Homeಕರೋನಾ ತಲ್ಲಣಸಾವು, ಉದ್ಯೋಗ ನಷ್ಟ, ಆತಂಕ: ಖಿನ್ನತೆ ಶಮನಕಾರಿ ಔಷಧಿಗಳ ಮಾರಾಟ ಶೇ. 23 ರಷ್ಟು ಏರಿಕೆ

ಸಾವು, ಉದ್ಯೋಗ ನಷ್ಟ, ಆತಂಕ: ಖಿನ್ನತೆ ಶಮನಕಾರಿ ಔಷಧಿಗಳ ಮಾರಾಟ ಶೇ. 23 ರಷ್ಟು ಏರಿಕೆ

- Advertisement -
- Advertisement -

ಸಾಂಕ್ರಾಮಿಕ ಪೂರ್ವದ ದಿನಗಳಿಗೆ ಹೋಲಿಸಿದರೆ ಈಗ ಹೆಚ್ಚಿನ ಜನರು ತಮ್ಮನ್ನು ಸಂಪರ್ಕಿಸುತ್ತಿದ್ದಾರೆ ಎಂದು ಮಾನಸಿಕ ಆರೋಗ್ಯ ತಜ್ಞರು ಮತ್ತು ಮನೋವೈದ್ಯರು ಹೇಳುತ್ತಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಅಲ್ಲದೆ ಖಿನ್ನತೆ-ಶಮನಕಾರಿ ಔಷಧಿಗಳ ಮಾರಾಟವು ಕಳೆದ ಒಂದು ವರ್ಷದಲ್ಲಿ ಸುಮಾರು 23 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಫಾರ್ಮಾ ಉದ್ಯಮವು ಅಂಕಿಅಂಶಗಳನ್ನು ನೀಡಿದೆ.

ಭಾರತದಲ್ಲಿ 9 ಲಕ್ಷಕ್ಕೂ ಹೆಚ್ಚು ಔಷಧಿಕಾರರನ್ನು ಪ್ರತಿನಿಧಿಸುವ ಆಲ್ ಇಂಡಿಯನ್ ಒರಿಜಿನ್ ಕೆಮಿಸ್ಟ್ & ಡಿಸ್ಟ್ರಿಬ್ಯೂಟರ್ಸ್ (ಎಐಒಸಿಡಿ-ಎಡಬ್ಲ್ಯೂಎಸಿಎಸ್) ಪ್ರಕಾರ, ಭಾರತೀಯ ಮಾರುಕಟ್ಟೆಯಲ್ಲಿ ಅಗ್ರ ಐದು ಖಿನ್ನತೆ-ನಿರೋಧಕ ಔಷಧಿಗಳ ಮಾರಾಟವು 2020ರಲ್ಲಿ 177 ಕೋಟಿ ರೂ. ಇದ್ದುದು ಏಪ್ರಿಲ್ 2021 ರಲ್ಲಿ 218 ಕೋಟಿ ರೂ.ಗೆ ಏರಿತು. ಇದು ಶೇಕಡಾ 23 ರಷ್ಟು ಏರಿಕೆಯಾಗಿದೆ. 2019 ರ ಏಪ್ರಿಲ್‌ನಲ್ಲಿ ಈ ಔಷಧಿಗಳ ಮಾರಾಟವು 186 ಕೋಟಿ ರೂ. ಮೌಲ್ಯದಾಗಿತ್ತು. ಇದರರ್ಥ ಏಪ್ರಿಲ್ 2019 ರಿಂದ 2020 ರ ಏಪ್ರಿಲ್ ವರೆಗೆ ಮಾರಾಟದಲ್ಲಿ ಶೇಕಡಾ ಐದು ರಷ್ಟು ಕುಸಿತ ಕಂಡುಬಂದಿತ್ತು.

AIOCD-AWACS ನಿಂದ ಉಲ್ಲೇಖಿಸಲ್ಪಡುವ ಔಷಧಿಗಳಲ್ಲಿ ಅಬಾಟ್‌ನ ಪ್ರೋಥಿಯಾಡೆನ್, ಫಿಜರ್‌ನ ಅಟಿವಾನ್, ಡಾ. ರೆಡ್ಡಿಸ್ ಲ್ಯಾಬ್‌ನ ಟ್ರಿಪ್ಟೋಮರ್ ಮತ್ತು ಸನ್ ಫಾರ್ಮಾದ ನೆಕ್ಸಿಟೊ ಮತ್ತು ನೆಕ್ಸಿಟೊ ಪ್ಲಸ್ ಸೇರಿವೆ.

ಸಾಂಕ್ರಾಮಿಕ ಪೂರ್ವದ ದಿನಗಳಿಗೆ ಹೋಲಿಸಿದರೆ ಹೆಚ್ಚಿನ ಜನರು ಈಗ ತಮ್ಮ ಜೊತೆ ಸಮಾಲೋಚಿಸುತ್ತಿದ್ದಾರೆ ಮತ್ತು ನಾವು ರೋಗಿಗಳನ್ನು ಮೂರು ಭಾಗಗಳಾಗಿ ವರ್ಗೀಕರಿಸುತ್ತಿದ್ದೇವೆ ಎಂದು ಮಾನಸಿಕ ಆರೋಗ್ಯ ತಜ್ಞರು ಮತ್ತು ಮನೋವೈದ್ಯರು ತಿಳಿಸಿದ್ದಾರೆ.

ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸಹಾಯ ಪಡೆಯುವ ಜನರ ಮೊದಲ ವರ್ಗವೆಂದರೆ ಕೋವಿಡ್‌ನಿಂದ ಚೇತರಿಸಿಕೊಂಡವರು ಮತ್ತು ಖಿನ್ನತೆ ಮತ್ತು ಆತಂಕದಂತಹ ಚೇತರಿಕೆಯ ನಂತರದ ತೊಂದರೆಗಳನ್ನು ತೋರಿಸುತ್ತಿರುವ ಗುಂಪು.

ಎರಡನೆಯ ಗುಂಪಿನಲ್ಲಿ ಸಾಮಾನ್ಯ ಸಾಂಕ್ರಾಮಿಕ ಸನ್ನಿವೇಶದಿಂದ ಪ್ರಭಾವಿತರಾದವರು ಅಥವಾ ಪ್ರೀತಿಪಾತ್ರರ ಸಾವು, ಉದ್ಯೋಗ ನಷ್ಟ ಅಥವಾ ಸಂಬಂಧಗಳಲ್ಲಿನ ತೊಂದರೆಗಳನ್ನು ಎದುರಿಸುತ್ತಿರುವ ಜನ.

ಸಾಂಕ್ರಾಮಿಕ ಸಮಯದಲ್ಲಿ ಮದ್ಯದ ಲಭ್ಯತೆ ಅಥವಾ ಕಡಿಮೆ ಲಭ್ಯತೆಯಿಂದಾಗಿ ಖಿನ್ನತೆಯ ಲಕ್ಷಣಗಳನ್ನು ಪ್ರದರ್ಶಿಸುವವರು ಮಾನಸಿಕ ಆರೋಗ್ಯ ರೋಗಿಗಳ ಮೂರನೇ ವರ್ಗವಾಗಿದೆ,

ದೇಶದ ಉನ್ನತ ಮಾನಸಿಕ ಆರೋಗ್ಯ ಸಂಸ್ಥೆಯಾದ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ-ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ವೈದ್ಯರು ಮೇ ಆರಂಭದ ವೇಳೆಗೆ ಸಹಾಯ ಪಡೆಯುವ ಜನರ ಸಂಖ್ಯೆಯಲ್ಲಿ ಇದೇ ರೀತಿಯ ಏರಿಕೆ ಕಂಡುಬಂದಿದೆ ಎಂದು ಒಪ್ಪಿಕೊಂಡರು.
ಮೇ ಮೊದಲ ವಾರದಲ್ಲಿ ಸಂಸ್ಥೆ ನಡೆಸುತ್ತಿರುವ ಸಹಾಯವಾಣಿಯಲ್ಲಿ ಸ್ವೀಕರಿಸಿದ ದೈನಂದಿನ ಯಾತನೆ ಕರೆಗಳಲ್ಲಿ 40 ಪ್ರತಿಶತದಷ್ಟು ಹೆಚ್ಚಳವನ್ನು ತೋರಿಸಿವೆ.

‘‘fear-o-demic’’

ಮಾನಸಿಕ ಆರೋಗ್ಯ ತಜ್ಞರು ದೇಶದ ಎರಡನೇ ಕೋವಿಡ್ ಅಲೆಯು ‘‘fear-o-demic’’
ಗೆ ಕಾರಣವಾಗಿದೆ ಎಂದು ನಂಬುತ್ತಾರೆ. ಅಂದರೆ, ಜನರು ಕೋವಿಡ್‌ಗೆ ಸಾಯುವ ಅಥವಾ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುವ ಅಥವಾ ಉದ್ಯೋಗ ಕಳೆದುಕೊಳ್ಳುವ ಬಗ್ಗೆ ಚಿಂತಿತರಾಗಿದ್ದಾರೆ.

ಈ ಭಯವು ಜನರಲ್ಲಿ ಆತಂಕ ಮತ್ತು ಖಿನ್ನತೆಗೆ ಮತ್ತಷ್ಟು ಕಾರಣವಾಗಿದೆ. ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಇತರ ಪ್ರಮುಖ ಅಂಶಗಳು ಹಣಕಾಸಿನ ಬಿಕ್ಕಟ್ಟು, ಸಂಬಂಧದ ಸಮಸ್ಯೆಗಳು ಮತ್ತು ಲಾಕ್‌ಡೌನ್ ಕಾರಣಕ್ಕೆ ಹಲವಾರು ತಿಂಗಳುಗಳ ಕಾಲ ಮನೆಯೊಳಗೆ ಇರುವಂತೆ ಆಗುವುದು….

ಹೀಗೆ ಖಿನ್ನತೆಯಿಂದ ನರಳುವವರು ಖಿನ್ನತೆ-ನಿರೋಧಕ ಶಮನಕಾರಿ ಔಷಧಿಗಳ ಮೊರೆ ಹೋಗುತ್ತಿದ್ದಾರೆ.


ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...