆ ಕಾನೂನಿನ ಬಗ್ಗೆಯೂ ತೀವ್ರ ಟೀಕೆ ವ್ಯಕ್ತಪಡಿಸಿವೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಎದುರಾಗಬಹುದಾದ ತೀವ್ರ ವಿರೋಧ ಮತ್ತು ಟೀಕೆಗಳನ್ನು ತಡೆಯುವ ಪ್ರಯತ್ನವಾಗಿ, ಈ ಕಾನೂನಿನ ಕೆಲವು ಕಠಿಣ ನಿಯಮಗಳನ್ನು ಸ್ವಲ್ಪ ಸಡಿಲಗೊಳಿಸುವಂತೆ ಪ್ರಧಾನಿ ನೆತನ್ಯಾಹು ಅವರು ಸೂಚಿಸಿದ್ದಾರೆ ಎಂದು ಇಸ್ರೇಲ್‌ನ ಮಾಧ್ಯಮಗಳು ವರದಿ ಮಾಡಿವೆ.

ಆರಂಭದಲ್ಲಿ ಸಿದ್ಧಪಡಿಸಿದ ಮಸೂದೆಯಲ್ಲಿ, ಪಶ್ಚಿಮ ದಂಡೆಯ ಮಿಲಿಟರಿ ನ್ಯಾಯಾಲಯಗಳಲ್ಲಿ ಭಯೋತ್ಪಾದನಾ ಕೃತ್ಯಗಳ ಅಪರಾಧ ಸಾಬೀತಾದ ಇಸ್ರೇಲೇತರ ನಾಗರಿಕರಿಗೆ (ಪ್ಯಾಲೆಸ್ತೀನಿಯರಿಗೆ) ಕಡ್ಡಾಯವಾಗಿ ಮರಣದಂಡನೆ ವಿಧಿಸಬೇಕು ಎಂದಿತ್ತು.

ಈಗ ಬದಲಾದ ಕಾನೂನಿನಲ್ಲಿ, ಮರಣದಂಡನೆಗೆ ಬದಲಾಗಿ ಜೀವಾವಧಿ ಶಿಕ್ಷೆಯನ್ನು ನೀಡುವ ಆಯ್ಕೆಯನ್ನೂ ಸೇರಿಸಲಾಗಿದೆ.

ಇಸ್ರೇಲ್‌ನ ಸಾಮಾನ್ಯ ನಾಗರಿಕ ನ್ಯಾಯಾಲಯಗಳಲ್ಲಿಯೂ ಈ ಹೊಸ ನಿಯಮ ಜಾರಿಗೆ ಬರಲಿದೆ. ನಾಗರಿಕ ನ್ಯಾಯಾಲಯಗಳ ಕಾನೂನು ಪ್ರಕಾರ, ಇಸ್ರೇಲ್ ದೇಶದ ಅಸ್ತಿತ್ವವನ್ನು ಅಳಿಸಿಹಾಕಬೇಕು ಎಂಬ ಕೆಟ್ಟ ಉದ್ದೇಶದಿಂದ ಯಾರನ್ನಾದರೂ ಕೊಲೆ ಮಾಡಿದವರಿಗೆ ಈ ಶಿಕ್ಷೆ ಅನ್ವಯವಾಗುತ್ತದೆ. ಅಂತಹ ಅಪರಾಧಿಗಳಿಗೆ ಕಡ್ಡಾಯವಾಗಿ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಯನ್ನು ನೀಡಲೇಬೇಕು ಎಂದು ಈ ಕಾನೂನು ಹೇಳುತ್ತದೆ.

ವಿವಿಧ ದೇಶಗಳು ಮತ್ತು ಮಾನವ ಹಕ್ಕು ಸಂಘಟನೆಗಳಿಂದ ವಿರೋಧ

ಇಸ್ರೇಲ್‌ನ ಹೊಸ ಕಾನೂನಿನ ಮೇಲೆ ಮತದಾನ ನಡೆಯುವ ಮೊದಲೇ, ಯುರೋಪಿನ ಪ್ರಮುಖ ದೇಶಗಳಾದ ಜರ್ಮನಿ, ಫ್ರಾನ್ಸ್, ಇಟಲಿ ಮತ್ತು ಬ್ರಿಟನ್ ವಿದೇಶಾಂಗ ಸಚಿವರು ಇದನ್ನು ತೀವ್ರವಾಗಿ ವಿರೋಧಿಸಿದ್ದರು.

ಈ ಕಾನೂನು ಮುಖ್ಯವಾಗಿ ಪ್ಯಾಲೆಸ್ತೀನಿಯರನ್ನು ಗುರಿಯಾಗಿಸಿಕೊಂಡಿದೆ, ಹಾಗಾಗಿ ಇದು ಒಂದು ಕಡೆಯ ಜನರನ್ನು ಮಾತ್ರ ಶಿಕ್ಷಿಸುವ ‘ತಾರತಮ್ಯದ ಕಾನೂನು’ ಎಂದು ಅವರು ಟೀಕಿಸಿದ್ದರು.

ಹೊಸ ಕಾನೂನನ್ನು ಜಾರಿಗೆ ತಂದರೆ, ಇಸ್ರೇಲ್ ದೇಶವು ಈವರೆಗೆ ಪಾಲಿಸಿಕೊಂಡು ಬಂದಿರುವ ಪ್ರಜಾಪ್ರಭುತ್ವದ ತತ್ವಗಳಿಗೆ ಧಕ್ಕೆ ಉಂಟಾಗುತ್ತದೆ. ಇಸ್ರೇಲ್ ಜಾಗತಿಕ ಮಟ್ಟದಲ್ಲಿ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನೀಡಿರುವ ಭರವಸೆಗಳಿಗೆ ಈ ಕಾನೂನು ವಿರುದ್ಧವಾಗಿದೆ ಎಂದು ಜರ್ಮನಿ, ಫ್ರಾನ್ಸ್, ಇಟಲಿ ಮತ್ತು ಬ್ರಿಟನ್ ದೇಶಗಳ ವಿದೇಶಾಂಗ ಸಚಿವರು ಭಾನುವಾರ (ಮಾರ್ಚ್ 29, 2026) ಜಂಟಿ ಹೇಳಿಕೆ ನೀಡಿದ್ದಾರೆ.

ವಿಶ್ವಸಂಸ್ಥೆಯ ತಜ್ಞರ ತಂಡವೊಂದು ಈ ಕಾನೂನಿನ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಈ ಕಾನೂನಿನಲ್ಲಿ ‘ಭಯೋತ್ಪಾದಕ’ ಎಂಬ ಪದಕ್ಕೆ ನೀಡಿರುವ ವಿವರಣೆ ತುಂಬಾ ಅಸ್ಪಷ್ಟವಾಗಿದೆ ಮತ್ತು ಅತಿಯಾಗಿ ವಿಸ್ತರಿಸಲ್ಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಇದರ ಅರ್ಥವೇನೆಂದರೆ, ನಿಜವಾಗಿ ಭಯೋತ್ಪಾದನಾ ಕೃತ್ಯವಲ್ಲದ ಸಾಮಾನ್ಯ ಪ್ರತಿಭಟನೆ ಅಥವಾ ನಡವಳಿಕೆಗಳಿಗೂ ಸಹ ಈ ಕಾನೂನಿನ ಅಡಿಯಲ್ಲಿ ಮರಣದಂಡನೆ ವಿಧಿಸುವ ಅಪಾಯವಿದೆ.

ಇಸ್ರೇಲ್‌ನ ಸಚಿವ ಬೆನ್-ಗ್ವಿರ್, ಮರಣದಂಡನೆ ಶಿಕ್ಷೆ ಜಾರಿಗೆ ಬಂದರೆ ಪ್ಯಾಲೆಸ್ತೀನಿಯರು ಇಸ್ರೇಲಿಗಳ ಮೇಲೆ ದಾಳಿ ನಡೆಸಲು ಹೆದರುತ್ತಾರೆ ಎಂದು ವಾದಿಸಿದ್ದಾರೆ. ಇಸ್ರೇಲಿ ಜೈಲಿನಲ್ಲಿರುವ ಪ್ಯಾಲೆಸ್ತೀನಿಯನ್ ಕೈದಿಗಳನ್ನು ಬಿಡಿಸಿಕೊಳ್ಳುವ ಉದ್ದೇಶದಿಂದ ಇಸ್ರೇಲಿಗಳನ್ನು ಅಪಹರಿಸಿ, ನಂತರ ಅವರನ್ನು ಅದಲು-ಬದಲು (swap deals) ಮಾಡಿಕೊಳ್ಳುವ ಪ್ರಯತ್ನಗಳಿಗೆ ಈ ಕಾನೂನು ತಡೆ ಹಾಕುತ್ತದೆ ಎಂದು ಹೇಳಿದ್ದಾರೆ.

ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಟರ್‌ ನ್ಯಾಷನಲ್ ಇಸ್ರೇಲ್‌ನ ಹೊಸ ಕಾನೂನನ್ನು ತೀವ್ರವಾಗಿ ವಿರೋಧಿಸಿದೆ. ಅಪರಾಧಗಳನ್ನು ಕಡಿಮೆ ಮಾಡುವಲ್ಲಿ ಮರಣದಂಡನೆಯು ಜೀವಾವಧಿ ಶಿಕ್ಷೆಗಿಂತ ಹೆಚ್ಚು ಪರಿಣಾಮಕಾರಿ ಎಂಬುದಕ್ಕೆ ಯಾವುದೇ ಆಧಾರ ಅಥವಾ ಸಾಕ್ಷ್ಯಗಳಿಲ್ಲ ಎಂದಿದೆ.

ವರದಿಗ ಪ್ರಕಾರ, ಹೊಸ ಕಾನೂನು ಜಾರಿಯಾಗುವ ಹಂತದಲ್ಲಿದ್ದಾಗ, ಇಸ್ರೇಲ್‌ನ ಸ್ವಂತ ಭದ್ರತಾ ತಜ್ಞರು ಮತ್ತು ಕಾನೂನು ತಜ್ಞರು ಕೂಡ ಇದನ್ನು ವಿರೋಧಿಸಿದ್ದರು. ಈ ಕಾನೂನು ಇಸ್ರೇಲ್‌ನ ಮೂಲಭೂತ ಕಾನೂನುಗಳಿಗೆ ಅಥವಾ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಕಠಿಣ ಶಿಕ್ಷೆ ನೀಡುವುದರಿಂದ ಅಪರಾಧಗಳು ಕಡಿಮೆಯಾಗುತ್ತವೆ ಎನ್ನುವುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ, ಹಾಗಾಗಿ ಇದು ಪರಿಣಾಮಕಾರಿಯಲ್ಲ ಎಂದು ಅವರು ವಾದಿಸಿದ್ದಾರೆ.

ಇಸ್ರೇಲ್‌ನ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ವಿರೋಧ ಪಕ್ಷದ ಸಂಸದರು ಈ ಹೊಸ ಕಾನೂನನ್ನು ವಿರೋಧಿಸಿದ್ದಾರೆ.

 



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...