Homeಕರ್ನಾಟಕಕರ್ನಾಟಕ ಹೈಕೋರ್ಟ್‌ನ 6 ನ್ಯಾಯಾಧೀಶರಿಗೆ ಕೊಲೆ ಬೆದರಿಕೆ

ಕರ್ನಾಟಕ ಹೈಕೋರ್ಟ್‌ನ 6 ನ್ಯಾಯಾಧೀಶರಿಗೆ ಕೊಲೆ ಬೆದರಿಕೆ

- Advertisement -
- Advertisement -

ಕರ್ನಾಟಕ ಹೈಕೋರ್ಟ್‌ನ ಆರು ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆಯೊಡ್ಡಿ, 50 ಲಕ್ಷ ರೂಗಳಿಗೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ.

ಹೈಕೋರ್ಟ್‌ನ ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್‌ಒ) ಕೆ ಮುರಳೀಧರ್‌ ಅವರ ಅಧಿಕೃತ ವಾಟ್ಸ್‌ಆಪ್‌ ಸಂಖ್ಯೆಗೆ ಸಂದೇಶ ಕಳಿಸುವ ಮೂಲಕ ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಅವರು ನೀಡಿದ ದೂರು ಆಧರಿಸಿ ಕೇಂದ್ರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಾಕಿಸ್ತಾನದ ಅಲೈಡ್‌ ಬ್ಯಾಂಕ್‌ ಲಿಮಿಟೆಡ್‌ನಲ್ಲಿರುವ ಬ್ಯಾಂಕ್‌ ಖಾತೆಗೆ 50 ಲಕ್ಷ ರೂ. ಅನ್ನು ಜಮೆ ಮಾಡುವಂತೆ ವಾಟ್ಸ್‌ಆಪ್‌ಗೆ ಸಂದೇಶದಲ್ಲಿ ಬೇಡಿಕೆ ಇಟ್ಟಿದ್ದಾನೆ. ಜುಲೈ 12 ರಂದು ಹೈಕೋರ್ಟ್ ಪಿಆರ್‌ಒಗೆ ಕೊಲೆ ಬೆದರಿಕೆ ಸಂದೇಶ ಬಂದಿದ್ದು, ಜುಲೈ 14 ರಂದು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದುಬೈ ಗ್ಯಾಂಗ್ ಮೂಲಕ ತಮ್ಮನ್ನು ಸೇರಿ ಆರು ಹೈಕೋರ್ಟ್‌ ನ್ಯಾಯಾಧೀಶರನ್ನು ಕೊಲ್ಲುವುದಾಗಿ ವಾಟ್ಸ್‌ಆಪ್‌ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ ಎಂದು ಮುರಳೀಧರ್‌ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಮೊಹಮ್ಮದ್‌ ನವಾಜ್‌, ಎಚ್‌ಟಿ ನರೇಂದ್ರ ಪ್ರಸಾದ್‌, ಅಶೋಕ್‌ ಜಿ ನಿಜಗಣ್ಣವರ್‌, ಎಚ್‌ಪಿ ಸಂದೇಶ್‌, ಕೆ ನಟರಾಜನ್‌ ಹಾಗೂ ಬಿ ವೀರಪ್ಪ ಅವರ ಹೆಸರನ್ನು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

50 ಲಕ್ಷ ರೂ. ಅನ್ನು ಪಾಕಿಸ್ತಾನದ ಬ್ಯಾಂಕ್‌ ಅಕೌಂಟ್‌ಗೆ ಹಾಕಿ ಎಂದು ಹೇಳಿರುವುದನ್ನು ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ; ಚಂದ್ರಯಾನ-3 ಉಡಾವಣೆ ಮತ್ತು ಬಾಹ್ಯಾಕಾಶಯಾನ ಇತಿಹಾಸದ ಪಕ್ಷಿನೋಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...