Homeಕರೋನಾ ತಲ್ಲಣಸಾವು, ಉದ್ಯೋಗ ನಷ್ಟ, ಆತಂಕ: ಖಿನ್ನತೆ ಶಮನಕಾರಿ ಔಷಧಿಗಳ ಮಾರಾಟ ಶೇ. 23 ರಷ್ಟು ಏರಿಕೆ

ಸಾವು, ಉದ್ಯೋಗ ನಷ್ಟ, ಆತಂಕ: ಖಿನ್ನತೆ ಶಮನಕಾರಿ ಔಷಧಿಗಳ ಮಾರಾಟ ಶೇ. 23 ರಷ್ಟು ಏರಿಕೆ

- Advertisement -
- Advertisement -

ಸಾಂಕ್ರಾಮಿಕ ಪೂರ್ವದ ದಿನಗಳಿಗೆ ಹೋಲಿಸಿದರೆ ಈಗ ಹೆಚ್ಚಿನ ಜನರು ತಮ್ಮನ್ನು ಸಂಪರ್ಕಿಸುತ್ತಿದ್ದಾರೆ ಎಂದು ಮಾನಸಿಕ ಆರೋಗ್ಯ ತಜ್ಞರು ಮತ್ತು ಮನೋವೈದ್ಯರು ಹೇಳುತ್ತಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಅಲ್ಲದೆ ಖಿನ್ನತೆ-ಶಮನಕಾರಿ ಔಷಧಿಗಳ ಮಾರಾಟವು ಕಳೆದ ಒಂದು ವರ್ಷದಲ್ಲಿ ಸುಮಾರು 23 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಫಾರ್ಮಾ ಉದ್ಯಮವು ಅಂಕಿಅಂಶಗಳನ್ನು ನೀಡಿದೆ.

ಭಾರತದಲ್ಲಿ 9 ಲಕ್ಷಕ್ಕೂ ಹೆಚ್ಚು ಔಷಧಿಕಾರರನ್ನು ಪ್ರತಿನಿಧಿಸುವ ಆಲ್ ಇಂಡಿಯನ್ ಒರಿಜಿನ್ ಕೆಮಿಸ್ಟ್ & ಡಿಸ್ಟ್ರಿಬ್ಯೂಟರ್ಸ್ (ಎಐಒಸಿಡಿ-ಎಡಬ್ಲ್ಯೂಎಸಿಎಸ್) ಪ್ರಕಾರ, ಭಾರತೀಯ ಮಾರುಕಟ್ಟೆಯಲ್ಲಿ ಅಗ್ರ ಐದು ಖಿನ್ನತೆ-ನಿರೋಧಕ ಔಷಧಿಗಳ ಮಾರಾಟವು 2020ರಲ್ಲಿ 177 ಕೋಟಿ ರೂ. ಇದ್ದುದು ಏಪ್ರಿಲ್ 2021 ರಲ್ಲಿ 218 ಕೋಟಿ ರೂ.ಗೆ ಏರಿತು. ಇದು ಶೇಕಡಾ 23 ರಷ್ಟು ಏರಿಕೆಯಾಗಿದೆ. 2019 ರ ಏಪ್ರಿಲ್‌ನಲ್ಲಿ ಈ ಔಷಧಿಗಳ ಮಾರಾಟವು 186 ಕೋಟಿ ರೂ. ಮೌಲ್ಯದಾಗಿತ್ತು. ಇದರರ್ಥ ಏಪ್ರಿಲ್ 2019 ರಿಂದ 2020 ರ ಏಪ್ರಿಲ್ ವರೆಗೆ ಮಾರಾಟದಲ್ಲಿ ಶೇಕಡಾ ಐದು ರಷ್ಟು ಕುಸಿತ ಕಂಡುಬಂದಿತ್ತು.

AIOCD-AWACS ನಿಂದ ಉಲ್ಲೇಖಿಸಲ್ಪಡುವ ಔಷಧಿಗಳಲ್ಲಿ ಅಬಾಟ್‌ನ ಪ್ರೋಥಿಯಾಡೆನ್, ಫಿಜರ್‌ನ ಅಟಿವಾನ್, ಡಾ. ರೆಡ್ಡಿಸ್ ಲ್ಯಾಬ್‌ನ ಟ್ರಿಪ್ಟೋಮರ್ ಮತ್ತು ಸನ್ ಫಾರ್ಮಾದ ನೆಕ್ಸಿಟೊ ಮತ್ತು ನೆಕ್ಸಿಟೊ ಪ್ಲಸ್ ಸೇರಿವೆ.

ಸಾಂಕ್ರಾಮಿಕ ಪೂರ್ವದ ದಿನಗಳಿಗೆ ಹೋಲಿಸಿದರೆ ಹೆಚ್ಚಿನ ಜನರು ಈಗ ತಮ್ಮ ಜೊತೆ ಸಮಾಲೋಚಿಸುತ್ತಿದ್ದಾರೆ ಮತ್ತು ನಾವು ರೋಗಿಗಳನ್ನು ಮೂರು ಭಾಗಗಳಾಗಿ ವರ್ಗೀಕರಿಸುತ್ತಿದ್ದೇವೆ ಎಂದು ಮಾನಸಿಕ ಆರೋಗ್ಯ ತಜ್ಞರು ಮತ್ತು ಮನೋವೈದ್ಯರು ತಿಳಿಸಿದ್ದಾರೆ.

ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸಹಾಯ ಪಡೆಯುವ ಜನರ ಮೊದಲ ವರ್ಗವೆಂದರೆ ಕೋವಿಡ್‌ನಿಂದ ಚೇತರಿಸಿಕೊಂಡವರು ಮತ್ತು ಖಿನ್ನತೆ ಮತ್ತು ಆತಂಕದಂತಹ ಚೇತರಿಕೆಯ ನಂತರದ ತೊಂದರೆಗಳನ್ನು ತೋರಿಸುತ್ತಿರುವ ಗುಂಪು.

ಎರಡನೆಯ ಗುಂಪಿನಲ್ಲಿ ಸಾಮಾನ್ಯ ಸಾಂಕ್ರಾಮಿಕ ಸನ್ನಿವೇಶದಿಂದ ಪ್ರಭಾವಿತರಾದವರು ಅಥವಾ ಪ್ರೀತಿಪಾತ್ರರ ಸಾವು, ಉದ್ಯೋಗ ನಷ್ಟ ಅಥವಾ ಸಂಬಂಧಗಳಲ್ಲಿನ ತೊಂದರೆಗಳನ್ನು ಎದುರಿಸುತ್ತಿರುವ ಜನ.

ಸಾಂಕ್ರಾಮಿಕ ಸಮಯದಲ್ಲಿ ಮದ್ಯದ ಲಭ್ಯತೆ ಅಥವಾ ಕಡಿಮೆ ಲಭ್ಯತೆಯಿಂದಾಗಿ ಖಿನ್ನತೆಯ ಲಕ್ಷಣಗಳನ್ನು ಪ್ರದರ್ಶಿಸುವವರು ಮಾನಸಿಕ ಆರೋಗ್ಯ ರೋಗಿಗಳ ಮೂರನೇ ವರ್ಗವಾಗಿದೆ,

ದೇಶದ ಉನ್ನತ ಮಾನಸಿಕ ಆರೋಗ್ಯ ಸಂಸ್ಥೆಯಾದ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ-ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ವೈದ್ಯರು ಮೇ ಆರಂಭದ ವೇಳೆಗೆ ಸಹಾಯ ಪಡೆಯುವ ಜನರ ಸಂಖ್ಯೆಯಲ್ಲಿ ಇದೇ ರೀತಿಯ ಏರಿಕೆ ಕಂಡುಬಂದಿದೆ ಎಂದು ಒಪ್ಪಿಕೊಂಡರು.
ಮೇ ಮೊದಲ ವಾರದಲ್ಲಿ ಸಂಸ್ಥೆ ನಡೆಸುತ್ತಿರುವ ಸಹಾಯವಾಣಿಯಲ್ಲಿ ಸ್ವೀಕರಿಸಿದ ದೈನಂದಿನ ಯಾತನೆ ಕರೆಗಳಲ್ಲಿ 40 ಪ್ರತಿಶತದಷ್ಟು ಹೆಚ್ಚಳವನ್ನು ತೋರಿಸಿವೆ.

‘‘fear-o-demic’’

ಮಾನಸಿಕ ಆರೋಗ್ಯ ತಜ್ಞರು ದೇಶದ ಎರಡನೇ ಕೋವಿಡ್ ಅಲೆಯು ‘‘fear-o-demic’’
ಗೆ ಕಾರಣವಾಗಿದೆ ಎಂದು ನಂಬುತ್ತಾರೆ. ಅಂದರೆ, ಜನರು ಕೋವಿಡ್‌ಗೆ ಸಾಯುವ ಅಥವಾ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುವ ಅಥವಾ ಉದ್ಯೋಗ ಕಳೆದುಕೊಳ್ಳುವ ಬಗ್ಗೆ ಚಿಂತಿತರಾಗಿದ್ದಾರೆ.

ಈ ಭಯವು ಜನರಲ್ಲಿ ಆತಂಕ ಮತ್ತು ಖಿನ್ನತೆಗೆ ಮತ್ತಷ್ಟು ಕಾರಣವಾಗಿದೆ. ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಇತರ ಪ್ರಮುಖ ಅಂಶಗಳು ಹಣಕಾಸಿನ ಬಿಕ್ಕಟ್ಟು, ಸಂಬಂಧದ ಸಮಸ್ಯೆಗಳು ಮತ್ತು ಲಾಕ್‌ಡೌನ್ ಕಾರಣಕ್ಕೆ ಹಲವಾರು ತಿಂಗಳುಗಳ ಕಾಲ ಮನೆಯೊಳಗೆ ಇರುವಂತೆ ಆಗುವುದು….

ಹೀಗೆ ಖಿನ್ನತೆಯಿಂದ ನರಳುವವರು ಖಿನ್ನತೆ-ನಿರೋಧಕ ಶಮನಕಾರಿ ಔಷಧಿಗಳ ಮೊರೆ ಹೋಗುತ್ತಿದ್ದಾರೆ.


ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...