Homeಅಂತರಾಷ್ಟ್ರೀಯಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

- Advertisement -
- Advertisement -

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ತೀವ್ರ ಬಲಪಂಥೀಯ ಮಿತ್ರಪಕ್ಷಗಳು ನೀಡಿದ್ದ ಪ್ರಮುಖ ಭರವಸೆಯನ್ನು ಈ ಮೂಲಕ ಈಡೇರಿಸಿದಂತಾಗಿದೆ.

ಹೊಸ ಕಾನೂನಿನಿಂದಾಗಿ ಇಸ್ರೇಲ್ ದೇಶವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದೆ. ಈಗಾಗಲೇ ಆಕ್ರಮಿತ ಪಶ್ಚಿಮ ದಂಡೆಯಲ್ಲಿ, ಇಸ್ರೇಲ್ ಸೇನೆ ಮತ್ತು ಅಲ್ಲಿನ ವಸಾಹತುಗಾರರು ಪ್ಯಾಲೆಸ್ತೀನಿಯರ ಮೇಲೆ ನಡೆಸುತ್ತಿರುವ ಹಿಂಸಾಚಾರ ಹೆಚ್ಚುತ್ತಿದೆ. ಈ ಕಾರಣದಿಂದಾಗಿ ಇಸ್ರೇಲ್ ಜಗತ್ತಿನಾದ್ಯಂತ ಹಲವು ದೇಶಗಳ ಕೆಂಗಣ್ಣಿಗೆ ಗುರಿಯಾಗಿವೆ.

ವರದಿಗಳ ಪ್ರಕಾರ, ಇಸ್ರೇಲ್ ಅಂಗೀಕರಿಸಿದ ಹೊಸ ಕಾನೂನಿನಡಿ ಅಪರಾಧಿಯನ್ನು ಶಿಕ್ಷೆ ಪ್ರಕಟವಾದ 90 ದಿನಗಳ ಒಳಗಾಗಿ ಗಲ್ಲಿಗೇರಿಸಬೇಕು. ಈ ಶಿಕ್ಷೆಯನ್ನು ರದ್ದುಗೊಳಿಸುವಂತೆ ಅಥವಾ ಕ್ಷಮಿಸುವಂತೆ ಕೇಳಿಕೊಳ್ಳುವ ಹಕ್ಕು ಅಪರಾಧಿಗೆ ಇರುವುದಿಲ್ಲ. ಕೆಲವು ಸಂದರ್ಭಗಳಲ್ಲಿ ಮರಣದಂಡನೆಗೆ ಬದಲಾಗಿ ಜೀವಾವಧಿ ಶಿಕ್ಷೆಯನ್ನು ನೀಡುವ ಅವಕಾಶವೂ ಇದೆ. ವಿಶೇಷ ಸಂದರ್ಭಗಳಲ್ಲಿ ಶಿಕ್ಷೆ ಜಾರಿಯನ್ನು ಸ್ವಲ್ಪ ದಿನ ಮುಂದೂಡಲು ಅವಕಾಶವಿದೆ.

ಹೊಸ ಕಾನೂನನ್ನು ಇಸ್ರೇಲ್‌ನ ತೀವ್ರ ಬಲಪಂಥೀಯ ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರು ರೂಪಿಸಿದ್ದಾರೆ. ವಿಶೇಷವೆಂದರೆ, ಈ ಕಾನೂನಿನ ಪರವಾಗಿ ಮತದಾನ ನಡೆಯುವ ಮುನ್ನ ಅವರು ತಮ್ಮ ಅಂಗಿಯ ಮೇಲೆ ‘ ನೇಣು ಕುಣಿಕೆ’ ಆಕಾರದ ಪಿನ್ ಧರಿಸುವ ಮೂಲಕ ಈ ಕಠಿಣ ಶಿಕ್ಷೆಯ ಪರವಾಗಿ ತಮ್ಮ ಬೆಂಬಲವನ್ನು ಪ್ರದರ್ಶಿಸಿದ್ದರು.

ಹೊಸ ಕಾನೂನು ಇಸ್ರೇಲ್‌ನ ಮಿತ್ರ ದೇಶಗಳಲ್ಲಿ (ವಿಶೇಷವಾಗಿ ಪಾಶ್ಚಿಮಾತ್ಯ ದೇಶಗಳಲ್ಲಿ) ಆತಂಕ ಮೂಡಿಸಿದೆ. ಪ್ರಧಾನಿ ನೆತನ್ಯಾಹು ಅವರ ನೇತೃತ್ವದ ‘ರಾಷ್ಟ್ರೀಯವಾದಿ-ಧಾರ್ಮಿಕ’ ಮೈತ್ರಿಕೂಟವು ಇತ್ತೀಚೆಗೆ ಕೈಗೊಳ್ಳುತ್ತಿರುವ ಸರಣಿ ನಿರ್ಧಾರಗಳಲ್ಲಿ ಇದೂ ಒಂದು. ಈಗಾಗಲೇ ಆಕ್ರಮಿತ ಪಶ್ಚಿಮ ದಂಡೆ ಪ್ರದೇಶದಲ್ಲಿ ಪ್ಯಾಲೆಸ್ತೀನಿಯರ ಮೇಲೆ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಅಸಮಾಧಾನ ಹೊಂದಿರುವ ಈ ಮಿತ್ರ ದೇಶಗಳು, ಈಗ ಈ ಮರಣದಂಡನೆ ಕಾನೂನಿನ ಬಗ್ಗೆಯೂ ತೀವ್ರ ಟೀಕೆ ವ್ಯಕ್ತಪಡಿಸಿವೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಎದುರಾಗಬಹುದಾದ ತೀವ್ರ ವಿರೋಧ ಮತ್ತು ಟೀಕೆಗಳನ್ನು ತಡೆಯುವ ಪ್ರಯತ್ನವಾಗಿ, ಈ ಕಾನೂನಿನ ಕೆಲವು ಕಠಿಣ ನಿಯಮಗಳನ್ನು ಸ್ವಲ್ಪ ಸಡಿಲಗೊಳಿಸುವಂತೆ ಪ್ರಧಾನಿ ನೆತನ್ಯಾಹು ಅವರು ಸೂಚಿಸಿದ್ದಾರೆ ಎಂದು ಇಸ್ರೇಲ್‌ನ ಮಾಧ್ಯಮಗಳು ವರದಿ ಮಾಡಿವೆ.

ಆರಂಭದಲ್ಲಿ ಸಿದ್ಧಪಡಿಸಿದ ಮಸೂದೆಯಲ್ಲಿ, ಪಶ್ಚಿಮ ದಂಡೆಯ ಮಿಲಿಟರಿ ನ್ಯಾಯಾಲಯಗಳಲ್ಲಿ ಭಯೋತ್ಪಾದನಾ ಕೃತ್ಯಗಳ ಅಪರಾಧ ಸಾಬೀತಾದ ಇಸ್ರೇಲೇತರ ನಾಗರಿಕರಿಗೆ (ಪ್ಯಾಲೆಸ್ತೀನಿಯರಿಗೆ) ಕಡ್ಡಾಯವಾಗಿ ಮರಣದಂಡನೆ ವಿಧಿಸಬೇಕು ಎಂದಿತ್ತು.

ಈಗ ಬದಲಾದ ಕಾನೂನಿನಲ್ಲಿ, ಮರಣದಂಡನೆಗೆ ಬದಲಾಗಿ ಜೀವಾವಧಿ ಶಿಕ್ಷೆಯನ್ನು ನೀಡುವ ಆಯ್ಕೆಯನ್ನೂ ಸೇರಿಸಲಾಗಿದೆ.

ಇಸ್ರೇಲ್‌ನ ಸಾಮಾನ್ಯ ನಾಗರಿಕ ನ್ಯಾಯಾಲಯಗಳಲ್ಲಿಯೂ ಈ ಹೊಸ ನಿಯಮ ಜಾರಿಗೆ ಬರಲಿದೆ. ನಾಗರಿಕ ನ್ಯಾಯಾಲಯಗಳ ಕಾನೂನು ಪ್ರಕಾರ, ಇಸ್ರೇಲ್ ದೇಶದ ಅಸ್ತಿತ್ವವನ್ನು ಅಳಿಸಿಹಾಕಬೇಕು ಎಂಬ ಕೆಟ್ಟ ಉದ್ದೇಶದಿಂದ ಯಾರನ್ನಾದರೂ ಕೊಲೆ ಮಾಡಿದವರಿಗೆ ಈ ಶಿಕ್ಷೆ ಅನ್ವಯವಾಗುತ್ತದೆ. ಅಂತಹ ಅಪರಾಧಿಗಳಿಗೆ ಕಡ್ಡಾಯವಾಗಿ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಯನ್ನು ನೀಡಲೇಬೇಕು ಎಂದು ಈ ಕಾನೂನು ಹೇಳುತ್ತದೆ.

ವಿವಿಧ ದೇಶಗಳು ಮತ್ತು ಮಾನವ ಹಕ್ಕು ಸಂಘಟನೆಗಳಿಂದ ವಿರೋಧ

ಇಸ್ರೇಲ್‌ನ ಹೊಸ ಕಾನೂನಿನ ಮೇಲೆ ಮತದಾನ ನಡೆಯುವ ಮೊದಲೇ, ಯುರೋಪಿನ ಪ್ರಮುಖ ದೇಶಗಳಾದ ಜರ್ಮನಿ, ಫ್ರಾನ್ಸ್, ಇಟಲಿ ಮತ್ತು ಬ್ರಿಟನ್ ವಿದೇಶಾಂಗ ಸಚಿವರು ಇದನ್ನು ತೀವ್ರವಾಗಿ ವಿರೋಧಿಸಿದ್ದರು.

ಈ ಕಾನೂನು ಮುಖ್ಯವಾಗಿ ಪ್ಯಾಲೆಸ್ತೀನಿಯರನ್ನು ಗುರಿಯಾಗಿಸಿಕೊಂಡಿದೆ, ಹಾಗಾಗಿ ಇದು ಒಂದು ಕಡೆಯ ಜನರನ್ನು ಮಾತ್ರ ಶಿಕ್ಷಿಸುವ ‘ತಾರತಮ್ಯದ ಕಾನೂನು’ ಎಂದು ಅವರು ಟೀಕಿಸಿದ್ದರು.

ಹೊಸ ಕಾನೂನನ್ನು ಜಾರಿಗೆ ತಂದರೆ, ಇಸ್ರೇಲ್ ದೇಶವು ಈವರೆಗೆ ಪಾಲಿಸಿಕೊಂಡು ಬಂದಿರುವ ಪ್ರಜಾಪ್ರಭುತ್ವದ ತತ್ವಗಳಿಗೆ ಧಕ್ಕೆ ಉಂಟಾಗುತ್ತದೆ. ಇಸ್ರೇಲ್ ಜಾಗತಿಕ ಮಟ್ಟದಲ್ಲಿ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನೀಡಿರುವ ಭರವಸೆಗಳಿಗೆ ಈ ಕಾನೂನು ವಿರುದ್ಧವಾಗಿದೆ ಎಂದು ಜರ್ಮನಿ, ಫ್ರಾನ್ಸ್, ಇಟಲಿ ಮತ್ತು ಬ್ರಿಟನ್ ದೇಶಗಳ ವಿದೇಶಾಂಗ ಸಚಿವರು ಭಾನುವಾರ (ಮಾರ್ಚ್ 29, 2026) ಜಂಟಿ ಹೇಳಿಕೆ ನೀಡಿದ್ದಾರೆ.

ವಿಶ್ವಸಂಸ್ಥೆಯ ತಜ್ಞರ ತಂಡವೊಂದು ಈ ಕಾನೂನಿನ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಈ ಕಾನೂನಿನಲ್ಲಿ ‘ಭಯೋತ್ಪಾದಕ’ ಎಂಬ ಪದಕ್ಕೆ ನೀಡಿರುವ ವಿವರಣೆ ತುಂಬಾ ಅಸ್ಪಷ್ಟವಾಗಿದೆ ಮತ್ತು ಅತಿಯಾಗಿ ವಿಸ್ತರಿಸಲ್ಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಇದರ ಅರ್ಥವೇನೆಂದರೆ, ನಿಜವಾಗಿ ಭಯೋತ್ಪಾದನಾ ಕೃತ್ಯವಲ್ಲದ ಸಾಮಾನ್ಯ ಪ್ರತಿಭಟನೆ ಅಥವಾ ನಡವಳಿಕೆಗಳಿಗೂ ಸಹ ಈ ಕಾನೂನಿನ ಅಡಿಯಲ್ಲಿ ಮರಣದಂಡನೆ ವಿಧಿಸುವ ಅಪಾಯವಿದೆ.

ಇಸ್ರೇಲ್‌ನ ಸಚಿವ ಬೆನ್-ಗ್ವಿರ್, ಮರಣದಂಡನೆ ಶಿಕ್ಷೆ ಜಾರಿಗೆ ಬಂದರೆ ಪ್ಯಾಲೆಸ್ತೀನಿಯರು ಇಸ್ರೇಲಿಗಳ ಮೇಲೆ ದಾಳಿ ನಡೆಸಲು ಹೆದರುತ್ತಾರೆ ಎಂದು ವಾದಿಸಿದ್ದಾರೆ. ಇಸ್ರೇಲಿ ಜೈಲಿನಲ್ಲಿರುವ ಪ್ಯಾಲೆಸ್ತೀನಿಯನ್ ಕೈದಿಗಳನ್ನು ಬಿಡಿಸಿಕೊಳ್ಳುವ ಉದ್ದೇಶದಿಂದ ಇಸ್ರೇಲಿಗಳನ್ನು ಅಪಹರಿಸಿ, ನಂತರ ಅವರನ್ನು ಅದಲು-ಬದಲು (swap deals) ಮಾಡಿಕೊಳ್ಳುವ ಪ್ರಯತ್ನಗಳಿಗೆ ಈ ಕಾನೂನು ತಡೆ ಹಾಕುತ್ತದೆ ಎಂದು ಹೇಳಿದ್ದಾರೆ.

ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಟರ್‌ ನ್ಯಾಷನಲ್ ಇಸ್ರೇಲ್‌ನ ಹೊಸ ಕಾನೂನನ್ನು ತೀವ್ರವಾಗಿ ವಿರೋಧಿಸಿದೆ. ಅಪರಾಧಗಳನ್ನು ಕಡಿಮೆ ಮಾಡುವಲ್ಲಿ ಮರಣದಂಡನೆಯು ಜೀವಾವಧಿ ಶಿಕ್ಷೆಗಿಂತ ಹೆಚ್ಚು ಪರಿಣಾಮಕಾರಿ ಎಂಬುದಕ್ಕೆ ಯಾವುದೇ ಆಧಾರ ಅಥವಾ ಸಾಕ್ಷ್ಯಗಳಿಲ್ಲ ಎಂದಿದೆ.

ವರದಿಗ ಪ್ರಕಾರ, ಹೊಸ ಕಾನೂನು ಜಾರಿಯಾಗುವ ಹಂತದಲ್ಲಿದ್ದಾಗ, ಇಸ್ರೇಲ್‌ನ ಸ್ವಂತ ಭದ್ರತಾ ತಜ್ಞರು ಮತ್ತು ಕಾನೂನು ತಜ್ಞರು ಕೂಡ ಇದನ್ನು ವಿರೋಧಿಸಿದ್ದರು. ಈ ಕಾನೂನು ಇಸ್ರೇಲ್‌ನ ಮೂಲಭೂತ ಕಾನೂನುಗಳಿಗೆ ಅಥವಾ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಕಠಿಣ ಶಿಕ್ಷೆ ನೀಡುವುದರಿಂದ ಅಪರಾಧಗಳು ಕಡಿಮೆಯಾಗುತ್ತವೆ ಎನ್ನುವುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ, ಹಾಗಾಗಿ ಇದು ಪರಿಣಾಮಕಾರಿಯಲ್ಲ ಎಂದು ಅವರು ವಾದಿಸಿದ್ದಾರೆ.

ಇಸ್ರೇಲ್‌ನ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ವಿರೋಧ ಪಕ್ಷದ ಸಂಸದರು ಈ ಹೊಸ ಕಾನೂನನ್ನು ವಿರೋಧಿಸಿದ್ದಾರೆ.

 



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...