Homeಕರೋನಾ ತಲ್ಲಣಸಾವು, ಉದ್ಯೋಗ ನಷ್ಟ, ಆತಂಕ: ಖಿನ್ನತೆ ಶಮನಕಾರಿ ಔಷಧಿಗಳ ಮಾರಾಟ ಶೇ. 23 ರಷ್ಟು ಏರಿಕೆ

ಸಾವು, ಉದ್ಯೋಗ ನಷ್ಟ, ಆತಂಕ: ಖಿನ್ನತೆ ಶಮನಕಾರಿ ಔಷಧಿಗಳ ಮಾರಾಟ ಶೇ. 23 ರಷ್ಟು ಏರಿಕೆ

- Advertisement -
- Advertisement -

ಸಾಂಕ್ರಾಮಿಕ ಪೂರ್ವದ ದಿನಗಳಿಗೆ ಹೋಲಿಸಿದರೆ ಈಗ ಹೆಚ್ಚಿನ ಜನರು ತಮ್ಮನ್ನು ಸಂಪರ್ಕಿಸುತ್ತಿದ್ದಾರೆ ಎಂದು ಮಾನಸಿಕ ಆರೋಗ್ಯ ತಜ್ಞರು ಮತ್ತು ಮನೋವೈದ್ಯರು ಹೇಳುತ್ತಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಅಲ್ಲದೆ ಖಿನ್ನತೆ-ಶಮನಕಾರಿ ಔಷಧಿಗಳ ಮಾರಾಟವು ಕಳೆದ ಒಂದು ವರ್ಷದಲ್ಲಿ ಸುಮಾರು 23 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಫಾರ್ಮಾ ಉದ್ಯಮವು ಅಂಕಿಅಂಶಗಳನ್ನು ನೀಡಿದೆ.

ಭಾರತದಲ್ಲಿ 9 ಲಕ್ಷಕ್ಕೂ ಹೆಚ್ಚು ಔಷಧಿಕಾರರನ್ನು ಪ್ರತಿನಿಧಿಸುವ ಆಲ್ ಇಂಡಿಯನ್ ಒರಿಜಿನ್ ಕೆಮಿಸ್ಟ್ & ಡಿಸ್ಟ್ರಿಬ್ಯೂಟರ್ಸ್ (ಎಐಒಸಿಡಿ-ಎಡಬ್ಲ್ಯೂಎಸಿಎಸ್) ಪ್ರಕಾರ, ಭಾರತೀಯ ಮಾರುಕಟ್ಟೆಯಲ್ಲಿ ಅಗ್ರ ಐದು ಖಿನ್ನತೆ-ನಿರೋಧಕ ಔಷಧಿಗಳ ಮಾರಾಟವು 2020ರಲ್ಲಿ 177 ಕೋಟಿ ರೂ. ಇದ್ದುದು ಏಪ್ರಿಲ್ 2021 ರಲ್ಲಿ 218 ಕೋಟಿ ರೂ.ಗೆ ಏರಿತು. ಇದು ಶೇಕಡಾ 23 ರಷ್ಟು ಏರಿಕೆಯಾಗಿದೆ. 2019 ರ ಏಪ್ರಿಲ್‌ನಲ್ಲಿ ಈ ಔಷಧಿಗಳ ಮಾರಾಟವು 186 ಕೋಟಿ ರೂ. ಮೌಲ್ಯದಾಗಿತ್ತು. ಇದರರ್ಥ ಏಪ್ರಿಲ್ 2019 ರಿಂದ 2020 ರ ಏಪ್ರಿಲ್ ವರೆಗೆ ಮಾರಾಟದಲ್ಲಿ ಶೇಕಡಾ ಐದು ರಷ್ಟು ಕುಸಿತ ಕಂಡುಬಂದಿತ್ತು.

AIOCD-AWACS ನಿಂದ ಉಲ್ಲೇಖಿಸಲ್ಪಡುವ ಔಷಧಿಗಳಲ್ಲಿ ಅಬಾಟ್‌ನ ಪ್ರೋಥಿಯಾಡೆನ್, ಫಿಜರ್‌ನ ಅಟಿವಾನ್, ಡಾ. ರೆಡ್ಡಿಸ್ ಲ್ಯಾಬ್‌ನ ಟ್ರಿಪ್ಟೋಮರ್ ಮತ್ತು ಸನ್ ಫಾರ್ಮಾದ ನೆಕ್ಸಿಟೊ ಮತ್ತು ನೆಕ್ಸಿಟೊ ಪ್ಲಸ್ ಸೇರಿವೆ.

ಸಾಂಕ್ರಾಮಿಕ ಪೂರ್ವದ ದಿನಗಳಿಗೆ ಹೋಲಿಸಿದರೆ ಹೆಚ್ಚಿನ ಜನರು ಈಗ ತಮ್ಮ ಜೊತೆ ಸಮಾಲೋಚಿಸುತ್ತಿದ್ದಾರೆ ಮತ್ತು ನಾವು ರೋಗಿಗಳನ್ನು ಮೂರು ಭಾಗಗಳಾಗಿ ವರ್ಗೀಕರಿಸುತ್ತಿದ್ದೇವೆ ಎಂದು ಮಾನಸಿಕ ಆರೋಗ್ಯ ತಜ್ಞರು ಮತ್ತು ಮನೋವೈದ್ಯರು ತಿಳಿಸಿದ್ದಾರೆ.

ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸಹಾಯ ಪಡೆಯುವ ಜನರ ಮೊದಲ ವರ್ಗವೆಂದರೆ ಕೋವಿಡ್‌ನಿಂದ ಚೇತರಿಸಿಕೊಂಡವರು ಮತ್ತು ಖಿನ್ನತೆ ಮತ್ತು ಆತಂಕದಂತಹ ಚೇತರಿಕೆಯ ನಂತರದ ತೊಂದರೆಗಳನ್ನು ತೋರಿಸುತ್ತಿರುವ ಗುಂಪು.

ಎರಡನೆಯ ಗುಂಪಿನಲ್ಲಿ ಸಾಮಾನ್ಯ ಸಾಂಕ್ರಾಮಿಕ ಸನ್ನಿವೇಶದಿಂದ ಪ್ರಭಾವಿತರಾದವರು ಅಥವಾ ಪ್ರೀತಿಪಾತ್ರರ ಸಾವು, ಉದ್ಯೋಗ ನಷ್ಟ ಅಥವಾ ಸಂಬಂಧಗಳಲ್ಲಿನ ತೊಂದರೆಗಳನ್ನು ಎದುರಿಸುತ್ತಿರುವ ಜನ.

ಸಾಂಕ್ರಾಮಿಕ ಸಮಯದಲ್ಲಿ ಮದ್ಯದ ಲಭ್ಯತೆ ಅಥವಾ ಕಡಿಮೆ ಲಭ್ಯತೆಯಿಂದಾಗಿ ಖಿನ್ನತೆಯ ಲಕ್ಷಣಗಳನ್ನು ಪ್ರದರ್ಶಿಸುವವರು ಮಾನಸಿಕ ಆರೋಗ್ಯ ರೋಗಿಗಳ ಮೂರನೇ ವರ್ಗವಾಗಿದೆ,

ದೇಶದ ಉನ್ನತ ಮಾನಸಿಕ ಆರೋಗ್ಯ ಸಂಸ್ಥೆಯಾದ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ-ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ವೈದ್ಯರು ಮೇ ಆರಂಭದ ವೇಳೆಗೆ ಸಹಾಯ ಪಡೆಯುವ ಜನರ ಸಂಖ್ಯೆಯಲ್ಲಿ ಇದೇ ರೀತಿಯ ಏರಿಕೆ ಕಂಡುಬಂದಿದೆ ಎಂದು ಒಪ್ಪಿಕೊಂಡರು.
ಮೇ ಮೊದಲ ವಾರದಲ್ಲಿ ಸಂಸ್ಥೆ ನಡೆಸುತ್ತಿರುವ ಸಹಾಯವಾಣಿಯಲ್ಲಿ ಸ್ವೀಕರಿಸಿದ ದೈನಂದಿನ ಯಾತನೆ ಕರೆಗಳಲ್ಲಿ 40 ಪ್ರತಿಶತದಷ್ಟು ಹೆಚ್ಚಳವನ್ನು ತೋರಿಸಿವೆ.

‘‘fear-o-demic’’

ಮಾನಸಿಕ ಆರೋಗ್ಯ ತಜ್ಞರು ದೇಶದ ಎರಡನೇ ಕೋವಿಡ್ ಅಲೆಯು ‘‘fear-o-demic’’
ಗೆ ಕಾರಣವಾಗಿದೆ ಎಂದು ನಂಬುತ್ತಾರೆ. ಅಂದರೆ, ಜನರು ಕೋವಿಡ್‌ಗೆ ಸಾಯುವ ಅಥವಾ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುವ ಅಥವಾ ಉದ್ಯೋಗ ಕಳೆದುಕೊಳ್ಳುವ ಬಗ್ಗೆ ಚಿಂತಿತರಾಗಿದ್ದಾರೆ.

ಈ ಭಯವು ಜನರಲ್ಲಿ ಆತಂಕ ಮತ್ತು ಖಿನ್ನತೆಗೆ ಮತ್ತಷ್ಟು ಕಾರಣವಾಗಿದೆ. ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಇತರ ಪ್ರಮುಖ ಅಂಶಗಳು ಹಣಕಾಸಿನ ಬಿಕ್ಕಟ್ಟು, ಸಂಬಂಧದ ಸಮಸ್ಯೆಗಳು ಮತ್ತು ಲಾಕ್‌ಡೌನ್ ಕಾರಣಕ್ಕೆ ಹಲವಾರು ತಿಂಗಳುಗಳ ಕಾಲ ಮನೆಯೊಳಗೆ ಇರುವಂತೆ ಆಗುವುದು….

ಹೀಗೆ ಖಿನ್ನತೆಯಿಂದ ನರಳುವವರು ಖಿನ್ನತೆ-ನಿರೋಧಕ ಶಮನಕಾರಿ ಔಷಧಿಗಳ ಮೊರೆ ಹೋಗುತ್ತಿದ್ದಾರೆ.


ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...