Homeಮುಖಪುಟಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

ಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

- Advertisement -
- Advertisement -

ಜಿತಿನ್ ಪ್ರಸಾದ್‍ ನಿರ್ಗಮನ ಕಾಂಗ್ರೆಸ್‍ ಪಕ್ಷದಲ್ಲಿನ ಆಳವಾದ ಬಿಕ್ಕಟ್ಟನ್ನು ಮತ್ತೊಮ್ಮೆ ಬಹಿರಂಗಗೊಳಿಸಿದೆ. ಈ ಹಿಂದೆ ಸೋನಿಯಾ ಗಾಂಧಿಗೆ ಪತ್ರ ಬರೆದ “ಜಿ -23” ಅಥವಾ 23 “ಭಿನ್ನಮತೀಯ” ನಾಯಕರ ಗುಂಪಿನ ಇತರ ಜನರ ಮೇಲೆ ಈ ಪ್ರಕರಣ ಬೆಳಕು ಚೆಲ್ಲುತ್ತದೆ. ಈ  ಜಿ-23 ಕ್ಲಬ್‌ನ ಪ್ರಮುಖ ಸದಸ್ಯರಾದ ಕಪಿಲ್ ಸಿಬಲ್, ಅಂತಹ ಯಾವುದೇ ಕ್ರಮವನ್ನು (ಜಿತಿನ್‍ ಮಾಡಿದಂತೆ) ನಾನು ತೆಗೆದುಕೊಳ್ಳಲಾರೆ. ನಾನು ಮೃತನಾದಾಗ ಅಂಥದ್ದನ್ನು ಊಹಿಸಬಹುದು, ನಾನೆಂದೂ ಬಿಜೆಪಿ ಸೇರಲಾರೆ ಎಂದಿದ್ದಾರೆ.

ಆದರೆ ಸಿಬಲ್‍ ತಮ್ಮ ಆಕ್ಷೇಪ ಮತ್ತು ಆಗ್ರಹಗಳನ್ನು ಪುನರುಚ್ಛರಿಸಿದ್ದಾರೆ. ಈ ಸಂದರ್ಭವನ್ನು ಅವರು ತಮ್ಮ ಪಕ್ಷದ ಉನ್ನತ ನಾಯಕರಿಗೆ ಒಂದು ಸಂದೇಶ ಕಳಿಸುವ ಅವಕಾಶವನ್ನಾಗಿ ಬಳಸಿಕೊಂಡಿದ್ದಾರೆ.

ಸಿದ್ಧಾಂತಕ್ಕಿಂತ ವೈಯಕ್ತಿಕ ಲಾಭದ ಆಧಾರದ ಮೇಲೆ ‘ಪ್ರಸಾದ್‍ ರಾಮ್‍’ (ಅವರೇ ಸೃಷ್ಟಿಸಿದ ಪದ) ಪಕ್ಷಾಂತರ ನಡೆದಿದೆ ಎಂಬುದನ್ನು ಅವರು ಒಪ್ಪಲಿಲ್ಲ ಎಂದು ಎನ್‍ಡಿಟಿವಿ ವರದಿ ಮಾಡಿದೆ.

“ಪಕ್ಷದ ನಾಯಕತ್ವ ಏನು ಮಾಡಿದೆ ಅಥವಾ ಮಾಡಿಲ್ಲ ಎಂಬುದರ ಕುರಿತು ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಾವು ಭಾರತೀಯ ರಾಜಕಾರಣದಲ್ಲಿ ಒಂದು ಹಂತವನ್ನು ತಲುಪಿದ್ದೇವೆ, ಅಲ್ಲಿ ಈ ರೀತಿಯ (ಜಿತಿನ್‍ ನಿರ್ಧಾರ) ನಿರ್ಧಾರಗಳು ಸಿದ್ಧಾಂತವನ್ನು ಆಧರಿಸಿಲ್ಲ. ಅವು ಈಗ ನಾನು ಪ್ರಸಾದ ರಾಮ್ ಎಂದು ಕರೆಯುವ ಆಧಾರದ ಮೇಲೆ ನಡೆಯುತ್ತಿರುವ ರಾಜಕೀಯ. ಇದು ಹಿಂದೆ ಆಯಾ ರಾಮ್ ಗಯಾ ರಾಮ್ ಆಗಿತ್ತು. ಪಶ್ಚಿಮ ಬಂಗಾಳದಲ್ಲಿ ಇದು ನಡೆಯುತ್ತಿರುವುದನ್ನು ನಾವು ನೋಡಿದ್ದೇವೆ. ಬಿಜೆಪಿ ಯಶಸ್ವಿಯಾಗಲಿದೆ ಎಂದು ಭಾವಿಸಿದ್ದರಿಂದ ಜನರು ಇದ್ದಕ್ಕಿದ್ದಂತೆ ಬಿಜೆಪಿಗೆ ಪಕ್ಷಾಂತರಗೊಂಡರು. ಈಗ ಬಹುಪಾಲು ರಾಜಕಾರಣಿಗಳು ಚುನಾವಣೆಗಳಲ್ಲಿ ಹೋರಾಡಲು ಬಯಸುವುದು ಒಂದು ಸಿದ್ಧಾಂತದ ಬಗೆಗಿನ ನಂಬಿಕೆಗಳ ಆಧಾರದ ಮೇಲೆ ಅಲ್ಲ, ಆದರೆ ವೈಯಕ್ತಿಕವಾಗಿ ಏನನ್ನಾದರೂ ಪಡೆಯಬಹುದು’ ಎಂಬ ದೃಢೀಕರಣದ ಆಧಾರದ ಮೇಲೆ.. ಮಧ್ಯಪ್ರದೇಶ, ಕರ್ನಾಟಕ, ಮಹಾರಾಷ್ಟ್ರದಲ್ಲೂ ಇದೇ ಸಂಭವಿಸಿದೆ…’ ಎಂದು ಹೇಳಿದ್ದಾರೆ.

ಕಾಂಗ್ರೆಸ್‍ಗೆ  ಸುಧಾರಣೆಗಳು ಅಗತ್ಯವಾಗಿವೆ ಮತ್ತು ಪಕ್ಷದ ನಾಯಕತ್ವವು ಇದನ್ನು ಆಲಿಸಬೇಕಾಗಿದೆ ಎಂದು ಸಿಬಲ್ ಹೇಳಿದರು. ಅದೇ ಸಮಯದಲ್ಲಿ, ಜಿತಿನ್ ಪ್ರಸಾದ ಅವರಂತಹ ವ್ಯಕ್ತಿ ಬಿಜೆಪಿಗೆ ಸೇರುತ್ತಾರೆ ಎಂಬುದಕ್ಕೆ ವಿವರಣೆ ನೀಡುವುಸು ಅಸಾಧ್ಯ ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದರು.

“ಸಮಸ್ಯೆಗಳನ್ನು ಬಗೆಹರಿಸಿದ್ದರೂ, ನಾನು ಏನನ್ನೂ ಪಡೆಯುತ್ತಿಲ್ಲ ಎಂದು ಒಬ್ಬ ವ್ಯಕ್ತಿಯು ಭಾವಿಸಿದರೆ ಅವನು ಹೊರಟು ಹೋಗುತ್ತಾನೆ. ಜಿತಿನ್ ಹೊರಹೋಗಲು ಒಳ್ಳೆಯ ಕಾರಣಗಳಿರಬಹುದು. ಪಕ್ಷವನ್ನು ತೊರೆದಿದ್ದಕ್ಕಾಗಿ ನಾನು ಅವರನ್ನು ದೂಷಿಸುವುದಿಲ್ಲ. ಅವರು ಬಿಜೆಪಿಗೆ ಸೇರಿದ ಕಾರಣಗಳಿಗಾಗಿ ನಾನು ಅವರನ್ನು ದೂಷಿಸುತ್ತೇನೆ. ಮೂರು ದಶಕಗಳಿಂದ ತಾನು ವಿರೋಧಿಸುತ್ತಿದ್ದ ಒಂದು ಸಿದ್ಧಾಂತವನ್ನು ಈಗ ಸ್ವೀಕರಿಸುತ್ತಿದ್ದೇನೆ ಎಂದು ಅವರು ಯಾವ ಮುಖದಿಂದ ಹೇಳಬಹುದು? ತತ್ವಬದ್ಧ ರಾಜಕೀಯದ ಬಗ್ಗೆ ಮಾತನಾಡುವ ಬಿಜೆಪಿಯವರು, ಜಿತಿನ್ ಅವರನ್ನು ಯಾವ ಮುಖದಿಂದ ತೆಗೆದುಕೊಳ್ಳುತ್ತಾರೆ? ಜನರು ಈ ರೀತಿಯ ರಾಜಕೀಯದ ಬಗ್ಗೆ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ” ಎಂದು ಸಿಬಲ್‍ ಹೇಳಿದ್ದಾರೆ.

ಮಧ್ಯಪ್ರದೇಶದ ಪಕ್ಷಾಂತರಗಳು ಮತ್ತು ಹಿಂದಿನ ಲೋಕಸಭಾ  ಚುನಾವಣಾ ಸೋಲುಗಳ ಬಗ್ಗೆ ಕಪಿಲ್‍ ಸಿಬಲ್, ಗುಲಾಮ್ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಮುಂತಾದ 23 ಕಾಂಗ್ರೆಸ್‍ ನಾಯಕರು ಸೋನಿಯಾ ಗಾಂಧಿಯವರಿಗೆ ಪತ್ರ ಬರೆದು, ಪಕ್ಷದಲ್ಲಿ ಆಂತರಿಕ ಸುಧಾರಣೆಗಳಿಗ ಮನವಿ ಮಾಡಿದ್ದರು.

ಕಳೆದ ವರ್ಷ ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯವೆದ್ದ ನಂತರ ಪಕ್ಷದಲ್ಲಿ ಉತ್ತಮ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದ ಸಚಿನ್ ಪೈಲಟ್ ಬಗ್ಗೆ ಆಗ ಊಹಾಪೋಹ ಹರಿದಾಡಿದ್ದವು.

ತಪ್ಪುಗಳ ತಿದ್ದುಪಡಿಯ ಭರವಸೆಯ ಮೇರೆಗೆ ಪೈಲಟ್ ಅವರ ಬಂಡಾಯವನ್ನು ಕೊನೆಗೊಳಿಸುವಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಯಶಸ್ವಿಯಾಗಿದ್ದರು.

ಪರಿಹಾರಗಳನ್ನು ನೀಡುವಲ್ಲಿ ಕಾಂಗ್ರೆಸ್ ವಿಫಲವಾದ ಬಗ್ಗೆ ಕೇಳಿದಾಗ ಸಿಬಲ್, “ಸಮಸ್ಯೆಗಳನ್ನು ಬಗೆಹರಿಸಲಾಗಿಲ್ಲ, ಅದು ನಿಜ. ಅವುಗಳನ್ನು ಆದಷ್ಟು ಬೇಗ ಪರಿಹರಿಸಬೇಕು. ನಾವು ಆ ಪ್ರಶ್ನೆಗಳನ್ನು  ಎತ್ತುವುದನ್ನು  ಮುಂದುವರಿಸುತ್ತೇವೆ. ಕೆಲವು ಕಾರಣಗಳಿಂದ  ನಾನು ಪಕ್ಷಕ್ಕೆ ಅಗತ್ಯವಿಲ್ಲ ಎಂದು ಪಕ್ಷ ನನಗೆ ಹೇಳಿದರೆ ನಾನು ಪಕ್ಷವನ್ನು ಬಿಡುತ್ತೇನೆ. ನಾನು ನನಗಾಗಿ ಈ ಪಕ್ಷದಲ್ಲಿ ಇಲ್ಲ. ಆದರೆ ರಾಜಕಾರಣಿಯಾಗಿ ಹುಟ್ಟಿದಾಗಿನಿಂದ ವಿರೋಧಿಸಿದ ಬಿಜೆಪಿಗೆ ನಾನು ಎಂದಿಗೂ ಸೇರುವುದಿಲ್ಲ. ಇದು ಜಿತೀನ್ ಪ್ರಸಾದ್‍ ಎತ್ತಿರುವ ಇಶ್ಯೂ’ ಎಂದು ಸಿಬಲ್‍ ತಿಳಿಸಿದ್ದಾರೆ.

ಪಕ್ಷದಲ್ಲಿ ಸುಧಾರಣೆಗಳು ಅಂದರೆ ಏನು ಎಂಬ ಪ್ರಶ್ನೆಗೆ,  “ನನ್ನನ್ನು ಕೇಳಬೇಡಿ, ಯಾರು ಅವನ್ನು ಪರಿಹರಿಸಬೇಕೋ ಅವರನ್ನು ಕೇಳಿ. ಕಾಂಗ್ರೆಸ್ ಮತ್ತೆ ಹಳೆಯ ಭವ್ಯತೆ ಪಡೆದ ಪಕ್ಷವಾಗಬೇಕು. ಅದಕ್ಕಾಗಿ ನಮಗೆ ಸುಧಾರಣೆಗಳು ಬೇಕಾಗುತ್ತವೆ. ನಾವು ಹೇಳಲು ಬಯಸುವುದನ್ನು ಪಕ್ಷ ಆಲಿಸುವ ಸಮಯವಿದು. ಮುಖ್ಯಸ್ಥರು ಆಲಿಸುವುದನ್ನು  ನಿಲ್ಲಿಸಿದರೆ ಪಕ್ಷ ಕುಸಿಯುತ್ತದೆ. ನಮಗೆ ಬೇಕಾಗಿರುವುದು ಕಾಂಗ್ರೆಸ್ ಪಕ್ಷ ನಮ್ಮ ಮಾತನ್ನು ಆಲಿಸಬೇಕು ಎಂಬುದಷ್ಟೇ’ ಎಂದು ಸಿಬಲ್‍ ಹೇಳಿದರು.


ಇದನ್ನೂ ಓದಿ: ಉತ್ತರ ಪ್ರದೇಶ ಸಿಎಂ ಬದಲಾವಣೆ ವದಂತಿ: ಮೋದಿ, ಶಾ ಭೇಟಿಯಾಗಲಿರುವ ಯೋಗಿ ಆದಿತ್ಯನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...