Homeಕರೋನಾ ತಲ್ಲಣಸಾವು, ಉದ್ಯೋಗ ನಷ್ಟ, ಆತಂಕ: ಖಿನ್ನತೆ ಶಮನಕಾರಿ ಔಷಧಿಗಳ ಮಾರಾಟ ಶೇ. 23 ರಷ್ಟು ಏರಿಕೆ

ಸಾವು, ಉದ್ಯೋಗ ನಷ್ಟ, ಆತಂಕ: ಖಿನ್ನತೆ ಶಮನಕಾರಿ ಔಷಧಿಗಳ ಮಾರಾಟ ಶೇ. 23 ರಷ್ಟು ಏರಿಕೆ

- Advertisement -
- Advertisement -

ಸಾಂಕ್ರಾಮಿಕ ಪೂರ್ವದ ದಿನಗಳಿಗೆ ಹೋಲಿಸಿದರೆ ಈಗ ಹೆಚ್ಚಿನ ಜನರು ತಮ್ಮನ್ನು ಸಂಪರ್ಕಿಸುತ್ತಿದ್ದಾರೆ ಎಂದು ಮಾನಸಿಕ ಆರೋಗ್ಯ ತಜ್ಞರು ಮತ್ತು ಮನೋವೈದ್ಯರು ಹೇಳುತ್ತಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಅಲ್ಲದೆ ಖಿನ್ನತೆ-ಶಮನಕಾರಿ ಔಷಧಿಗಳ ಮಾರಾಟವು ಕಳೆದ ಒಂದು ವರ್ಷದಲ್ಲಿ ಸುಮಾರು 23 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಫಾರ್ಮಾ ಉದ್ಯಮವು ಅಂಕಿಅಂಶಗಳನ್ನು ನೀಡಿದೆ.

ಭಾರತದಲ್ಲಿ 9 ಲಕ್ಷಕ್ಕೂ ಹೆಚ್ಚು ಔಷಧಿಕಾರರನ್ನು ಪ್ರತಿನಿಧಿಸುವ ಆಲ್ ಇಂಡಿಯನ್ ಒರಿಜಿನ್ ಕೆಮಿಸ್ಟ್ & ಡಿಸ್ಟ್ರಿಬ್ಯೂಟರ್ಸ್ (ಎಐಒಸಿಡಿ-ಎಡಬ್ಲ್ಯೂಎಸಿಎಸ್) ಪ್ರಕಾರ, ಭಾರತೀಯ ಮಾರುಕಟ್ಟೆಯಲ್ಲಿ ಅಗ್ರ ಐದು ಖಿನ್ನತೆ-ನಿರೋಧಕ ಔಷಧಿಗಳ ಮಾರಾಟವು 2020ರಲ್ಲಿ 177 ಕೋಟಿ ರೂ. ಇದ್ದುದು ಏಪ್ರಿಲ್ 2021 ರಲ್ಲಿ 218 ಕೋಟಿ ರೂ.ಗೆ ಏರಿತು. ಇದು ಶೇಕಡಾ 23 ರಷ್ಟು ಏರಿಕೆಯಾಗಿದೆ. 2019 ರ ಏಪ್ರಿಲ್‌ನಲ್ಲಿ ಈ ಔಷಧಿಗಳ ಮಾರಾಟವು 186 ಕೋಟಿ ರೂ. ಮೌಲ್ಯದಾಗಿತ್ತು. ಇದರರ್ಥ ಏಪ್ರಿಲ್ 2019 ರಿಂದ 2020 ರ ಏಪ್ರಿಲ್ ವರೆಗೆ ಮಾರಾಟದಲ್ಲಿ ಶೇಕಡಾ ಐದು ರಷ್ಟು ಕುಸಿತ ಕಂಡುಬಂದಿತ್ತು.

AIOCD-AWACS ನಿಂದ ಉಲ್ಲೇಖಿಸಲ್ಪಡುವ ಔಷಧಿಗಳಲ್ಲಿ ಅಬಾಟ್‌ನ ಪ್ರೋಥಿಯಾಡೆನ್, ಫಿಜರ್‌ನ ಅಟಿವಾನ್, ಡಾ. ರೆಡ್ಡಿಸ್ ಲ್ಯಾಬ್‌ನ ಟ್ರಿಪ್ಟೋಮರ್ ಮತ್ತು ಸನ್ ಫಾರ್ಮಾದ ನೆಕ್ಸಿಟೊ ಮತ್ತು ನೆಕ್ಸಿಟೊ ಪ್ಲಸ್ ಸೇರಿವೆ.

ಸಾಂಕ್ರಾಮಿಕ ಪೂರ್ವದ ದಿನಗಳಿಗೆ ಹೋಲಿಸಿದರೆ ಹೆಚ್ಚಿನ ಜನರು ಈಗ ತಮ್ಮ ಜೊತೆ ಸಮಾಲೋಚಿಸುತ್ತಿದ್ದಾರೆ ಮತ್ತು ನಾವು ರೋಗಿಗಳನ್ನು ಮೂರು ಭಾಗಗಳಾಗಿ ವರ್ಗೀಕರಿಸುತ್ತಿದ್ದೇವೆ ಎಂದು ಮಾನಸಿಕ ಆರೋಗ್ಯ ತಜ್ಞರು ಮತ್ತು ಮನೋವೈದ್ಯರು ತಿಳಿಸಿದ್ದಾರೆ.

ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸಹಾಯ ಪಡೆಯುವ ಜನರ ಮೊದಲ ವರ್ಗವೆಂದರೆ ಕೋವಿಡ್‌ನಿಂದ ಚೇತರಿಸಿಕೊಂಡವರು ಮತ್ತು ಖಿನ್ನತೆ ಮತ್ತು ಆತಂಕದಂತಹ ಚೇತರಿಕೆಯ ನಂತರದ ತೊಂದರೆಗಳನ್ನು ತೋರಿಸುತ್ತಿರುವ ಗುಂಪು.

ಎರಡನೆಯ ಗುಂಪಿನಲ್ಲಿ ಸಾಮಾನ್ಯ ಸಾಂಕ್ರಾಮಿಕ ಸನ್ನಿವೇಶದಿಂದ ಪ್ರಭಾವಿತರಾದವರು ಅಥವಾ ಪ್ರೀತಿಪಾತ್ರರ ಸಾವು, ಉದ್ಯೋಗ ನಷ್ಟ ಅಥವಾ ಸಂಬಂಧಗಳಲ್ಲಿನ ತೊಂದರೆಗಳನ್ನು ಎದುರಿಸುತ್ತಿರುವ ಜನ.

ಸಾಂಕ್ರಾಮಿಕ ಸಮಯದಲ್ಲಿ ಮದ್ಯದ ಲಭ್ಯತೆ ಅಥವಾ ಕಡಿಮೆ ಲಭ್ಯತೆಯಿಂದಾಗಿ ಖಿನ್ನತೆಯ ಲಕ್ಷಣಗಳನ್ನು ಪ್ರದರ್ಶಿಸುವವರು ಮಾನಸಿಕ ಆರೋಗ್ಯ ರೋಗಿಗಳ ಮೂರನೇ ವರ್ಗವಾಗಿದೆ,

ದೇಶದ ಉನ್ನತ ಮಾನಸಿಕ ಆರೋಗ್ಯ ಸಂಸ್ಥೆಯಾದ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ-ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ವೈದ್ಯರು ಮೇ ಆರಂಭದ ವೇಳೆಗೆ ಸಹಾಯ ಪಡೆಯುವ ಜನರ ಸಂಖ್ಯೆಯಲ್ಲಿ ಇದೇ ರೀತಿಯ ಏರಿಕೆ ಕಂಡುಬಂದಿದೆ ಎಂದು ಒಪ್ಪಿಕೊಂಡರು.
ಮೇ ಮೊದಲ ವಾರದಲ್ಲಿ ಸಂಸ್ಥೆ ನಡೆಸುತ್ತಿರುವ ಸಹಾಯವಾಣಿಯಲ್ಲಿ ಸ್ವೀಕರಿಸಿದ ದೈನಂದಿನ ಯಾತನೆ ಕರೆಗಳಲ್ಲಿ 40 ಪ್ರತಿಶತದಷ್ಟು ಹೆಚ್ಚಳವನ್ನು ತೋರಿಸಿವೆ.

‘‘fear-o-demic’’

ಮಾನಸಿಕ ಆರೋಗ್ಯ ತಜ್ಞರು ದೇಶದ ಎರಡನೇ ಕೋವಿಡ್ ಅಲೆಯು ‘‘fear-o-demic’’
ಗೆ ಕಾರಣವಾಗಿದೆ ಎಂದು ನಂಬುತ್ತಾರೆ. ಅಂದರೆ, ಜನರು ಕೋವಿಡ್‌ಗೆ ಸಾಯುವ ಅಥವಾ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುವ ಅಥವಾ ಉದ್ಯೋಗ ಕಳೆದುಕೊಳ್ಳುವ ಬಗ್ಗೆ ಚಿಂತಿತರಾಗಿದ್ದಾರೆ.

ಈ ಭಯವು ಜನರಲ್ಲಿ ಆತಂಕ ಮತ್ತು ಖಿನ್ನತೆಗೆ ಮತ್ತಷ್ಟು ಕಾರಣವಾಗಿದೆ. ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಇತರ ಪ್ರಮುಖ ಅಂಶಗಳು ಹಣಕಾಸಿನ ಬಿಕ್ಕಟ್ಟು, ಸಂಬಂಧದ ಸಮಸ್ಯೆಗಳು ಮತ್ತು ಲಾಕ್‌ಡೌನ್ ಕಾರಣಕ್ಕೆ ಹಲವಾರು ತಿಂಗಳುಗಳ ಕಾಲ ಮನೆಯೊಳಗೆ ಇರುವಂತೆ ಆಗುವುದು….

ಹೀಗೆ ಖಿನ್ನತೆಯಿಂದ ನರಳುವವರು ಖಿನ್ನತೆ-ನಿರೋಧಕ ಶಮನಕಾರಿ ಔಷಧಿಗಳ ಮೊರೆ ಹೋಗುತ್ತಿದ್ದಾರೆ.


ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...