Homeಕರೋನಾ ತಲ್ಲಣಸಾವು, ಉದ್ಯೋಗ ನಷ್ಟ, ಆತಂಕ: ಖಿನ್ನತೆ ಶಮನಕಾರಿ ಔಷಧಿಗಳ ಮಾರಾಟ ಶೇ. 23 ರಷ್ಟು ಏರಿಕೆ

ಸಾವು, ಉದ್ಯೋಗ ನಷ್ಟ, ಆತಂಕ: ಖಿನ್ನತೆ ಶಮನಕಾರಿ ಔಷಧಿಗಳ ಮಾರಾಟ ಶೇ. 23 ರಷ್ಟು ಏರಿಕೆ

- Advertisement -
- Advertisement -

ಸಾಂಕ್ರಾಮಿಕ ಪೂರ್ವದ ದಿನಗಳಿಗೆ ಹೋಲಿಸಿದರೆ ಈಗ ಹೆಚ್ಚಿನ ಜನರು ತಮ್ಮನ್ನು ಸಂಪರ್ಕಿಸುತ್ತಿದ್ದಾರೆ ಎಂದು ಮಾನಸಿಕ ಆರೋಗ್ಯ ತಜ್ಞರು ಮತ್ತು ಮನೋವೈದ್ಯರು ಹೇಳುತ್ತಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಅಲ್ಲದೆ ಖಿನ್ನತೆ-ಶಮನಕಾರಿ ಔಷಧಿಗಳ ಮಾರಾಟವು ಕಳೆದ ಒಂದು ವರ್ಷದಲ್ಲಿ ಸುಮಾರು 23 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಫಾರ್ಮಾ ಉದ್ಯಮವು ಅಂಕಿಅಂಶಗಳನ್ನು ನೀಡಿದೆ.

ಭಾರತದಲ್ಲಿ 9 ಲಕ್ಷಕ್ಕೂ ಹೆಚ್ಚು ಔಷಧಿಕಾರರನ್ನು ಪ್ರತಿನಿಧಿಸುವ ಆಲ್ ಇಂಡಿಯನ್ ಒರಿಜಿನ್ ಕೆಮಿಸ್ಟ್ & ಡಿಸ್ಟ್ರಿಬ್ಯೂಟರ್ಸ್ (ಎಐಒಸಿಡಿ-ಎಡಬ್ಲ್ಯೂಎಸಿಎಸ್) ಪ್ರಕಾರ, ಭಾರತೀಯ ಮಾರುಕಟ್ಟೆಯಲ್ಲಿ ಅಗ್ರ ಐದು ಖಿನ್ನತೆ-ನಿರೋಧಕ ಔಷಧಿಗಳ ಮಾರಾಟವು 2020ರಲ್ಲಿ 177 ಕೋಟಿ ರೂ. ಇದ್ದುದು ಏಪ್ರಿಲ್ 2021 ರಲ್ಲಿ 218 ಕೋಟಿ ರೂ.ಗೆ ಏರಿತು. ಇದು ಶೇಕಡಾ 23 ರಷ್ಟು ಏರಿಕೆಯಾಗಿದೆ. 2019 ರ ಏಪ್ರಿಲ್‌ನಲ್ಲಿ ಈ ಔಷಧಿಗಳ ಮಾರಾಟವು 186 ಕೋಟಿ ರೂ. ಮೌಲ್ಯದಾಗಿತ್ತು. ಇದರರ್ಥ ಏಪ್ರಿಲ್ 2019 ರಿಂದ 2020 ರ ಏಪ್ರಿಲ್ ವರೆಗೆ ಮಾರಾಟದಲ್ಲಿ ಶೇಕಡಾ ಐದು ರಷ್ಟು ಕುಸಿತ ಕಂಡುಬಂದಿತ್ತು.

AIOCD-AWACS ನಿಂದ ಉಲ್ಲೇಖಿಸಲ್ಪಡುವ ಔಷಧಿಗಳಲ್ಲಿ ಅಬಾಟ್‌ನ ಪ್ರೋಥಿಯಾಡೆನ್, ಫಿಜರ್‌ನ ಅಟಿವಾನ್, ಡಾ. ರೆಡ್ಡಿಸ್ ಲ್ಯಾಬ್‌ನ ಟ್ರಿಪ್ಟೋಮರ್ ಮತ್ತು ಸನ್ ಫಾರ್ಮಾದ ನೆಕ್ಸಿಟೊ ಮತ್ತು ನೆಕ್ಸಿಟೊ ಪ್ಲಸ್ ಸೇರಿವೆ.

ಸಾಂಕ್ರಾಮಿಕ ಪೂರ್ವದ ದಿನಗಳಿಗೆ ಹೋಲಿಸಿದರೆ ಹೆಚ್ಚಿನ ಜನರು ಈಗ ತಮ್ಮ ಜೊತೆ ಸಮಾಲೋಚಿಸುತ್ತಿದ್ದಾರೆ ಮತ್ತು ನಾವು ರೋಗಿಗಳನ್ನು ಮೂರು ಭಾಗಗಳಾಗಿ ವರ್ಗೀಕರಿಸುತ್ತಿದ್ದೇವೆ ಎಂದು ಮಾನಸಿಕ ಆರೋಗ್ಯ ತಜ್ಞರು ಮತ್ತು ಮನೋವೈದ್ಯರು ತಿಳಿಸಿದ್ದಾರೆ.

ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸಹಾಯ ಪಡೆಯುವ ಜನರ ಮೊದಲ ವರ್ಗವೆಂದರೆ ಕೋವಿಡ್‌ನಿಂದ ಚೇತರಿಸಿಕೊಂಡವರು ಮತ್ತು ಖಿನ್ನತೆ ಮತ್ತು ಆತಂಕದಂತಹ ಚೇತರಿಕೆಯ ನಂತರದ ತೊಂದರೆಗಳನ್ನು ತೋರಿಸುತ್ತಿರುವ ಗುಂಪು.

ಎರಡನೆಯ ಗುಂಪಿನಲ್ಲಿ ಸಾಮಾನ್ಯ ಸಾಂಕ್ರಾಮಿಕ ಸನ್ನಿವೇಶದಿಂದ ಪ್ರಭಾವಿತರಾದವರು ಅಥವಾ ಪ್ರೀತಿಪಾತ್ರರ ಸಾವು, ಉದ್ಯೋಗ ನಷ್ಟ ಅಥವಾ ಸಂಬಂಧಗಳಲ್ಲಿನ ತೊಂದರೆಗಳನ್ನು ಎದುರಿಸುತ್ತಿರುವ ಜನ.

ಸಾಂಕ್ರಾಮಿಕ ಸಮಯದಲ್ಲಿ ಮದ್ಯದ ಲಭ್ಯತೆ ಅಥವಾ ಕಡಿಮೆ ಲಭ್ಯತೆಯಿಂದಾಗಿ ಖಿನ್ನತೆಯ ಲಕ್ಷಣಗಳನ್ನು ಪ್ರದರ್ಶಿಸುವವರು ಮಾನಸಿಕ ಆರೋಗ್ಯ ರೋಗಿಗಳ ಮೂರನೇ ವರ್ಗವಾಗಿದೆ,

ದೇಶದ ಉನ್ನತ ಮಾನಸಿಕ ಆರೋಗ್ಯ ಸಂಸ್ಥೆಯಾದ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ-ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ವೈದ್ಯರು ಮೇ ಆರಂಭದ ವೇಳೆಗೆ ಸಹಾಯ ಪಡೆಯುವ ಜನರ ಸಂಖ್ಯೆಯಲ್ಲಿ ಇದೇ ರೀತಿಯ ಏರಿಕೆ ಕಂಡುಬಂದಿದೆ ಎಂದು ಒಪ್ಪಿಕೊಂಡರು.
ಮೇ ಮೊದಲ ವಾರದಲ್ಲಿ ಸಂಸ್ಥೆ ನಡೆಸುತ್ತಿರುವ ಸಹಾಯವಾಣಿಯಲ್ಲಿ ಸ್ವೀಕರಿಸಿದ ದೈನಂದಿನ ಯಾತನೆ ಕರೆಗಳಲ್ಲಿ 40 ಪ್ರತಿಶತದಷ್ಟು ಹೆಚ್ಚಳವನ್ನು ತೋರಿಸಿವೆ.

‘‘fear-o-demic’’

ಮಾನಸಿಕ ಆರೋಗ್ಯ ತಜ್ಞರು ದೇಶದ ಎರಡನೇ ಕೋವಿಡ್ ಅಲೆಯು ‘‘fear-o-demic’’
ಗೆ ಕಾರಣವಾಗಿದೆ ಎಂದು ನಂಬುತ್ತಾರೆ. ಅಂದರೆ, ಜನರು ಕೋವಿಡ್‌ಗೆ ಸಾಯುವ ಅಥವಾ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುವ ಅಥವಾ ಉದ್ಯೋಗ ಕಳೆದುಕೊಳ್ಳುವ ಬಗ್ಗೆ ಚಿಂತಿತರಾಗಿದ್ದಾರೆ.

ಈ ಭಯವು ಜನರಲ್ಲಿ ಆತಂಕ ಮತ್ತು ಖಿನ್ನತೆಗೆ ಮತ್ತಷ್ಟು ಕಾರಣವಾಗಿದೆ. ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಇತರ ಪ್ರಮುಖ ಅಂಶಗಳು ಹಣಕಾಸಿನ ಬಿಕ್ಕಟ್ಟು, ಸಂಬಂಧದ ಸಮಸ್ಯೆಗಳು ಮತ್ತು ಲಾಕ್‌ಡೌನ್ ಕಾರಣಕ್ಕೆ ಹಲವಾರು ತಿಂಗಳುಗಳ ಕಾಲ ಮನೆಯೊಳಗೆ ಇರುವಂತೆ ಆಗುವುದು….

ಹೀಗೆ ಖಿನ್ನತೆಯಿಂದ ನರಳುವವರು ಖಿನ್ನತೆ-ನಿರೋಧಕ ಶಮನಕಾರಿ ಔಷಧಿಗಳ ಮೊರೆ ಹೋಗುತ್ತಿದ್ದಾರೆ.


ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...