Homeಮುಖಪುಟಸಿಎಸ್‌ಕೆ ಬ್ಯಾಟಿಂಗ್ ಕ್ರಮಾಂಕ ಬದಲಿಸಿ ರಾಬಿನ್‌ಗೆ ವಂಚನೆ: ಜಾಲತಾಣದಲ್ಲಿ ಚರ್ಚೆ

ಸಿಎಸ್‌ಕೆ ಬ್ಯಾಟಿಂಗ್ ಕ್ರಮಾಂಕ ಬದಲಿಸಿ ರಾಬಿನ್‌ಗೆ ವಂಚನೆ: ಜಾಲತಾಣದಲ್ಲಿ ಚರ್ಚೆ

ಆರಂಭಿಕ ಆಟಗಾರರಾಗಿ ಕ್ರಿಸ್‌ಗೆ ಬರುತ್ತಿದ್ದ ರಾಬಿನ್‌ ಉತ್ತಪ್ಪ ಉತ್ತಮ ಪ್ರದರ್ಶನವನ್ನೂ ನೀಡಿದ್ದಾರೆ. ಕ್ರಮಾಂಕ ಬದಲಾದಾಗ ವಿಫಲರಾಗಿದ್ದಾರೆ

- Advertisement -
- Advertisement -

ಈ ಬಾರಿಯ ಐಪಿಎಲ್‌ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಚೆನ್ನೈ ಸೂಪರ್‌ ಕಿಂಗ್ಸ್‌ (ಸಿಎಸ್‌ಕೆ) ತಂಡಕ್ಕೆ ಆರಂಭದಲ್ಲಿ ರವೀಂದ್ರ ಜಡೇಜಾ ನಾಯಕರಾಗಿದ್ದರು. ಜಡೇಜಾ ನಾಯಕತ್ವ ತೊರೆದ ಬಳಿಕ ಮತ್ತೆ ಸಿಎಸ್‌ಕೆಗೆ ಮಹೇಂದ್ರ ಸಿಂಗ್‌ ಧೋನಿ ನಾಯಕತ್ವ ವಹಿಸಿದರು. ನಂತರದಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಸಿಎಸ್‌ಕೆ ಎರಡು ಪಂದ್ಯಗಳಲ್ಲಿ ಗೆದ್ದಿದೆ. ಆದರೆ ನಾಯಕ ಧೋನಿ ಧೋರಣೆ ಕುರಿತು ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

ಜಡೇಜಾ ನಾಯಕತ್ವದಲ್ಲಿ ತಂಡ ಮುನ್ನಡೆಯುತ್ತಿದ್ದಾಗ ಆರಂಭಿಕ ಆಟಗಾರರಾಗಿ ಅಥವಾ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದು ಮಿಂಚುತ್ತಿದ್ದ, ಕೆಲವು ಪಂದ್ಯಗಳ ಗೆಲುವಿಗೂ ಕಾರಣರಾಗಿದ್ದ ಕೊಡಗಿನ ರಾಬಿನ್‌ ಉತ್ತಪ್ಪ ಅವರ ಬ್ಯಾಟಿಂಗ್ ಕ್ರಮಾಂಕ ಬದಲಾಯಿಸಿರುವುದು ಕೆಲವರ ಆಕ್ರೋಶಕ್ಕೆ ಕಾರಣವಾಗಿದೆ. ಕೆಳ ಕ್ರಮಾಂಕದಲ್ಲಿ ರಾಬಿ‌ನ್ ಅವರನ್ನು ಬ್ಯಾಟಿಂಗ್‌ಗೆ ಇಳಿಸುತ್ತಿರುವ ನಾಯಕ ಧೋನಿ, ‘ಕ್ರಿಕೆಟ್ ರಾಜಕಾರಣ’ ಮಾಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಾರಿಯ ಐಪಿಎಲ್‌ನಲ್ಲಿ ಕೆಕೆಆರ್‌ ವಿರುದ್ಧ ಮಾರ್ಚ್ 26ರಂದು ಮೊದಲ ಪಂದ್ಯವನ್ನಾಡಿದ್ದ ಸಿಎಸ್‌ಕೆ ಕಡಿಮೆ ಮೊತ್ತವನ್ನು ಗಳಿಸಿತ್ತು. ಧೋನಿ ಅರ್ಧ ಶತಕ (50*/38) ಸಿಡಿಸಿದ್ದರು. 21 ಬಾಲ್‌ಗಳಲ್ಲಿ 28 ರನ್‌ ಗಳಿಸುವ ಮೂಲಕ ರಾಬಿನ್‌ ಉತ್ತಪ್ಪ ಅತಿ ಹೆಚ್ಚು ರನ್‌ ಗಳಿಸಿದ ಎರಡನೇ ಆಟಗಾರರಾಗಿದ್ದರು.

ಮಾರ್ಚ್‌ 31ರಂದು ಎಲ್‌ಎಸ್‌ಜಿ ವಿರುದ್ಧ ನಡೆದ ಪಂದ್ಯದಲ್ಲಿ 27 ಬಾಲ್‌ಗಳಲ್ಲಿ 50 ರನ್‌ ಸಿಡಿಸಿದ್ದ ರಾಬಿ‌ನ್‌ ಉತ್ತಪ್ಪ ಸಿಎಸ್‌ಕೆ ಅತ್ಯುತ್ತಮ ಮೊತ್ತ ಗಳಿಸಲು ಕಾರಣವಾಗಿದ್ದರು. ಸಿಎಸ್‌ಕೆ ಪರ ಈ ಪಂದ್ಯದಲ್ಲಿ ಅತಿಹೆಚ್ಚು ರನ್‌ ಸಿಡಿಸಿದ ಆಟಗಾರರಾಗಿಯೂ ಹೊಮ್ಮಿದ್ದರು.

ಇದನ್ನೂ ಓದಿರಿ: ಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌

ಏಪ್ರಿಲ್‌ 12ರಂದು ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸಿಎಸ್‌ಕೆ ಪರ ಶಿವ ದುಬೆ 46 ಬಾಲ್‌ಗಳಲ್ಲಿ 95 ರನ್‌ ಸಿಡಿಸಿ ಅಜೇಯರಾಗಿ ಉಳಿದರೆ, ರಾಬಿನ್ ಉತ್ತಪ್ಪ 50 ಬಾಲ್‌ಗಳಲ್ಲಿ 88 ರನ್‌ ಗಳಿಸಿ ಪಂದ್ಯದ ಗೆಲುವಿನಲ್ಲೂ ಮುಖ್ಯಪಾತ್ರ ವಹಿಸಿದ್ದರು.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆಂಬಟಿ ರಾಯುಡು (40/35) ಬಿಟ್ಟರೆ ಅತಿ ಹೆಚ್ಚು ರನ್‌ ಗಳಿಸಿದ್ದು ರಾಬಿನ್ ಉತ್ತಪ್ಪ (30/25). ಇತರ ಆಟಗಾರರಂತೆಯೇ ರಾಬಿನ್‌ ಕೆಲವು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿರುವುದು ನಿಜ. ಆದರೆ ಧೋನಿ ನಾಯಕತ್ವ ವಹಿಸಿಕೊಂಡ ಬಳಿಕ ರಾಬಿನ್ ಉತ್ತಪ್ಪರನ್ನು ಕೆಳಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಕಳುಹಿಸಿದ್ದಾರೆ. ಆಡಿರುವ ಮೂರು ಪಂದ್ಯಗಳಲ್ಲೂ ಇದು ನಿಚ್ಚಳವಾಗಿ ಕಾಣುತ್ತಿದೆ ಎಂಬ ಆರೋಪಗಳು ಬಂದಿವೆ.

ಧೋನಿ ನಾಯಕತ್ವ ವಹಿಸಿಕೊಂಡ ಬಳಿಕ ನಡೆದ ಮೊದಲ ಪಂದ್ಯದಲ್ಲಿ ಎಸ್‌ಆರ್‌ಎಚ್‌ ವಿರುದ್ಧ ಸಿಎಸ್‌ಕೆ ಗೆಲವು ಗಳಿಸಿತ್ತು. ಋತುರಾಜ್‌ ಗಾಯಕ್ವಾಡ್‌, ದೇವನ್‌ ಕಾನ್ವೆ ಉತ್ತಮ ಆರಂಭ ನೀಡಿದರು. 99 ರನ್‌ ಗಳಿಸಿ ಋತುರಾಜ್‌ ಔಟ್ ಆದ ಬಳಿಕ ಧೋನಿ ಕ್ರೀಸ್‌ಗೆ ಬಂದರು. 7 ಬಾಲ್‌ ಆಡಿ 8 ರನ್‌ ಗಳಿಸಿದರು. ಇನ್ನಿಂಗ್ಸ್‌ ಮುಗಿಯುವ ಹಂತದಲ್ಲಿದ್ದಾಗ ಧೋನಿ ಔಟ್ ಆದರು. ಆದರೆ ನಂತರದಲ್ಲಿ ಕ್ರೀಸ್‌ಗೆ ಬಂದಿದ್ದು ರವೀಂದ್ರ ಜಡೇಜಾ. ಈ ಭಾರಿಯ ಐಪಿಎಲ್‌ನಲ್ಲಿ ಜಡೇಜಾ ಉತ್ತಮ ಪ್ರದರ್ಶನವನ್ನೇನೂ ನೀಡಿಲ್ಲ ಎಂಬುದು ಗಮನಾರ್ಹ.

ಇದನ್ನೂ ಓದಿರಿ: IPL2022: ಸಿಎಸ್‌ಕೆ ನಾಯಕತ್ವ ತ್ಯಜಿಸಿದ ಜಡೇಜಾ – ಫಾಫ್ ಡು ಪ್ಲೆಸಿಸ್ ಕೂಡ ಅದೇ ಹಾದಿ ಹಿಡಿಯುವರೆ?

ಆರ್‌ಸಿಬಿ ವಿರುದ್ಧದ ಎರಡನೇ ಪಂದ್ಯದಲ್ಲಿ ರಾಬಿ‌ನ್‌  ಮೂರನೇ ಕ್ರಮಾಂಕದಲ್ಲಿ ಬಂದರೂ ಮೂರು ಬಾಲ್‌ಗಳಲ್ಲಿ ಒಂದು ರನ್‌ ಗಳಿಸಿ ಔಟ್‌ ಆದರು. ಆದರೆ ನಂತರದ ಪಂದ್ಯದಲ್ಲಿ ಏಳನೇ ಕ್ರಮಾಂಕದಲ್ಲಿ ರಾಬಿನ್‌ ಅವರಿಗೆ ಬ್ಯಾಟಿಂಗ್ ನೀಡಲಾಗಿದೆ. ಡೆಲ್ಲಿ ಕ್ಯಾಪಿಟಲ್‌ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಸಿಎಸ್‌ಕೆ ಗೆದ್ದಿದೆ. ದೇವನ್ ಕಾನ್ವೆ, ಶಿವಂ ದೂಬೆ, ಋತುರಾಜ್‌ ಉತ್ತಮ ರನ್‌ ಗಳಿಸಿದ್ದರು. ಆದರೆ ಮೊಯಿನ್ ಅಲಿ ಬಳಿಕ ರಾಬಿನ್‌ ಅವರನ್ನು ಕ್ರೀಸ್‌ಗಿಳಿಸಲಾಗಿತ್ತು. ಇನ್ನಿಂಗ್ಸ್‌ ಅಂತ್ಯದಲ್ಲಿ ಆಡಲು ಬಂದ ರಾಬಿನ್‌ ಉತ್ತಪ್ಪ ಕೇವಲ 1 ಬಾಲ್‌ ಆಡಿ ಡಕ್‌ಔಟ್‌ ಆದರು.

ಉತ್ತಪ್ಪ ಅವರನ್ನು ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಲೇಖಕ ಅಲ್ಮೇಡಾ ಗ್ಲಾಡ್‌ಸನ್‌, “ಈತ ಭಾರತದ ಕ್ಯಾಪ್ಟನ್ ಆಗಿದ್ದಾಗಲೂ ಓಪನರ್ ಆಗಿರುವ ರಾಬಿನ್ ಉತ್ತಪ್ಪರನ್ನು ಆರನೇ, ಏಳನೇ ಕ್ರಮಾಂಕದಲ್ಲಾಡಿಸಿ ಆತನ ಕರಿಯರನ್ನೇ ಹಾಳು ಮಾಡಿದ್ದ. ಇದೀಗ ಸಿಎಸ್ಕೆಯಲ್ಲೂ ಅದೇ ಮಾಡುತ್ತಿದ್ದಾನೆ. ಜಡೇಜಾ ಕ್ಯಾಪ್ಟನ್ ಆಗಿರುವತನಕ ಓಪನರ್ ಆಗಿ ಚೆನ್ನಾಗಿಯೇ ಪರ್ಫಾಮ್ ಮಾಡಿದ್ದ ರಾಬಿನ್ಗೆ ಈತ ಕ್ಯಾಪ್ಟನ್ ಆಗುತ್ತಲೇ ಬ್ಯಾಟಿಂಗೇ ಸಿಗುತ್ತಿಲ್ಲ. ಮತ್ತದೇ ನಾಟಕ, ಆರು, ಏಳನೇ ಕ್ರಮಾಂಕ. ಇವರು ಕಳೆದ ಹದಿನೈದು ವರುಷಗಳಲ್ಲಿ ಒಬ್ಬನೇ ಒಬ್ಬ ವಿಕೆಟ್-ಕೀಪರ್‌ನ ಕರಿಯರ್ ಸೆಟ್ ಆಗಲು ಬಿಡಲಿಲ್ಲ. ರಾಬಿನ್, ಪಾರ್ಥೀವ್, ಕಾರ್ತಿಕ್ ಎಲ್ಲರ ಅಂತಾರಾಷ್ಟ್ರೀಯ ಕರಿಯರ್ ಬ್ಲಾಕ್ ಮಾಡ್ಬಿಟ್ಟ. Without doubt, he is by far the greatest politician to have ever played cricket” ಎಂದು ಆರೋಪಿಸಿದ್ದಾರೆ.

“ಉತ್ತಪ್ಪ ಅವರ ಸ್ಥಾನವನ್ನು ವಿದೇಶಿ ಆಟಗಾರನಿಗೆ ಬಿಟ್ಟುಕೊಟ್ಟಿದ್ದು ಏಕೋ ಸರಿ ಕಾಣಲಿಲ್ಲ. ನಮ್ಮಲ್ಲೆ ಪ್ರತಿಭೆಗಳಿರುವಾಗ ಹೊರಗಿನ ಪ್ರತಿಭೆಗಳಿಗೆ ಮಣೆ ಹಾಕುವುದು ಎಷ್ಟು ಸರಿ?” ಎಂದು ಹಕೀಂ ತೀರ್ಥಹಳ್ಳಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: IPL2022: ಸತತ ಮುಗ್ಗರಿಸುತ್ತಿರುವ ದಿಗ್ಗಜ ತಂಡಗಳು – ಗೆಲುವಿನ ಅಲೆಯಲ್ಲಿ ಹೊಸ ತಂಡಗಳು

“ರಾಬಿನ್ ಉತ್ತಪ್ಪ ಟಿಟ್ವೆಂಟಿ ಫಾರ್ಮಾಟಿಗೆ ಅತ್ಯುತ್ತಮ ಆರಂಭಿಕ ಆಟಗಾರ. ಕೊಟ್ಟ ಅವಕಾಶ ಕಡಿಮೆ; ಆಯ್ಕೆ ಮಾಡಿದರೂ, ಆತನನ್ನು ಸರಿಯಾಗಿ‌ ಬಳಸಿಕೊಳ್ಳಲಿಲ್ಲ. ರಾಬಿನ್ ತರಹ ಕೆಲವು ಉತ್ತಮ ಆಟಗಾರರಿಗೂ ತಮ್ಮ ಪ್ರತಿಭೆಯನ್ನು ಸಂಪೂರ್ಣವಾಗಿ ಬಳಸಲು ಸಾಕಷ್ಟು ಅವಕಾಶಗಳು ದೊರೆಯಲಿಲ್ಲ. ಇದಕ್ಕೆ ಧೋನಿ ಹೊಣೆಯೋ ಅಥವಾ ಬಿಸಿಸಿಐ ಮ್ಯಾನೇಜ್ಮೆಂಟ್ ಅವರ ತೀರ್ಮಾನವೋ ತಿಳಿಯದು. ಬಿಸಿಸಿಐ ಎಂಬ ವ್ಯಾಪಾರೀಕರಣದ ಸಂಸ್ಥೆಯ ಪಾರದರ್ಶಕತೆಯ ಕುರಿತು ಸಾಕಷ್ಟು ಅನುಮಾನಗಳಿವೆ” ಎಂದು ಪವನ್‌ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

“ಧೋನಿಯ ಬಗ್ಗೆ ಹಾಗೇ ಹೇಳುವುದನ್ನು ನಾನು ಒಪ್ಪಲಾರೆ, ಒಬ್ಬ ಅತ್ಯುತ್ತಮ ಕ್ರಿಕೆಟರ್ ನಾಯಕನ ಸ್ಥಾನ ಹೊತ್ತು ತನ್ನ ಟಾಪ್ ಆರ್ಡರ್ ಬ್ಯಾಟಿಂಗ್ ಅನ್ನೇ ಫಿನಿಷರ್ ಮಾಡಿಕೊಳ್ಳಲಿಲ್ಲವೇ? ತಂಡದ ಅಗತ್ಯಕ್ಕೆ ತಕ್ಕ ಹಾಗೆ ಆಡಿಸುವವರು ಸ್ವಾರ್ಥದ ಲೇಪ ಹಚ್ಚುವುದು ನಾನು ಒಪ್ಪಲಾರೆ” ಎಂದು ಆದರ್ಶ‌ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...