Homeಮುಖಪುಟಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

ಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

- Advertisement -
- Advertisement -

ಜಿತಿನ್ ಪ್ರಸಾದ್‍ ನಿರ್ಗಮನ ಕಾಂಗ್ರೆಸ್‍ ಪಕ್ಷದಲ್ಲಿನ ಆಳವಾದ ಬಿಕ್ಕಟ್ಟನ್ನು ಮತ್ತೊಮ್ಮೆ ಬಹಿರಂಗಗೊಳಿಸಿದೆ. ಈ ಹಿಂದೆ ಸೋನಿಯಾ ಗಾಂಧಿಗೆ ಪತ್ರ ಬರೆದ “ಜಿ -23” ಅಥವಾ 23 “ಭಿನ್ನಮತೀಯ” ನಾಯಕರ ಗುಂಪಿನ ಇತರ ಜನರ ಮೇಲೆ ಈ ಪ್ರಕರಣ ಬೆಳಕು ಚೆಲ್ಲುತ್ತದೆ. ಈ  ಜಿ-23 ಕ್ಲಬ್‌ನ ಪ್ರಮುಖ ಸದಸ್ಯರಾದ ಕಪಿಲ್ ಸಿಬಲ್, ಅಂತಹ ಯಾವುದೇ ಕ್ರಮವನ್ನು (ಜಿತಿನ್‍ ಮಾಡಿದಂತೆ) ನಾನು ತೆಗೆದುಕೊಳ್ಳಲಾರೆ. ನಾನು ಮೃತನಾದಾಗ ಅಂಥದ್ದನ್ನು ಊಹಿಸಬಹುದು, ನಾನೆಂದೂ ಬಿಜೆಪಿ ಸೇರಲಾರೆ ಎಂದಿದ್ದಾರೆ.

ಆದರೆ ಸಿಬಲ್‍ ತಮ್ಮ ಆಕ್ಷೇಪ ಮತ್ತು ಆಗ್ರಹಗಳನ್ನು ಪುನರುಚ್ಛರಿಸಿದ್ದಾರೆ. ಈ ಸಂದರ್ಭವನ್ನು ಅವರು ತಮ್ಮ ಪಕ್ಷದ ಉನ್ನತ ನಾಯಕರಿಗೆ ಒಂದು ಸಂದೇಶ ಕಳಿಸುವ ಅವಕಾಶವನ್ನಾಗಿ ಬಳಸಿಕೊಂಡಿದ್ದಾರೆ.

ಸಿದ್ಧಾಂತಕ್ಕಿಂತ ವೈಯಕ್ತಿಕ ಲಾಭದ ಆಧಾರದ ಮೇಲೆ ‘ಪ್ರಸಾದ್‍ ರಾಮ್‍’ (ಅವರೇ ಸೃಷ್ಟಿಸಿದ ಪದ) ಪಕ್ಷಾಂತರ ನಡೆದಿದೆ ಎಂಬುದನ್ನು ಅವರು ಒಪ್ಪಲಿಲ್ಲ ಎಂದು ಎನ್‍ಡಿಟಿವಿ ವರದಿ ಮಾಡಿದೆ.

“ಪಕ್ಷದ ನಾಯಕತ್ವ ಏನು ಮಾಡಿದೆ ಅಥವಾ ಮಾಡಿಲ್ಲ ಎಂಬುದರ ಕುರಿತು ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಾವು ಭಾರತೀಯ ರಾಜಕಾರಣದಲ್ಲಿ ಒಂದು ಹಂತವನ್ನು ತಲುಪಿದ್ದೇವೆ, ಅಲ್ಲಿ ಈ ರೀತಿಯ (ಜಿತಿನ್‍ ನಿರ್ಧಾರ) ನಿರ್ಧಾರಗಳು ಸಿದ್ಧಾಂತವನ್ನು ಆಧರಿಸಿಲ್ಲ. ಅವು ಈಗ ನಾನು ಪ್ರಸಾದ ರಾಮ್ ಎಂದು ಕರೆಯುವ ಆಧಾರದ ಮೇಲೆ ನಡೆಯುತ್ತಿರುವ ರಾಜಕೀಯ. ಇದು ಹಿಂದೆ ಆಯಾ ರಾಮ್ ಗಯಾ ರಾಮ್ ಆಗಿತ್ತು. ಪಶ್ಚಿಮ ಬಂಗಾಳದಲ್ಲಿ ಇದು ನಡೆಯುತ್ತಿರುವುದನ್ನು ನಾವು ನೋಡಿದ್ದೇವೆ. ಬಿಜೆಪಿ ಯಶಸ್ವಿಯಾಗಲಿದೆ ಎಂದು ಭಾವಿಸಿದ್ದರಿಂದ ಜನರು ಇದ್ದಕ್ಕಿದ್ದಂತೆ ಬಿಜೆಪಿಗೆ ಪಕ್ಷಾಂತರಗೊಂಡರು. ಈಗ ಬಹುಪಾಲು ರಾಜಕಾರಣಿಗಳು ಚುನಾವಣೆಗಳಲ್ಲಿ ಹೋರಾಡಲು ಬಯಸುವುದು ಒಂದು ಸಿದ್ಧಾಂತದ ಬಗೆಗಿನ ನಂಬಿಕೆಗಳ ಆಧಾರದ ಮೇಲೆ ಅಲ್ಲ, ಆದರೆ ವೈಯಕ್ತಿಕವಾಗಿ ಏನನ್ನಾದರೂ ಪಡೆಯಬಹುದು’ ಎಂಬ ದೃಢೀಕರಣದ ಆಧಾರದ ಮೇಲೆ.. ಮಧ್ಯಪ್ರದೇಶ, ಕರ್ನಾಟಕ, ಮಹಾರಾಷ್ಟ್ರದಲ್ಲೂ ಇದೇ ಸಂಭವಿಸಿದೆ…’ ಎಂದು ಹೇಳಿದ್ದಾರೆ.

ಕಾಂಗ್ರೆಸ್‍ಗೆ  ಸುಧಾರಣೆಗಳು ಅಗತ್ಯವಾಗಿವೆ ಮತ್ತು ಪಕ್ಷದ ನಾಯಕತ್ವವು ಇದನ್ನು ಆಲಿಸಬೇಕಾಗಿದೆ ಎಂದು ಸಿಬಲ್ ಹೇಳಿದರು. ಅದೇ ಸಮಯದಲ್ಲಿ, ಜಿತಿನ್ ಪ್ರಸಾದ ಅವರಂತಹ ವ್ಯಕ್ತಿ ಬಿಜೆಪಿಗೆ ಸೇರುತ್ತಾರೆ ಎಂಬುದಕ್ಕೆ ವಿವರಣೆ ನೀಡುವುಸು ಅಸಾಧ್ಯ ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದರು.

“ಸಮಸ್ಯೆಗಳನ್ನು ಬಗೆಹರಿಸಿದ್ದರೂ, ನಾನು ಏನನ್ನೂ ಪಡೆಯುತ್ತಿಲ್ಲ ಎಂದು ಒಬ್ಬ ವ್ಯಕ್ತಿಯು ಭಾವಿಸಿದರೆ ಅವನು ಹೊರಟು ಹೋಗುತ್ತಾನೆ. ಜಿತಿನ್ ಹೊರಹೋಗಲು ಒಳ್ಳೆಯ ಕಾರಣಗಳಿರಬಹುದು. ಪಕ್ಷವನ್ನು ತೊರೆದಿದ್ದಕ್ಕಾಗಿ ನಾನು ಅವರನ್ನು ದೂಷಿಸುವುದಿಲ್ಲ. ಅವರು ಬಿಜೆಪಿಗೆ ಸೇರಿದ ಕಾರಣಗಳಿಗಾಗಿ ನಾನು ಅವರನ್ನು ದೂಷಿಸುತ್ತೇನೆ. ಮೂರು ದಶಕಗಳಿಂದ ತಾನು ವಿರೋಧಿಸುತ್ತಿದ್ದ ಒಂದು ಸಿದ್ಧಾಂತವನ್ನು ಈಗ ಸ್ವೀಕರಿಸುತ್ತಿದ್ದೇನೆ ಎಂದು ಅವರು ಯಾವ ಮುಖದಿಂದ ಹೇಳಬಹುದು? ತತ್ವಬದ್ಧ ರಾಜಕೀಯದ ಬಗ್ಗೆ ಮಾತನಾಡುವ ಬಿಜೆಪಿಯವರು, ಜಿತಿನ್ ಅವರನ್ನು ಯಾವ ಮುಖದಿಂದ ತೆಗೆದುಕೊಳ್ಳುತ್ತಾರೆ? ಜನರು ಈ ರೀತಿಯ ರಾಜಕೀಯದ ಬಗ್ಗೆ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ” ಎಂದು ಸಿಬಲ್‍ ಹೇಳಿದ್ದಾರೆ.

ಮಧ್ಯಪ್ರದೇಶದ ಪಕ್ಷಾಂತರಗಳು ಮತ್ತು ಹಿಂದಿನ ಲೋಕಸಭಾ  ಚುನಾವಣಾ ಸೋಲುಗಳ ಬಗ್ಗೆ ಕಪಿಲ್‍ ಸಿಬಲ್, ಗುಲಾಮ್ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಮುಂತಾದ 23 ಕಾಂಗ್ರೆಸ್‍ ನಾಯಕರು ಸೋನಿಯಾ ಗಾಂಧಿಯವರಿಗೆ ಪತ್ರ ಬರೆದು, ಪಕ್ಷದಲ್ಲಿ ಆಂತರಿಕ ಸುಧಾರಣೆಗಳಿಗ ಮನವಿ ಮಾಡಿದ್ದರು.

ಕಳೆದ ವರ್ಷ ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯವೆದ್ದ ನಂತರ ಪಕ್ಷದಲ್ಲಿ ಉತ್ತಮ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದ ಸಚಿನ್ ಪೈಲಟ್ ಬಗ್ಗೆ ಆಗ ಊಹಾಪೋಹ ಹರಿದಾಡಿದ್ದವು.

ತಪ್ಪುಗಳ ತಿದ್ದುಪಡಿಯ ಭರವಸೆಯ ಮೇರೆಗೆ ಪೈಲಟ್ ಅವರ ಬಂಡಾಯವನ್ನು ಕೊನೆಗೊಳಿಸುವಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಯಶಸ್ವಿಯಾಗಿದ್ದರು.

ಪರಿಹಾರಗಳನ್ನು ನೀಡುವಲ್ಲಿ ಕಾಂಗ್ರೆಸ್ ವಿಫಲವಾದ ಬಗ್ಗೆ ಕೇಳಿದಾಗ ಸಿಬಲ್, “ಸಮಸ್ಯೆಗಳನ್ನು ಬಗೆಹರಿಸಲಾಗಿಲ್ಲ, ಅದು ನಿಜ. ಅವುಗಳನ್ನು ಆದಷ್ಟು ಬೇಗ ಪರಿಹರಿಸಬೇಕು. ನಾವು ಆ ಪ್ರಶ್ನೆಗಳನ್ನು  ಎತ್ತುವುದನ್ನು  ಮುಂದುವರಿಸುತ್ತೇವೆ. ಕೆಲವು ಕಾರಣಗಳಿಂದ  ನಾನು ಪಕ್ಷಕ್ಕೆ ಅಗತ್ಯವಿಲ್ಲ ಎಂದು ಪಕ್ಷ ನನಗೆ ಹೇಳಿದರೆ ನಾನು ಪಕ್ಷವನ್ನು ಬಿಡುತ್ತೇನೆ. ನಾನು ನನಗಾಗಿ ಈ ಪಕ್ಷದಲ್ಲಿ ಇಲ್ಲ. ಆದರೆ ರಾಜಕಾರಣಿಯಾಗಿ ಹುಟ್ಟಿದಾಗಿನಿಂದ ವಿರೋಧಿಸಿದ ಬಿಜೆಪಿಗೆ ನಾನು ಎಂದಿಗೂ ಸೇರುವುದಿಲ್ಲ. ಇದು ಜಿತೀನ್ ಪ್ರಸಾದ್‍ ಎತ್ತಿರುವ ಇಶ್ಯೂ’ ಎಂದು ಸಿಬಲ್‍ ತಿಳಿಸಿದ್ದಾರೆ.

ಪಕ್ಷದಲ್ಲಿ ಸುಧಾರಣೆಗಳು ಅಂದರೆ ಏನು ಎಂಬ ಪ್ರಶ್ನೆಗೆ,  “ನನ್ನನ್ನು ಕೇಳಬೇಡಿ, ಯಾರು ಅವನ್ನು ಪರಿಹರಿಸಬೇಕೋ ಅವರನ್ನು ಕೇಳಿ. ಕಾಂಗ್ರೆಸ್ ಮತ್ತೆ ಹಳೆಯ ಭವ್ಯತೆ ಪಡೆದ ಪಕ್ಷವಾಗಬೇಕು. ಅದಕ್ಕಾಗಿ ನಮಗೆ ಸುಧಾರಣೆಗಳು ಬೇಕಾಗುತ್ತವೆ. ನಾವು ಹೇಳಲು ಬಯಸುವುದನ್ನು ಪಕ್ಷ ಆಲಿಸುವ ಸಮಯವಿದು. ಮುಖ್ಯಸ್ಥರು ಆಲಿಸುವುದನ್ನು  ನಿಲ್ಲಿಸಿದರೆ ಪಕ್ಷ ಕುಸಿಯುತ್ತದೆ. ನಮಗೆ ಬೇಕಾಗಿರುವುದು ಕಾಂಗ್ರೆಸ್ ಪಕ್ಷ ನಮ್ಮ ಮಾತನ್ನು ಆಲಿಸಬೇಕು ಎಂಬುದಷ್ಟೇ’ ಎಂದು ಸಿಬಲ್‍ ಹೇಳಿದರು.


ಇದನ್ನೂ ಓದಿ: ಉತ್ತರ ಪ್ರದೇಶ ಸಿಎಂ ಬದಲಾವಣೆ ವದಂತಿ: ಮೋದಿ, ಶಾ ಭೇಟಿಯಾಗಲಿರುವ ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...