Homeಮುಖಪುಟಡಿಸೆಂಬರ್ 25 - ಅಂಬೇಡ್ಕರ್ 'ಮನುಸ್ಮೃತಿ' ಸುಟ್ಟ ದಿನ

ಡಿಸೆಂಬರ್ 25 – ಅಂಬೇಡ್ಕರ್ ‘ಮನುಸ್ಮೃತಿ’ ಸುಟ್ಟ ದಿನ

ಮನುಸ್ಮೃತಿಗೆ ಪ್ರತಿಯಾಗಿ ಭಾರತಕ್ಕೆ ನಿಜವಾದ‌ ಸಂವಿಧಾನವನ್ನು ಅಂಬೇಡ್ಕರ್ ಬರೆದರು, ಆದರೆ ಇವತ್ತು ಅಂಬೇಡ್ಕರ್ ಸಂವಿಧಾನದ ಮೇಲೆ ಮನುಸ್ಮೃತಿ ಸವಾರಿ ಮಾಡಲು ಪ್ರಯತ್ನಿಸುತ್ತಿದೆ.

- Advertisement -
- Advertisement -

ಭಾರತದ ಚರಿತ್ರೆಯಲ್ಲಿ ಡಿಸೆಂಬರ್ 25 ಬಹು ಮುಖ್ಯವಾದ ದಿನ. ಅಸ್ಪೃಶ್ಯತೆ, ಶ್ರೇಣೀಕೃತ ಜಾತಿ ಪದ್ಧತಿ, ತಾರತಮ್ಯಗಳ ಅಪಮೌಲ್ಯಗಳನ್ನೇ ಮೌಲ್ಯಗಳನ್ನಾಗಿಸಿ ಭಾರತೀಯ ಸುಪ್ತ ಮನಸ್ಸನ್ನು ಆಳುತ್ತಿರುವ ‘ಮನುಸ್ಮೃತಿ’ ಎಂಬ ‘ಭೂತಕಾಲದ ಸಂವಿಧಾನ’ವನ್ನು ಡಾ‌. ಬಿ.ಆರ್. ಅಂಬೇಡ್ಕರ್ ಸಾರ್ವಜನಿಕವಾಗಿ ಸುಟ್ಟು ಪ್ರತಿಭಟಿಸಿದ ದಿನ.

ಭಾರತದ ಹಿಂದೂ ಮನಸ್ಸು ಬದಲಾಗಬಹುದು, ಹಿಂದೂ ಧರ್ಮವನ್ನು ಒಳಗಿದ್ದುಕೊಂಡೇ ಸುಧಾರಿಸಬಹುದೇನೋ ಎನ್ನುವ ನಂಬಿಕೆಯಲ್ಲಿ ಮಹಾಡ್, ಚೌಡಾರ್ ಸತ್ಯಾಗ್ರಹಗಳನ್ನು ನಡೆಸಿದ ಅಂಬೇಡ್ಕರ್ ಅವರಿಗೆ ದೊಡ್ಡ ನಿರಾಶೆ ಕಾದಿತ್ತು. ಆಗಿನ ಸರ್ಕಾರ 1923 ರಲ್ಲೆ The Bole Resolution ಮೂಲಕ ಸಾರ್ವಜನಿಕ ಹಣದಲ್ಲಿ ನಿರ್ಮಾಣವಾಗಿರುವ ಕೆರೆಗೆಳು, ಬಾವಿಗಳು, ಧರ್ಮಶಾಲೆಗಳು ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳು ಎಲ್ಲರಿಗೂ ಮುಕ್ತವಾಗಿರಬೇಕು ಅನ್ನುವ ಕಾಯ್ದೆ ತಂದಿದ್ದರೂ ಅಸ್ಪೃಶ್ಯರಿಗೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಇದನ್ನೂ ಓದಿ: ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ತಮಗೆ ಇದ್ದ ಹಕ್ಕನ್ನು ಪಡೆಯುವುದಕ್ಕಾಗಿಯೇ ಅಂಬೇಡ್ಕರ್ ಚೌಡಾರ್ ಕೆರೆ ನೀರನ್ನು ಸಾರ್ವಜನಿಕವಾಗಿ ಕುಡಿಯುವ ಚಳುವಳಿಯನ್ನು ಆಯೋಜಿಸಿದರು. ಆದರೆ ಅಸ್ಪೃಶ್ಯರು ಮುಟ್ಟಿದ್ದಕ್ಕಾಗಿ ಕೆರೆಯೆ ಮಲಿನವಾಯಿತೆಂದು ಗೋಳಾಡಿದ ಮೇಲ್ಜಾತಿಯ ಜನ ಹಸುವಿನ ಸಗಣಿ, ಗಂಜಲ, ಹಾಲು, ತುಪ್ಪ, ಮೊಸರನ್ನು ಸುರಿದು ವೇದಗಳನ್ನು ಪಠಿಸುತ್ತಾ ಕೆರೆಯ ‘ಶುದ್ದೀಕರಣ’ ಮಾಡಿದರು. ದಲಿತರು ತಮ್ಮ ಹಕ್ಕುಗಳಿಗಾಗಿ ಆಗ್ರಹಿಸಿದರೆ ವಿದ್ಯಾವಂತ, ಪ್ರಗತಿಪರ ಹಿಂದೂಗಳು ಅವರ ಜೊತೆಗೂಡಿ ಹೋರಾಟ ಮಾಡಬಹುದು ಹಿಂದೂ ಧರ್ಮ ಸುಧಾರಣೆಗೆ ಇದು ಕೂಡ ನೆರವಾಗಬಹುದು ಎಂಬ ಅಂಬೇಡ್ಕರ್ ನಿರೀಕ್ಷೆ ಸುಳ್ಳಾಯಿತು. ಮಹಾಡ್, ಚೌಡಾರ್ ಸತ್ಯಾಗ್ರಹಗಳಲ್ಲಿ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದವರ ಮೇಲೆ ಹಿಂಸಾತ್ಮಕವಾದ ದಾಳಿಗಳನ್ನು ಮೇಲ್ಜಾತಿಗಳು ಮಾಡಿದವು.

ಇದಾದ ಒಂಬತ್ತು ತಿಂಗಳ ನಂತರ ಚೌಡಾರ್ ಸತ್ಯಾಗ್ರಹವನ್ನು ಅಂಬೇಡ್ಕರ್ ಆಯೋಜಿಸಿದರು. ಆಗ ಮತ್ತೆ ಮೇಲ್ಜಾತಿಯ ಹಿಂದೂಗಳು ಚೌಡಾರ್ ಕೆರೆ ಸಾರ್ವಜನಿಕ ಆಸ್ತಿಯಲ್ಲ ಖಾಸಗಿ ಸ್ವತ್ತು ಎಂದು ಕೋರ್ಟಿಗೆ ಹೋದರು. ಸತ್ಯಾಗ್ರಹ ತಡೆಯಲು ಪ್ರಯತ್ನ ಮಾಡಿದರು. ಇಷ್ಟೆಲ್ಲ ಪ್ರತಿಕೂಲ ಸನ್ನಿವೇಶಗಳ ನಡುವೆಯೂ ಸತ್ಯಾಗ್ರಹ ನಡೆಸಿದ ಅಂಬೇಡ್ಕರ್ ಡಿಸೆಂಬರ್ 25, 1927 ರಂದು ಹಿಂದೂ ಧರ್ಮದ ಆಧಾರವಾಗಿರುವ, ಬ್ರಾಹ್ಮಣ್ಯವನ್ನು ಎತ್ತಿ ಹಿಡಿಯುವ ಸೈದ್ದಾಂತಿಕ ಗ್ರಂಥವಾಗಿರುವ ‘ಮನುಸ್ಮೃತಿ’ಯನ್ನು ಸಾರ್ವಜನಿಕವಾಗಿ ಸುಟ್ಟು ಹಿಂದೂ ಧರ್ಮದ ಕರ್ಮಠತನ, ಅಸಮಾನತೆಯ ವಿರುದ್ಧ ಸಮರ ಸಾರಿದರು.

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

PC: bakeryprasad/instagram

ವಿಶೇಷವೆಂದರೆ ಈ ಸಮಾವೇಶದಲ್ಲಿ ಮನುಸ್ಮೃತಿಗೆ ಸಾರ್ವಜನಿಕವಾಗಿ ಬೆಂಕಿ ಇಟ್ಟವರು ಬಾಪೂಸಾಹೇಬ ಸಹಸ್ರಬುದ್ಧೆ ಎನ್ನುವ ಪ್ರಗತಿಪರ ಬ್ರಾಹ್ಮಣ. ಇದಾದ ಮೇಲೆ ಹಿಂದೂ ಧರ್ಮದ ಒಳಗಿದ್ದು ಅದನ್ನು ಸುಧಾರಿಸುವುದು ಸಾಧ್ಯವಿಲ್ಲ ಎಂದು ಮನಗಂಡು ಅಂಬೇಡ್ಕರ್ ಹಿಂದೂ ಧರ್ಮ ತ್ಯಜಿಸುವ ನಿರ್ಧಾರ ಮಾಡಿದರು‌. ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ ಆದರೆ ಹಿಂದೂವಾಗಿ ಸಾಯುವುದಿಲ್ಲ ಎಂದು ಸಾರ್ವಜನಿಕವಾಗಿ ಘೋಷಿಸಿದರು.

ಮುಂದೆ ಮನುಸ್ಮೃತಿಗೆ ಪ್ರತಿಯಾಗಿ ಭಾರತಕ್ಕೆ ನಿಜವಾದ‌ ಸಂವಿಧಾನವನ್ನು ಅಂಬೇಡ್ಕರ್ ಅವರೇ ಬರೆದರು. ಆದರೆ ಇವತ್ತು ಅಂಬೇಡ್ಕರ್ ಸಂವಿಧಾನದ ಮೇಲೆ ಮನುಸ್ಮೃತಿ ಸವಾರಿ ಮಾಡಲು ಪ್ರಯತ್ನಿಸುತ್ತಿದೆ. ಭಾರತದ ಮನಸ್ಸಿನಲ್ಲಿರುವ ಈ ಸುಪ್ತ ಸಂವಿಧಾನವನ್ನು ಸುಟ್ಟರೆ ಮಾತ್ರ ಈ ದೇಶಕ್ಕೆ ಬಿಡುಗಡೆ ಸಾಧ್ಯ. ವರ್ತಮಾನದ ಸಂವಿಧಾನದ ಕಾಲೆಳೆಯುತ್ತಿರುವ ಭೂತ ಕಾಲದ ಸಂವಿಧಾನದ ದಾಸರಾಗಿರುವ ದಲಿತರು, ಹಿಂದುಳಿದವರು ಇದನ್ನು ಎಷ್ಟು ಬೇಗ ಅರ್ಥ ಮಾಡಿಕೊಳ್ಳೊತ್ತಾರೊ ಅಷ್ಟು ಒಳ್ಳೆಯದು.

ಇದನ್ನೂ ಓದಿ: ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...