Homeಮುಖಪುಟಡಿಸೆಂಬರ್ 25 - ಅಂಬೇಡ್ಕರ್ 'ಮನುಸ್ಮೃತಿ' ಸುಟ್ಟ ದಿನ

ಡಿಸೆಂಬರ್ 25 – ಅಂಬೇಡ್ಕರ್ ‘ಮನುಸ್ಮೃತಿ’ ಸುಟ್ಟ ದಿನ

ಮನುಸ್ಮೃತಿಗೆ ಪ್ರತಿಯಾಗಿ ಭಾರತಕ್ಕೆ ನಿಜವಾದ‌ ಸಂವಿಧಾನವನ್ನು ಅಂಬೇಡ್ಕರ್ ಬರೆದರು, ಆದರೆ ಇವತ್ತು ಅಂಬೇಡ್ಕರ್ ಸಂವಿಧಾನದ ಮೇಲೆ ಮನುಸ್ಮೃತಿ ಸವಾರಿ ಮಾಡಲು ಪ್ರಯತ್ನಿಸುತ್ತಿದೆ.

- Advertisement -
- Advertisement -

ಭಾರತದ ಚರಿತ್ರೆಯಲ್ಲಿ ಡಿಸೆಂಬರ್ 25 ಬಹು ಮುಖ್ಯವಾದ ದಿನ. ಅಸ್ಪೃಶ್ಯತೆ, ಶ್ರೇಣೀಕೃತ ಜಾತಿ ಪದ್ಧತಿ, ತಾರತಮ್ಯಗಳ ಅಪಮೌಲ್ಯಗಳನ್ನೇ ಮೌಲ್ಯಗಳನ್ನಾಗಿಸಿ ಭಾರತೀಯ ಸುಪ್ತ ಮನಸ್ಸನ್ನು ಆಳುತ್ತಿರುವ ‘ಮನುಸ್ಮೃತಿ’ ಎಂಬ ‘ಭೂತಕಾಲದ ಸಂವಿಧಾನ’ವನ್ನು ಡಾ‌. ಬಿ.ಆರ್. ಅಂಬೇಡ್ಕರ್ ಸಾರ್ವಜನಿಕವಾಗಿ ಸುಟ್ಟು ಪ್ರತಿಭಟಿಸಿದ ದಿನ.

ಭಾರತದ ಹಿಂದೂ ಮನಸ್ಸು ಬದಲಾಗಬಹುದು, ಹಿಂದೂ ಧರ್ಮವನ್ನು ಒಳಗಿದ್ದುಕೊಂಡೇ ಸುಧಾರಿಸಬಹುದೇನೋ ಎನ್ನುವ ನಂಬಿಕೆಯಲ್ಲಿ ಮಹಾಡ್, ಚೌಡಾರ್ ಸತ್ಯಾಗ್ರಹಗಳನ್ನು ನಡೆಸಿದ ಅಂಬೇಡ್ಕರ್ ಅವರಿಗೆ ದೊಡ್ಡ ನಿರಾಶೆ ಕಾದಿತ್ತು. ಆಗಿನ ಸರ್ಕಾರ 1923 ರಲ್ಲೆ The Bole Resolution ಮೂಲಕ ಸಾರ್ವಜನಿಕ ಹಣದಲ್ಲಿ ನಿರ್ಮಾಣವಾಗಿರುವ ಕೆರೆಗೆಳು, ಬಾವಿಗಳು, ಧರ್ಮಶಾಲೆಗಳು ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳು ಎಲ್ಲರಿಗೂ ಮುಕ್ತವಾಗಿರಬೇಕು ಅನ್ನುವ ಕಾಯ್ದೆ ತಂದಿದ್ದರೂ ಅಸ್ಪೃಶ್ಯರಿಗೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಇದನ್ನೂ ಓದಿ: ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ತಮಗೆ ಇದ್ದ ಹಕ್ಕನ್ನು ಪಡೆಯುವುದಕ್ಕಾಗಿಯೇ ಅಂಬೇಡ್ಕರ್ ಚೌಡಾರ್ ಕೆರೆ ನೀರನ್ನು ಸಾರ್ವಜನಿಕವಾಗಿ ಕುಡಿಯುವ ಚಳುವಳಿಯನ್ನು ಆಯೋಜಿಸಿದರು. ಆದರೆ ಅಸ್ಪೃಶ್ಯರು ಮುಟ್ಟಿದ್ದಕ್ಕಾಗಿ ಕೆರೆಯೆ ಮಲಿನವಾಯಿತೆಂದು ಗೋಳಾಡಿದ ಮೇಲ್ಜಾತಿಯ ಜನ ಹಸುವಿನ ಸಗಣಿ, ಗಂಜಲ, ಹಾಲು, ತುಪ್ಪ, ಮೊಸರನ್ನು ಸುರಿದು ವೇದಗಳನ್ನು ಪಠಿಸುತ್ತಾ ಕೆರೆಯ ‘ಶುದ್ದೀಕರಣ’ ಮಾಡಿದರು. ದಲಿತರು ತಮ್ಮ ಹಕ್ಕುಗಳಿಗಾಗಿ ಆಗ್ರಹಿಸಿದರೆ ವಿದ್ಯಾವಂತ, ಪ್ರಗತಿಪರ ಹಿಂದೂಗಳು ಅವರ ಜೊತೆಗೂಡಿ ಹೋರಾಟ ಮಾಡಬಹುದು ಹಿಂದೂ ಧರ್ಮ ಸುಧಾರಣೆಗೆ ಇದು ಕೂಡ ನೆರವಾಗಬಹುದು ಎಂಬ ಅಂಬೇಡ್ಕರ್ ನಿರೀಕ್ಷೆ ಸುಳ್ಳಾಯಿತು. ಮಹಾಡ್, ಚೌಡಾರ್ ಸತ್ಯಾಗ್ರಹಗಳಲ್ಲಿ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದವರ ಮೇಲೆ ಹಿಂಸಾತ್ಮಕವಾದ ದಾಳಿಗಳನ್ನು ಮೇಲ್ಜಾತಿಗಳು ಮಾಡಿದವು.

ಇದಾದ ಒಂಬತ್ತು ತಿಂಗಳ ನಂತರ ಚೌಡಾರ್ ಸತ್ಯಾಗ್ರಹವನ್ನು ಅಂಬೇಡ್ಕರ್ ಆಯೋಜಿಸಿದರು. ಆಗ ಮತ್ತೆ ಮೇಲ್ಜಾತಿಯ ಹಿಂದೂಗಳು ಚೌಡಾರ್ ಕೆರೆ ಸಾರ್ವಜನಿಕ ಆಸ್ತಿಯಲ್ಲ ಖಾಸಗಿ ಸ್ವತ್ತು ಎಂದು ಕೋರ್ಟಿಗೆ ಹೋದರು. ಸತ್ಯಾಗ್ರಹ ತಡೆಯಲು ಪ್ರಯತ್ನ ಮಾಡಿದರು. ಇಷ್ಟೆಲ್ಲ ಪ್ರತಿಕೂಲ ಸನ್ನಿವೇಶಗಳ ನಡುವೆಯೂ ಸತ್ಯಾಗ್ರಹ ನಡೆಸಿದ ಅಂಬೇಡ್ಕರ್ ಡಿಸೆಂಬರ್ 25, 1927 ರಂದು ಹಿಂದೂ ಧರ್ಮದ ಆಧಾರವಾಗಿರುವ, ಬ್ರಾಹ್ಮಣ್ಯವನ್ನು ಎತ್ತಿ ಹಿಡಿಯುವ ಸೈದ್ದಾಂತಿಕ ಗ್ರಂಥವಾಗಿರುವ ‘ಮನುಸ್ಮೃತಿ’ಯನ್ನು ಸಾರ್ವಜನಿಕವಾಗಿ ಸುಟ್ಟು ಹಿಂದೂ ಧರ್ಮದ ಕರ್ಮಠತನ, ಅಸಮಾನತೆಯ ವಿರುದ್ಧ ಸಮರ ಸಾರಿದರು.

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

PC: bakeryprasad/instagram

ವಿಶೇಷವೆಂದರೆ ಈ ಸಮಾವೇಶದಲ್ಲಿ ಮನುಸ್ಮೃತಿಗೆ ಸಾರ್ವಜನಿಕವಾಗಿ ಬೆಂಕಿ ಇಟ್ಟವರು ಬಾಪೂಸಾಹೇಬ ಸಹಸ್ರಬುದ್ಧೆ ಎನ್ನುವ ಪ್ರಗತಿಪರ ಬ್ರಾಹ್ಮಣ. ಇದಾದ ಮೇಲೆ ಹಿಂದೂ ಧರ್ಮದ ಒಳಗಿದ್ದು ಅದನ್ನು ಸುಧಾರಿಸುವುದು ಸಾಧ್ಯವಿಲ್ಲ ಎಂದು ಮನಗಂಡು ಅಂಬೇಡ್ಕರ್ ಹಿಂದೂ ಧರ್ಮ ತ್ಯಜಿಸುವ ನಿರ್ಧಾರ ಮಾಡಿದರು‌. ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ ಆದರೆ ಹಿಂದೂವಾಗಿ ಸಾಯುವುದಿಲ್ಲ ಎಂದು ಸಾರ್ವಜನಿಕವಾಗಿ ಘೋಷಿಸಿದರು.

ಮುಂದೆ ಮನುಸ್ಮೃತಿಗೆ ಪ್ರತಿಯಾಗಿ ಭಾರತಕ್ಕೆ ನಿಜವಾದ‌ ಸಂವಿಧಾನವನ್ನು ಅಂಬೇಡ್ಕರ್ ಅವರೇ ಬರೆದರು. ಆದರೆ ಇವತ್ತು ಅಂಬೇಡ್ಕರ್ ಸಂವಿಧಾನದ ಮೇಲೆ ಮನುಸ್ಮೃತಿ ಸವಾರಿ ಮಾಡಲು ಪ್ರಯತ್ನಿಸುತ್ತಿದೆ. ಭಾರತದ ಮನಸ್ಸಿನಲ್ಲಿರುವ ಈ ಸುಪ್ತ ಸಂವಿಧಾನವನ್ನು ಸುಟ್ಟರೆ ಮಾತ್ರ ಈ ದೇಶಕ್ಕೆ ಬಿಡುಗಡೆ ಸಾಧ್ಯ. ವರ್ತಮಾನದ ಸಂವಿಧಾನದ ಕಾಲೆಳೆಯುತ್ತಿರುವ ಭೂತ ಕಾಲದ ಸಂವಿಧಾನದ ದಾಸರಾಗಿರುವ ದಲಿತರು, ಹಿಂದುಳಿದವರು ಇದನ್ನು ಎಷ್ಟು ಬೇಗ ಅರ್ಥ ಮಾಡಿಕೊಳ್ಳೊತ್ತಾರೊ ಅಷ್ಟು ಒಳ್ಳೆಯದು.

ಇದನ್ನೂ ಓದಿ: ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...