Homeಮುಖಪುಟಡಿಸೆಂಬರ್ 25 - ಅಂಬೇಡ್ಕರ್ 'ಮನುಸ್ಮೃತಿ' ಸುಟ್ಟ ದಿನ

ಡಿಸೆಂಬರ್ 25 – ಅಂಬೇಡ್ಕರ್ ‘ಮನುಸ್ಮೃತಿ’ ಸುಟ್ಟ ದಿನ

ಮನುಸ್ಮೃತಿಗೆ ಪ್ರತಿಯಾಗಿ ಭಾರತಕ್ಕೆ ನಿಜವಾದ‌ ಸಂವಿಧಾನವನ್ನು ಅಂಬೇಡ್ಕರ್ ಬರೆದರು, ಆದರೆ ಇವತ್ತು ಅಂಬೇಡ್ಕರ್ ಸಂವಿಧಾನದ ಮೇಲೆ ಮನುಸ್ಮೃತಿ ಸವಾರಿ ಮಾಡಲು ಪ್ರಯತ್ನಿಸುತ್ತಿದೆ.

- Advertisement -
- Advertisement -

ಭಾರತದ ಚರಿತ್ರೆಯಲ್ಲಿ ಡಿಸೆಂಬರ್ 25 ಬಹು ಮುಖ್ಯವಾದ ದಿನ. ಅಸ್ಪೃಶ್ಯತೆ, ಶ್ರೇಣೀಕೃತ ಜಾತಿ ಪದ್ಧತಿ, ತಾರತಮ್ಯಗಳ ಅಪಮೌಲ್ಯಗಳನ್ನೇ ಮೌಲ್ಯಗಳನ್ನಾಗಿಸಿ ಭಾರತೀಯ ಸುಪ್ತ ಮನಸ್ಸನ್ನು ಆಳುತ್ತಿರುವ ‘ಮನುಸ್ಮೃತಿ’ ಎಂಬ ‘ಭೂತಕಾಲದ ಸಂವಿಧಾನ’ವನ್ನು ಡಾ‌. ಬಿ.ಆರ್. ಅಂಬೇಡ್ಕರ್ ಸಾರ್ವಜನಿಕವಾಗಿ ಸುಟ್ಟು ಪ್ರತಿಭಟಿಸಿದ ದಿನ.

ಭಾರತದ ಹಿಂದೂ ಮನಸ್ಸು ಬದಲಾಗಬಹುದು, ಹಿಂದೂ ಧರ್ಮವನ್ನು ಒಳಗಿದ್ದುಕೊಂಡೇ ಸುಧಾರಿಸಬಹುದೇನೋ ಎನ್ನುವ ನಂಬಿಕೆಯಲ್ಲಿ ಮಹಾಡ್, ಚೌಡಾರ್ ಸತ್ಯಾಗ್ರಹಗಳನ್ನು ನಡೆಸಿದ ಅಂಬೇಡ್ಕರ್ ಅವರಿಗೆ ದೊಡ್ಡ ನಿರಾಶೆ ಕಾದಿತ್ತು. ಆಗಿನ ಸರ್ಕಾರ 1923 ರಲ್ಲೆ The Bole Resolution ಮೂಲಕ ಸಾರ್ವಜನಿಕ ಹಣದಲ್ಲಿ ನಿರ್ಮಾಣವಾಗಿರುವ ಕೆರೆಗೆಳು, ಬಾವಿಗಳು, ಧರ್ಮಶಾಲೆಗಳು ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳು ಎಲ್ಲರಿಗೂ ಮುಕ್ತವಾಗಿರಬೇಕು ಅನ್ನುವ ಕಾಯ್ದೆ ತಂದಿದ್ದರೂ ಅಸ್ಪೃಶ್ಯರಿಗೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಇದನ್ನೂ ಓದಿ: ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ತಮಗೆ ಇದ್ದ ಹಕ್ಕನ್ನು ಪಡೆಯುವುದಕ್ಕಾಗಿಯೇ ಅಂಬೇಡ್ಕರ್ ಚೌಡಾರ್ ಕೆರೆ ನೀರನ್ನು ಸಾರ್ವಜನಿಕವಾಗಿ ಕುಡಿಯುವ ಚಳುವಳಿಯನ್ನು ಆಯೋಜಿಸಿದರು. ಆದರೆ ಅಸ್ಪೃಶ್ಯರು ಮುಟ್ಟಿದ್ದಕ್ಕಾಗಿ ಕೆರೆಯೆ ಮಲಿನವಾಯಿತೆಂದು ಗೋಳಾಡಿದ ಮೇಲ್ಜಾತಿಯ ಜನ ಹಸುವಿನ ಸಗಣಿ, ಗಂಜಲ, ಹಾಲು, ತುಪ್ಪ, ಮೊಸರನ್ನು ಸುರಿದು ವೇದಗಳನ್ನು ಪಠಿಸುತ್ತಾ ಕೆರೆಯ ‘ಶುದ್ದೀಕರಣ’ ಮಾಡಿದರು. ದಲಿತರು ತಮ್ಮ ಹಕ್ಕುಗಳಿಗಾಗಿ ಆಗ್ರಹಿಸಿದರೆ ವಿದ್ಯಾವಂತ, ಪ್ರಗತಿಪರ ಹಿಂದೂಗಳು ಅವರ ಜೊತೆಗೂಡಿ ಹೋರಾಟ ಮಾಡಬಹುದು ಹಿಂದೂ ಧರ್ಮ ಸುಧಾರಣೆಗೆ ಇದು ಕೂಡ ನೆರವಾಗಬಹುದು ಎಂಬ ಅಂಬೇಡ್ಕರ್ ನಿರೀಕ್ಷೆ ಸುಳ್ಳಾಯಿತು. ಮಹಾಡ್, ಚೌಡಾರ್ ಸತ್ಯಾಗ್ರಹಗಳಲ್ಲಿ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದವರ ಮೇಲೆ ಹಿಂಸಾತ್ಮಕವಾದ ದಾಳಿಗಳನ್ನು ಮೇಲ್ಜಾತಿಗಳು ಮಾಡಿದವು.

ಇದಾದ ಒಂಬತ್ತು ತಿಂಗಳ ನಂತರ ಚೌಡಾರ್ ಸತ್ಯಾಗ್ರಹವನ್ನು ಅಂಬೇಡ್ಕರ್ ಆಯೋಜಿಸಿದರು. ಆಗ ಮತ್ತೆ ಮೇಲ್ಜಾತಿಯ ಹಿಂದೂಗಳು ಚೌಡಾರ್ ಕೆರೆ ಸಾರ್ವಜನಿಕ ಆಸ್ತಿಯಲ್ಲ ಖಾಸಗಿ ಸ್ವತ್ತು ಎಂದು ಕೋರ್ಟಿಗೆ ಹೋದರು. ಸತ್ಯಾಗ್ರಹ ತಡೆಯಲು ಪ್ರಯತ್ನ ಮಾಡಿದರು. ಇಷ್ಟೆಲ್ಲ ಪ್ರತಿಕೂಲ ಸನ್ನಿವೇಶಗಳ ನಡುವೆಯೂ ಸತ್ಯಾಗ್ರಹ ನಡೆಸಿದ ಅಂಬೇಡ್ಕರ್ ಡಿಸೆಂಬರ್ 25, 1927 ರಂದು ಹಿಂದೂ ಧರ್ಮದ ಆಧಾರವಾಗಿರುವ, ಬ್ರಾಹ್ಮಣ್ಯವನ್ನು ಎತ್ತಿ ಹಿಡಿಯುವ ಸೈದ್ದಾಂತಿಕ ಗ್ರಂಥವಾಗಿರುವ ‘ಮನುಸ್ಮೃತಿ’ಯನ್ನು ಸಾರ್ವಜನಿಕವಾಗಿ ಸುಟ್ಟು ಹಿಂದೂ ಧರ್ಮದ ಕರ್ಮಠತನ, ಅಸಮಾನತೆಯ ವಿರುದ್ಧ ಸಮರ ಸಾರಿದರು.

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

PC: bakeryprasad/instagram

ವಿಶೇಷವೆಂದರೆ ಈ ಸಮಾವೇಶದಲ್ಲಿ ಮನುಸ್ಮೃತಿಗೆ ಸಾರ್ವಜನಿಕವಾಗಿ ಬೆಂಕಿ ಇಟ್ಟವರು ಬಾಪೂಸಾಹೇಬ ಸಹಸ್ರಬುದ್ಧೆ ಎನ್ನುವ ಪ್ರಗತಿಪರ ಬ್ರಾಹ್ಮಣ. ಇದಾದ ಮೇಲೆ ಹಿಂದೂ ಧರ್ಮದ ಒಳಗಿದ್ದು ಅದನ್ನು ಸುಧಾರಿಸುವುದು ಸಾಧ್ಯವಿಲ್ಲ ಎಂದು ಮನಗಂಡು ಅಂಬೇಡ್ಕರ್ ಹಿಂದೂ ಧರ್ಮ ತ್ಯಜಿಸುವ ನಿರ್ಧಾರ ಮಾಡಿದರು‌. ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ ಆದರೆ ಹಿಂದೂವಾಗಿ ಸಾಯುವುದಿಲ್ಲ ಎಂದು ಸಾರ್ವಜನಿಕವಾಗಿ ಘೋಷಿಸಿದರು.

ಮುಂದೆ ಮನುಸ್ಮೃತಿಗೆ ಪ್ರತಿಯಾಗಿ ಭಾರತಕ್ಕೆ ನಿಜವಾದ‌ ಸಂವಿಧಾನವನ್ನು ಅಂಬೇಡ್ಕರ್ ಅವರೇ ಬರೆದರು. ಆದರೆ ಇವತ್ತು ಅಂಬೇಡ್ಕರ್ ಸಂವಿಧಾನದ ಮೇಲೆ ಮನುಸ್ಮೃತಿ ಸವಾರಿ ಮಾಡಲು ಪ್ರಯತ್ನಿಸುತ್ತಿದೆ. ಭಾರತದ ಮನಸ್ಸಿನಲ್ಲಿರುವ ಈ ಸುಪ್ತ ಸಂವಿಧಾನವನ್ನು ಸುಟ್ಟರೆ ಮಾತ್ರ ಈ ದೇಶಕ್ಕೆ ಬಿಡುಗಡೆ ಸಾಧ್ಯ. ವರ್ತಮಾನದ ಸಂವಿಧಾನದ ಕಾಲೆಳೆಯುತ್ತಿರುವ ಭೂತ ಕಾಲದ ಸಂವಿಧಾನದ ದಾಸರಾಗಿರುವ ದಲಿತರು, ಹಿಂದುಳಿದವರು ಇದನ್ನು ಎಷ್ಟು ಬೇಗ ಅರ್ಥ ಮಾಡಿಕೊಳ್ಳೊತ್ತಾರೊ ಅಷ್ಟು ಒಳ್ಳೆಯದು.

ಇದನ್ನೂ ಓದಿ: ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...