Homeಕರ್ನಾಟಕಬರಹಗಾರರಿಗೆ ಕೊಲೆ ಬೆದರಿಕೆ: ತನಿಖೆಗೆ ಎಸ್‌ಪಿ ಶ್ರೇಣಿಯ ಅಧಿಕಾರಿ ನೇಮಕ

ಬರಹಗಾರರಿಗೆ ಕೊಲೆ ಬೆದರಿಕೆ: ತನಿಖೆಗೆ ಎಸ್‌ಪಿ ಶ್ರೇಣಿಯ ಅಧಿಕಾರಿ ನೇಮಕ

- Advertisement -
- Advertisement -

ಏಪ್ರಿಲ್‌‌ ತಿಂಗಳಿನಿಂದಲೂ ಏಳು ಬರಹಗಾರರು ಸ್ವೀಕರಿಸಿರುವ ಕನಿಷ್ಠ 19 ಕೊಲೆ ಬೆದರಿಕೆ ಪತ್ರಗಳ ತನಿಖೆಗೆ ಪೊಲೀಸ್ ಅಧೀಕ್ಷಕ (ಎಸ್‌ಪಿ) ಶ್ರೇಣಿಯ ಅಧಿಕಾರಿಯನ್ನು ಕರ್ನಾಟಕ ಪೊಲೀಸ್‌ ಇಲಾಖೆ ನೇಮಿಸಿದೆ.

ಕೊಲೆ ಬೆದರಿಕೆಗಳು ಬಂದರೂ ಎಫ್‌ಐಆರ್‌ಗಳು ದಾಖಲಾಗಿಲ್ಲ, ಪೋಲೀಸರ ನಿಷ್ಕ್ರಿಯರಾಗಿದ್ದಾರೆ ಎಂದು ಲೇಖಕರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ.

“ಒಬ್ಬನೇ ವ್ಯಕ್ತಿ ಎಲ್ಲಾ ಬರಹಗಾರರಿಗೆ ಈ ಬೆದರಿಕೆ ಪತ್ರಗಳನ್ನು ಬರೆಯುತ್ತಿರುವುದು ಸ್ಪಷ್ಟವಾಗಿದೆ. ಕೆಲವು ಲೋಪಗಳಾಗಿವೆ, ಆದರೂ ತನಿಖೆಗಳು ಈಗಾಗಲೇ ನಡೆಯುತ್ತಿವೆ. ಈಗ ತನಿಖೆಯನ್ನು ಹೆಚ್ಚು ಸಂಘಟಿತ ರೀತಿಯಲ್ಲಿ ಮಾಡಲಾಗುತ್ತದೆ ” ಎಂದು ಹೆಸರು ಹೇಳಲಿಚ್ಛಿಸದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ‘ದಿ ಹಿಂದೂ’ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಸಹಿಷ್ಣು ಹಿಂದೂ’ಎಂದು ಸಹಿ ಹಾಕಿರುವ ವ್ಯಕ್ತಿಯು ಏಳು ಬರಹಗಾರರಿಗೆ 19 ಕೊಲೆ ಬೆದರಿಕೆ ಪತ್ರಗಳನ್ನು ಬರೆದಿದ್ದಾನೆ. ಈ ಬರಹಗಾರರ ನಿಲುವುಗಳನ್ನು “ಹಿಂದೂ ವಿರೋಧಿ” ಎಂದು ಕರೆದಿದ್ದಾನೆ. ಸಾಹಿತಿ ಕುಂ.ವೀರಭದ್ರಪ್ಪ ಅವರಿಗೆ ಆರು ಪತ್ರ, ಚಿಂತಕ ಬಂಜಗೆರೆ ಜಯಪ್ರಕಾಶ್ ಅವರಿಗೆ ಐದು ಪತ್ರ ಬಂದಿವೆ.  ಹಿಜಾಬ್ ವಿವಾದದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬಹಿರಂಗ ಪತ್ರ ಬರೆದ 61 ಬರಹಗಾರರನ್ನು ಪಟ್ಟಿ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಮತ್ತು ಬಿ.ಕೆ. ಹರಿಪ್ರಸಾದ್ ಅವರನ್ನೂ ಟಾರ್ಗೆಟ್ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿಫಲರಾಗಿದ್ದಾರೆ. ರಾಜ್ಯ ಪೊಲೀಸರು ಎಫ್‌ಐಆರ್‌ಗಳನ್ನು ದಾಖಲಿಸುವಲ್ಲಿ ಎಡವಿದ್ದಾರೆ ಎಂದು ಆರೋಪಗಳು ಬಂದಿದ್ದವು. ಲೇಖಕಿ ವಸುಂಧರಾ ಭೂಪತಿ ಅವರು ಬುಧವಾರ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡು ಬಸವೇಶ್ವರನಗರದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಜುಲೈ 2ರಂದು ತಮ್ಮ ನಿವಾಸಕ್ಕೆ ಕೊಲೆ ಬೆದರಿಕೆ ಪತ್ರ ಬಂದಿದ್ದ ಕುರಿತು ಎಂ.ಎಸ್.ಭೂಪತಿ ಅವರು ಬಸವೇಶ್ವರನಗರ ಪೊಲೀಸರಿಗೆ ದೂರು ನೀಡಿದ್ದರು, ಆದರೆ ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದರು.

“ಬುಧವಾರ ಬೆಳಿಗ್ಗೆ, ನನ್ನ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ನನ್ನ ಫೋನ್‌ಗೆ ಸಂದೇಶ ಬಂದಿತು. ಸ್ವಲ್ಪ ಸಮಯದ ನಂತರ, ಇಬ್ಬರು ಪೊಲೀಸರು ನನ್ನ ಮನೆಗೆ ಬಂದು ನನ್ನ ನಿವಾಸದಲ್ಲಿ ಪೊಲೀಸ್ ಬೀಟ್ ಪಾಯಿಂಟ್ ಹಾಕಿದರು. ಭದ್ರತೆಯ ಭರವಸೆ ನೀಡಿದರು” ಎಂದು ಅವರು ತಿಳಿಸಿದ್ದಾರೆ.

‘ಪ್ರಕರಣ ದಾಖಲಿಸಲಾಗಿದೆ’

ಅನಾಮಧೇಯ ಪತ್ರ ಬರೆದಿರುವ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 507 (ಅನಾಮಧೇಯ ಸಂವಹನದ ಮೂಲಕ ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಾಜಿ ಸಚಿವರಾದ ಬಿ.ಟಿ.ಲಲಿತಾ ನಾಯಕ್‌ ಅವರ ದೂರು ಆಧರಿಸಿ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎರಡು ಎಫ್‌ಐಆರ್ ದಾಖಲಾಗಿದೆ. ಆದಾಗ್ಯೂ, ರಾಜ್ಯದ ಇತರ ಬರಹಗಾರರಿಗೆ ಇದೇ ರೀತಿಯ ಬೆದರಿಕೆ ಪತ್ರಗಳು ಬಂದಿರುವ ಕುರಿತು ಯಾವುದೇ ಎಫ್‌ಐಆರ್‌ಗಳು ದಾಖಲಾಗಿಲ್ಲ.

ಇದನ್ನೂ ಓದಿರಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

“ಒಬ್ಬನೇ ವ್ಯಕ್ತಿ ಎಲ್ಲಾ ಪತ್ರಗಳನ್ನು ಬರೆಯುತ್ತಿರುವುದು ಸ್ಪಷ್ಟವಾಗಿದೆ. ತನಿಖೆಯನ್ನು ಚುರುಕುಗೊಳಿಸಲಾಗಿದ್ದು, ಶೀಘ್ರವೇ ಆರೋಪಿಯನ್ನು ಬಂಧಿಸುವ ವಿಶ್ವಾಸವಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

ಸಿದ್ದರಾಮಯ್ಯ ಆಕ್ರೋಶ

ಕೊಲೆ ಬೆದರಿಕೆ ಬಂದಿರುವ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇತ್ತೀಚೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. “ಕುಂ. ವೀರಭದ್ರಪ್ಪನವರಿಗೆ 6 ಪತ್ರ, ಬಂಜಗೆರೆ ಜಯಪ್ರಕಾಶ್ ಅವರಿಗೆ 5 ಪತ್ರ, ಬಿ.ಟಿ.ಲಲಿತಾ ನಾಯಕ್, ಬಿ.ಎಲ್ ವೇಣು, ಚಂದ್ರಶೇಖರ್ ತಾಳ್ಯ ಅವರಿಗೆ ತಲಾ 2 ಪತ್ರ, ಎಸ್.ಜಿ ಸಿದ್ದರಾಮಯ್ಯ ಮತ್ತು ವಸುಂಧರ ಭೂಪತಿಯವರುಗಳಿಗೆ ಒಂದೊಂದು ಪತ್ರಗಳನ್ನು ಬರೆಯಲಾಗಿದೆ. ಇವರುಗಳೆಲ್ಲ ಪ್ರಜಾತಾಂತ್ರಿಕ ಮೌಲ್ಯಗಳನ್ನು, ಸಂವಿಧಾನದ ಆಶಯಗಳನ್ನು ರಕ್ಷಿಸುವ ಸಲುವಾಗಿ ಹೋರಾಡುತ್ತಿದ್ದಾರೆ. ಹಾಗಾಗಿ ಹಲವು ಬಾರಿ ಆಡಳಿತಾರೂಢ ಸರ್ಕಾರದ ವಿರುದ್ಧ ಮಾತನಾಡಲೇಬೇಕಾಗುತ್ತದೆ. ಇದಿಷ್ಟನ್ನೂ ಸಹಿಸದ ಕಿಡಿಗೇಡಿಗಳು ಜೀವ ಬೆದರಿಕೆಗಳನ್ನು ಒಡ್ಡುವ ಹೀನ ಕೆಲಸ ಮಾಡುತ್ತಿದ್ದಾರೆ. ಅನೇಕ ಸಾರಿ ನನ್ನ ಸೋಷಿಯಲ್ ಮೀಡಿಯಾ ಖಾತೆಗಳಿಗೂ ಬಂದು ಹೀನಮನೋವೃತ್ತಿ ತೋರುವವರೂ ಇದ್ದಾರೆ” ಎಂದು ತಿಳಿಸಿದ್ದರು.

“ನನಗೂ ಹಲವು ಬೆದರಿಕೆ ಪತ್ರಗಳು ಬಂದಿವೆ. ಸ್ವತಃ ಡಿಜಿಯವರಿಗೆ ನಾನು ಈ ಕುರಿತು ಮಾತನಾಡಿದ್ದೆ. ಇತ್ತೀಚೆಗೆ ಟಿವಿಯೊಂದರಲ್ಲಿ ವೀರೇಶ್ ಎಂಬಾತ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ನನಗೆ ಗುಂಡು ಹಾರಿಸಬೇಕೆಂದು ಹೇಳಿಕೆ ಕೊಟ್ಟಿದ್ದ. ಈ ಬೆದರಿಕೆಯ ಹೇಳಿಕೆ ಹಾಗೂ ಪತ್ರಗಳ ಕುರಿತು ದೂರು ದಾಖಲಿಸಲಾಗಿದೆ. ಆದರೂ ಇದುವರೆಗೆ ಸರ್ಕಾರ ಎಫ್‍ಐಆರ್ ದಾಖಲಿಸಿಲ್ಲ. ಇದೇ ವಿಷಯಕ್ಕೆ ಹಲವು ಬಾರಿ ದೂರು ದಾಖಲಿಸಿದರೂ ಎಫ್‍ಐಆರ್ ಮಾಡಿ ತನಿಖೆ ನಡೆಸದಿರುವುದು ಸರ್ಕಾರದ ಬೇಜವಾಬ್ಧಾರಿಯುತವಾದ ನಡವಳಿಕೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಗರ ನಕ್ಸಲರಿಗೆಲ್ಲಾ ಸಾರ್ವಜನಿಕರ ಹಣದಲ್ಲಿ ಭದ್ರತೆ ಯಾಕೆ,ಭದ್ರತೆಯ ವೆಚ್ಚವನ್ನ ಈ ದ್ರೋಹಿಗಳ ಮೂಲಕವೇ ವಸೂಲಿ ಮಾಡಬೇಕಿದೆ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...