Homeಮುಖಪುಟಡಿಸೆಂಬರ್ 25 - ಅಂಬೇಡ್ಕರ್ 'ಮನುಸ್ಮೃತಿ' ಸುಟ್ಟ ದಿನ

ಡಿಸೆಂಬರ್ 25 – ಅಂಬೇಡ್ಕರ್ ‘ಮನುಸ್ಮೃತಿ’ ಸುಟ್ಟ ದಿನ

ಮನುಸ್ಮೃತಿಗೆ ಪ್ರತಿಯಾಗಿ ಭಾರತಕ್ಕೆ ನಿಜವಾದ‌ ಸಂವಿಧಾನವನ್ನು ಅಂಬೇಡ್ಕರ್ ಬರೆದರು, ಆದರೆ ಇವತ್ತು ಅಂಬೇಡ್ಕರ್ ಸಂವಿಧಾನದ ಮೇಲೆ ಮನುಸ್ಮೃತಿ ಸವಾರಿ ಮಾಡಲು ಪ್ರಯತ್ನಿಸುತ್ತಿದೆ.

- Advertisement -
- Advertisement -

ಭಾರತದ ಚರಿತ್ರೆಯಲ್ಲಿ ಡಿಸೆಂಬರ್ 25 ಬಹು ಮುಖ್ಯವಾದ ದಿನ. ಅಸ್ಪೃಶ್ಯತೆ, ಶ್ರೇಣೀಕೃತ ಜಾತಿ ಪದ್ಧತಿ, ತಾರತಮ್ಯಗಳ ಅಪಮೌಲ್ಯಗಳನ್ನೇ ಮೌಲ್ಯಗಳನ್ನಾಗಿಸಿ ಭಾರತೀಯ ಸುಪ್ತ ಮನಸ್ಸನ್ನು ಆಳುತ್ತಿರುವ ‘ಮನುಸ್ಮೃತಿ’ ಎಂಬ ‘ಭೂತಕಾಲದ ಸಂವಿಧಾನ’ವನ್ನು ಡಾ‌. ಬಿ.ಆರ್. ಅಂಬೇಡ್ಕರ್ ಸಾರ್ವಜನಿಕವಾಗಿ ಸುಟ್ಟು ಪ್ರತಿಭಟಿಸಿದ ದಿನ.

ಭಾರತದ ಹಿಂದೂ ಮನಸ್ಸು ಬದಲಾಗಬಹುದು, ಹಿಂದೂ ಧರ್ಮವನ್ನು ಒಳಗಿದ್ದುಕೊಂಡೇ ಸುಧಾರಿಸಬಹುದೇನೋ ಎನ್ನುವ ನಂಬಿಕೆಯಲ್ಲಿ ಮಹಾಡ್, ಚೌಡಾರ್ ಸತ್ಯಾಗ್ರಹಗಳನ್ನು ನಡೆಸಿದ ಅಂಬೇಡ್ಕರ್ ಅವರಿಗೆ ದೊಡ್ಡ ನಿರಾಶೆ ಕಾದಿತ್ತು. ಆಗಿನ ಸರ್ಕಾರ 1923 ರಲ್ಲೆ The Bole Resolution ಮೂಲಕ ಸಾರ್ವಜನಿಕ ಹಣದಲ್ಲಿ ನಿರ್ಮಾಣವಾಗಿರುವ ಕೆರೆಗೆಳು, ಬಾವಿಗಳು, ಧರ್ಮಶಾಲೆಗಳು ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳು ಎಲ್ಲರಿಗೂ ಮುಕ್ತವಾಗಿರಬೇಕು ಅನ್ನುವ ಕಾಯ್ದೆ ತಂದಿದ್ದರೂ ಅಸ್ಪೃಶ್ಯರಿಗೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಇದನ್ನೂ ಓದಿ: ಬಹುಜನ ಭಾರತ: ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟಿದ್ದು ಸುಳ್ಳೇನು?

ತಮಗೆ ಇದ್ದ ಹಕ್ಕನ್ನು ಪಡೆಯುವುದಕ್ಕಾಗಿಯೇ ಅಂಬೇಡ್ಕರ್ ಚೌಡಾರ್ ಕೆರೆ ನೀರನ್ನು ಸಾರ್ವಜನಿಕವಾಗಿ ಕುಡಿಯುವ ಚಳುವಳಿಯನ್ನು ಆಯೋಜಿಸಿದರು. ಆದರೆ ಅಸ್ಪೃಶ್ಯರು ಮುಟ್ಟಿದ್ದಕ್ಕಾಗಿ ಕೆರೆಯೆ ಮಲಿನವಾಯಿತೆಂದು ಗೋಳಾಡಿದ ಮೇಲ್ಜಾತಿಯ ಜನ ಹಸುವಿನ ಸಗಣಿ, ಗಂಜಲ, ಹಾಲು, ತುಪ್ಪ, ಮೊಸರನ್ನು ಸುರಿದು ವೇದಗಳನ್ನು ಪಠಿಸುತ್ತಾ ಕೆರೆಯ ‘ಶುದ್ದೀಕರಣ’ ಮಾಡಿದರು. ದಲಿತರು ತಮ್ಮ ಹಕ್ಕುಗಳಿಗಾಗಿ ಆಗ್ರಹಿಸಿದರೆ ವಿದ್ಯಾವಂತ, ಪ್ರಗತಿಪರ ಹಿಂದೂಗಳು ಅವರ ಜೊತೆಗೂಡಿ ಹೋರಾಟ ಮಾಡಬಹುದು ಹಿಂದೂ ಧರ್ಮ ಸುಧಾರಣೆಗೆ ಇದು ಕೂಡ ನೆರವಾಗಬಹುದು ಎಂಬ ಅಂಬೇಡ್ಕರ್ ನಿರೀಕ್ಷೆ ಸುಳ್ಳಾಯಿತು. ಮಹಾಡ್, ಚೌಡಾರ್ ಸತ್ಯಾಗ್ರಹಗಳಲ್ಲಿ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದವರ ಮೇಲೆ ಹಿಂಸಾತ್ಮಕವಾದ ದಾಳಿಗಳನ್ನು ಮೇಲ್ಜಾತಿಗಳು ಮಾಡಿದವು.

ಇದಾದ ಒಂಬತ್ತು ತಿಂಗಳ ನಂತರ ಚೌಡಾರ್ ಸತ್ಯಾಗ್ರಹವನ್ನು ಅಂಬೇಡ್ಕರ್ ಆಯೋಜಿಸಿದರು. ಆಗ ಮತ್ತೆ ಮೇಲ್ಜಾತಿಯ ಹಿಂದೂಗಳು ಚೌಡಾರ್ ಕೆರೆ ಸಾರ್ವಜನಿಕ ಆಸ್ತಿಯಲ್ಲ ಖಾಸಗಿ ಸ್ವತ್ತು ಎಂದು ಕೋರ್ಟಿಗೆ ಹೋದರು. ಸತ್ಯಾಗ್ರಹ ತಡೆಯಲು ಪ್ರಯತ್ನ ಮಾಡಿದರು. ಇಷ್ಟೆಲ್ಲ ಪ್ರತಿಕೂಲ ಸನ್ನಿವೇಶಗಳ ನಡುವೆಯೂ ಸತ್ಯಾಗ್ರಹ ನಡೆಸಿದ ಅಂಬೇಡ್ಕರ್ ಡಿಸೆಂಬರ್ 25, 1927 ರಂದು ಹಿಂದೂ ಧರ್ಮದ ಆಧಾರವಾಗಿರುವ, ಬ್ರಾಹ್ಮಣ್ಯವನ್ನು ಎತ್ತಿ ಹಿಡಿಯುವ ಸೈದ್ದಾಂತಿಕ ಗ್ರಂಥವಾಗಿರುವ ‘ಮನುಸ್ಮೃತಿ’ಯನ್ನು ಸಾರ್ವಜನಿಕವಾಗಿ ಸುಟ್ಟು ಹಿಂದೂ ಧರ್ಮದ ಕರ್ಮಠತನ, ಅಸಮಾನತೆಯ ವಿರುದ್ಧ ಸಮರ ಸಾರಿದರು.

ಇದನ್ನೂ ಓದಿ: ಮನುಸ್ಮೃತಿ ಸುಟ್ಟಿದ್ದು ಏಕೆಂದು ವಿವರಿಸಿದ ಅಮಿತಾಬ್ ಬಚ್ಚನ್ ವಿರುದ್ಧ FIR!

PC: bakeryprasad/instagram

ವಿಶೇಷವೆಂದರೆ ಈ ಸಮಾವೇಶದಲ್ಲಿ ಮನುಸ್ಮೃತಿಗೆ ಸಾರ್ವಜನಿಕವಾಗಿ ಬೆಂಕಿ ಇಟ್ಟವರು ಬಾಪೂಸಾಹೇಬ ಸಹಸ್ರಬುದ್ಧೆ ಎನ್ನುವ ಪ್ರಗತಿಪರ ಬ್ರಾಹ್ಮಣ. ಇದಾದ ಮೇಲೆ ಹಿಂದೂ ಧರ್ಮದ ಒಳಗಿದ್ದು ಅದನ್ನು ಸುಧಾರಿಸುವುದು ಸಾಧ್ಯವಿಲ್ಲ ಎಂದು ಮನಗಂಡು ಅಂಬೇಡ್ಕರ್ ಹಿಂದೂ ಧರ್ಮ ತ್ಯಜಿಸುವ ನಿರ್ಧಾರ ಮಾಡಿದರು‌. ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ ಆದರೆ ಹಿಂದೂವಾಗಿ ಸಾಯುವುದಿಲ್ಲ ಎಂದು ಸಾರ್ವಜನಿಕವಾಗಿ ಘೋಷಿಸಿದರು.

ಮುಂದೆ ಮನುಸ್ಮೃತಿಗೆ ಪ್ರತಿಯಾಗಿ ಭಾರತಕ್ಕೆ ನಿಜವಾದ‌ ಸಂವಿಧಾನವನ್ನು ಅಂಬೇಡ್ಕರ್ ಅವರೇ ಬರೆದರು. ಆದರೆ ಇವತ್ತು ಅಂಬೇಡ್ಕರ್ ಸಂವಿಧಾನದ ಮೇಲೆ ಮನುಸ್ಮೃತಿ ಸವಾರಿ ಮಾಡಲು ಪ್ರಯತ್ನಿಸುತ್ತಿದೆ. ಭಾರತದ ಮನಸ್ಸಿನಲ್ಲಿರುವ ಈ ಸುಪ್ತ ಸಂವಿಧಾನವನ್ನು ಸುಟ್ಟರೆ ಮಾತ್ರ ಈ ದೇಶಕ್ಕೆ ಬಿಡುಗಡೆ ಸಾಧ್ಯ. ವರ್ತಮಾನದ ಸಂವಿಧಾನದ ಕಾಲೆಳೆಯುತ್ತಿರುವ ಭೂತ ಕಾಲದ ಸಂವಿಧಾನದ ದಾಸರಾಗಿರುವ ದಲಿತರು, ಹಿಂದುಳಿದವರು ಇದನ್ನು ಎಷ್ಟು ಬೇಗ ಅರ್ಥ ಮಾಡಿಕೊಳ್ಳೊತ್ತಾರೊ ಅಷ್ಟು ಒಳ್ಳೆಯದು.

ಇದನ್ನೂ ಓದಿ: ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...