Homeಅಂತರಾಷ್ಟ್ರೀಯಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

- Advertisement -
- Advertisement -

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ತೀವ್ರ ಬಲಪಂಥೀಯ ಮಿತ್ರಪಕ್ಷಗಳು ನೀಡಿದ್ದ ಪ್ರಮುಖ ಭರವಸೆಯನ್ನು ಈ ಮೂಲಕ ಈಡೇರಿಸಿದಂತಾಗಿದೆ.

ಹೊಸ ಕಾನೂನಿನಿಂದಾಗಿ ಇಸ್ರೇಲ್ ದೇಶವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದೆ. ಈಗಾಗಲೇ ಆಕ್ರಮಿತ ಪಶ್ಚಿಮ ದಂಡೆಯಲ್ಲಿ, ಇಸ್ರೇಲ್ ಸೇನೆ ಮತ್ತು ಅಲ್ಲಿನ ವಸಾಹತುಗಾರರು ಪ್ಯಾಲೆಸ್ತೀನಿಯರ ಮೇಲೆ ನಡೆಸುತ್ತಿರುವ ಹಿಂಸಾಚಾರ ಹೆಚ್ಚುತ್ತಿದೆ. ಈ ಕಾರಣದಿಂದಾಗಿ ಇಸ್ರೇಲ್ ಜಗತ್ತಿನಾದ್ಯಂತ ಹಲವು ದೇಶಗಳ ಕೆಂಗಣ್ಣಿಗೆ ಗುರಿಯಾಗಿವೆ.

ವರದಿಗಳ ಪ್ರಕಾರ, ಇಸ್ರೇಲ್ ಅಂಗೀಕರಿಸಿದ ಹೊಸ ಕಾನೂನಿನಡಿ ಅಪರಾಧಿಯನ್ನು ಶಿಕ್ಷೆ ಪ್ರಕಟವಾದ 90 ದಿನಗಳ ಒಳಗಾಗಿ ಗಲ್ಲಿಗೇರಿಸಬೇಕು. ಈ ಶಿಕ್ಷೆಯನ್ನು ರದ್ದುಗೊಳಿಸುವಂತೆ ಅಥವಾ ಕ್ಷಮಿಸುವಂತೆ ಕೇಳಿಕೊಳ್ಳುವ ಹಕ್ಕು ಅಪರಾಧಿಗೆ ಇರುವುದಿಲ್ಲ. ಕೆಲವು ಸಂದರ್ಭಗಳಲ್ಲಿ ಮರಣದಂಡನೆಗೆ ಬದಲಾಗಿ ಜೀವಾವಧಿ ಶಿಕ್ಷೆಯನ್ನು ನೀಡುವ ಅವಕಾಶವೂ ಇದೆ. ವಿಶೇಷ ಸಂದರ್ಭಗಳಲ್ಲಿ ಶಿಕ್ಷೆ ಜಾರಿಯನ್ನು ಸ್ವಲ್ಪ ದಿನ ಮುಂದೂಡಲು ಅವಕಾಶವಿದೆ.

ಹೊಸ ಕಾನೂನನ್ನು ಇಸ್ರೇಲ್‌ನ ತೀವ್ರ ಬಲಪಂಥೀಯ ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರು ರೂಪಿಸಿದ್ದಾರೆ. ವಿಶೇಷವೆಂದರೆ, ಈ ಕಾನೂನಿನ ಪರವಾಗಿ ಮತದಾನ ನಡೆಯುವ ಮುನ್ನ ಅವರು ತಮ್ಮ ಅಂಗಿಯ ಮೇಲೆ ‘ ನೇಣು ಕುಣಿಕೆ’ ಆಕಾರದ ಪಿನ್ ಧರಿಸುವ ಮೂಲಕ ಈ ಕಠಿಣ ಶಿಕ್ಷೆಯ ಪರವಾಗಿ ತಮ್ಮ ಬೆಂಬಲವನ್ನು ಪ್ರದರ್ಶಿಸಿದ್ದರು.

ಹೊಸ ಕಾನೂನು ಇಸ್ರೇಲ್‌ನ ಮಿತ್ರ ದೇಶಗಳಲ್ಲಿ (ವಿಶೇಷವಾಗಿ ಪಾಶ್ಚಿಮಾತ್ಯ ದೇಶಗಳಲ್ಲಿ) ಆತಂಕ ಮೂಡಿಸಿದೆ. ಪ್ರಧಾನಿ ನೆತನ್ಯಾಹು ಅವರ ನೇತೃತ್ವದ ‘ರಾಷ್ಟ್ರೀಯವಾದಿ-ಧಾರ್ಮಿಕ’ ಮೈತ್ರಿಕೂಟವು ಇತ್ತೀಚೆಗೆ ಕೈಗೊಳ್ಳುತ್ತಿರುವ ಸರಣಿ ನಿರ್ಧಾರಗಳಲ್ಲಿ ಇದೂ ಒಂದು. ಈಗಾಗಲೇ ಆಕ್ರಮಿತ ಪಶ್ಚಿಮ ದಂಡೆ ಪ್ರದೇಶದಲ್ಲಿ ಪ್ಯಾಲೆಸ್ತೀನಿಯರ ಮೇಲೆ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಅಸಮಾಧಾನ ಹೊಂದಿರುವ ಈ ಮಿತ್ರ ದೇಶಗಳು, ಈಗ ಈ ಮರಣದಂಡನೆ ಕಾನೂನಿನ ಬಗ್ಗೆಯೂ ತೀವ್ರ ಟೀಕೆ ವ್ಯಕ್ತಪಡಿಸಿವೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಎದುರಾಗಬಹುದಾದ ತೀವ್ರ ವಿರೋಧ ಮತ್ತು ಟೀಕೆಗಳನ್ನು ತಡೆಯುವ ಪ್ರಯತ್ನವಾಗಿ, ಈ ಕಾನೂನಿನ ಕೆಲವು ಕಠಿಣ ನಿಯಮಗಳನ್ನು ಸ್ವಲ್ಪ ಸಡಿಲಗೊಳಿಸುವಂತೆ ಪ್ರಧಾನಿ ನೆತನ್ಯಾಹು ಅವರು ಸೂಚಿಸಿದ್ದಾರೆ ಎಂದು ಇಸ್ರೇಲ್‌ನ ಮಾಧ್ಯಮಗಳು ವರದಿ ಮಾಡಿವೆ.

ಆರಂಭದಲ್ಲಿ ಸಿದ್ಧಪಡಿಸಿದ ಮಸೂದೆಯಲ್ಲಿ, ಪಶ್ಚಿಮ ದಂಡೆಯ ಮಿಲಿಟರಿ ನ್ಯಾಯಾಲಯಗಳಲ್ಲಿ ಭಯೋತ್ಪಾದನಾ ಕೃತ್ಯಗಳ ಅಪರಾಧ ಸಾಬೀತಾದ ಇಸ್ರೇಲೇತರ ನಾಗರಿಕರಿಗೆ (ಪ್ಯಾಲೆಸ್ತೀನಿಯರಿಗೆ) ಕಡ್ಡಾಯವಾಗಿ ಮರಣದಂಡನೆ ವಿಧಿಸಬೇಕು ಎಂದಿತ್ತು.

ಈಗ ಬದಲಾದ ಕಾನೂನಿನಲ್ಲಿ, ಮರಣದಂಡನೆಗೆ ಬದಲಾಗಿ ಜೀವಾವಧಿ ಶಿಕ್ಷೆಯನ್ನು ನೀಡುವ ಆಯ್ಕೆಯನ್ನೂ ಸೇರಿಸಲಾಗಿದೆ.

ಇಸ್ರೇಲ್‌ನ ಸಾಮಾನ್ಯ ನಾಗರಿಕ ನ್ಯಾಯಾಲಯಗಳಲ್ಲಿಯೂ ಈ ಹೊಸ ನಿಯಮ ಜಾರಿಗೆ ಬರಲಿದೆ. ನಾಗರಿಕ ನ್ಯಾಯಾಲಯಗಳ ಕಾನೂನು ಪ್ರಕಾರ, ಇಸ್ರೇಲ್ ದೇಶದ ಅಸ್ತಿತ್ವವನ್ನು ಅಳಿಸಿಹಾಕಬೇಕು ಎಂಬ ಕೆಟ್ಟ ಉದ್ದೇಶದಿಂದ ಯಾರನ್ನಾದರೂ ಕೊಲೆ ಮಾಡಿದವರಿಗೆ ಈ ಶಿಕ್ಷೆ ಅನ್ವಯವಾಗುತ್ತದೆ. ಅಂತಹ ಅಪರಾಧಿಗಳಿಗೆ ಕಡ್ಡಾಯವಾಗಿ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಯನ್ನು ನೀಡಲೇಬೇಕು ಎಂದು ಈ ಕಾನೂನು ಹೇಳುತ್ತದೆ.

ವಿವಿಧ ದೇಶಗಳು ಮತ್ತು ಮಾನವ ಹಕ್ಕು ಸಂಘಟನೆಗಳಿಂದ ವಿರೋಧ

ಇಸ್ರೇಲ್‌ನ ಹೊಸ ಕಾನೂನಿನ ಮೇಲೆ ಮತದಾನ ನಡೆಯುವ ಮೊದಲೇ, ಯುರೋಪಿನ ಪ್ರಮುಖ ದೇಶಗಳಾದ ಜರ್ಮನಿ, ಫ್ರಾನ್ಸ್, ಇಟಲಿ ಮತ್ತು ಬ್ರಿಟನ್ ವಿದೇಶಾಂಗ ಸಚಿವರು ಇದನ್ನು ತೀವ್ರವಾಗಿ ವಿರೋಧಿಸಿದ್ದರು.

ಈ ಕಾನೂನು ಮುಖ್ಯವಾಗಿ ಪ್ಯಾಲೆಸ್ತೀನಿಯರನ್ನು ಗುರಿಯಾಗಿಸಿಕೊಂಡಿದೆ, ಹಾಗಾಗಿ ಇದು ಒಂದು ಕಡೆಯ ಜನರನ್ನು ಮಾತ್ರ ಶಿಕ್ಷಿಸುವ ‘ತಾರತಮ್ಯದ ಕಾನೂನು’ ಎಂದು ಅವರು ಟೀಕಿಸಿದ್ದರು.

ಹೊಸ ಕಾನೂನನ್ನು ಜಾರಿಗೆ ತಂದರೆ, ಇಸ್ರೇಲ್ ದೇಶವು ಈವರೆಗೆ ಪಾಲಿಸಿಕೊಂಡು ಬಂದಿರುವ ಪ್ರಜಾಪ್ರಭುತ್ವದ ತತ್ವಗಳಿಗೆ ಧಕ್ಕೆ ಉಂಟಾಗುತ್ತದೆ. ಇಸ್ರೇಲ್ ಜಾಗತಿಕ ಮಟ್ಟದಲ್ಲಿ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನೀಡಿರುವ ಭರವಸೆಗಳಿಗೆ ಈ ಕಾನೂನು ವಿರುದ್ಧವಾಗಿದೆ ಎಂದು ಜರ್ಮನಿ, ಫ್ರಾನ್ಸ್, ಇಟಲಿ ಮತ್ತು ಬ್ರಿಟನ್ ದೇಶಗಳ ವಿದೇಶಾಂಗ ಸಚಿವರು ಭಾನುವಾರ (ಮಾರ್ಚ್ 29, 2026) ಜಂಟಿ ಹೇಳಿಕೆ ನೀಡಿದ್ದಾರೆ.

ವಿಶ್ವಸಂಸ್ಥೆಯ ತಜ್ಞರ ತಂಡವೊಂದು ಈ ಕಾನೂನಿನ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಈ ಕಾನೂನಿನಲ್ಲಿ ‘ಭಯೋತ್ಪಾದಕ’ ಎಂಬ ಪದಕ್ಕೆ ನೀಡಿರುವ ವಿವರಣೆ ತುಂಬಾ ಅಸ್ಪಷ್ಟವಾಗಿದೆ ಮತ್ತು ಅತಿಯಾಗಿ ವಿಸ್ತರಿಸಲ್ಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಇದರ ಅರ್ಥವೇನೆಂದರೆ, ನಿಜವಾಗಿ ಭಯೋತ್ಪಾದನಾ ಕೃತ್ಯವಲ್ಲದ ಸಾಮಾನ್ಯ ಪ್ರತಿಭಟನೆ ಅಥವಾ ನಡವಳಿಕೆಗಳಿಗೂ ಸಹ ಈ ಕಾನೂನಿನ ಅಡಿಯಲ್ಲಿ ಮರಣದಂಡನೆ ವಿಧಿಸುವ ಅಪಾಯವಿದೆ.

ಇಸ್ರೇಲ್‌ನ ಸಚಿವ ಬೆನ್-ಗ್ವಿರ್, ಮರಣದಂಡನೆ ಶಿಕ್ಷೆ ಜಾರಿಗೆ ಬಂದರೆ ಪ್ಯಾಲೆಸ್ತೀನಿಯರು ಇಸ್ರೇಲಿಗಳ ಮೇಲೆ ದಾಳಿ ನಡೆಸಲು ಹೆದರುತ್ತಾರೆ ಎಂದು ವಾದಿಸಿದ್ದಾರೆ. ಇಸ್ರೇಲಿ ಜೈಲಿನಲ್ಲಿರುವ ಪ್ಯಾಲೆಸ್ತೀನಿಯನ್ ಕೈದಿಗಳನ್ನು ಬಿಡಿಸಿಕೊಳ್ಳುವ ಉದ್ದೇಶದಿಂದ ಇಸ್ರೇಲಿಗಳನ್ನು ಅಪಹರಿಸಿ, ನಂತರ ಅವರನ್ನು ಅದಲು-ಬದಲು (swap deals) ಮಾಡಿಕೊಳ್ಳುವ ಪ್ರಯತ್ನಗಳಿಗೆ ಈ ಕಾನೂನು ತಡೆ ಹಾಕುತ್ತದೆ ಎಂದು ಹೇಳಿದ್ದಾರೆ.

ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಟರ್‌ ನ್ಯಾಷನಲ್ ಇಸ್ರೇಲ್‌ನ ಹೊಸ ಕಾನೂನನ್ನು ತೀವ್ರವಾಗಿ ವಿರೋಧಿಸಿದೆ. ಅಪರಾಧಗಳನ್ನು ಕಡಿಮೆ ಮಾಡುವಲ್ಲಿ ಮರಣದಂಡನೆಯು ಜೀವಾವಧಿ ಶಿಕ್ಷೆಗಿಂತ ಹೆಚ್ಚು ಪರಿಣಾಮಕಾರಿ ಎಂಬುದಕ್ಕೆ ಯಾವುದೇ ಆಧಾರ ಅಥವಾ ಸಾಕ್ಷ್ಯಗಳಿಲ್ಲ ಎಂದಿದೆ.

ವರದಿಗ ಪ್ರಕಾರ, ಹೊಸ ಕಾನೂನು ಜಾರಿಯಾಗುವ ಹಂತದಲ್ಲಿದ್ದಾಗ, ಇಸ್ರೇಲ್‌ನ ಸ್ವಂತ ಭದ್ರತಾ ತಜ್ಞರು ಮತ್ತು ಕಾನೂನು ತಜ್ಞರು ಕೂಡ ಇದನ್ನು ವಿರೋಧಿಸಿದ್ದರು. ಈ ಕಾನೂನು ಇಸ್ರೇಲ್‌ನ ಮೂಲಭೂತ ಕಾನೂನುಗಳಿಗೆ ಅಥವಾ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಕಠಿಣ ಶಿಕ್ಷೆ ನೀಡುವುದರಿಂದ ಅಪರಾಧಗಳು ಕಡಿಮೆಯಾಗುತ್ತವೆ ಎನ್ನುವುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ, ಹಾಗಾಗಿ ಇದು ಪರಿಣಾಮಕಾರಿಯಲ್ಲ ಎಂದು ಅವರು ವಾದಿಸಿದ್ದಾರೆ.

ಇಸ್ರೇಲ್‌ನ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ವಿರೋಧ ಪಕ್ಷದ ಸಂಸದರು ಈ ಹೊಸ ಕಾನೂನನ್ನು ವಿರೋಧಿಸಿದ್ದಾರೆ.

 



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...