Homeಕರ್ನಾಟಕಹಿಜಾಬ್‌ ತೀರ್ಪು ನೀಡಿದ ನ್ಯಾಯಮೂರ್ತಿಗೆ ಕೊಲೆ ಬೆದರಿಕೆ ಆರೋಪ; ಪ್ರಕರಣ ದಾಖಲು

ಹಿಜಾಬ್‌ ತೀರ್ಪು ನೀಡಿದ ನ್ಯಾಯಮೂರ್ತಿಗೆ ಕೊಲೆ ಬೆದರಿಕೆ ಆರೋಪ; ಪ್ರಕರಣ ದಾಖಲು

ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಲ್ಲಿಯೂ ದೂರು ನೀಡಲಾಗಿದೆ. ಬೆಂಗಳೂರಿನ ಕಬ್ಬನ್‌ ಪಾರ್ಕ್, ತಮಿಳುನಾಡಿನ ಮಧುರೈ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -
- Advertisement -

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದಿರುವ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ಇತರರಿಗೆ ವ್ಯಕ್ತಿಯೊಬ್ಬರು ಕೊಲೆ ಬೆದರಿಕೆ ಹಾಕಿದ್ದಾರೆಂಬ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌‌ ಆಗಿದ್ದು ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ವಿಡಿಯೊ ಸಂಬಂಧ ವಕೀಲ ಉಮಾಪತಿ ಎಸ್ ಅವರು ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಶನಿವಾರ ದೂರು ಸಲ್ಲಿಸಿದ್ದಾರೆ.

ತನಗೆ ವಾಟ್ಸಾಪ್‌ನಲ್ಲಿ ವೀಡಿಯೋ ಬಂದಿದ್ದು, ಜಾರ್ಖಂಡ್ ನ್ಯಾಯಾಧೀಶರೊಬ್ಬರನ್ನು ಹತ್ಯೆಗೈದಿದ್ದನ್ನು ಭಾಷಣಕಾರ ಉಲ್ಲೇಖಿಸಿದ್ದಾರೆ. ಜಾರ್ಖಂಡ್‌ನ ಧನ್‌ಬಾದ್ ನ್ಯಾಯಾಧೀಶ ಉತ್ತಮ್ ಆನಂದ್ ಅವರು ಕೊಲೆಯಾಗಿದ್ದರು. ಕಳೆದ ವರ್ಷ ವಾಹನವನ್ನು ಹರಿಸಿ ಅವರನ್ನು ಕೊಲ್ಲಲಾಗಿತ್ತು ಎಂದು ದೂರುದಾರರು ತಿಳಿಸಿದ್ದಾರೆ.

“ಕರ್ನಾಟಕದ ಮುಖ್ಯ ನ್ಯಾಯಾಧೀಶರು ಎಲ್ಲಿಗೆ ವಾಕಿಂಗ್ ಹೋಗುತ್ತಾರೆ ಎಂಬುದು ಜನರಿಗೆ ತಿಳಿದಿದೆ ಎಂದು ಹೇಳುವ ಮೂಲಕ ಭಾಷಣಕಾರರು ಕೊಲೆ ಬೆದರಿಕೆ ಹಾಕಿದ್ದಾರೆ. ನ್ಯಾಯಮೂರ್ತಿಯು ಕುಟುಂಬ ಸದಸ್ಯರೊಂದಿಗೆ ಉಡುಪಿ ಮಠಕ್ಕೆ ಭೇಟಿ ನೀಡುವುದರ ಬಗ್ಗೆ ಉಲ್ಲೇಖವನ್ನು ಮಾಡಿದ್ದಾರೆ. ಅಲ್ಲದೆ ನ್ಯಾಯಾಲಯದ ತೀರ್ಪಿನ ಬಗ್ಗೆ ತುಂಬಾ ಅಸಭ್ಯ ಭಾಷೆಯಲ್ಲಿ ಮಾತನಾಡಿದ್ದಾರೆ” ಎಂದು ದೂರಲಾಗಿದೆ. ಬಹುಶಃ ತಮಿಳುನಾಡಿನ ಮಧುರೈನಲ್ಲಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ ಎಂದು ದೂರುದಾರರು ಉಲ್ಲೇಖಿಸಿದ್ದಾರೆ.

ಮತ್ತೋರ್ವ ವಕೀಲೆ ಸುಧಾ ಕಟ್ವಾ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಭಾರತೀಯ ದಂಡ ಸಂಹಿತೆ ಸೆಕ್ಷನ್ 506 (1), 505 (2), 505 (1) (ಸಿ), 505 (1) (ಬಿ), 153 ಎ, 109, 504 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಮತ್ತು ಖಾಝಿ ಎಂ ಜೈಬುನ್ನಿಸಾ ಅವರನ್ನೊಳಗೊಂಡ ಹೈಕೋರ್ಟ್‌ನ ತ್ರಿಸದಸ್ಯ ಪೀಠವು ತರಗತಿಯಲ್ಲಿ ಹಿಜಾಬ್ ಧರಿಸದಿರುವುದನ್ನು ಎತ್ತಿ ಹಿಡಿದಿತ್ತು.

ತಮಿಳುನಾಡಿನಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲು

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ತಮಿಳುನಾಡಿನಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಮಿಳುನಾಡು ತೌಹೀದ್ ಜಮಾತ್‌ನ (ಟಿಎನ್‌ಟಿಜೆ) ಮೂವರು ಕಾರ್ಯಕರ್ತರು ನ್ಯಾಯಮೂರ್ತಿಯವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಲಾಗಿದೆ.

ಶುಕ್ರವಾರ, ತೀರ್ಪಿನ ವಿರುದ್ಧ ಪ್ರತಿಭಟಿಸಲು ಕೋರಿಪಾಳ್ಯಂ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನು ತೌಹೀದ್ ಜಮಾತ್ ಆಯೋಜಿಸಿದ್ದು, ಈ ಸಂದರ್ಭದಲ್ಲಿ ಸಂಘಟಕರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಗೆ ಸಂಘಟಕರು ಜೀವ ಬೆದರಿಕೆ ಹಾಕಿದ್ದಾರೆ ಎಂದಿದ್ದಾರೆ.

ಮೂವರು ಟಿಎನ್‌ಟಿಜೆ ಪದಾಧಿಕಾರಿಗಳ ವಿರುದ್ಧ ಸೆಕ್ಷನ್ 153 (ಎ) (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 505 (1) (ಸಿ) (ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶ), 505 (2), 506 (1) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಮಧುರೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ಪೀಠವು ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದನ್ನು ಖುರಾನ್ ಕಡ್ಡಾಯಗೊಳಿಸುವುದಿಲ್ಲ ಎಂದು ಹೇಳಿದೆ.


ಇದನ್ನೂ ಓದಿರಿ: ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...