Homeಕರ್ನಾಟಕಬರಹಗಾರರಿಗೆ ಕೊಲೆ ಬೆದರಿಕೆ: ತನಿಖೆಗೆ ಎಸ್‌ಪಿ ಶ್ರೇಣಿಯ ಅಧಿಕಾರಿ ನೇಮಕ

ಬರಹಗಾರರಿಗೆ ಕೊಲೆ ಬೆದರಿಕೆ: ತನಿಖೆಗೆ ಎಸ್‌ಪಿ ಶ್ರೇಣಿಯ ಅಧಿಕಾರಿ ನೇಮಕ

- Advertisement -
- Advertisement -

ಏಪ್ರಿಲ್‌‌ ತಿಂಗಳಿನಿಂದಲೂ ಏಳು ಬರಹಗಾರರು ಸ್ವೀಕರಿಸಿರುವ ಕನಿಷ್ಠ 19 ಕೊಲೆ ಬೆದರಿಕೆ ಪತ್ರಗಳ ತನಿಖೆಗೆ ಪೊಲೀಸ್ ಅಧೀಕ್ಷಕ (ಎಸ್‌ಪಿ) ಶ್ರೇಣಿಯ ಅಧಿಕಾರಿಯನ್ನು ಕರ್ನಾಟಕ ಪೊಲೀಸ್‌ ಇಲಾಖೆ ನೇಮಿಸಿದೆ.

ಕೊಲೆ ಬೆದರಿಕೆಗಳು ಬಂದರೂ ಎಫ್‌ಐಆರ್‌ಗಳು ದಾಖಲಾಗಿಲ್ಲ, ಪೋಲೀಸರ ನಿಷ್ಕ್ರಿಯರಾಗಿದ್ದಾರೆ ಎಂದು ಲೇಖಕರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ.

“ಒಬ್ಬನೇ ವ್ಯಕ್ತಿ ಎಲ್ಲಾ ಬರಹಗಾರರಿಗೆ ಈ ಬೆದರಿಕೆ ಪತ್ರಗಳನ್ನು ಬರೆಯುತ್ತಿರುವುದು ಸ್ಪಷ್ಟವಾಗಿದೆ. ಕೆಲವು ಲೋಪಗಳಾಗಿವೆ, ಆದರೂ ತನಿಖೆಗಳು ಈಗಾಗಲೇ ನಡೆಯುತ್ತಿವೆ. ಈಗ ತನಿಖೆಯನ್ನು ಹೆಚ್ಚು ಸಂಘಟಿತ ರೀತಿಯಲ್ಲಿ ಮಾಡಲಾಗುತ್ತದೆ ” ಎಂದು ಹೆಸರು ಹೇಳಲಿಚ್ಛಿಸದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ‘ದಿ ಹಿಂದೂ’ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಸಹಿಷ್ಣು ಹಿಂದೂ’ಎಂದು ಸಹಿ ಹಾಕಿರುವ ವ್ಯಕ್ತಿಯು ಏಳು ಬರಹಗಾರರಿಗೆ 19 ಕೊಲೆ ಬೆದರಿಕೆ ಪತ್ರಗಳನ್ನು ಬರೆದಿದ್ದಾನೆ. ಈ ಬರಹಗಾರರ ನಿಲುವುಗಳನ್ನು “ಹಿಂದೂ ವಿರೋಧಿ” ಎಂದು ಕರೆದಿದ್ದಾನೆ. ಸಾಹಿತಿ ಕುಂ.ವೀರಭದ್ರಪ್ಪ ಅವರಿಗೆ ಆರು ಪತ್ರ, ಚಿಂತಕ ಬಂಜಗೆರೆ ಜಯಪ್ರಕಾಶ್ ಅವರಿಗೆ ಐದು ಪತ್ರ ಬಂದಿವೆ.  ಹಿಜಾಬ್ ವಿವಾದದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬಹಿರಂಗ ಪತ್ರ ಬರೆದ 61 ಬರಹಗಾರರನ್ನು ಪಟ್ಟಿ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಮತ್ತು ಬಿ.ಕೆ. ಹರಿಪ್ರಸಾದ್ ಅವರನ್ನೂ ಟಾರ್ಗೆಟ್ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿಫಲರಾಗಿದ್ದಾರೆ. ರಾಜ್ಯ ಪೊಲೀಸರು ಎಫ್‌ಐಆರ್‌ಗಳನ್ನು ದಾಖಲಿಸುವಲ್ಲಿ ಎಡವಿದ್ದಾರೆ ಎಂದು ಆರೋಪಗಳು ಬಂದಿದ್ದವು. ಲೇಖಕಿ ವಸುಂಧರಾ ಭೂಪತಿ ಅವರು ಬುಧವಾರ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡು ಬಸವೇಶ್ವರನಗರದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಜುಲೈ 2ರಂದು ತಮ್ಮ ನಿವಾಸಕ್ಕೆ ಕೊಲೆ ಬೆದರಿಕೆ ಪತ್ರ ಬಂದಿದ್ದ ಕುರಿತು ಎಂ.ಎಸ್.ಭೂಪತಿ ಅವರು ಬಸವೇಶ್ವರನಗರ ಪೊಲೀಸರಿಗೆ ದೂರು ನೀಡಿದ್ದರು, ಆದರೆ ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದರು.

“ಬುಧವಾರ ಬೆಳಿಗ್ಗೆ, ನನ್ನ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ನನ್ನ ಫೋನ್‌ಗೆ ಸಂದೇಶ ಬಂದಿತು. ಸ್ವಲ್ಪ ಸಮಯದ ನಂತರ, ಇಬ್ಬರು ಪೊಲೀಸರು ನನ್ನ ಮನೆಗೆ ಬಂದು ನನ್ನ ನಿವಾಸದಲ್ಲಿ ಪೊಲೀಸ್ ಬೀಟ್ ಪಾಯಿಂಟ್ ಹಾಕಿದರು. ಭದ್ರತೆಯ ಭರವಸೆ ನೀಡಿದರು” ಎಂದು ಅವರು ತಿಳಿಸಿದ್ದಾರೆ.

‘ಪ್ರಕರಣ ದಾಖಲಿಸಲಾಗಿದೆ’

ಅನಾಮಧೇಯ ಪತ್ರ ಬರೆದಿರುವ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 507 (ಅನಾಮಧೇಯ ಸಂವಹನದ ಮೂಲಕ ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಾಜಿ ಸಚಿವರಾದ ಬಿ.ಟಿ.ಲಲಿತಾ ನಾಯಕ್‌ ಅವರ ದೂರು ಆಧರಿಸಿ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎರಡು ಎಫ್‌ಐಆರ್ ದಾಖಲಾಗಿದೆ. ಆದಾಗ್ಯೂ, ರಾಜ್ಯದ ಇತರ ಬರಹಗಾರರಿಗೆ ಇದೇ ರೀತಿಯ ಬೆದರಿಕೆ ಪತ್ರಗಳು ಬಂದಿರುವ ಕುರಿತು ಯಾವುದೇ ಎಫ್‌ಐಆರ್‌ಗಳು ದಾಖಲಾಗಿಲ್ಲ.

ಇದನ್ನೂ ಓದಿರಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

“ಒಬ್ಬನೇ ವ್ಯಕ್ತಿ ಎಲ್ಲಾ ಪತ್ರಗಳನ್ನು ಬರೆಯುತ್ತಿರುವುದು ಸ್ಪಷ್ಟವಾಗಿದೆ. ತನಿಖೆಯನ್ನು ಚುರುಕುಗೊಳಿಸಲಾಗಿದ್ದು, ಶೀಘ್ರವೇ ಆರೋಪಿಯನ್ನು ಬಂಧಿಸುವ ವಿಶ್ವಾಸವಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

ಸಿದ್ದರಾಮಯ್ಯ ಆಕ್ರೋಶ

ಕೊಲೆ ಬೆದರಿಕೆ ಬಂದಿರುವ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇತ್ತೀಚೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. “ಕುಂ. ವೀರಭದ್ರಪ್ಪನವರಿಗೆ 6 ಪತ್ರ, ಬಂಜಗೆರೆ ಜಯಪ್ರಕಾಶ್ ಅವರಿಗೆ 5 ಪತ್ರ, ಬಿ.ಟಿ.ಲಲಿತಾ ನಾಯಕ್, ಬಿ.ಎಲ್ ವೇಣು, ಚಂದ್ರಶೇಖರ್ ತಾಳ್ಯ ಅವರಿಗೆ ತಲಾ 2 ಪತ್ರ, ಎಸ್.ಜಿ ಸಿದ್ದರಾಮಯ್ಯ ಮತ್ತು ವಸುಂಧರ ಭೂಪತಿಯವರುಗಳಿಗೆ ಒಂದೊಂದು ಪತ್ರಗಳನ್ನು ಬರೆಯಲಾಗಿದೆ. ಇವರುಗಳೆಲ್ಲ ಪ್ರಜಾತಾಂತ್ರಿಕ ಮೌಲ್ಯಗಳನ್ನು, ಸಂವಿಧಾನದ ಆಶಯಗಳನ್ನು ರಕ್ಷಿಸುವ ಸಲುವಾಗಿ ಹೋರಾಡುತ್ತಿದ್ದಾರೆ. ಹಾಗಾಗಿ ಹಲವು ಬಾರಿ ಆಡಳಿತಾರೂಢ ಸರ್ಕಾರದ ವಿರುದ್ಧ ಮಾತನಾಡಲೇಬೇಕಾಗುತ್ತದೆ. ಇದಿಷ್ಟನ್ನೂ ಸಹಿಸದ ಕಿಡಿಗೇಡಿಗಳು ಜೀವ ಬೆದರಿಕೆಗಳನ್ನು ಒಡ್ಡುವ ಹೀನ ಕೆಲಸ ಮಾಡುತ್ತಿದ್ದಾರೆ. ಅನೇಕ ಸಾರಿ ನನ್ನ ಸೋಷಿಯಲ್ ಮೀಡಿಯಾ ಖಾತೆಗಳಿಗೂ ಬಂದು ಹೀನಮನೋವೃತ್ತಿ ತೋರುವವರೂ ಇದ್ದಾರೆ” ಎಂದು ತಿಳಿಸಿದ್ದರು.

“ನನಗೂ ಹಲವು ಬೆದರಿಕೆ ಪತ್ರಗಳು ಬಂದಿವೆ. ಸ್ವತಃ ಡಿಜಿಯವರಿಗೆ ನಾನು ಈ ಕುರಿತು ಮಾತನಾಡಿದ್ದೆ. ಇತ್ತೀಚೆಗೆ ಟಿವಿಯೊಂದರಲ್ಲಿ ವೀರೇಶ್ ಎಂಬಾತ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ನನಗೆ ಗುಂಡು ಹಾರಿಸಬೇಕೆಂದು ಹೇಳಿಕೆ ಕೊಟ್ಟಿದ್ದ. ಈ ಬೆದರಿಕೆಯ ಹೇಳಿಕೆ ಹಾಗೂ ಪತ್ರಗಳ ಕುರಿತು ದೂರು ದಾಖಲಿಸಲಾಗಿದೆ. ಆದರೂ ಇದುವರೆಗೆ ಸರ್ಕಾರ ಎಫ್‍ಐಆರ್ ದಾಖಲಿಸಿಲ್ಲ. ಇದೇ ವಿಷಯಕ್ಕೆ ಹಲವು ಬಾರಿ ದೂರು ದಾಖಲಿಸಿದರೂ ಎಫ್‍ಐಆರ್ ಮಾಡಿ ತನಿಖೆ ನಡೆಸದಿರುವುದು ಸರ್ಕಾರದ ಬೇಜವಾಬ್ಧಾರಿಯುತವಾದ ನಡವಳಿಕೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಗರ ನಕ್ಸಲರಿಗೆಲ್ಲಾ ಸಾರ್ವಜನಿಕರ ಹಣದಲ್ಲಿ ಭದ್ರತೆ ಯಾಕೆ,ಭದ್ರತೆಯ ವೆಚ್ಚವನ್ನ ಈ ದ್ರೋಹಿಗಳ ಮೂಲಕವೇ ವಸೂಲಿ ಮಾಡಬೇಕಿದೆ

LEAVE A REPLY

Please enter your comment!
Please enter your name here

- Advertisment -

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...