Homeಕರೋನಾ ತಲ್ಲಣದೇಶದಲ್ಲಿ ಕೊರೊನಾದಿಂದ ಸುಮಾರು 4.9 ದಶಲಕ್ಷದಷ್ಟು ಸಾವುಗಳು: ವರದಿ

ದೇಶದಲ್ಲಿ ಕೊರೊನಾದಿಂದ ಸುಮಾರು 4.9 ದಶಲಕ್ಷದಷ್ಟು ಸಾವುಗಳು: ವರದಿ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ದೇಶದಲ್ಲಿ 4.9 ದಶಲಕ್ಷದಷ್ಟು ಸಾವುಗಳು ಸಂಭವಿಸಿರಬಹುದು ಎಂದು ಹೊಸ ಅಧ್ಯಯನವೊಂದು ವರದಿ ಮಾಡಿದೆ. ಈ ವರದಿಯು ಸರ್ಕಾರದ ಅಧಿಕೃತ ಅಂಕಿ-ಅಂಶಗಳ ಪ್ರಮಾಣಕ್ಕಿಂತಲೂ ಲಕ್ಷಾಂತರ ಜನರು ವೈರಸ್‌ನಿಂದ ಸಾವನ್ನಪ್ಪಿರಬಹುದು ಎಂಬ ಊಹೆಗಳಿಗೆ ಹೆಚ್ಚಿನ ಪುರಾವೆಗಳನ್ನು ಒದಗಿಸಿದೆ.

ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್ ಅವರು ಸಹ-ಲೇಖಕರಾಗಿರುವ, ವಾಷಿಂಗ್ಟನ್ ಮೂಲದ ಸೆಂಟರ್ ಫಾರ್ ಗ್ಲೋಬಲ್ ಡೆವಲಪ್‌ಮೆಂಟ್‌ನ ವರದಿಯಲ್ಲಿ ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಈ ವರ್ಷದ ಜೂನ್ ವರೆಗೆ ದಾಖಲಾಗಿರುವ ಎಲ್ಲಾ ರೀತಿಯ ಸಾವುಗಳ ಪ್ರಮಾಣ ದಾಖಲು ಮಾಡಲಾಗಿದೆ.

ಸರ್ಕಾರದ ಅಧಿಕೃತ ಅಂಕಿ-ಅಂಶದ ಪ್ರಕಾರ 4,14,000 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಇದರ ಪ್ರಕಾರ ಯುನೈಟೆಡ್ ಸ್ಟೇಟ್ಸ್ ಮತ್ತು ಬ್ರೆಜಿಲ್ ನಂತರ ವಿಶ್ವದಲ್ಲಿ ಅತಿ ಹೆಚ್ಚು ಸಾವುಗಳನ್ನು ದಾಖಲಿಸಿದ ಮೂರನೇ  ದೇಶ ಭಾರತವಾಗಿದೆ. ಆದರೆ ಈ ಅಧ್ಯಯನವು ದೇಶಾದ್ಯಂತದ ಮಾರಣಾಂತಿಕ ಕಾಯಿಲೆಗೆ ಸಾವನ್ನಪ್ಪಿದವರ ಬಗ್ಗೆ ತಜ್ಞರಿಂದ ಹೆಚ್ಚು ಮಾಹಿತಿಯನ್ನು ಕಲೆ ಹಾಕಿದೆ.

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕೊರೊನಾ ಸೋಂಕಿನ ಏರಿಕೆ ಹೆಚ್ಚಾಗಿ, ಸಾಂಕ್ರಾಮಿಕ ರೋಗ ಮತ್ತು ಅಪಾಯಕಾರಿ ಡೆಲ್ಟಾ ಪ್ಲಸ್ ರೂಪಾಂತರಿಯಿಂದ ಮೇ ತಿಂಗಳಲ್ಲಿ ಕನಿಷ್ಠ 1,70,000 ಜನರು ಬಲಿಯಾಗಿದ್ದಾರೆ ಎಂದು ಅಧಿಕೃತ ದತ್ತಾಂಶಗಳು ದೃಢಪಡಿಸಿವೆ.

ಇದನ್ನೂ ಓದಿ: ಟೋಕಿಯೋ ಒಲಂಪಿಕ್ಸ್: ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ

“ದುಃಖಕರ ಸಂಗತಿಯೆಂದರೆ, ಸಾವಿರಕ್ಕಿಂತಲೂ ಲಕ್ಷಗಳಲ್ಲಿ ಹಲವಾರು ಜನರು ಸಾವನ್ನಪ್ಪಿರಬಹುದು” ಎಂದು ವರದಿ ಹೇಳಿದೆ. ಸಾಂಕ್ರಾಮಿಕ ಸಮಯದಲ್ಲಿ 3.4 ಮಿಲಿಯನ್ ಮತ್ತು 4.9 ಮಿಲಿಯನ್ ಹೆಚ್ಚುವರಿ ಸಾವುಗಳು ಸಂಭವಿಸಿವೆ ಎಂದು ಅಂದಾಜಿಸಲಾಗಿದೆ. ಆದರೆ, ಎಲ್ಲಾ ಹೆಚ್ಚುವರಿ ಸಾವುಗಳಿಗೂ ಕೊರೊನಾ ರೋಗವೇ ಕಾರಣ ಎಂದು ವರದಿಯಲ್ಲಿ ಹೇಳಲಾಗಿಲ್ಲ.

ಕೊರೊನಾದಿಂದ ಸಾವನ್ನಪ್ಪಿದವರ ನಿಜವಾದ ಸಂಖ್ಯೆಯನ್ನು ಅಳೆಯಲು ಈ ಸಮಯದಲ್ಲಿ ಉಂಟಾಗಿರುವ ಹೆಚ್ಚುವರಿ ಸಾವುಗಳು ಉತ್ತಮ ಮಾರ್ಗವೆಂದು ಹಲವು ತಜ್ಞರು ಹೇಳಿದ್ದಾರೆ.

ಭಾರತದಲ್ಲಿ ಕೊರೊನಾ ಪರಿಸ್ಥಿತಿಯು ಅತೀ ಕೆಟ್ಟದಾಗಿದೆ ಮತ್ತು ಸಾವುಗಳು ಅಂದಾಜು 6,00,000 ಎಂದು ನ್ಯೂಯಾರ್ಕ್ ಟೈಮ್ಸ್ ಹೇಳಿದೆ. ಆದರೆ, ನ್ಯೂಯಾರ್ಕ್ ಟೈಮ್ಸ್ ಅಂಕಿಅಂಶಗಳನ್ನು ಒಕ್ಕೂಟ ಸರ್ಕಾರ ತಳ್ಳಿಹಾಕಿದೆ.

ಭಾರತದ ಜನಸಂಖ್ಯೆಯ ಮೂರನೇ ಎರಡರಷ್ಟು ಜನಸಂಖ್ಯೆಯು ಸುಮಾರು 1.4 ಶತಕೋಟಿ ಜನರು ಕೊರೊನಾ ಪರೀಕ್ಷೆಗೆ ಒಳಗಾಗದೆ ಮನೆಯಲ್ಲಿ ಅನೇಕ ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ತಜ್ಞರು ದೂಷಿಸಿದ್ದಾರೆ.

ಇತ್ತ, ಈ ವರ್ಷದ ಏಪ್ರಿಲ್ ಆರಂಭದಲ್ಲಿ ಅಪ್ಪಳಿಸಿದ ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಆಕ್ಸಿಜನ್ ಸಿಗದೇ ಜನರು ಒದ್ದಾಡುತ್ತಿರುವ, ಪ್ರಾಣ ಬಿಟ್ಟ ಸಾವಿರಾರು ಪ್ರಕರಣಗಳು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದವು. ಆದರೆ ಆಕ್ಸಿಜನ್ ಕೊರತೆಯಿಂದಾದ ಸಾವುಗಳ ಯಾವುದೇ ವರದಿಯನ್ನು ರಾಜ್ಯಗಳು ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ವಾದಿಸಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...