Homeಮುಖಪುಟದಾಭೋಲ್ಕರ್ ರೀತಿ ಕೊಲ್ಲುವುದಾಗಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಜೀವ ಬೆದರಿಕೆ: ಆರೋಪಿ ಅರೆಸ್ಟ್

ದಾಭೋಲ್ಕರ್ ರೀತಿ ಕೊಲ್ಲುವುದಾಗಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಜೀವ ಬೆದರಿಕೆ: ಆರೋಪಿ ಅರೆಸ್ಟ್

- Advertisement -
- Advertisement -

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್‌ಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮುಂಬೈ ಅಪರಾಧ ವಿಭಾಗವು ಭಾನುವಾರ ಪುಣೆಯಲ್ಲಿ ಶಂಕಿತನನ್ನು ಬಂಧಿಸಿದೆ.

ಆರೋಪಿ ಸಾಗರ್ ಬರ್ವೆ (35) ಅವರನ್ನು ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಜೂನ್ 13 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಶುಕ್ರವಾರ, ಪವಾರ್ ಅವರಿಗೆ ಆರೋಪಿ ಸಾಗರ್ ಬರ್ವೆ ಅವರು ಫೇಸ್‌ಬುಕ್‌ನಲ್ಲಿ “ಅವರು (ಪವಾರ್) ಶೀಘ್ರದಲ್ಲೇ (ನರೇಂದ್ರ) ದಾಭೋಲ್ಕರ್ ಅವರಿಗಾದ ರೀತಿಯಲ್ಲೇ ನಿಮಗು ಆಗುತ್ತದೆ” ಎಂದು ಸಂದೇಶ ಕಳುಹಿಸಿದ್ದಾರೆ. 2013ರಲ್ಲಿ ಪುಣೆಯಲ್ಲಿ ನಾಗರಿಕ ಕಾರ್ಯಕರ್ತ ದಾಭೋಲ್ಕರ್ ಕೊಲೆಯಾಗಿದ್ದರು.

”ಆರೋಪಿ ಬಾರ್ವೆ ಅವರು ಪ್ರಮುಖ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ಸಧ್ಯ ಅವರನ್ನು ಬಂಧಿಸಿರುವ ಪೊಲೀಸರು, ಅವರ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಸೈಬರ್ ಪೊಲೀಸರು ತಾಂತ್ರಿಕ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ. ಅವರು ಏಕೆ ಬೆದರಿಕೆ ಹಾಕಿದರು ಎಂಬುದನ್ನು ತಿಳಿಯಲು ನಾವು ಬಾರ್ವೆ ಅವರನ್ನು ಪ್ರಶ್ನಿಸುತ್ತೇವೆ” ಎಂದು ಹಿರಿಯ ಅಪರಾಧ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಸತ್ ಉದ್ಘಾಟನೆಯಲ್ಲಿ ನಡೆಸಿದ ಆಚರಣೆಗಳು ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿವೆ: ಶರದ್ ಪವಾರ್ ಆಕ್ರೋಶ

ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ತನ್ನ ತಂದೆಗೆ ಕೊಲೆ ಬೆದರಿಕೆ ಇದೆ ಎಂದು ಆರೋಪಿಸಿದ್ದಾರೆ. ಎನ್‌ಸಿಪಿ ನಾಯಕರ ನಿಯೋಗದೊಂದಿಗೆ ಸುಪ್ರಿಯಾ ಸುಳೆ ಅವರು ಶುಕ್ರವಾರ ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರನ್ನು ಭೇಟಿ ಮಾಡಿದರು. ಎಲ್‌ಟಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 506 (2) ಮತ್ತು 504 ಮತ್ತು 153 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣವನ್ನು ಮುಂಬೈ ಅಪರಾಧ ವಿಭಾಗದ ಘಟಕ 2ಕ್ಕೆ ವರ್ಗಾಯಿಸಲಾಗಿದೆ.

ಟ್ವಿಟ್ಟರ್ ಹ್ಯಾಂಡಲ್ ‘@SbhBJP’ ನಿಂದ ಸೌರಭ್ ಪಿಂಪಾಲ್ಕರ್ ಪ್ರೊಫೈಲ್ ಹೆಸರಿನಲ್ಲಿ ಪವಾರ್ ವಿರುದ್ಧ ಮತ್ತೊಂದು ಅವಹೇಳನಕಾರಿ ಹೇಳಿಕೆಯನ್ನು ಪೋಸ್ಟ್ ಮಾಡಲಾಗಿದೆ.

ಸೈಬರ್ ಪೊಲೀಸರೊಂದಿಗೆ ಹಲವು ಪೊಲೀಸ್ ತಂಡಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅಧಿಕಾರಿ ತಿಳಿಸಿದರು.

ಈ ಬಗ್ಗೆ ಪವಾರ್ ಮಾತನಾಡಿದ ಪವಾರ್ ಅವರು, ನಾನು ಬೆದರಿಕೆಯ ಬಗ್ಗೆ ಚಿಂತಿಸುವುದಿಲ್ಲ ಎಂದಿದ್ದಾರೆ. ಮಹಾರಾಷ್ಟ್ರದ ಏಕನಾಥ್ ಶಿಂಧೆ-ದೇವೇಂದ್ರ ಫಡ್ನವಿಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಹೊಣೆ ಹೊತ್ತಿರುವವರು ತಮ್ಮ ಕರ್ತವ್ಯವನ್ನು ನಿರ್ಲಕ್ಷಿಸುವಂತಿಲ್ಲ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...