Homeಕರೋನಾ ತಲ್ಲಣಸಾವು, ಉದ್ಯೋಗ ನಷ್ಟ, ಆತಂಕ: ಖಿನ್ನತೆ ಶಮನಕಾರಿ ಔಷಧಿಗಳ ಮಾರಾಟ ಶೇ. 23 ರಷ್ಟು ಏರಿಕೆ

ಸಾವು, ಉದ್ಯೋಗ ನಷ್ಟ, ಆತಂಕ: ಖಿನ್ನತೆ ಶಮನಕಾರಿ ಔಷಧಿಗಳ ಮಾರಾಟ ಶೇ. 23 ರಷ್ಟು ಏರಿಕೆ

- Advertisement -
- Advertisement -

ಸಾಂಕ್ರಾಮಿಕ ಪೂರ್ವದ ದಿನಗಳಿಗೆ ಹೋಲಿಸಿದರೆ ಈಗ ಹೆಚ್ಚಿನ ಜನರು ತಮ್ಮನ್ನು ಸಂಪರ್ಕಿಸುತ್ತಿದ್ದಾರೆ ಎಂದು ಮಾನಸಿಕ ಆರೋಗ್ಯ ತಜ್ಞರು ಮತ್ತು ಮನೋವೈದ್ಯರು ಹೇಳುತ್ತಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಅಲ್ಲದೆ ಖಿನ್ನತೆ-ಶಮನಕಾರಿ ಔಷಧಿಗಳ ಮಾರಾಟವು ಕಳೆದ ಒಂದು ವರ್ಷದಲ್ಲಿ ಸುಮಾರು 23 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಫಾರ್ಮಾ ಉದ್ಯಮವು ಅಂಕಿಅಂಶಗಳನ್ನು ನೀಡಿದೆ.

ಭಾರತದಲ್ಲಿ 9 ಲಕ್ಷಕ್ಕೂ ಹೆಚ್ಚು ಔಷಧಿಕಾರರನ್ನು ಪ್ರತಿನಿಧಿಸುವ ಆಲ್ ಇಂಡಿಯನ್ ಒರಿಜಿನ್ ಕೆಮಿಸ್ಟ್ & ಡಿಸ್ಟ್ರಿಬ್ಯೂಟರ್ಸ್ (ಎಐಒಸಿಡಿ-ಎಡಬ್ಲ್ಯೂಎಸಿಎಸ್) ಪ್ರಕಾರ, ಭಾರತೀಯ ಮಾರುಕಟ್ಟೆಯಲ್ಲಿ ಅಗ್ರ ಐದು ಖಿನ್ನತೆ-ನಿರೋಧಕ ಔಷಧಿಗಳ ಮಾರಾಟವು 2020ರಲ್ಲಿ 177 ಕೋಟಿ ರೂ. ಇದ್ದುದು ಏಪ್ರಿಲ್ 2021 ರಲ್ಲಿ 218 ಕೋಟಿ ರೂ.ಗೆ ಏರಿತು. ಇದು ಶೇಕಡಾ 23 ರಷ್ಟು ಏರಿಕೆಯಾಗಿದೆ. 2019 ರ ಏಪ್ರಿಲ್‌ನಲ್ಲಿ ಈ ಔಷಧಿಗಳ ಮಾರಾಟವು 186 ಕೋಟಿ ರೂ. ಮೌಲ್ಯದಾಗಿತ್ತು. ಇದರರ್ಥ ಏಪ್ರಿಲ್ 2019 ರಿಂದ 2020 ರ ಏಪ್ರಿಲ್ ವರೆಗೆ ಮಾರಾಟದಲ್ಲಿ ಶೇಕಡಾ ಐದು ರಷ್ಟು ಕುಸಿತ ಕಂಡುಬಂದಿತ್ತು.

AIOCD-AWACS ನಿಂದ ಉಲ್ಲೇಖಿಸಲ್ಪಡುವ ಔಷಧಿಗಳಲ್ಲಿ ಅಬಾಟ್‌ನ ಪ್ರೋಥಿಯಾಡೆನ್, ಫಿಜರ್‌ನ ಅಟಿವಾನ್, ಡಾ. ರೆಡ್ಡಿಸ್ ಲ್ಯಾಬ್‌ನ ಟ್ರಿಪ್ಟೋಮರ್ ಮತ್ತು ಸನ್ ಫಾರ್ಮಾದ ನೆಕ್ಸಿಟೊ ಮತ್ತು ನೆಕ್ಸಿಟೊ ಪ್ಲಸ್ ಸೇರಿವೆ.

ಸಾಂಕ್ರಾಮಿಕ ಪೂರ್ವದ ದಿನಗಳಿಗೆ ಹೋಲಿಸಿದರೆ ಹೆಚ್ಚಿನ ಜನರು ಈಗ ತಮ್ಮ ಜೊತೆ ಸಮಾಲೋಚಿಸುತ್ತಿದ್ದಾರೆ ಮತ್ತು ನಾವು ರೋಗಿಗಳನ್ನು ಮೂರು ಭಾಗಗಳಾಗಿ ವರ್ಗೀಕರಿಸುತ್ತಿದ್ದೇವೆ ಎಂದು ಮಾನಸಿಕ ಆರೋಗ್ಯ ತಜ್ಞರು ಮತ್ತು ಮನೋವೈದ್ಯರು ತಿಳಿಸಿದ್ದಾರೆ.

ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸಹಾಯ ಪಡೆಯುವ ಜನರ ಮೊದಲ ವರ್ಗವೆಂದರೆ ಕೋವಿಡ್‌ನಿಂದ ಚೇತರಿಸಿಕೊಂಡವರು ಮತ್ತು ಖಿನ್ನತೆ ಮತ್ತು ಆತಂಕದಂತಹ ಚೇತರಿಕೆಯ ನಂತರದ ತೊಂದರೆಗಳನ್ನು ತೋರಿಸುತ್ತಿರುವ ಗುಂಪು.

ಎರಡನೆಯ ಗುಂಪಿನಲ್ಲಿ ಸಾಮಾನ್ಯ ಸಾಂಕ್ರಾಮಿಕ ಸನ್ನಿವೇಶದಿಂದ ಪ್ರಭಾವಿತರಾದವರು ಅಥವಾ ಪ್ರೀತಿಪಾತ್ರರ ಸಾವು, ಉದ್ಯೋಗ ನಷ್ಟ ಅಥವಾ ಸಂಬಂಧಗಳಲ್ಲಿನ ತೊಂದರೆಗಳನ್ನು ಎದುರಿಸುತ್ತಿರುವ ಜನ.

ಸಾಂಕ್ರಾಮಿಕ ಸಮಯದಲ್ಲಿ ಮದ್ಯದ ಲಭ್ಯತೆ ಅಥವಾ ಕಡಿಮೆ ಲಭ್ಯತೆಯಿಂದಾಗಿ ಖಿನ್ನತೆಯ ಲಕ್ಷಣಗಳನ್ನು ಪ್ರದರ್ಶಿಸುವವರು ಮಾನಸಿಕ ಆರೋಗ್ಯ ರೋಗಿಗಳ ಮೂರನೇ ವರ್ಗವಾಗಿದೆ,

ದೇಶದ ಉನ್ನತ ಮಾನಸಿಕ ಆರೋಗ್ಯ ಸಂಸ್ಥೆಯಾದ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ-ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ವೈದ್ಯರು ಮೇ ಆರಂಭದ ವೇಳೆಗೆ ಸಹಾಯ ಪಡೆಯುವ ಜನರ ಸಂಖ್ಯೆಯಲ್ಲಿ ಇದೇ ರೀತಿಯ ಏರಿಕೆ ಕಂಡುಬಂದಿದೆ ಎಂದು ಒಪ್ಪಿಕೊಂಡರು.
ಮೇ ಮೊದಲ ವಾರದಲ್ಲಿ ಸಂಸ್ಥೆ ನಡೆಸುತ್ತಿರುವ ಸಹಾಯವಾಣಿಯಲ್ಲಿ ಸ್ವೀಕರಿಸಿದ ದೈನಂದಿನ ಯಾತನೆ ಕರೆಗಳಲ್ಲಿ 40 ಪ್ರತಿಶತದಷ್ಟು ಹೆಚ್ಚಳವನ್ನು ತೋರಿಸಿವೆ.

‘‘fear-o-demic’’

ಮಾನಸಿಕ ಆರೋಗ್ಯ ತಜ್ಞರು ದೇಶದ ಎರಡನೇ ಕೋವಿಡ್ ಅಲೆಯು ‘‘fear-o-demic’’
ಗೆ ಕಾರಣವಾಗಿದೆ ಎಂದು ನಂಬುತ್ತಾರೆ. ಅಂದರೆ, ಜನರು ಕೋವಿಡ್‌ಗೆ ಸಾಯುವ ಅಥವಾ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುವ ಅಥವಾ ಉದ್ಯೋಗ ಕಳೆದುಕೊಳ್ಳುವ ಬಗ್ಗೆ ಚಿಂತಿತರಾಗಿದ್ದಾರೆ.

ಈ ಭಯವು ಜನರಲ್ಲಿ ಆತಂಕ ಮತ್ತು ಖಿನ್ನತೆಗೆ ಮತ್ತಷ್ಟು ಕಾರಣವಾಗಿದೆ. ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಇತರ ಪ್ರಮುಖ ಅಂಶಗಳು ಹಣಕಾಸಿನ ಬಿಕ್ಕಟ್ಟು, ಸಂಬಂಧದ ಸಮಸ್ಯೆಗಳು ಮತ್ತು ಲಾಕ್‌ಡೌನ್ ಕಾರಣಕ್ಕೆ ಹಲವಾರು ತಿಂಗಳುಗಳ ಕಾಲ ಮನೆಯೊಳಗೆ ಇರುವಂತೆ ಆಗುವುದು….

ಹೀಗೆ ಖಿನ್ನತೆಯಿಂದ ನರಳುವವರು ಖಿನ್ನತೆ-ನಿರೋಧಕ ಶಮನಕಾರಿ ಔಷಧಿಗಳ ಮೊರೆ ಹೋಗುತ್ತಿದ್ದಾರೆ.


ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...