Homeಮುಖಪುಟಡಿಸೆಂಬರ್ 25 - ಅಂಬೇಡ್ಕರ್ 'ಮನುಸ್ಮೃತಿ' ಸುಟ್ಟ ದಿನ

ಡಿಸೆಂಬರ್ 25 – ಅಂಬೇಡ್ಕರ್ ‘ಮನುಸ್ಮೃತಿ’ ಸುಟ್ಟ ದಿನ

ಮನುಸ್ಮೃತಿಗೆ ಪ್ರತಿಯಾಗಿ ಭಾರತಕ್ಕೆ ನಿಜವಾದ‌ ಸಂವಿಧಾನವನ್ನು ಅಂಬೇಡ್ಕರ್ ಬರೆದರು, ಆದರೆ ಇವತ್ತು ಅಂಬೇಡ್ಕರ್ ಸಂವಿಧಾನದ ಮೇಲೆ ಮನುಸ್ಮೃತಿ ಸವಾರಿ ಮಾಡಲು ಪ್ರಯತ್ನಿಸುತ್ತಿದೆ.

- Advertisement -
- Advertisement -

ಭಾರತದ ಚರಿತ್ರೆಯಲ್ಲಿ ಡಿಸೆಂಬರ್ 25 ಬಹು ಮುಖ್ಯವಾದ ದಿನ. ಅಸ್ಪೃಶ್ಯತೆ, ಶ್ರೇಣೀಕೃತ ಜಾತಿ ಪದ್ಧತಿ, ತಾರತಮ್ಯಗಳ ಅಪಮೌಲ್ಯಗಳನ್ನೇ ಮೌಲ್ಯಗಳನ್ನಾಗಿಸಿ ಭಾರತೀಯ ಸುಪ್ತ ಮನಸ್ಸನ್ನು ಆಳುತ್ತಿರುವ ‘ಮನುಸ್ಮೃತಿ’ ಎಂಬ ‘ಭೂತಕಾಲದ ಸಂವಿಧಾನ’ವನ್ನು ಡಾ‌. ಬಿ.ಆರ್. ಅಂಬೇಡ್ಕರ್ ಸಾರ್ವಜನಿಕವಾಗಿ ಸುಟ್ಟು ಪ್ರತಿಭಟಿಸಿದ ದಿನ.

ಭಾರತದ ಹಿಂದೂ ಮನಸ್ಸು ಬದಲಾಗಬಹುದು, ಹಿಂದೂ ಧರ್ಮವನ್ನು ಒಳಗಿದ್ದುಕೊಂಡೇ ಸುಧಾರಿಸಬಹುದೇನೋ ಎನ್ನುವ ನಂಬಿಕೆಯಲ್ಲಿ ಮಹಾಡ್, ಚೌಡಾರ್ ಸತ್ಯಾಗ್ರಹಗಳನ್ನು ನಡೆಸಿದ ಅಂಬೇಡ್ಕರ್ ಅವರಿಗೆ ದೊಡ್ಡ ನಿರಾಶೆ ಕಾದಿತ್ತು. ಆಗಿನ ಸರ್ಕಾರ 1923 ರಲ್ಲೆ The Bole Resolution ಮೂಲಕ ಸಾರ್ವಜನಿಕ ಹಣದಲ್ಲಿ ನಿರ್ಮಾಣವಾಗಿರುವ ಕೆರೆಗೆಳು, ಬಾವಿಗಳು, ಧರ್ಮಶಾಲೆಗಳು ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳು ಎಲ್ಲರಿಗೂ ಮುಕ್ತವಾಗಿರಬೇಕು ಅನ್ನುವ ಕಾಯ್ದೆ ತಂದಿದ್ದರೂ ಅಸ್ಪೃಶ್ಯರಿಗೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಇದನ್ನೂ ಓದಿ: ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ತಮಗೆ ಇದ್ದ ಹಕ್ಕನ್ನು ಪಡೆಯುವುದಕ್ಕಾಗಿಯೇ ಅಂಬೇಡ್ಕರ್ ಚೌಡಾರ್ ಕೆರೆ ನೀರನ್ನು ಸಾರ್ವಜನಿಕವಾಗಿ ಕುಡಿಯುವ ಚಳುವಳಿಯನ್ನು ಆಯೋಜಿಸಿದರು. ಆದರೆ ಅಸ್ಪೃಶ್ಯರು ಮುಟ್ಟಿದ್ದಕ್ಕಾಗಿ ಕೆರೆಯೆ ಮಲಿನವಾಯಿತೆಂದು ಗೋಳಾಡಿದ ಮೇಲ್ಜಾತಿಯ ಜನ ಹಸುವಿನ ಸಗಣಿ, ಗಂಜಲ, ಹಾಲು, ತುಪ್ಪ, ಮೊಸರನ್ನು ಸುರಿದು ವೇದಗಳನ್ನು ಪಠಿಸುತ್ತಾ ಕೆರೆಯ ‘ಶುದ್ದೀಕರಣ’ ಮಾಡಿದರು. ದಲಿತರು ತಮ್ಮ ಹಕ್ಕುಗಳಿಗಾಗಿ ಆಗ್ರಹಿಸಿದರೆ ವಿದ್ಯಾವಂತ, ಪ್ರಗತಿಪರ ಹಿಂದೂಗಳು ಅವರ ಜೊತೆಗೂಡಿ ಹೋರಾಟ ಮಾಡಬಹುದು ಹಿಂದೂ ಧರ್ಮ ಸುಧಾರಣೆಗೆ ಇದು ಕೂಡ ನೆರವಾಗಬಹುದು ಎಂಬ ಅಂಬೇಡ್ಕರ್ ನಿರೀಕ್ಷೆ ಸುಳ್ಳಾಯಿತು. ಮಹಾಡ್, ಚೌಡಾರ್ ಸತ್ಯಾಗ್ರಹಗಳಲ್ಲಿ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದವರ ಮೇಲೆ ಹಿಂಸಾತ್ಮಕವಾದ ದಾಳಿಗಳನ್ನು ಮೇಲ್ಜಾತಿಗಳು ಮಾಡಿದವು.

ಇದಾದ ಒಂಬತ್ತು ತಿಂಗಳ ನಂತರ ಚೌಡಾರ್ ಸತ್ಯಾಗ್ರಹವನ್ನು ಅಂಬೇಡ್ಕರ್ ಆಯೋಜಿಸಿದರು. ಆಗ ಮತ್ತೆ ಮೇಲ್ಜಾತಿಯ ಹಿಂದೂಗಳು ಚೌಡಾರ್ ಕೆರೆ ಸಾರ್ವಜನಿಕ ಆಸ್ತಿಯಲ್ಲ ಖಾಸಗಿ ಸ್ವತ್ತು ಎಂದು ಕೋರ್ಟಿಗೆ ಹೋದರು. ಸತ್ಯಾಗ್ರಹ ತಡೆಯಲು ಪ್ರಯತ್ನ ಮಾಡಿದರು. ಇಷ್ಟೆಲ್ಲ ಪ್ರತಿಕೂಲ ಸನ್ನಿವೇಶಗಳ ನಡುವೆಯೂ ಸತ್ಯಾಗ್ರಹ ನಡೆಸಿದ ಅಂಬೇಡ್ಕರ್ ಡಿಸೆಂಬರ್ 25, 1927 ರಂದು ಹಿಂದೂ ಧರ್ಮದ ಆಧಾರವಾಗಿರುವ, ಬ್ರಾಹ್ಮಣ್ಯವನ್ನು ಎತ್ತಿ ಹಿಡಿಯುವ ಸೈದ್ದಾಂತಿಕ ಗ್ರಂಥವಾಗಿರುವ ‘ಮನುಸ್ಮೃತಿ’ಯನ್ನು ಸಾರ್ವಜನಿಕವಾಗಿ ಸುಟ್ಟು ಹಿಂದೂ ಧರ್ಮದ ಕರ್ಮಠತನ, ಅಸಮಾನತೆಯ ವಿರುದ್ಧ ಸಮರ ಸಾರಿದರು.

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

PC: bakeryprasad/instagram

ವಿಶೇಷವೆಂದರೆ ಈ ಸಮಾವೇಶದಲ್ಲಿ ಮನುಸ್ಮೃತಿಗೆ ಸಾರ್ವಜನಿಕವಾಗಿ ಬೆಂಕಿ ಇಟ್ಟವರು ಬಾಪೂಸಾಹೇಬ ಸಹಸ್ರಬುದ್ಧೆ ಎನ್ನುವ ಪ್ರಗತಿಪರ ಬ್ರಾಹ್ಮಣ. ಇದಾದ ಮೇಲೆ ಹಿಂದೂ ಧರ್ಮದ ಒಳಗಿದ್ದು ಅದನ್ನು ಸುಧಾರಿಸುವುದು ಸಾಧ್ಯವಿಲ್ಲ ಎಂದು ಮನಗಂಡು ಅಂಬೇಡ್ಕರ್ ಹಿಂದೂ ಧರ್ಮ ತ್ಯಜಿಸುವ ನಿರ್ಧಾರ ಮಾಡಿದರು‌. ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ ಆದರೆ ಹಿಂದೂವಾಗಿ ಸಾಯುವುದಿಲ್ಲ ಎಂದು ಸಾರ್ವಜನಿಕವಾಗಿ ಘೋಷಿಸಿದರು.

ಮುಂದೆ ಮನುಸ್ಮೃತಿಗೆ ಪ್ರತಿಯಾಗಿ ಭಾರತಕ್ಕೆ ನಿಜವಾದ‌ ಸಂವಿಧಾನವನ್ನು ಅಂಬೇಡ್ಕರ್ ಅವರೇ ಬರೆದರು. ಆದರೆ ಇವತ್ತು ಅಂಬೇಡ್ಕರ್ ಸಂವಿಧಾನದ ಮೇಲೆ ಮನುಸ್ಮೃತಿ ಸವಾರಿ ಮಾಡಲು ಪ್ರಯತ್ನಿಸುತ್ತಿದೆ. ಭಾರತದ ಮನಸ್ಸಿನಲ್ಲಿರುವ ಈ ಸುಪ್ತ ಸಂವಿಧಾನವನ್ನು ಸುಟ್ಟರೆ ಮಾತ್ರ ಈ ದೇಶಕ್ಕೆ ಬಿಡುಗಡೆ ಸಾಧ್ಯ. ವರ್ತಮಾನದ ಸಂವಿಧಾನದ ಕಾಲೆಳೆಯುತ್ತಿರುವ ಭೂತ ಕಾಲದ ಸಂವಿಧಾನದ ದಾಸರಾಗಿರುವ ದಲಿತರು, ಹಿಂದುಳಿದವರು ಇದನ್ನು ಎಷ್ಟು ಬೇಗ ಅರ್ಥ ಮಾಡಿಕೊಳ್ಳೊತ್ತಾರೊ ಅಷ್ಟು ಒಳ್ಳೆಯದು.

ಇದನ್ನೂ ಓದಿ: ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...