Homeಅಂತರಾಷ್ಟ್ರೀಯಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

- Advertisement -
- Advertisement -

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ತೀವ್ರ ಬಲಪಂಥೀಯ ಮಿತ್ರಪಕ್ಷಗಳು ನೀಡಿದ್ದ ಪ್ರಮುಖ ಭರವಸೆಯನ್ನು ಈ ಮೂಲಕ ಈಡೇರಿಸಿದಂತಾಗಿದೆ.

ಹೊಸ ಕಾನೂನಿನಿಂದಾಗಿ ಇಸ್ರೇಲ್ ದೇಶವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದೆ. ಈಗಾಗಲೇ ಆಕ್ರಮಿತ ಪಶ್ಚಿಮ ದಂಡೆಯಲ್ಲಿ, ಇಸ್ರೇಲ್ ಸೇನೆ ಮತ್ತು ಅಲ್ಲಿನ ವಸಾಹತುಗಾರರು ಪ್ಯಾಲೆಸ್ತೀನಿಯರ ಮೇಲೆ ನಡೆಸುತ್ತಿರುವ ಹಿಂಸಾಚಾರ ಹೆಚ್ಚುತ್ತಿದೆ. ಈ ಕಾರಣದಿಂದಾಗಿ ಇಸ್ರೇಲ್ ಜಗತ್ತಿನಾದ್ಯಂತ ಹಲವು ದೇಶಗಳ ಕೆಂಗಣ್ಣಿಗೆ ಗುರಿಯಾಗಿವೆ.

ವರದಿಗಳ ಪ್ರಕಾರ, ಇಸ್ರೇಲ್ ಅಂಗೀಕರಿಸಿದ ಹೊಸ ಕಾನೂನಿನಡಿ ಅಪರಾಧಿಯನ್ನು ಶಿಕ್ಷೆ ಪ್ರಕಟವಾದ 90 ದಿನಗಳ ಒಳಗಾಗಿ ಗಲ್ಲಿಗೇರಿಸಬೇಕು. ಈ ಶಿಕ್ಷೆಯನ್ನು ರದ್ದುಗೊಳಿಸುವಂತೆ ಅಥವಾ ಕ್ಷಮಿಸುವಂತೆ ಕೇಳಿಕೊಳ್ಳುವ ಹಕ್ಕು ಅಪರಾಧಿಗೆ ಇರುವುದಿಲ್ಲ. ಕೆಲವು ಸಂದರ್ಭಗಳಲ್ಲಿ ಮರಣದಂಡನೆಗೆ ಬದಲಾಗಿ ಜೀವಾವಧಿ ಶಿಕ್ಷೆಯನ್ನು ನೀಡುವ ಅವಕಾಶವೂ ಇದೆ. ವಿಶೇಷ ಸಂದರ್ಭಗಳಲ್ಲಿ ಶಿಕ್ಷೆ ಜಾರಿಯನ್ನು ಸ್ವಲ್ಪ ದಿನ ಮುಂದೂಡಲು ಅವಕಾಶವಿದೆ.

ಹೊಸ ಕಾನೂನನ್ನು ಇಸ್ರೇಲ್‌ನ ತೀವ್ರ ಬಲಪಂಥೀಯ ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರು ರೂಪಿಸಿದ್ದಾರೆ. ವಿಶೇಷವೆಂದರೆ, ಈ ಕಾನೂನಿನ ಪರವಾಗಿ ಮತದಾನ ನಡೆಯುವ ಮುನ್ನ ಅವರು ತಮ್ಮ ಅಂಗಿಯ ಮೇಲೆ ‘ ನೇಣು ಕುಣಿಕೆ’ ಆಕಾರದ ಪಿನ್ ಧರಿಸುವ ಮೂಲಕ ಈ ಕಠಿಣ ಶಿಕ್ಷೆಯ ಪರವಾಗಿ ತಮ್ಮ ಬೆಂಬಲವನ್ನು ಪ್ರದರ್ಶಿಸಿದ್ದರು.

ಹೊಸ ಕಾನೂನು ಇಸ್ರೇಲ್‌ನ ಮಿತ್ರ ದೇಶಗಳಲ್ಲಿ (ವಿಶೇಷವಾಗಿ ಪಾಶ್ಚಿಮಾತ್ಯ ದೇಶಗಳಲ್ಲಿ) ಆತಂಕ ಮೂಡಿಸಿದೆ. ಪ್ರಧಾನಿ ನೆತನ್ಯಾಹು ಅವರ ನೇತೃತ್ವದ ‘ರಾಷ್ಟ್ರೀಯವಾದಿ-ಧಾರ್ಮಿಕ’ ಮೈತ್ರಿಕೂಟವು ಇತ್ತೀಚೆಗೆ ಕೈಗೊಳ್ಳುತ್ತಿರುವ ಸರಣಿ ನಿರ್ಧಾರಗಳಲ್ಲಿ ಇದೂ ಒಂದು. ಈಗಾಗಲೇ ಆಕ್ರಮಿತ ಪಶ್ಚಿಮ ದಂಡೆ ಪ್ರದೇಶದಲ್ಲಿ ಪ್ಯಾಲೆಸ್ತೀನಿಯರ ಮೇಲೆ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಅಸಮಾಧಾನ ಹೊಂದಿರುವ ಈ ಮಿತ್ರ ದೇಶಗಳು, ಈಗ ಈ ಮರಣದಂಡನೆ ಕಾನೂನಿನ ಬಗ್ಗೆಯೂ ತೀವ್ರ ಟೀಕೆ ವ್ಯಕ್ತಪಡಿಸಿವೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಎದುರಾಗಬಹುದಾದ ತೀವ್ರ ವಿರೋಧ ಮತ್ತು ಟೀಕೆಗಳನ್ನು ತಡೆಯುವ ಪ್ರಯತ್ನವಾಗಿ, ಈ ಕಾನೂನಿನ ಕೆಲವು ಕಠಿಣ ನಿಯಮಗಳನ್ನು ಸ್ವಲ್ಪ ಸಡಿಲಗೊಳಿಸುವಂತೆ ಪ್ರಧಾನಿ ನೆತನ್ಯಾಹು ಅವರು ಸೂಚಿಸಿದ್ದಾರೆ ಎಂದು ಇಸ್ರೇಲ್‌ನ ಮಾಧ್ಯಮಗಳು ವರದಿ ಮಾಡಿವೆ.

ಆರಂಭದಲ್ಲಿ ಸಿದ್ಧಪಡಿಸಿದ ಮಸೂದೆಯಲ್ಲಿ, ಪಶ್ಚಿಮ ದಂಡೆಯ ಮಿಲಿಟರಿ ನ್ಯಾಯಾಲಯಗಳಲ್ಲಿ ಭಯೋತ್ಪಾದನಾ ಕೃತ್ಯಗಳ ಅಪರಾಧ ಸಾಬೀತಾದ ಇಸ್ರೇಲೇತರ ನಾಗರಿಕರಿಗೆ (ಪ್ಯಾಲೆಸ್ತೀನಿಯರಿಗೆ) ಕಡ್ಡಾಯವಾಗಿ ಮರಣದಂಡನೆ ವಿಧಿಸಬೇಕು ಎಂದಿತ್ತು.

ಈಗ ಬದಲಾದ ಕಾನೂನಿನಲ್ಲಿ, ಮರಣದಂಡನೆಗೆ ಬದಲಾಗಿ ಜೀವಾವಧಿ ಶಿಕ್ಷೆಯನ್ನು ನೀಡುವ ಆಯ್ಕೆಯನ್ನೂ ಸೇರಿಸಲಾಗಿದೆ.

ಇಸ್ರೇಲ್‌ನ ಸಾಮಾನ್ಯ ನಾಗರಿಕ ನ್ಯಾಯಾಲಯಗಳಲ್ಲಿಯೂ ಈ ಹೊಸ ನಿಯಮ ಜಾರಿಗೆ ಬರಲಿದೆ. ನಾಗರಿಕ ನ್ಯಾಯಾಲಯಗಳ ಕಾನೂನು ಪ್ರಕಾರ, ಇಸ್ರೇಲ್ ದೇಶದ ಅಸ್ತಿತ್ವವನ್ನು ಅಳಿಸಿಹಾಕಬೇಕು ಎಂಬ ಕೆಟ್ಟ ಉದ್ದೇಶದಿಂದ ಯಾರನ್ನಾದರೂ ಕೊಲೆ ಮಾಡಿದವರಿಗೆ ಈ ಶಿಕ್ಷೆ ಅನ್ವಯವಾಗುತ್ತದೆ. ಅಂತಹ ಅಪರಾಧಿಗಳಿಗೆ ಕಡ್ಡಾಯವಾಗಿ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಯನ್ನು ನೀಡಲೇಬೇಕು ಎಂದು ಈ ಕಾನೂನು ಹೇಳುತ್ತದೆ.

ವಿವಿಧ ದೇಶಗಳು ಮತ್ತು ಮಾನವ ಹಕ್ಕು ಸಂಘಟನೆಗಳಿಂದ ವಿರೋಧ

ಇಸ್ರೇಲ್‌ನ ಹೊಸ ಕಾನೂನಿನ ಮೇಲೆ ಮತದಾನ ನಡೆಯುವ ಮೊದಲೇ, ಯುರೋಪಿನ ಪ್ರಮುಖ ದೇಶಗಳಾದ ಜರ್ಮನಿ, ಫ್ರಾನ್ಸ್, ಇಟಲಿ ಮತ್ತು ಬ್ರಿಟನ್ ವಿದೇಶಾಂಗ ಸಚಿವರು ಇದನ್ನು ತೀವ್ರವಾಗಿ ವಿರೋಧಿಸಿದ್ದರು.

ಈ ಕಾನೂನು ಮುಖ್ಯವಾಗಿ ಪ್ಯಾಲೆಸ್ತೀನಿಯರನ್ನು ಗುರಿಯಾಗಿಸಿಕೊಂಡಿದೆ, ಹಾಗಾಗಿ ಇದು ಒಂದು ಕಡೆಯ ಜನರನ್ನು ಮಾತ್ರ ಶಿಕ್ಷಿಸುವ ‘ತಾರತಮ್ಯದ ಕಾನೂನು’ ಎಂದು ಅವರು ಟೀಕಿಸಿದ್ದರು.

ಹೊಸ ಕಾನೂನನ್ನು ಜಾರಿಗೆ ತಂದರೆ, ಇಸ್ರೇಲ್ ದೇಶವು ಈವರೆಗೆ ಪಾಲಿಸಿಕೊಂಡು ಬಂದಿರುವ ಪ್ರಜಾಪ್ರಭುತ್ವದ ತತ್ವಗಳಿಗೆ ಧಕ್ಕೆ ಉಂಟಾಗುತ್ತದೆ. ಇಸ್ರೇಲ್ ಜಾಗತಿಕ ಮಟ್ಟದಲ್ಲಿ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನೀಡಿರುವ ಭರವಸೆಗಳಿಗೆ ಈ ಕಾನೂನು ವಿರುದ್ಧವಾಗಿದೆ ಎಂದು ಜರ್ಮನಿ, ಫ್ರಾನ್ಸ್, ಇಟಲಿ ಮತ್ತು ಬ್ರಿಟನ್ ದೇಶಗಳ ವಿದೇಶಾಂಗ ಸಚಿವರು ಭಾನುವಾರ (ಮಾರ್ಚ್ 29, 2026) ಜಂಟಿ ಹೇಳಿಕೆ ನೀಡಿದ್ದಾರೆ.

ವಿಶ್ವಸಂಸ್ಥೆಯ ತಜ್ಞರ ತಂಡವೊಂದು ಈ ಕಾನೂನಿನ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಈ ಕಾನೂನಿನಲ್ಲಿ ‘ಭಯೋತ್ಪಾದಕ’ ಎಂಬ ಪದಕ್ಕೆ ನೀಡಿರುವ ವಿವರಣೆ ತುಂಬಾ ಅಸ್ಪಷ್ಟವಾಗಿದೆ ಮತ್ತು ಅತಿಯಾಗಿ ವಿಸ್ತರಿಸಲ್ಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಇದರ ಅರ್ಥವೇನೆಂದರೆ, ನಿಜವಾಗಿ ಭಯೋತ್ಪಾದನಾ ಕೃತ್ಯವಲ್ಲದ ಸಾಮಾನ್ಯ ಪ್ರತಿಭಟನೆ ಅಥವಾ ನಡವಳಿಕೆಗಳಿಗೂ ಸಹ ಈ ಕಾನೂನಿನ ಅಡಿಯಲ್ಲಿ ಮರಣದಂಡನೆ ವಿಧಿಸುವ ಅಪಾಯವಿದೆ.

ಇಸ್ರೇಲ್‌ನ ಸಚಿವ ಬೆನ್-ಗ್ವಿರ್, ಮರಣದಂಡನೆ ಶಿಕ್ಷೆ ಜಾರಿಗೆ ಬಂದರೆ ಪ್ಯಾಲೆಸ್ತೀನಿಯರು ಇಸ್ರೇಲಿಗಳ ಮೇಲೆ ದಾಳಿ ನಡೆಸಲು ಹೆದರುತ್ತಾರೆ ಎಂದು ವಾದಿಸಿದ್ದಾರೆ. ಇಸ್ರೇಲಿ ಜೈಲಿನಲ್ಲಿರುವ ಪ್ಯಾಲೆಸ್ತೀನಿಯನ್ ಕೈದಿಗಳನ್ನು ಬಿಡಿಸಿಕೊಳ್ಳುವ ಉದ್ದೇಶದಿಂದ ಇಸ್ರೇಲಿಗಳನ್ನು ಅಪಹರಿಸಿ, ನಂತರ ಅವರನ್ನು ಅದಲು-ಬದಲು (swap deals) ಮಾಡಿಕೊಳ್ಳುವ ಪ್ರಯತ್ನಗಳಿಗೆ ಈ ಕಾನೂನು ತಡೆ ಹಾಕುತ್ತದೆ ಎಂದು ಹೇಳಿದ್ದಾರೆ.

ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಟರ್‌ ನ್ಯಾಷನಲ್ ಇಸ್ರೇಲ್‌ನ ಹೊಸ ಕಾನೂನನ್ನು ತೀವ್ರವಾಗಿ ವಿರೋಧಿಸಿದೆ. ಅಪರಾಧಗಳನ್ನು ಕಡಿಮೆ ಮಾಡುವಲ್ಲಿ ಮರಣದಂಡನೆಯು ಜೀವಾವಧಿ ಶಿಕ್ಷೆಗಿಂತ ಹೆಚ್ಚು ಪರಿಣಾಮಕಾರಿ ಎಂಬುದಕ್ಕೆ ಯಾವುದೇ ಆಧಾರ ಅಥವಾ ಸಾಕ್ಷ್ಯಗಳಿಲ್ಲ ಎಂದಿದೆ.

ವರದಿಗ ಪ್ರಕಾರ, ಹೊಸ ಕಾನೂನು ಜಾರಿಯಾಗುವ ಹಂತದಲ್ಲಿದ್ದಾಗ, ಇಸ್ರೇಲ್‌ನ ಸ್ವಂತ ಭದ್ರತಾ ತಜ್ಞರು ಮತ್ತು ಕಾನೂನು ತಜ್ಞರು ಕೂಡ ಇದನ್ನು ವಿರೋಧಿಸಿದ್ದರು. ಈ ಕಾನೂನು ಇಸ್ರೇಲ್‌ನ ಮೂಲಭೂತ ಕಾನೂನುಗಳಿಗೆ ಅಥವಾ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಕಠಿಣ ಶಿಕ್ಷೆ ನೀಡುವುದರಿಂದ ಅಪರಾಧಗಳು ಕಡಿಮೆಯಾಗುತ್ತವೆ ಎನ್ನುವುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ, ಹಾಗಾಗಿ ಇದು ಪರಿಣಾಮಕಾರಿಯಲ್ಲ ಎಂದು ಅವರು ವಾದಿಸಿದ್ದಾರೆ.

ಇಸ್ರೇಲ್‌ನ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ವಿರೋಧ ಪಕ್ಷದ ಸಂಸದರು ಈ ಹೊಸ ಕಾನೂನನ್ನು ವಿರೋಧಿಸಿದ್ದಾರೆ.

 



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...