Homeಮುಖಪುಟಸಿಎಸ್‌ಕೆ ಬ್ಯಾಟಿಂಗ್ ಕ್ರಮಾಂಕ ಬದಲಿಸಿ ರಾಬಿನ್‌ಗೆ ವಂಚನೆ: ಜಾಲತಾಣದಲ್ಲಿ ಚರ್ಚೆ

ಸಿಎಸ್‌ಕೆ ಬ್ಯಾಟಿಂಗ್ ಕ್ರಮಾಂಕ ಬದಲಿಸಿ ರಾಬಿನ್‌ಗೆ ವಂಚನೆ: ಜಾಲತಾಣದಲ್ಲಿ ಚರ್ಚೆ

ಆರಂಭಿಕ ಆಟಗಾರರಾಗಿ ಕ್ರಿಸ್‌ಗೆ ಬರುತ್ತಿದ್ದ ರಾಬಿನ್‌ ಉತ್ತಪ್ಪ ಉತ್ತಮ ಪ್ರದರ್ಶನವನ್ನೂ ನೀಡಿದ್ದಾರೆ. ಕ್ರಮಾಂಕ ಬದಲಾದಾಗ ವಿಫಲರಾಗಿದ್ದಾರೆ

- Advertisement -
- Advertisement -

ಈ ಬಾರಿಯ ಐಪಿಎಲ್‌ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಚೆನ್ನೈ ಸೂಪರ್‌ ಕಿಂಗ್ಸ್‌ (ಸಿಎಸ್‌ಕೆ) ತಂಡಕ್ಕೆ ಆರಂಭದಲ್ಲಿ ರವೀಂದ್ರ ಜಡೇಜಾ ನಾಯಕರಾಗಿದ್ದರು. ಜಡೇಜಾ ನಾಯಕತ್ವ ತೊರೆದ ಬಳಿಕ ಮತ್ತೆ ಸಿಎಸ್‌ಕೆಗೆ ಮಹೇಂದ್ರ ಸಿಂಗ್‌ ಧೋನಿ ನಾಯಕತ್ವ ವಹಿಸಿದರು. ನಂತರದಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಸಿಎಸ್‌ಕೆ ಎರಡು ಪಂದ್ಯಗಳಲ್ಲಿ ಗೆದ್ದಿದೆ. ಆದರೆ ನಾಯಕ ಧೋನಿ ಧೋರಣೆ ಕುರಿತು ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

ಜಡೇಜಾ ನಾಯಕತ್ವದಲ್ಲಿ ತಂಡ ಮುನ್ನಡೆಯುತ್ತಿದ್ದಾಗ ಆರಂಭಿಕ ಆಟಗಾರರಾಗಿ ಅಥವಾ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದು ಮಿಂಚುತ್ತಿದ್ದ, ಕೆಲವು ಪಂದ್ಯಗಳ ಗೆಲುವಿಗೂ ಕಾರಣರಾಗಿದ್ದ ಕೊಡಗಿನ ರಾಬಿನ್‌ ಉತ್ತಪ್ಪ ಅವರ ಬ್ಯಾಟಿಂಗ್ ಕ್ರಮಾಂಕ ಬದಲಾಯಿಸಿರುವುದು ಕೆಲವರ ಆಕ್ರೋಶಕ್ಕೆ ಕಾರಣವಾಗಿದೆ. ಕೆಳ ಕ್ರಮಾಂಕದಲ್ಲಿ ರಾಬಿ‌ನ್ ಅವರನ್ನು ಬ್ಯಾಟಿಂಗ್‌ಗೆ ಇಳಿಸುತ್ತಿರುವ ನಾಯಕ ಧೋನಿ, ‘ಕ್ರಿಕೆಟ್ ರಾಜಕಾರಣ’ ಮಾಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಾರಿಯ ಐಪಿಎಲ್‌ನಲ್ಲಿ ಕೆಕೆಆರ್‌ ವಿರುದ್ಧ ಮಾರ್ಚ್ 26ರಂದು ಮೊದಲ ಪಂದ್ಯವನ್ನಾಡಿದ್ದ ಸಿಎಸ್‌ಕೆ ಕಡಿಮೆ ಮೊತ್ತವನ್ನು ಗಳಿಸಿತ್ತು. ಧೋನಿ ಅರ್ಧ ಶತಕ (50*/38) ಸಿಡಿಸಿದ್ದರು. 21 ಬಾಲ್‌ಗಳಲ್ಲಿ 28 ರನ್‌ ಗಳಿಸುವ ಮೂಲಕ ರಾಬಿನ್‌ ಉತ್ತಪ್ಪ ಅತಿ ಹೆಚ್ಚು ರನ್‌ ಗಳಿಸಿದ ಎರಡನೇ ಆಟಗಾರರಾಗಿದ್ದರು.

ಮಾರ್ಚ್‌ 31ರಂದು ಎಲ್‌ಎಸ್‌ಜಿ ವಿರುದ್ಧ ನಡೆದ ಪಂದ್ಯದಲ್ಲಿ 27 ಬಾಲ್‌ಗಳಲ್ಲಿ 50 ರನ್‌ ಸಿಡಿಸಿದ್ದ ರಾಬಿ‌ನ್‌ ಉತ್ತಪ್ಪ ಸಿಎಸ್‌ಕೆ ಅತ್ಯುತ್ತಮ ಮೊತ್ತ ಗಳಿಸಲು ಕಾರಣವಾಗಿದ್ದರು. ಸಿಎಸ್‌ಕೆ ಪರ ಈ ಪಂದ್ಯದಲ್ಲಿ ಅತಿಹೆಚ್ಚು ರನ್‌ ಸಿಡಿಸಿದ ಆಟಗಾರರಾಗಿಯೂ ಹೊಮ್ಮಿದ್ದರು.

ಇದನ್ನೂ ಓದಿರಿ: ಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌

ಏಪ್ರಿಲ್‌ 12ರಂದು ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸಿಎಸ್‌ಕೆ ಪರ ಶಿವ ದುಬೆ 46 ಬಾಲ್‌ಗಳಲ್ಲಿ 95 ರನ್‌ ಸಿಡಿಸಿ ಅಜೇಯರಾಗಿ ಉಳಿದರೆ, ರಾಬಿನ್ ಉತ್ತಪ್ಪ 50 ಬಾಲ್‌ಗಳಲ್ಲಿ 88 ರನ್‌ ಗಳಿಸಿ ಪಂದ್ಯದ ಗೆಲುವಿನಲ್ಲೂ ಮುಖ್ಯಪಾತ್ರ ವಹಿಸಿದ್ದರು.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆಂಬಟಿ ರಾಯುಡು (40/35) ಬಿಟ್ಟರೆ ಅತಿ ಹೆಚ್ಚು ರನ್‌ ಗಳಿಸಿದ್ದು ರಾಬಿನ್ ಉತ್ತಪ್ಪ (30/25). ಇತರ ಆಟಗಾರರಂತೆಯೇ ರಾಬಿನ್‌ ಕೆಲವು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿರುವುದು ನಿಜ. ಆದರೆ ಧೋನಿ ನಾಯಕತ್ವ ವಹಿಸಿಕೊಂಡ ಬಳಿಕ ರಾಬಿನ್ ಉತ್ತಪ್ಪರನ್ನು ಕೆಳಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಕಳುಹಿಸಿದ್ದಾರೆ. ಆಡಿರುವ ಮೂರು ಪಂದ್ಯಗಳಲ್ಲೂ ಇದು ನಿಚ್ಚಳವಾಗಿ ಕಾಣುತ್ತಿದೆ ಎಂಬ ಆರೋಪಗಳು ಬಂದಿವೆ.

ಧೋನಿ ನಾಯಕತ್ವ ವಹಿಸಿಕೊಂಡ ಬಳಿಕ ನಡೆದ ಮೊದಲ ಪಂದ್ಯದಲ್ಲಿ ಎಸ್‌ಆರ್‌ಎಚ್‌ ವಿರುದ್ಧ ಸಿಎಸ್‌ಕೆ ಗೆಲವು ಗಳಿಸಿತ್ತು. ಋತುರಾಜ್‌ ಗಾಯಕ್ವಾಡ್‌, ದೇವನ್‌ ಕಾನ್ವೆ ಉತ್ತಮ ಆರಂಭ ನೀಡಿದರು. 99 ರನ್‌ ಗಳಿಸಿ ಋತುರಾಜ್‌ ಔಟ್ ಆದ ಬಳಿಕ ಧೋನಿ ಕ್ರೀಸ್‌ಗೆ ಬಂದರು. 7 ಬಾಲ್‌ ಆಡಿ 8 ರನ್‌ ಗಳಿಸಿದರು. ಇನ್ನಿಂಗ್ಸ್‌ ಮುಗಿಯುವ ಹಂತದಲ್ಲಿದ್ದಾಗ ಧೋನಿ ಔಟ್ ಆದರು. ಆದರೆ ನಂತರದಲ್ಲಿ ಕ್ರೀಸ್‌ಗೆ ಬಂದಿದ್ದು ರವೀಂದ್ರ ಜಡೇಜಾ. ಈ ಭಾರಿಯ ಐಪಿಎಲ್‌ನಲ್ಲಿ ಜಡೇಜಾ ಉತ್ತಮ ಪ್ರದರ್ಶನವನ್ನೇನೂ ನೀಡಿಲ್ಲ ಎಂಬುದು ಗಮನಾರ್ಹ.

ಇದನ್ನೂ ಓದಿರಿ: IPL2022: ಸಿಎಸ್‌ಕೆ ನಾಯಕತ್ವ ತ್ಯಜಿಸಿದ ಜಡೇಜಾ – ಫಾಫ್ ಡು ಪ್ಲೆಸಿಸ್ ಕೂಡ ಅದೇ ಹಾದಿ ಹಿಡಿಯುವರೆ?

ಆರ್‌ಸಿಬಿ ವಿರುದ್ಧದ ಎರಡನೇ ಪಂದ್ಯದಲ್ಲಿ ರಾಬಿ‌ನ್‌  ಮೂರನೇ ಕ್ರಮಾಂಕದಲ್ಲಿ ಬಂದರೂ ಮೂರು ಬಾಲ್‌ಗಳಲ್ಲಿ ಒಂದು ರನ್‌ ಗಳಿಸಿ ಔಟ್‌ ಆದರು. ಆದರೆ ನಂತರದ ಪಂದ್ಯದಲ್ಲಿ ಏಳನೇ ಕ್ರಮಾಂಕದಲ್ಲಿ ರಾಬಿನ್‌ ಅವರಿಗೆ ಬ್ಯಾಟಿಂಗ್ ನೀಡಲಾಗಿದೆ. ಡೆಲ್ಲಿ ಕ್ಯಾಪಿಟಲ್‌ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಸಿಎಸ್‌ಕೆ ಗೆದ್ದಿದೆ. ದೇವನ್ ಕಾನ್ವೆ, ಶಿವಂ ದೂಬೆ, ಋತುರಾಜ್‌ ಉತ್ತಮ ರನ್‌ ಗಳಿಸಿದ್ದರು. ಆದರೆ ಮೊಯಿನ್ ಅಲಿ ಬಳಿಕ ರಾಬಿನ್‌ ಅವರನ್ನು ಕ್ರೀಸ್‌ಗಿಳಿಸಲಾಗಿತ್ತು. ಇನ್ನಿಂಗ್ಸ್‌ ಅಂತ್ಯದಲ್ಲಿ ಆಡಲು ಬಂದ ರಾಬಿನ್‌ ಉತ್ತಪ್ಪ ಕೇವಲ 1 ಬಾಲ್‌ ಆಡಿ ಡಕ್‌ಔಟ್‌ ಆದರು.

ಉತ್ತಪ್ಪ ಅವರನ್ನು ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಲೇಖಕ ಅಲ್ಮೇಡಾ ಗ್ಲಾಡ್‌ಸನ್‌, “ಈತ ಭಾರತದ ಕ್ಯಾಪ್ಟನ್ ಆಗಿದ್ದಾಗಲೂ ಓಪನರ್ ಆಗಿರುವ ರಾಬಿನ್ ಉತ್ತಪ್ಪರನ್ನು ಆರನೇ, ಏಳನೇ ಕ್ರಮಾಂಕದಲ್ಲಾಡಿಸಿ ಆತನ ಕರಿಯರನ್ನೇ ಹಾಳು ಮಾಡಿದ್ದ. ಇದೀಗ ಸಿಎಸ್ಕೆಯಲ್ಲೂ ಅದೇ ಮಾಡುತ್ತಿದ್ದಾನೆ. ಜಡೇಜಾ ಕ್ಯಾಪ್ಟನ್ ಆಗಿರುವತನಕ ಓಪನರ್ ಆಗಿ ಚೆನ್ನಾಗಿಯೇ ಪರ್ಫಾಮ್ ಮಾಡಿದ್ದ ರಾಬಿನ್ಗೆ ಈತ ಕ್ಯಾಪ್ಟನ್ ಆಗುತ್ತಲೇ ಬ್ಯಾಟಿಂಗೇ ಸಿಗುತ್ತಿಲ್ಲ. ಮತ್ತದೇ ನಾಟಕ, ಆರು, ಏಳನೇ ಕ್ರಮಾಂಕ. ಇವರು ಕಳೆದ ಹದಿನೈದು ವರುಷಗಳಲ್ಲಿ ಒಬ್ಬನೇ ಒಬ್ಬ ವಿಕೆಟ್-ಕೀಪರ್‌ನ ಕರಿಯರ್ ಸೆಟ್ ಆಗಲು ಬಿಡಲಿಲ್ಲ. ರಾಬಿನ್, ಪಾರ್ಥೀವ್, ಕಾರ್ತಿಕ್ ಎಲ್ಲರ ಅಂತಾರಾಷ್ಟ್ರೀಯ ಕರಿಯರ್ ಬ್ಲಾಕ್ ಮಾಡ್ಬಿಟ್ಟ. Without doubt, he is by far the greatest politician to have ever played cricket” ಎಂದು ಆರೋಪಿಸಿದ್ದಾರೆ.

“ಉತ್ತಪ್ಪ ಅವರ ಸ್ಥಾನವನ್ನು ವಿದೇಶಿ ಆಟಗಾರನಿಗೆ ಬಿಟ್ಟುಕೊಟ್ಟಿದ್ದು ಏಕೋ ಸರಿ ಕಾಣಲಿಲ್ಲ. ನಮ್ಮಲ್ಲೆ ಪ್ರತಿಭೆಗಳಿರುವಾಗ ಹೊರಗಿನ ಪ್ರತಿಭೆಗಳಿಗೆ ಮಣೆ ಹಾಕುವುದು ಎಷ್ಟು ಸರಿ?” ಎಂದು ಹಕೀಂ ತೀರ್ಥಹಳ್ಳಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: IPL2022: ಸತತ ಮುಗ್ಗರಿಸುತ್ತಿರುವ ದಿಗ್ಗಜ ತಂಡಗಳು – ಗೆಲುವಿನ ಅಲೆಯಲ್ಲಿ ಹೊಸ ತಂಡಗಳು

“ರಾಬಿನ್ ಉತ್ತಪ್ಪ ಟಿಟ್ವೆಂಟಿ ಫಾರ್ಮಾಟಿಗೆ ಅತ್ಯುತ್ತಮ ಆರಂಭಿಕ ಆಟಗಾರ. ಕೊಟ್ಟ ಅವಕಾಶ ಕಡಿಮೆ; ಆಯ್ಕೆ ಮಾಡಿದರೂ, ಆತನನ್ನು ಸರಿಯಾಗಿ‌ ಬಳಸಿಕೊಳ್ಳಲಿಲ್ಲ. ರಾಬಿನ್ ತರಹ ಕೆಲವು ಉತ್ತಮ ಆಟಗಾರರಿಗೂ ತಮ್ಮ ಪ್ರತಿಭೆಯನ್ನು ಸಂಪೂರ್ಣವಾಗಿ ಬಳಸಲು ಸಾಕಷ್ಟು ಅವಕಾಶಗಳು ದೊರೆಯಲಿಲ್ಲ. ಇದಕ್ಕೆ ಧೋನಿ ಹೊಣೆಯೋ ಅಥವಾ ಬಿಸಿಸಿಐ ಮ್ಯಾನೇಜ್ಮೆಂಟ್ ಅವರ ತೀರ್ಮಾನವೋ ತಿಳಿಯದು. ಬಿಸಿಸಿಐ ಎಂಬ ವ್ಯಾಪಾರೀಕರಣದ ಸಂಸ್ಥೆಯ ಪಾರದರ್ಶಕತೆಯ ಕುರಿತು ಸಾಕಷ್ಟು ಅನುಮಾನಗಳಿವೆ” ಎಂದು ಪವನ್‌ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

“ಧೋನಿಯ ಬಗ್ಗೆ ಹಾಗೇ ಹೇಳುವುದನ್ನು ನಾನು ಒಪ್ಪಲಾರೆ, ಒಬ್ಬ ಅತ್ಯುತ್ತಮ ಕ್ರಿಕೆಟರ್ ನಾಯಕನ ಸ್ಥಾನ ಹೊತ್ತು ತನ್ನ ಟಾಪ್ ಆರ್ಡರ್ ಬ್ಯಾಟಿಂಗ್ ಅನ್ನೇ ಫಿನಿಷರ್ ಮಾಡಿಕೊಳ್ಳಲಿಲ್ಲವೇ? ತಂಡದ ಅಗತ್ಯಕ್ಕೆ ತಕ್ಕ ಹಾಗೆ ಆಡಿಸುವವರು ಸ್ವಾರ್ಥದ ಲೇಪ ಹಚ್ಚುವುದು ನಾನು ಒಪ್ಪಲಾರೆ” ಎಂದು ಆದರ್ಶ‌ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...