Homeಮುಖಪುಟಡಿಸೆಂಬರ್ 25 - ಅಂಬೇಡ್ಕರ್ 'ಮನುಸ್ಮೃತಿ' ಸುಟ್ಟ ದಿನ

ಡಿಸೆಂಬರ್ 25 – ಅಂಬೇಡ್ಕರ್ ‘ಮನುಸ್ಮೃತಿ’ ಸುಟ್ಟ ದಿನ

ಮನುಸ್ಮೃತಿಗೆ ಪ್ರತಿಯಾಗಿ ಭಾರತಕ್ಕೆ ನಿಜವಾದ‌ ಸಂವಿಧಾನವನ್ನು ಅಂಬೇಡ್ಕರ್ ಬರೆದರು, ಆದರೆ ಇವತ್ತು ಅಂಬೇಡ್ಕರ್ ಸಂವಿಧಾನದ ಮೇಲೆ ಮನುಸ್ಮೃತಿ ಸವಾರಿ ಮಾಡಲು ಪ್ರಯತ್ನಿಸುತ್ತಿದೆ.

- Advertisement -
- Advertisement -

ಭಾರತದ ಚರಿತ್ರೆಯಲ್ಲಿ ಡಿಸೆಂಬರ್ 25 ಬಹು ಮುಖ್ಯವಾದ ದಿನ. ಅಸ್ಪೃಶ್ಯತೆ, ಶ್ರೇಣೀಕೃತ ಜಾತಿ ಪದ್ಧತಿ, ತಾರತಮ್ಯಗಳ ಅಪಮೌಲ್ಯಗಳನ್ನೇ ಮೌಲ್ಯಗಳನ್ನಾಗಿಸಿ ಭಾರತೀಯ ಸುಪ್ತ ಮನಸ್ಸನ್ನು ಆಳುತ್ತಿರುವ ‘ಮನುಸ್ಮೃತಿ’ ಎಂಬ ‘ಭೂತಕಾಲದ ಸಂವಿಧಾನ’ವನ್ನು ಡಾ‌. ಬಿ.ಆರ್. ಅಂಬೇಡ್ಕರ್ ಸಾರ್ವಜನಿಕವಾಗಿ ಸುಟ್ಟು ಪ್ರತಿಭಟಿಸಿದ ದಿನ.

ಭಾರತದ ಹಿಂದೂ ಮನಸ್ಸು ಬದಲಾಗಬಹುದು, ಹಿಂದೂ ಧರ್ಮವನ್ನು ಒಳಗಿದ್ದುಕೊಂಡೇ ಸುಧಾರಿಸಬಹುದೇನೋ ಎನ್ನುವ ನಂಬಿಕೆಯಲ್ಲಿ ಮಹಾಡ್, ಚೌಡಾರ್ ಸತ್ಯಾಗ್ರಹಗಳನ್ನು ನಡೆಸಿದ ಅಂಬೇಡ್ಕರ್ ಅವರಿಗೆ ದೊಡ್ಡ ನಿರಾಶೆ ಕಾದಿತ್ತು. ಆಗಿನ ಸರ್ಕಾರ 1923 ರಲ್ಲೆ The Bole Resolution ಮೂಲಕ ಸಾರ್ವಜನಿಕ ಹಣದಲ್ಲಿ ನಿರ್ಮಾಣವಾಗಿರುವ ಕೆರೆಗೆಳು, ಬಾವಿಗಳು, ಧರ್ಮಶಾಲೆಗಳು ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳು ಎಲ್ಲರಿಗೂ ಮುಕ್ತವಾಗಿರಬೇಕು ಅನ್ನುವ ಕಾಯ್ದೆ ತಂದಿದ್ದರೂ ಅಸ್ಪೃಶ್ಯರಿಗೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಇದನ್ನೂ ಓದಿ: ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ತಮಗೆ ಇದ್ದ ಹಕ್ಕನ್ನು ಪಡೆಯುವುದಕ್ಕಾಗಿಯೇ ಅಂಬೇಡ್ಕರ್ ಚೌಡಾರ್ ಕೆರೆ ನೀರನ್ನು ಸಾರ್ವಜನಿಕವಾಗಿ ಕುಡಿಯುವ ಚಳುವಳಿಯನ್ನು ಆಯೋಜಿಸಿದರು. ಆದರೆ ಅಸ್ಪೃಶ್ಯರು ಮುಟ್ಟಿದ್ದಕ್ಕಾಗಿ ಕೆರೆಯೆ ಮಲಿನವಾಯಿತೆಂದು ಗೋಳಾಡಿದ ಮೇಲ್ಜಾತಿಯ ಜನ ಹಸುವಿನ ಸಗಣಿ, ಗಂಜಲ, ಹಾಲು, ತುಪ್ಪ, ಮೊಸರನ್ನು ಸುರಿದು ವೇದಗಳನ್ನು ಪಠಿಸುತ್ತಾ ಕೆರೆಯ ‘ಶುದ್ದೀಕರಣ’ ಮಾಡಿದರು. ದಲಿತರು ತಮ್ಮ ಹಕ್ಕುಗಳಿಗಾಗಿ ಆಗ್ರಹಿಸಿದರೆ ವಿದ್ಯಾವಂತ, ಪ್ರಗತಿಪರ ಹಿಂದೂಗಳು ಅವರ ಜೊತೆಗೂಡಿ ಹೋರಾಟ ಮಾಡಬಹುದು ಹಿಂದೂ ಧರ್ಮ ಸುಧಾರಣೆಗೆ ಇದು ಕೂಡ ನೆರವಾಗಬಹುದು ಎಂಬ ಅಂಬೇಡ್ಕರ್ ನಿರೀಕ್ಷೆ ಸುಳ್ಳಾಯಿತು. ಮಹಾಡ್, ಚೌಡಾರ್ ಸತ್ಯಾಗ್ರಹಗಳಲ್ಲಿ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದವರ ಮೇಲೆ ಹಿಂಸಾತ್ಮಕವಾದ ದಾಳಿಗಳನ್ನು ಮೇಲ್ಜಾತಿಗಳು ಮಾಡಿದವು.

ಇದಾದ ಒಂಬತ್ತು ತಿಂಗಳ ನಂತರ ಚೌಡಾರ್ ಸತ್ಯಾಗ್ರಹವನ್ನು ಅಂಬೇಡ್ಕರ್ ಆಯೋಜಿಸಿದರು. ಆಗ ಮತ್ತೆ ಮೇಲ್ಜಾತಿಯ ಹಿಂದೂಗಳು ಚೌಡಾರ್ ಕೆರೆ ಸಾರ್ವಜನಿಕ ಆಸ್ತಿಯಲ್ಲ ಖಾಸಗಿ ಸ್ವತ್ತು ಎಂದು ಕೋರ್ಟಿಗೆ ಹೋದರು. ಸತ್ಯಾಗ್ರಹ ತಡೆಯಲು ಪ್ರಯತ್ನ ಮಾಡಿದರು. ಇಷ್ಟೆಲ್ಲ ಪ್ರತಿಕೂಲ ಸನ್ನಿವೇಶಗಳ ನಡುವೆಯೂ ಸತ್ಯಾಗ್ರಹ ನಡೆಸಿದ ಅಂಬೇಡ್ಕರ್ ಡಿಸೆಂಬರ್ 25, 1927 ರಂದು ಹಿಂದೂ ಧರ್ಮದ ಆಧಾರವಾಗಿರುವ, ಬ್ರಾಹ್ಮಣ್ಯವನ್ನು ಎತ್ತಿ ಹಿಡಿಯುವ ಸೈದ್ದಾಂತಿಕ ಗ್ರಂಥವಾಗಿರುವ ‘ಮನುಸ್ಮೃತಿ’ಯನ್ನು ಸಾರ್ವಜನಿಕವಾಗಿ ಸುಟ್ಟು ಹಿಂದೂ ಧರ್ಮದ ಕರ್ಮಠತನ, ಅಸಮಾನತೆಯ ವಿರುದ್ಧ ಸಮರ ಸಾರಿದರು.

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

PC: bakeryprasad/instagram

ವಿಶೇಷವೆಂದರೆ ಈ ಸಮಾವೇಶದಲ್ಲಿ ಮನುಸ್ಮೃತಿಗೆ ಸಾರ್ವಜನಿಕವಾಗಿ ಬೆಂಕಿ ಇಟ್ಟವರು ಬಾಪೂಸಾಹೇಬ ಸಹಸ್ರಬುದ್ಧೆ ಎನ್ನುವ ಪ್ರಗತಿಪರ ಬ್ರಾಹ್ಮಣ. ಇದಾದ ಮೇಲೆ ಹಿಂದೂ ಧರ್ಮದ ಒಳಗಿದ್ದು ಅದನ್ನು ಸುಧಾರಿಸುವುದು ಸಾಧ್ಯವಿಲ್ಲ ಎಂದು ಮನಗಂಡು ಅಂಬೇಡ್ಕರ್ ಹಿಂದೂ ಧರ್ಮ ತ್ಯಜಿಸುವ ನಿರ್ಧಾರ ಮಾಡಿದರು‌. ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ ಆದರೆ ಹಿಂದೂವಾಗಿ ಸಾಯುವುದಿಲ್ಲ ಎಂದು ಸಾರ್ವಜನಿಕವಾಗಿ ಘೋಷಿಸಿದರು.

ಮುಂದೆ ಮನುಸ್ಮೃತಿಗೆ ಪ್ರತಿಯಾಗಿ ಭಾರತಕ್ಕೆ ನಿಜವಾದ‌ ಸಂವಿಧಾನವನ್ನು ಅಂಬೇಡ್ಕರ್ ಅವರೇ ಬರೆದರು. ಆದರೆ ಇವತ್ತು ಅಂಬೇಡ್ಕರ್ ಸಂವಿಧಾನದ ಮೇಲೆ ಮನುಸ್ಮೃತಿ ಸವಾರಿ ಮಾಡಲು ಪ್ರಯತ್ನಿಸುತ್ತಿದೆ. ಭಾರತದ ಮನಸ್ಸಿನಲ್ಲಿರುವ ಈ ಸುಪ್ತ ಸಂವಿಧಾನವನ್ನು ಸುಟ್ಟರೆ ಮಾತ್ರ ಈ ದೇಶಕ್ಕೆ ಬಿಡುಗಡೆ ಸಾಧ್ಯ. ವರ್ತಮಾನದ ಸಂವಿಧಾನದ ಕಾಲೆಳೆಯುತ್ತಿರುವ ಭೂತ ಕಾಲದ ಸಂವಿಧಾನದ ದಾಸರಾಗಿರುವ ದಲಿತರು, ಹಿಂದುಳಿದವರು ಇದನ್ನು ಎಷ್ಟು ಬೇಗ ಅರ್ಥ ಮಾಡಿಕೊಳ್ಳೊತ್ತಾರೊ ಅಷ್ಟು ಒಳ್ಳೆಯದು.

ಇದನ್ನೂ ಓದಿ: ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...