Homeಮುಖಪುಟಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

ಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

- Advertisement -
- Advertisement -

ಜಿತಿನ್ ಪ್ರಸಾದ್‍ ನಿರ್ಗಮನ ಕಾಂಗ್ರೆಸ್‍ ಪಕ್ಷದಲ್ಲಿನ ಆಳವಾದ ಬಿಕ್ಕಟ್ಟನ್ನು ಮತ್ತೊಮ್ಮೆ ಬಹಿರಂಗಗೊಳಿಸಿದೆ. ಈ ಹಿಂದೆ ಸೋನಿಯಾ ಗಾಂಧಿಗೆ ಪತ್ರ ಬರೆದ “ಜಿ -23” ಅಥವಾ 23 “ಭಿನ್ನಮತೀಯ” ನಾಯಕರ ಗುಂಪಿನ ಇತರ ಜನರ ಮೇಲೆ ಈ ಪ್ರಕರಣ ಬೆಳಕು ಚೆಲ್ಲುತ್ತದೆ. ಈ  ಜಿ-23 ಕ್ಲಬ್‌ನ ಪ್ರಮುಖ ಸದಸ್ಯರಾದ ಕಪಿಲ್ ಸಿಬಲ್, ಅಂತಹ ಯಾವುದೇ ಕ್ರಮವನ್ನು (ಜಿತಿನ್‍ ಮಾಡಿದಂತೆ) ನಾನು ತೆಗೆದುಕೊಳ್ಳಲಾರೆ. ನಾನು ಮೃತನಾದಾಗ ಅಂಥದ್ದನ್ನು ಊಹಿಸಬಹುದು, ನಾನೆಂದೂ ಬಿಜೆಪಿ ಸೇರಲಾರೆ ಎಂದಿದ್ದಾರೆ.

ಆದರೆ ಸಿಬಲ್‍ ತಮ್ಮ ಆಕ್ಷೇಪ ಮತ್ತು ಆಗ್ರಹಗಳನ್ನು ಪುನರುಚ್ಛರಿಸಿದ್ದಾರೆ. ಈ ಸಂದರ್ಭವನ್ನು ಅವರು ತಮ್ಮ ಪಕ್ಷದ ಉನ್ನತ ನಾಯಕರಿಗೆ ಒಂದು ಸಂದೇಶ ಕಳಿಸುವ ಅವಕಾಶವನ್ನಾಗಿ ಬಳಸಿಕೊಂಡಿದ್ದಾರೆ.

ಸಿದ್ಧಾಂತಕ್ಕಿಂತ ವೈಯಕ್ತಿಕ ಲಾಭದ ಆಧಾರದ ಮೇಲೆ ‘ಪ್ರಸಾದ್‍ ರಾಮ್‍’ (ಅವರೇ ಸೃಷ್ಟಿಸಿದ ಪದ) ಪಕ್ಷಾಂತರ ನಡೆದಿದೆ ಎಂಬುದನ್ನು ಅವರು ಒಪ್ಪಲಿಲ್ಲ ಎಂದು ಎನ್‍ಡಿಟಿವಿ ವರದಿ ಮಾಡಿದೆ.

“ಪಕ್ಷದ ನಾಯಕತ್ವ ಏನು ಮಾಡಿದೆ ಅಥವಾ ಮಾಡಿಲ್ಲ ಎಂಬುದರ ಕುರಿತು ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಾವು ಭಾರತೀಯ ರಾಜಕಾರಣದಲ್ಲಿ ಒಂದು ಹಂತವನ್ನು ತಲುಪಿದ್ದೇವೆ, ಅಲ್ಲಿ ಈ ರೀತಿಯ (ಜಿತಿನ್‍ ನಿರ್ಧಾರ) ನಿರ್ಧಾರಗಳು ಸಿದ್ಧಾಂತವನ್ನು ಆಧರಿಸಿಲ್ಲ. ಅವು ಈಗ ನಾನು ಪ್ರಸಾದ ರಾಮ್ ಎಂದು ಕರೆಯುವ ಆಧಾರದ ಮೇಲೆ ನಡೆಯುತ್ತಿರುವ ರಾಜಕೀಯ. ಇದು ಹಿಂದೆ ಆಯಾ ರಾಮ್ ಗಯಾ ರಾಮ್ ಆಗಿತ್ತು. ಪಶ್ಚಿಮ ಬಂಗಾಳದಲ್ಲಿ ಇದು ನಡೆಯುತ್ತಿರುವುದನ್ನು ನಾವು ನೋಡಿದ್ದೇವೆ. ಬಿಜೆಪಿ ಯಶಸ್ವಿಯಾಗಲಿದೆ ಎಂದು ಭಾವಿಸಿದ್ದರಿಂದ ಜನರು ಇದ್ದಕ್ಕಿದ್ದಂತೆ ಬಿಜೆಪಿಗೆ ಪಕ್ಷಾಂತರಗೊಂಡರು. ಈಗ ಬಹುಪಾಲು ರಾಜಕಾರಣಿಗಳು ಚುನಾವಣೆಗಳಲ್ಲಿ ಹೋರಾಡಲು ಬಯಸುವುದು ಒಂದು ಸಿದ್ಧಾಂತದ ಬಗೆಗಿನ ನಂಬಿಕೆಗಳ ಆಧಾರದ ಮೇಲೆ ಅಲ್ಲ, ಆದರೆ ವೈಯಕ್ತಿಕವಾಗಿ ಏನನ್ನಾದರೂ ಪಡೆಯಬಹುದು’ ಎಂಬ ದೃಢೀಕರಣದ ಆಧಾರದ ಮೇಲೆ.. ಮಧ್ಯಪ್ರದೇಶ, ಕರ್ನಾಟಕ, ಮಹಾರಾಷ್ಟ್ರದಲ್ಲೂ ಇದೇ ಸಂಭವಿಸಿದೆ…’ ಎಂದು ಹೇಳಿದ್ದಾರೆ.

ಕಾಂಗ್ರೆಸ್‍ಗೆ  ಸುಧಾರಣೆಗಳು ಅಗತ್ಯವಾಗಿವೆ ಮತ್ತು ಪಕ್ಷದ ನಾಯಕತ್ವವು ಇದನ್ನು ಆಲಿಸಬೇಕಾಗಿದೆ ಎಂದು ಸಿಬಲ್ ಹೇಳಿದರು. ಅದೇ ಸಮಯದಲ್ಲಿ, ಜಿತಿನ್ ಪ್ರಸಾದ ಅವರಂತಹ ವ್ಯಕ್ತಿ ಬಿಜೆಪಿಗೆ ಸೇರುತ್ತಾರೆ ಎಂಬುದಕ್ಕೆ ವಿವರಣೆ ನೀಡುವುಸು ಅಸಾಧ್ಯ ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದರು.

“ಸಮಸ್ಯೆಗಳನ್ನು ಬಗೆಹರಿಸಿದ್ದರೂ, ನಾನು ಏನನ್ನೂ ಪಡೆಯುತ್ತಿಲ್ಲ ಎಂದು ಒಬ್ಬ ವ್ಯಕ್ತಿಯು ಭಾವಿಸಿದರೆ ಅವನು ಹೊರಟು ಹೋಗುತ್ತಾನೆ. ಜಿತಿನ್ ಹೊರಹೋಗಲು ಒಳ್ಳೆಯ ಕಾರಣಗಳಿರಬಹುದು. ಪಕ್ಷವನ್ನು ತೊರೆದಿದ್ದಕ್ಕಾಗಿ ನಾನು ಅವರನ್ನು ದೂಷಿಸುವುದಿಲ್ಲ. ಅವರು ಬಿಜೆಪಿಗೆ ಸೇರಿದ ಕಾರಣಗಳಿಗಾಗಿ ನಾನು ಅವರನ್ನು ದೂಷಿಸುತ್ತೇನೆ. ಮೂರು ದಶಕಗಳಿಂದ ತಾನು ವಿರೋಧಿಸುತ್ತಿದ್ದ ಒಂದು ಸಿದ್ಧಾಂತವನ್ನು ಈಗ ಸ್ವೀಕರಿಸುತ್ತಿದ್ದೇನೆ ಎಂದು ಅವರು ಯಾವ ಮುಖದಿಂದ ಹೇಳಬಹುದು? ತತ್ವಬದ್ಧ ರಾಜಕೀಯದ ಬಗ್ಗೆ ಮಾತನಾಡುವ ಬಿಜೆಪಿಯವರು, ಜಿತಿನ್ ಅವರನ್ನು ಯಾವ ಮುಖದಿಂದ ತೆಗೆದುಕೊಳ್ಳುತ್ತಾರೆ? ಜನರು ಈ ರೀತಿಯ ರಾಜಕೀಯದ ಬಗ್ಗೆ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ” ಎಂದು ಸಿಬಲ್‍ ಹೇಳಿದ್ದಾರೆ.

ಮಧ್ಯಪ್ರದೇಶದ ಪಕ್ಷಾಂತರಗಳು ಮತ್ತು ಹಿಂದಿನ ಲೋಕಸಭಾ  ಚುನಾವಣಾ ಸೋಲುಗಳ ಬಗ್ಗೆ ಕಪಿಲ್‍ ಸಿಬಲ್, ಗುಲಾಮ್ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಮುಂತಾದ 23 ಕಾಂಗ್ರೆಸ್‍ ನಾಯಕರು ಸೋನಿಯಾ ಗಾಂಧಿಯವರಿಗೆ ಪತ್ರ ಬರೆದು, ಪಕ್ಷದಲ್ಲಿ ಆಂತರಿಕ ಸುಧಾರಣೆಗಳಿಗ ಮನವಿ ಮಾಡಿದ್ದರು.

ಕಳೆದ ವರ್ಷ ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯವೆದ್ದ ನಂತರ ಪಕ್ಷದಲ್ಲಿ ಉತ್ತಮ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದ ಸಚಿನ್ ಪೈಲಟ್ ಬಗ್ಗೆ ಆಗ ಊಹಾಪೋಹ ಹರಿದಾಡಿದ್ದವು.

ತಪ್ಪುಗಳ ತಿದ್ದುಪಡಿಯ ಭರವಸೆಯ ಮೇರೆಗೆ ಪೈಲಟ್ ಅವರ ಬಂಡಾಯವನ್ನು ಕೊನೆಗೊಳಿಸುವಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಯಶಸ್ವಿಯಾಗಿದ್ದರು.

ಪರಿಹಾರಗಳನ್ನು ನೀಡುವಲ್ಲಿ ಕಾಂಗ್ರೆಸ್ ವಿಫಲವಾದ ಬಗ್ಗೆ ಕೇಳಿದಾಗ ಸಿಬಲ್, “ಸಮಸ್ಯೆಗಳನ್ನು ಬಗೆಹರಿಸಲಾಗಿಲ್ಲ, ಅದು ನಿಜ. ಅವುಗಳನ್ನು ಆದಷ್ಟು ಬೇಗ ಪರಿಹರಿಸಬೇಕು. ನಾವು ಆ ಪ್ರಶ್ನೆಗಳನ್ನು  ಎತ್ತುವುದನ್ನು  ಮುಂದುವರಿಸುತ್ತೇವೆ. ಕೆಲವು ಕಾರಣಗಳಿಂದ  ನಾನು ಪಕ್ಷಕ್ಕೆ ಅಗತ್ಯವಿಲ್ಲ ಎಂದು ಪಕ್ಷ ನನಗೆ ಹೇಳಿದರೆ ನಾನು ಪಕ್ಷವನ್ನು ಬಿಡುತ್ತೇನೆ. ನಾನು ನನಗಾಗಿ ಈ ಪಕ್ಷದಲ್ಲಿ ಇಲ್ಲ. ಆದರೆ ರಾಜಕಾರಣಿಯಾಗಿ ಹುಟ್ಟಿದಾಗಿನಿಂದ ವಿರೋಧಿಸಿದ ಬಿಜೆಪಿಗೆ ನಾನು ಎಂದಿಗೂ ಸೇರುವುದಿಲ್ಲ. ಇದು ಜಿತೀನ್ ಪ್ರಸಾದ್‍ ಎತ್ತಿರುವ ಇಶ್ಯೂ’ ಎಂದು ಸಿಬಲ್‍ ತಿಳಿಸಿದ್ದಾರೆ.

ಪಕ್ಷದಲ್ಲಿ ಸುಧಾರಣೆಗಳು ಅಂದರೆ ಏನು ಎಂಬ ಪ್ರಶ್ನೆಗೆ,  “ನನ್ನನ್ನು ಕೇಳಬೇಡಿ, ಯಾರು ಅವನ್ನು ಪರಿಹರಿಸಬೇಕೋ ಅವರನ್ನು ಕೇಳಿ. ಕಾಂಗ್ರೆಸ್ ಮತ್ತೆ ಹಳೆಯ ಭವ್ಯತೆ ಪಡೆದ ಪಕ್ಷವಾಗಬೇಕು. ಅದಕ್ಕಾಗಿ ನಮಗೆ ಸುಧಾರಣೆಗಳು ಬೇಕಾಗುತ್ತವೆ. ನಾವು ಹೇಳಲು ಬಯಸುವುದನ್ನು ಪಕ್ಷ ಆಲಿಸುವ ಸಮಯವಿದು. ಮುಖ್ಯಸ್ಥರು ಆಲಿಸುವುದನ್ನು  ನಿಲ್ಲಿಸಿದರೆ ಪಕ್ಷ ಕುಸಿಯುತ್ತದೆ. ನಮಗೆ ಬೇಕಾಗಿರುವುದು ಕಾಂಗ್ರೆಸ್ ಪಕ್ಷ ನಮ್ಮ ಮಾತನ್ನು ಆಲಿಸಬೇಕು ಎಂಬುದಷ್ಟೇ’ ಎಂದು ಸಿಬಲ್‍ ಹೇಳಿದರು.


ಇದನ್ನೂ ಓದಿ: ಉತ್ತರ ಪ್ರದೇಶ ಸಿಎಂ ಬದಲಾವಣೆ ವದಂತಿ: ಮೋದಿ, ಶಾ ಭೇಟಿಯಾಗಲಿರುವ ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...