Homeಕರ್ನಾಟಕಹಿಜಾಬ್‌ ತೀರ್ಪು ನೀಡಿದ ನ್ಯಾಯಮೂರ್ತಿಗೆ ಕೊಲೆ ಬೆದರಿಕೆ ಆರೋಪ; ಪ್ರಕರಣ ದಾಖಲು

ಹಿಜಾಬ್‌ ತೀರ್ಪು ನೀಡಿದ ನ್ಯಾಯಮೂರ್ತಿಗೆ ಕೊಲೆ ಬೆದರಿಕೆ ಆರೋಪ; ಪ್ರಕರಣ ದಾಖಲು

ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಲ್ಲಿಯೂ ದೂರು ನೀಡಲಾಗಿದೆ. ಬೆಂಗಳೂರಿನ ಕಬ್ಬನ್‌ ಪಾರ್ಕ್, ತಮಿಳುನಾಡಿನ ಮಧುರೈ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -
- Advertisement -

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದಿರುವ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ಇತರರಿಗೆ ವ್ಯಕ್ತಿಯೊಬ್ಬರು ಕೊಲೆ ಬೆದರಿಕೆ ಹಾಕಿದ್ದಾರೆಂಬ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌‌ ಆಗಿದ್ದು ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ವಿಡಿಯೊ ಸಂಬಂಧ ವಕೀಲ ಉಮಾಪತಿ ಎಸ್ ಅವರು ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಶನಿವಾರ ದೂರು ಸಲ್ಲಿಸಿದ್ದಾರೆ.

ತನಗೆ ವಾಟ್ಸಾಪ್‌ನಲ್ಲಿ ವೀಡಿಯೋ ಬಂದಿದ್ದು, ಜಾರ್ಖಂಡ್ ನ್ಯಾಯಾಧೀಶರೊಬ್ಬರನ್ನು ಹತ್ಯೆಗೈದಿದ್ದನ್ನು ಭಾಷಣಕಾರ ಉಲ್ಲೇಖಿಸಿದ್ದಾರೆ. ಜಾರ್ಖಂಡ್‌ನ ಧನ್‌ಬಾದ್ ನ್ಯಾಯಾಧೀಶ ಉತ್ತಮ್ ಆನಂದ್ ಅವರು ಕೊಲೆಯಾಗಿದ್ದರು. ಕಳೆದ ವರ್ಷ ವಾಹನವನ್ನು ಹರಿಸಿ ಅವರನ್ನು ಕೊಲ್ಲಲಾಗಿತ್ತು ಎಂದು ದೂರುದಾರರು ತಿಳಿಸಿದ್ದಾರೆ.

“ಕರ್ನಾಟಕದ ಮುಖ್ಯ ನ್ಯಾಯಾಧೀಶರು ಎಲ್ಲಿಗೆ ವಾಕಿಂಗ್ ಹೋಗುತ್ತಾರೆ ಎಂಬುದು ಜನರಿಗೆ ತಿಳಿದಿದೆ ಎಂದು ಹೇಳುವ ಮೂಲಕ ಭಾಷಣಕಾರರು ಕೊಲೆ ಬೆದರಿಕೆ ಹಾಕಿದ್ದಾರೆ. ನ್ಯಾಯಮೂರ್ತಿಯು ಕುಟುಂಬ ಸದಸ್ಯರೊಂದಿಗೆ ಉಡುಪಿ ಮಠಕ್ಕೆ ಭೇಟಿ ನೀಡುವುದರ ಬಗ್ಗೆ ಉಲ್ಲೇಖವನ್ನು ಮಾಡಿದ್ದಾರೆ. ಅಲ್ಲದೆ ನ್ಯಾಯಾಲಯದ ತೀರ್ಪಿನ ಬಗ್ಗೆ ತುಂಬಾ ಅಸಭ್ಯ ಭಾಷೆಯಲ್ಲಿ ಮಾತನಾಡಿದ್ದಾರೆ” ಎಂದು ದೂರಲಾಗಿದೆ. ಬಹುಶಃ ತಮಿಳುನಾಡಿನ ಮಧುರೈನಲ್ಲಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ ಎಂದು ದೂರುದಾರರು ಉಲ್ಲೇಖಿಸಿದ್ದಾರೆ.

ಮತ್ತೋರ್ವ ವಕೀಲೆ ಸುಧಾ ಕಟ್ವಾ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಭಾರತೀಯ ದಂಡ ಸಂಹಿತೆ ಸೆಕ್ಷನ್ 506 (1), 505 (2), 505 (1) (ಸಿ), 505 (1) (ಬಿ), 153 ಎ, 109, 504 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಮತ್ತು ಖಾಝಿ ಎಂ ಜೈಬುನ್ನಿಸಾ ಅವರನ್ನೊಳಗೊಂಡ ಹೈಕೋರ್ಟ್‌ನ ತ್ರಿಸದಸ್ಯ ಪೀಠವು ತರಗತಿಯಲ್ಲಿ ಹಿಜಾಬ್ ಧರಿಸದಿರುವುದನ್ನು ಎತ್ತಿ ಹಿಡಿದಿತ್ತು.

ತಮಿಳುನಾಡಿನಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲು

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ತಮಿಳುನಾಡಿನಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಮಿಳುನಾಡು ತೌಹೀದ್ ಜಮಾತ್‌ನ (ಟಿಎನ್‌ಟಿಜೆ) ಮೂವರು ಕಾರ್ಯಕರ್ತರು ನ್ಯಾಯಮೂರ್ತಿಯವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಲಾಗಿದೆ.

ಶುಕ್ರವಾರ, ತೀರ್ಪಿನ ವಿರುದ್ಧ ಪ್ರತಿಭಟಿಸಲು ಕೋರಿಪಾಳ್ಯಂ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನು ತೌಹೀದ್ ಜಮಾತ್ ಆಯೋಜಿಸಿದ್ದು, ಈ ಸಂದರ್ಭದಲ್ಲಿ ಸಂಘಟಕರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಗೆ ಸಂಘಟಕರು ಜೀವ ಬೆದರಿಕೆ ಹಾಕಿದ್ದಾರೆ ಎಂದಿದ್ದಾರೆ.

ಮೂವರು ಟಿಎನ್‌ಟಿಜೆ ಪದಾಧಿಕಾರಿಗಳ ವಿರುದ್ಧ ಸೆಕ್ಷನ್ 153 (ಎ) (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 505 (1) (ಸಿ) (ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶ), 505 (2), 506 (1) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಮಧುರೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ಪೀಠವು ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದನ್ನು ಖುರಾನ್ ಕಡ್ಡಾಯಗೊಳಿಸುವುದಿಲ್ಲ ಎಂದು ಹೇಳಿದೆ.


ಇದನ್ನೂ ಓದಿರಿ: ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...