Homeಮುಖಪುಟಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

ಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

- Advertisement -
- Advertisement -

ಜಿತಿನ್ ಪ್ರಸಾದ್‍ ನಿರ್ಗಮನ ಕಾಂಗ್ರೆಸ್‍ ಪಕ್ಷದಲ್ಲಿನ ಆಳವಾದ ಬಿಕ್ಕಟ್ಟನ್ನು ಮತ್ತೊಮ್ಮೆ ಬಹಿರಂಗಗೊಳಿಸಿದೆ. ಈ ಹಿಂದೆ ಸೋನಿಯಾ ಗಾಂಧಿಗೆ ಪತ್ರ ಬರೆದ “ಜಿ -23” ಅಥವಾ 23 “ಭಿನ್ನಮತೀಯ” ನಾಯಕರ ಗುಂಪಿನ ಇತರ ಜನರ ಮೇಲೆ ಈ ಪ್ರಕರಣ ಬೆಳಕು ಚೆಲ್ಲುತ್ತದೆ. ಈ  ಜಿ-23 ಕ್ಲಬ್‌ನ ಪ್ರಮುಖ ಸದಸ್ಯರಾದ ಕಪಿಲ್ ಸಿಬಲ್, ಅಂತಹ ಯಾವುದೇ ಕ್ರಮವನ್ನು (ಜಿತಿನ್‍ ಮಾಡಿದಂತೆ) ನಾನು ತೆಗೆದುಕೊಳ್ಳಲಾರೆ. ನಾನು ಮೃತನಾದಾಗ ಅಂಥದ್ದನ್ನು ಊಹಿಸಬಹುದು, ನಾನೆಂದೂ ಬಿಜೆಪಿ ಸೇರಲಾರೆ ಎಂದಿದ್ದಾರೆ.

ಆದರೆ ಸಿಬಲ್‍ ತಮ್ಮ ಆಕ್ಷೇಪ ಮತ್ತು ಆಗ್ರಹಗಳನ್ನು ಪುನರುಚ್ಛರಿಸಿದ್ದಾರೆ. ಈ ಸಂದರ್ಭವನ್ನು ಅವರು ತಮ್ಮ ಪಕ್ಷದ ಉನ್ನತ ನಾಯಕರಿಗೆ ಒಂದು ಸಂದೇಶ ಕಳಿಸುವ ಅವಕಾಶವನ್ನಾಗಿ ಬಳಸಿಕೊಂಡಿದ್ದಾರೆ.

ಸಿದ್ಧಾಂತಕ್ಕಿಂತ ವೈಯಕ್ತಿಕ ಲಾಭದ ಆಧಾರದ ಮೇಲೆ ‘ಪ್ರಸಾದ್‍ ರಾಮ್‍’ (ಅವರೇ ಸೃಷ್ಟಿಸಿದ ಪದ) ಪಕ್ಷಾಂತರ ನಡೆದಿದೆ ಎಂಬುದನ್ನು ಅವರು ಒಪ್ಪಲಿಲ್ಲ ಎಂದು ಎನ್‍ಡಿಟಿವಿ ವರದಿ ಮಾಡಿದೆ.

“ಪಕ್ಷದ ನಾಯಕತ್ವ ಏನು ಮಾಡಿದೆ ಅಥವಾ ಮಾಡಿಲ್ಲ ಎಂಬುದರ ಕುರಿತು ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಾವು ಭಾರತೀಯ ರಾಜಕಾರಣದಲ್ಲಿ ಒಂದು ಹಂತವನ್ನು ತಲುಪಿದ್ದೇವೆ, ಅಲ್ಲಿ ಈ ರೀತಿಯ (ಜಿತಿನ್‍ ನಿರ್ಧಾರ) ನಿರ್ಧಾರಗಳು ಸಿದ್ಧಾಂತವನ್ನು ಆಧರಿಸಿಲ್ಲ. ಅವು ಈಗ ನಾನು ಪ್ರಸಾದ ರಾಮ್ ಎಂದು ಕರೆಯುವ ಆಧಾರದ ಮೇಲೆ ನಡೆಯುತ್ತಿರುವ ರಾಜಕೀಯ. ಇದು ಹಿಂದೆ ಆಯಾ ರಾಮ್ ಗಯಾ ರಾಮ್ ಆಗಿತ್ತು. ಪಶ್ಚಿಮ ಬಂಗಾಳದಲ್ಲಿ ಇದು ನಡೆಯುತ್ತಿರುವುದನ್ನು ನಾವು ನೋಡಿದ್ದೇವೆ. ಬಿಜೆಪಿ ಯಶಸ್ವಿಯಾಗಲಿದೆ ಎಂದು ಭಾವಿಸಿದ್ದರಿಂದ ಜನರು ಇದ್ದಕ್ಕಿದ್ದಂತೆ ಬಿಜೆಪಿಗೆ ಪಕ್ಷಾಂತರಗೊಂಡರು. ಈಗ ಬಹುಪಾಲು ರಾಜಕಾರಣಿಗಳು ಚುನಾವಣೆಗಳಲ್ಲಿ ಹೋರಾಡಲು ಬಯಸುವುದು ಒಂದು ಸಿದ್ಧಾಂತದ ಬಗೆಗಿನ ನಂಬಿಕೆಗಳ ಆಧಾರದ ಮೇಲೆ ಅಲ್ಲ, ಆದರೆ ವೈಯಕ್ತಿಕವಾಗಿ ಏನನ್ನಾದರೂ ಪಡೆಯಬಹುದು’ ಎಂಬ ದೃಢೀಕರಣದ ಆಧಾರದ ಮೇಲೆ.. ಮಧ್ಯಪ್ರದೇಶ, ಕರ್ನಾಟಕ, ಮಹಾರಾಷ್ಟ್ರದಲ್ಲೂ ಇದೇ ಸಂಭವಿಸಿದೆ…’ ಎಂದು ಹೇಳಿದ್ದಾರೆ.

ಕಾಂಗ್ರೆಸ್‍ಗೆ  ಸುಧಾರಣೆಗಳು ಅಗತ್ಯವಾಗಿವೆ ಮತ್ತು ಪಕ್ಷದ ನಾಯಕತ್ವವು ಇದನ್ನು ಆಲಿಸಬೇಕಾಗಿದೆ ಎಂದು ಸಿಬಲ್ ಹೇಳಿದರು. ಅದೇ ಸಮಯದಲ್ಲಿ, ಜಿತಿನ್ ಪ್ರಸಾದ ಅವರಂತಹ ವ್ಯಕ್ತಿ ಬಿಜೆಪಿಗೆ ಸೇರುತ್ತಾರೆ ಎಂಬುದಕ್ಕೆ ವಿವರಣೆ ನೀಡುವುಸು ಅಸಾಧ್ಯ ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದರು.

“ಸಮಸ್ಯೆಗಳನ್ನು ಬಗೆಹರಿಸಿದ್ದರೂ, ನಾನು ಏನನ್ನೂ ಪಡೆಯುತ್ತಿಲ್ಲ ಎಂದು ಒಬ್ಬ ವ್ಯಕ್ತಿಯು ಭಾವಿಸಿದರೆ ಅವನು ಹೊರಟು ಹೋಗುತ್ತಾನೆ. ಜಿತಿನ್ ಹೊರಹೋಗಲು ಒಳ್ಳೆಯ ಕಾರಣಗಳಿರಬಹುದು. ಪಕ್ಷವನ್ನು ತೊರೆದಿದ್ದಕ್ಕಾಗಿ ನಾನು ಅವರನ್ನು ದೂಷಿಸುವುದಿಲ್ಲ. ಅವರು ಬಿಜೆಪಿಗೆ ಸೇರಿದ ಕಾರಣಗಳಿಗಾಗಿ ನಾನು ಅವರನ್ನು ದೂಷಿಸುತ್ತೇನೆ. ಮೂರು ದಶಕಗಳಿಂದ ತಾನು ವಿರೋಧಿಸುತ್ತಿದ್ದ ಒಂದು ಸಿದ್ಧಾಂತವನ್ನು ಈಗ ಸ್ವೀಕರಿಸುತ್ತಿದ್ದೇನೆ ಎಂದು ಅವರು ಯಾವ ಮುಖದಿಂದ ಹೇಳಬಹುದು? ತತ್ವಬದ್ಧ ರಾಜಕೀಯದ ಬಗ್ಗೆ ಮಾತನಾಡುವ ಬಿಜೆಪಿಯವರು, ಜಿತಿನ್ ಅವರನ್ನು ಯಾವ ಮುಖದಿಂದ ತೆಗೆದುಕೊಳ್ಳುತ್ತಾರೆ? ಜನರು ಈ ರೀತಿಯ ರಾಜಕೀಯದ ಬಗ್ಗೆ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ” ಎಂದು ಸಿಬಲ್‍ ಹೇಳಿದ್ದಾರೆ.

ಮಧ್ಯಪ್ರದೇಶದ ಪಕ್ಷಾಂತರಗಳು ಮತ್ತು ಹಿಂದಿನ ಲೋಕಸಭಾ  ಚುನಾವಣಾ ಸೋಲುಗಳ ಬಗ್ಗೆ ಕಪಿಲ್‍ ಸಿಬಲ್, ಗುಲಾಮ್ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಮುಂತಾದ 23 ಕಾಂಗ್ರೆಸ್‍ ನಾಯಕರು ಸೋನಿಯಾ ಗಾಂಧಿಯವರಿಗೆ ಪತ್ರ ಬರೆದು, ಪಕ್ಷದಲ್ಲಿ ಆಂತರಿಕ ಸುಧಾರಣೆಗಳಿಗ ಮನವಿ ಮಾಡಿದ್ದರು.

ಕಳೆದ ವರ್ಷ ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯವೆದ್ದ ನಂತರ ಪಕ್ಷದಲ್ಲಿ ಉತ್ತಮ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದ ಸಚಿನ್ ಪೈಲಟ್ ಬಗ್ಗೆ ಆಗ ಊಹಾಪೋಹ ಹರಿದಾಡಿದ್ದವು.

ತಪ್ಪುಗಳ ತಿದ್ದುಪಡಿಯ ಭರವಸೆಯ ಮೇರೆಗೆ ಪೈಲಟ್ ಅವರ ಬಂಡಾಯವನ್ನು ಕೊನೆಗೊಳಿಸುವಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಯಶಸ್ವಿಯಾಗಿದ್ದರು.

ಪರಿಹಾರಗಳನ್ನು ನೀಡುವಲ್ಲಿ ಕಾಂಗ್ರೆಸ್ ವಿಫಲವಾದ ಬಗ್ಗೆ ಕೇಳಿದಾಗ ಸಿಬಲ್, “ಸಮಸ್ಯೆಗಳನ್ನು ಬಗೆಹರಿಸಲಾಗಿಲ್ಲ, ಅದು ನಿಜ. ಅವುಗಳನ್ನು ಆದಷ್ಟು ಬೇಗ ಪರಿಹರಿಸಬೇಕು. ನಾವು ಆ ಪ್ರಶ್ನೆಗಳನ್ನು  ಎತ್ತುವುದನ್ನು  ಮುಂದುವರಿಸುತ್ತೇವೆ. ಕೆಲವು ಕಾರಣಗಳಿಂದ  ನಾನು ಪಕ್ಷಕ್ಕೆ ಅಗತ್ಯವಿಲ್ಲ ಎಂದು ಪಕ್ಷ ನನಗೆ ಹೇಳಿದರೆ ನಾನು ಪಕ್ಷವನ್ನು ಬಿಡುತ್ತೇನೆ. ನಾನು ನನಗಾಗಿ ಈ ಪಕ್ಷದಲ್ಲಿ ಇಲ್ಲ. ಆದರೆ ರಾಜಕಾರಣಿಯಾಗಿ ಹುಟ್ಟಿದಾಗಿನಿಂದ ವಿರೋಧಿಸಿದ ಬಿಜೆಪಿಗೆ ನಾನು ಎಂದಿಗೂ ಸೇರುವುದಿಲ್ಲ. ಇದು ಜಿತೀನ್ ಪ್ರಸಾದ್‍ ಎತ್ತಿರುವ ಇಶ್ಯೂ’ ಎಂದು ಸಿಬಲ್‍ ತಿಳಿಸಿದ್ದಾರೆ.

ಪಕ್ಷದಲ್ಲಿ ಸುಧಾರಣೆಗಳು ಅಂದರೆ ಏನು ಎಂಬ ಪ್ರಶ್ನೆಗೆ,  “ನನ್ನನ್ನು ಕೇಳಬೇಡಿ, ಯಾರು ಅವನ್ನು ಪರಿಹರಿಸಬೇಕೋ ಅವರನ್ನು ಕೇಳಿ. ಕಾಂಗ್ರೆಸ್ ಮತ್ತೆ ಹಳೆಯ ಭವ್ಯತೆ ಪಡೆದ ಪಕ್ಷವಾಗಬೇಕು. ಅದಕ್ಕಾಗಿ ನಮಗೆ ಸುಧಾರಣೆಗಳು ಬೇಕಾಗುತ್ತವೆ. ನಾವು ಹೇಳಲು ಬಯಸುವುದನ್ನು ಪಕ್ಷ ಆಲಿಸುವ ಸಮಯವಿದು. ಮುಖ್ಯಸ್ಥರು ಆಲಿಸುವುದನ್ನು  ನಿಲ್ಲಿಸಿದರೆ ಪಕ್ಷ ಕುಸಿಯುತ್ತದೆ. ನಮಗೆ ಬೇಕಾಗಿರುವುದು ಕಾಂಗ್ರೆಸ್ ಪಕ್ಷ ನಮ್ಮ ಮಾತನ್ನು ಆಲಿಸಬೇಕು ಎಂಬುದಷ್ಟೇ’ ಎಂದು ಸಿಬಲ್‍ ಹೇಳಿದರು.


ಇದನ್ನೂ ಓದಿ: ಉತ್ತರ ಪ್ರದೇಶ ಸಿಎಂ ಬದಲಾವಣೆ ವದಂತಿ: ಮೋದಿ, ಶಾ ಭೇಟಿಯಾಗಲಿರುವ ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...