Homeಮುಖಪುಟಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

ಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

- Advertisement -
- Advertisement -

ಜಿತಿನ್ ಪ್ರಸಾದ್‍ ನಿರ್ಗಮನ ಕಾಂಗ್ರೆಸ್‍ ಪಕ್ಷದಲ್ಲಿನ ಆಳವಾದ ಬಿಕ್ಕಟ್ಟನ್ನು ಮತ್ತೊಮ್ಮೆ ಬಹಿರಂಗಗೊಳಿಸಿದೆ. ಈ ಹಿಂದೆ ಸೋನಿಯಾ ಗಾಂಧಿಗೆ ಪತ್ರ ಬರೆದ “ಜಿ -23” ಅಥವಾ 23 “ಭಿನ್ನಮತೀಯ” ನಾಯಕರ ಗುಂಪಿನ ಇತರ ಜನರ ಮೇಲೆ ಈ ಪ್ರಕರಣ ಬೆಳಕು ಚೆಲ್ಲುತ್ತದೆ. ಈ  ಜಿ-23 ಕ್ಲಬ್‌ನ ಪ್ರಮುಖ ಸದಸ್ಯರಾದ ಕಪಿಲ್ ಸಿಬಲ್, ಅಂತಹ ಯಾವುದೇ ಕ್ರಮವನ್ನು (ಜಿತಿನ್‍ ಮಾಡಿದಂತೆ) ನಾನು ತೆಗೆದುಕೊಳ್ಳಲಾರೆ. ನಾನು ಮೃತನಾದಾಗ ಅಂಥದ್ದನ್ನು ಊಹಿಸಬಹುದು, ನಾನೆಂದೂ ಬಿಜೆಪಿ ಸೇರಲಾರೆ ಎಂದಿದ್ದಾರೆ.

ಆದರೆ ಸಿಬಲ್‍ ತಮ್ಮ ಆಕ್ಷೇಪ ಮತ್ತು ಆಗ್ರಹಗಳನ್ನು ಪುನರುಚ್ಛರಿಸಿದ್ದಾರೆ. ಈ ಸಂದರ್ಭವನ್ನು ಅವರು ತಮ್ಮ ಪಕ್ಷದ ಉನ್ನತ ನಾಯಕರಿಗೆ ಒಂದು ಸಂದೇಶ ಕಳಿಸುವ ಅವಕಾಶವನ್ನಾಗಿ ಬಳಸಿಕೊಂಡಿದ್ದಾರೆ.

ಸಿದ್ಧಾಂತಕ್ಕಿಂತ ವೈಯಕ್ತಿಕ ಲಾಭದ ಆಧಾರದ ಮೇಲೆ ‘ಪ್ರಸಾದ್‍ ರಾಮ್‍’ (ಅವರೇ ಸೃಷ್ಟಿಸಿದ ಪದ) ಪಕ್ಷಾಂತರ ನಡೆದಿದೆ ಎಂಬುದನ್ನು ಅವರು ಒಪ್ಪಲಿಲ್ಲ ಎಂದು ಎನ್‍ಡಿಟಿವಿ ವರದಿ ಮಾಡಿದೆ.

“ಪಕ್ಷದ ನಾಯಕತ್ವ ಏನು ಮಾಡಿದೆ ಅಥವಾ ಮಾಡಿಲ್ಲ ಎಂಬುದರ ಕುರಿತು ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಾವು ಭಾರತೀಯ ರಾಜಕಾರಣದಲ್ಲಿ ಒಂದು ಹಂತವನ್ನು ತಲುಪಿದ್ದೇವೆ, ಅಲ್ಲಿ ಈ ರೀತಿಯ (ಜಿತಿನ್‍ ನಿರ್ಧಾರ) ನಿರ್ಧಾರಗಳು ಸಿದ್ಧಾಂತವನ್ನು ಆಧರಿಸಿಲ್ಲ. ಅವು ಈಗ ನಾನು ಪ್ರಸಾದ ರಾಮ್ ಎಂದು ಕರೆಯುವ ಆಧಾರದ ಮೇಲೆ ನಡೆಯುತ್ತಿರುವ ರಾಜಕೀಯ. ಇದು ಹಿಂದೆ ಆಯಾ ರಾಮ್ ಗಯಾ ರಾಮ್ ಆಗಿತ್ತು. ಪಶ್ಚಿಮ ಬಂಗಾಳದಲ್ಲಿ ಇದು ನಡೆಯುತ್ತಿರುವುದನ್ನು ನಾವು ನೋಡಿದ್ದೇವೆ. ಬಿಜೆಪಿ ಯಶಸ್ವಿಯಾಗಲಿದೆ ಎಂದು ಭಾವಿಸಿದ್ದರಿಂದ ಜನರು ಇದ್ದಕ್ಕಿದ್ದಂತೆ ಬಿಜೆಪಿಗೆ ಪಕ್ಷಾಂತರಗೊಂಡರು. ಈಗ ಬಹುಪಾಲು ರಾಜಕಾರಣಿಗಳು ಚುನಾವಣೆಗಳಲ್ಲಿ ಹೋರಾಡಲು ಬಯಸುವುದು ಒಂದು ಸಿದ್ಧಾಂತದ ಬಗೆಗಿನ ನಂಬಿಕೆಗಳ ಆಧಾರದ ಮೇಲೆ ಅಲ್ಲ, ಆದರೆ ವೈಯಕ್ತಿಕವಾಗಿ ಏನನ್ನಾದರೂ ಪಡೆಯಬಹುದು’ ಎಂಬ ದೃಢೀಕರಣದ ಆಧಾರದ ಮೇಲೆ.. ಮಧ್ಯಪ್ರದೇಶ, ಕರ್ನಾಟಕ, ಮಹಾರಾಷ್ಟ್ರದಲ್ಲೂ ಇದೇ ಸಂಭವಿಸಿದೆ…’ ಎಂದು ಹೇಳಿದ್ದಾರೆ.

ಕಾಂಗ್ರೆಸ್‍ಗೆ  ಸುಧಾರಣೆಗಳು ಅಗತ್ಯವಾಗಿವೆ ಮತ್ತು ಪಕ್ಷದ ನಾಯಕತ್ವವು ಇದನ್ನು ಆಲಿಸಬೇಕಾಗಿದೆ ಎಂದು ಸಿಬಲ್ ಹೇಳಿದರು. ಅದೇ ಸಮಯದಲ್ಲಿ, ಜಿತಿನ್ ಪ್ರಸಾದ ಅವರಂತಹ ವ್ಯಕ್ತಿ ಬಿಜೆಪಿಗೆ ಸೇರುತ್ತಾರೆ ಎಂಬುದಕ್ಕೆ ವಿವರಣೆ ನೀಡುವುಸು ಅಸಾಧ್ಯ ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದರು.

“ಸಮಸ್ಯೆಗಳನ್ನು ಬಗೆಹರಿಸಿದ್ದರೂ, ನಾನು ಏನನ್ನೂ ಪಡೆಯುತ್ತಿಲ್ಲ ಎಂದು ಒಬ್ಬ ವ್ಯಕ್ತಿಯು ಭಾವಿಸಿದರೆ ಅವನು ಹೊರಟು ಹೋಗುತ್ತಾನೆ. ಜಿತಿನ್ ಹೊರಹೋಗಲು ಒಳ್ಳೆಯ ಕಾರಣಗಳಿರಬಹುದು. ಪಕ್ಷವನ್ನು ತೊರೆದಿದ್ದಕ್ಕಾಗಿ ನಾನು ಅವರನ್ನು ದೂಷಿಸುವುದಿಲ್ಲ. ಅವರು ಬಿಜೆಪಿಗೆ ಸೇರಿದ ಕಾರಣಗಳಿಗಾಗಿ ನಾನು ಅವರನ್ನು ದೂಷಿಸುತ್ತೇನೆ. ಮೂರು ದಶಕಗಳಿಂದ ತಾನು ವಿರೋಧಿಸುತ್ತಿದ್ದ ಒಂದು ಸಿದ್ಧಾಂತವನ್ನು ಈಗ ಸ್ವೀಕರಿಸುತ್ತಿದ್ದೇನೆ ಎಂದು ಅವರು ಯಾವ ಮುಖದಿಂದ ಹೇಳಬಹುದು? ತತ್ವಬದ್ಧ ರಾಜಕೀಯದ ಬಗ್ಗೆ ಮಾತನಾಡುವ ಬಿಜೆಪಿಯವರು, ಜಿತಿನ್ ಅವರನ್ನು ಯಾವ ಮುಖದಿಂದ ತೆಗೆದುಕೊಳ್ಳುತ್ತಾರೆ? ಜನರು ಈ ರೀತಿಯ ರಾಜಕೀಯದ ಬಗ್ಗೆ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ” ಎಂದು ಸಿಬಲ್‍ ಹೇಳಿದ್ದಾರೆ.

ಮಧ್ಯಪ್ರದೇಶದ ಪಕ್ಷಾಂತರಗಳು ಮತ್ತು ಹಿಂದಿನ ಲೋಕಸಭಾ  ಚುನಾವಣಾ ಸೋಲುಗಳ ಬಗ್ಗೆ ಕಪಿಲ್‍ ಸಿಬಲ್, ಗುಲಾಮ್ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಮುಂತಾದ 23 ಕಾಂಗ್ರೆಸ್‍ ನಾಯಕರು ಸೋನಿಯಾ ಗಾಂಧಿಯವರಿಗೆ ಪತ್ರ ಬರೆದು, ಪಕ್ಷದಲ್ಲಿ ಆಂತರಿಕ ಸುಧಾರಣೆಗಳಿಗ ಮನವಿ ಮಾಡಿದ್ದರು.

ಕಳೆದ ವರ್ಷ ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯವೆದ್ದ ನಂತರ ಪಕ್ಷದಲ್ಲಿ ಉತ್ತಮ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದ ಸಚಿನ್ ಪೈಲಟ್ ಬಗ್ಗೆ ಆಗ ಊಹಾಪೋಹ ಹರಿದಾಡಿದ್ದವು.

ತಪ್ಪುಗಳ ತಿದ್ದುಪಡಿಯ ಭರವಸೆಯ ಮೇರೆಗೆ ಪೈಲಟ್ ಅವರ ಬಂಡಾಯವನ್ನು ಕೊನೆಗೊಳಿಸುವಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಯಶಸ್ವಿಯಾಗಿದ್ದರು.

ಪರಿಹಾರಗಳನ್ನು ನೀಡುವಲ್ಲಿ ಕಾಂಗ್ರೆಸ್ ವಿಫಲವಾದ ಬಗ್ಗೆ ಕೇಳಿದಾಗ ಸಿಬಲ್, “ಸಮಸ್ಯೆಗಳನ್ನು ಬಗೆಹರಿಸಲಾಗಿಲ್ಲ, ಅದು ನಿಜ. ಅವುಗಳನ್ನು ಆದಷ್ಟು ಬೇಗ ಪರಿಹರಿಸಬೇಕು. ನಾವು ಆ ಪ್ರಶ್ನೆಗಳನ್ನು  ಎತ್ತುವುದನ್ನು  ಮುಂದುವರಿಸುತ್ತೇವೆ. ಕೆಲವು ಕಾರಣಗಳಿಂದ  ನಾನು ಪಕ್ಷಕ್ಕೆ ಅಗತ್ಯವಿಲ್ಲ ಎಂದು ಪಕ್ಷ ನನಗೆ ಹೇಳಿದರೆ ನಾನು ಪಕ್ಷವನ್ನು ಬಿಡುತ್ತೇನೆ. ನಾನು ನನಗಾಗಿ ಈ ಪಕ್ಷದಲ್ಲಿ ಇಲ್ಲ. ಆದರೆ ರಾಜಕಾರಣಿಯಾಗಿ ಹುಟ್ಟಿದಾಗಿನಿಂದ ವಿರೋಧಿಸಿದ ಬಿಜೆಪಿಗೆ ನಾನು ಎಂದಿಗೂ ಸೇರುವುದಿಲ್ಲ. ಇದು ಜಿತೀನ್ ಪ್ರಸಾದ್‍ ಎತ್ತಿರುವ ಇಶ್ಯೂ’ ಎಂದು ಸಿಬಲ್‍ ತಿಳಿಸಿದ್ದಾರೆ.

ಪಕ್ಷದಲ್ಲಿ ಸುಧಾರಣೆಗಳು ಅಂದರೆ ಏನು ಎಂಬ ಪ್ರಶ್ನೆಗೆ,  “ನನ್ನನ್ನು ಕೇಳಬೇಡಿ, ಯಾರು ಅವನ್ನು ಪರಿಹರಿಸಬೇಕೋ ಅವರನ್ನು ಕೇಳಿ. ಕಾಂಗ್ರೆಸ್ ಮತ್ತೆ ಹಳೆಯ ಭವ್ಯತೆ ಪಡೆದ ಪಕ್ಷವಾಗಬೇಕು. ಅದಕ್ಕಾಗಿ ನಮಗೆ ಸುಧಾರಣೆಗಳು ಬೇಕಾಗುತ್ತವೆ. ನಾವು ಹೇಳಲು ಬಯಸುವುದನ್ನು ಪಕ್ಷ ಆಲಿಸುವ ಸಮಯವಿದು. ಮುಖ್ಯಸ್ಥರು ಆಲಿಸುವುದನ್ನು  ನಿಲ್ಲಿಸಿದರೆ ಪಕ್ಷ ಕುಸಿಯುತ್ತದೆ. ನಮಗೆ ಬೇಕಾಗಿರುವುದು ಕಾಂಗ್ರೆಸ್ ಪಕ್ಷ ನಮ್ಮ ಮಾತನ್ನು ಆಲಿಸಬೇಕು ಎಂಬುದಷ್ಟೇ’ ಎಂದು ಸಿಬಲ್‍ ಹೇಳಿದರು.


ಇದನ್ನೂ ಓದಿ: ಉತ್ತರ ಪ್ರದೇಶ ಸಿಎಂ ಬದಲಾವಣೆ ವದಂತಿ: ಮೋದಿ, ಶಾ ಭೇಟಿಯಾಗಲಿರುವ ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...